ವಿಷಯಕ್ಕೆ ಹೋಗಿ

ಮದ್ಯದಂಗಡಿ ಸ್ಥಳಾಂತರಿಸಲು ಒತ್ತಾಯ

          ಅಬ್ಕಾರಿ ನಿಯಮದಲ್ಲಿನ ಒಂದೇ ಒಂದು ಅಂಶ ಹೇಗೆ ಸಾರ್ವವಜನಿಕರ ಬವಣೆಗೆ ಕಾರಣವಾಗಿದೆ ಎನ್ನುವುದಕ್ಕೆ ಉತ್ತಮ ಉದಾಹರಣೆ ಪಟ್ಟಣದ ಹುಳಿಯಾರಮ್ಮ ದೇವಸ್ಥಾನದ ಎದುರಿನ ಕೋ-ಅಪರೇಟೀವ್ ಸೊಸೈಟಿಯ ಮಳಿಗೆಯಲ್ಲಿರುವ ಮದ್ಯದಂಗಡಿಯ ವಿವಾದ.
ಹುಳಿಯಾರಿನ ಹುಳಿಯಾರಮ್ಮ ದೇವಸ್ಥಾನದ ಎದುರಿನ ಕೋ-ಅಪರೇಟೀವ್ ಸೊಸೈಟಿಯ ಮಳಿಗೆಯಲ್ಲಿನ ವಿವಾದಕ್ಕೀಡಾಗಿರುವ ಮದ್ಯದಂಗಡಿ.
           ಹೌದು,ದೇವಾಲಯಗಳ ಭಕ್ತರ ಹಾಗೂ ಸಾರ್ವಜನಿಕರ ನೆಮ್ಮದಿಗೆ ಭಂಗತಂದಿರುವ ಶ್ರೀನಿವಾಸ ವೈನ್ಸ್ ಆಕ್ಷೇಪಣಾರ್ಹ ಸ್ಥಳದಲ್ಲಿದ್ದರೂ ಕೂಡ ಸ್ಥಳಾಂತರಗೊಳಿಸದೆ ಕಾನೂನು ನಿಯಮಗಳಲ್ಲಿನ ಒಂದಂಶವನ್ನೆ ಎತ್ತಿಹಿಡಿದು ಸನ್ನದುದಾರರಿಗೆ ಅವಕಾಶ ಕಲ್ಪಿಸುತ್ತಾ ಬಂದಿರುವುದು ಸಮಸ್ಯೆಗೆ ಕಾರಣವಾಗಿದೆ
      ಶತಮಾನ ಪೂರೈಸಿರುವ ಕೋ-ಅಪರೇಟೀವ್ ಸೊಸೈಟಿಗೆ ಸೇರಿದ ಮಳಿಗೆಯಲ್ಲಿ ಎನ್.ಜಿ.ನಾಗರಾಜು ಅವರ ರಂಗನಾಥ ಲಿಕ್ಕರ್ ಶಾಪ್ ಯಿದ್ದು ಜನನಿಬಿಡ ಪ್ರದೇಶದಲ್ಲಿರುವ ಇದನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ಇದನ್ನು ಸ್ಥಳಾಂತರಿಸಬೇಕೆಂಬುದು ದೇವಾಲಗಳ ಸಮಿತಿಯವರು ಹಾಗೂ ವಿವಿಧ ಸಂಘಟನೆಗಳ ಒತ್ತಾಯವಾಗಿತ್ತು. ಈ ಮದ್ಯದಂಗಡಿಗೆ ಗ್ರಾಮದೇವತೆ ಹುಳಿಯಾರಮ್ಮ ದೇವಾಲಯ 45ಮೀ ಅಂತರದಲ್ಲಿದ್ದು , 159 ಮೀ ದೂರದಲ್ಲಿ ಕೆಂಚಮ್ಮದೇವಿ ದೇವಾಲಯ,101 ಮೀ ದೂರದಲ್ಲಿ ಬೀರಲಿಂಗೇಶ್ವರಸ್ವಾಮಿ ಸನ್ನಿಧಿ,98 ಮೀ ಅಂತರದಲ್ಲಿ ರಂಗನಾಥಸ್ವಾಮಿ ದೇವಾಲಯಗಳಿವೆ.ಮದ್ಯದ ಅಂಗಡಿಯ ಪಕ್ಕದ ಕಟ್ಟಡದಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ ಹಾಗೂ ಆಸ್ಪತ್ರೆಯಿದ್ದು, ವಾಣಿಜ್ಯ ಸ್ಥಳವಾದ ಈ ಜಾಗದಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವುದರಿಂದ ಇದನ್ನು ಮುಂದಿನ ಅವಧಿಗೆ ನವೀಕರಿಸದೆ ಸ್ಥಳಾಂತರಿಸಬೇಕೆಂದು ಕಾನೂನು ಹೋರಾಟ ನಡೆದಿತ್ತು.
         ನಿಯಮ: ಅಬಕಾರಿ ಸನ್ನದುಗಳ ನಿಯಮದಂತೆ ಸದರಿ ವೈನ್ ಶಾಪ್ ದೇವಾಲಯದಿಂದ ನೂರು ಮೀಟರ್ ಅಂತರದಲ್ಲಿದ್ದರೆ ನಡೆಸಲು ಅನುಮತಿಯಿದ್ದು,ನೂರು ಮೀಟರ್ ಅಂತರಕ್ಕು ಕಡಿಮೆಯಿದ್ದರೆ ಬೇರೊಂದು ನೀರಾಕ್ಷೇಪಣ ಸ್ಥಳಕ್ಕೆ ಸ್ಥಳಾಂತರಿಸಬೇಕಾಗುತ್ತದೆ.
      ಆಗಿರುವುದೇನು: ಪಕ್ಕದಲ್ಲೇ ಇರುವ ಹುಳಿಯಾರಮ್ಮ ದೇವಾಲಯ ಮದ್ಯದಂಗಡಿಯಿಂದ 45ಮೀಟರ್ ಅಂತರದಲ್ಲಿದ್ದು ಹಾಗೂ ನಿಯಮಾನುಸಾರ ಸನ್ನದ್ದನ್ನು ರದ್ದು ಪಡಿಸಬೇಕಾಗುತ್ತದೆ. ಆದರೆ ತಕರಾರು ತೆಗೆದಿರುವ ದೇವಾಲಯ ಸಮಿತಿಯು ನಿಯಮಾನುಸಾರ ನೋಂದಣಿಯಾಗಿಲ್ಲ,ಆದ್ದರಿಂದ ಇದಕ್ಕೆ ಮಾನ್ಯತೆಯಿಲ್ಲ ಎಂದಿರುವ ಇಲಾಖೆಯು ಮುಜುರಾಯಿ ಇಲಾಖೆಗೆ ಒಳಪಡುವ ರಂಗನಾಥಸ್ವಾಮಿ ದೇವಾಲಯದ ಅರ್ಜಿಯನ್ನು ಮಾತ್ರ ಪರಿಗಣಿಸಿದೆ. ರಂಗನಾಥಸ್ವಾಮಿ ದೇವಾಲಯಕ್ಕು ಅಂಗಡಿಗೂ 100 ಮೀಟರ್ ಗೂ ಹೆಚ್ಚಿದ್ದು ಮದ್ಯದ ಅಂಗಡಿಗೆ ಅವಕಾಶಕೊಡಿ ಎಂಬುದು ಸನ್ನದುದಾರರ ಅಹವಾಲಾಗಿದೆ.
ಹುಳಿಯಾರಮ್ಮ ಹಾಗೂ ಬೀರಲಿಂಗೇಶ್ವರ ದೇವಾಲಯ ಕಡೆಗಣಿಸಿರುವ ಇಲಾಖೆಯ ಕ್ರಮ ಸನ್ನದುದಾರರ ಹಿತಕಾಯುವ ಅಡ್ಡದಾರಿಯಾಗಿದೆ ಎಂದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.
      ಇದರ ಮುಂದುವರಿದ ಭಾಗವಾಗಿ ಸಮಿತಿಯ ಸದಸ್ಯರುಗಳು ಅಬ್ಕಾರಿ ಸಚಿವರನ್ನು ಹಾಗೂ ಆಯುಕ್ತರನ್ನು ಭೇಟಿ ಮಾಡಿ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದರ ಹಿನ್ನಲೆಯಲ್ಲಿ ಅರ್ಜಿದಾರರ ಸಮ್ಮುಖದಲ್ಲಿ ಮತ್ತೊಮ್ಮೆ ಸ್ಥಳ ಪರೀಕ್ಷೆ ನಡಿಸಿ ಮರುಆಳತೆ ಮಾಡುವಂತೆ ಅಬಕಾರಿ ಉಪಆಯುಕ್ತರಿಗೆ ಸೂಚಿಸಲಾಗಿದ್ದು ಈ ಪ್ರಕಾರ ಮಂಗಳವಾರದಂದು ಎಲ್ಲಾ ಅರ್ಜಿದಾರರು ಹಾಗೂ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿರುವಂತೆ ಸೂಚಿಸಲಾಗಿದೆ.
ಹುಳಿಯಾರಿನ ಕೋ-ಅಪರೇಟೀವ್ ಸೊಸೈಟಿಯ ಮಳಿಗೆಯಲ್ಲಿನ ಮದ್ಯದಂಗಡಿಯನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಸಂಘಸಂಸ್ಥೆಯವರು ಅಬಕಾರಿ ಸಚಿವರಿಗೆ ಮನವಿ ಸಲ್ಲಿಸಿರುವುದು.

          ಮದ್ಯದಂಗಡಿ ಪರವಾನಿಗೆಗೆ ಕೇವಲ ಎರಡು ಮೀಟರ್ ಆಳತೆ ವ್ಯತ್ಯಾಸವಿದ್ದು , ಆಳತೆಯನ್ನು ಯಾವ ಭಾಗದಿಂದ ಮತ್ತು ಹೇಗೆ ಮಾಡುತ್ತಾರೆಂಬುದರ ಮೇಲೆ ಮದ್ಯದಂಗಡಿ ನಡೆಯುತ್ತದೊ , ಇಲ್ಲವೊ ಎಂಬುದು ತಿರ್ಮಾನವಾಗಲಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...