ವಿಷಯಕ್ಕೆ ಹೋಗಿ

ನೆಪಮಾತ್ರಕ್ಕೆ ನಡೆಯುತ್ತವೆಯೇ ಗ್ರಾಮ ಸಭೆ

            ಸರ್ಕಾರದ ಸವಲತ್ತಿಗಾಗಿ ಅರ್ಹಫಲಾನುಭವಿಗಳನ್ನು ಗುರ್ತಿಸಲು ನಡೆಯುವ ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳಲ್ಲಿ ಜನರು ಹಾಗೂ ಜನಪ್ರತಿನಿಧಿಗಳು ಇಲ್ಲದೆ ನೆಪಮಾತ್ರಕ್ಕೆ ಒಬ್ಬಿಬ್ಬರ ಹಾಜರಾತಿಯಲ್ಲಿ ನಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
 ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರ್ಯಾಂಟ್ ಮನೆಗಾಗಿ ಸಾರ್ವಜನಿಕರು ಅರ್ಜಿಸಲ್ಲಿಸುತ್ತಿರುವುದು.

ಸಾರ್ವಜನಿಕರಿಗೆ ಗ್ರಾಮಸಭೆ ಬಗ್ಗೆ ಸೂಕ್ತ ಪ್ರಚಾರವಿಲ್ಲದ ಕಾರಣ ಸಭೆಗೆ ಹಾಕಿಸಿದ್ದ ಕುರ್ಚಿಗಳು ಖಾಲಿಖಾಲಿ.

               ಈಗಾಗಲೇ ಹೋಬಳಿಯ ಹಲವು ಗ್ರಾ.ಪಂ.ಗಳಲ್ಲಿ ಇಂತಹ ಸಭೆಗಳು ಬೇಕಾಬಿಟ್ಟಿಯಾಗಿ ನಡೆದಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಶನಿವಾರದಂದು ಕೆಂಕೆರೆ ಗ್ರಾಮಪಂಚಾಯ್ತಿಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಹದಿನೆಂಟು ಸದಸ್ಯರ ಪೈಕಿ ಮೂರ್ನಾಲ್ಕು ಮಂದಿ, ಜಿಲ್ಲಾ ಹಾಗೂ ತಾ.ಪಂ.ಸದಸ್ಯರುಗಳ ಸುಳಿವೇ ಇಲ್ಲದಿರುವುದು ದುರ್ವೈವವಾಗಿದೆ.
          ಹೋಬಳಿ ಕೆಂಕೆರೆ ಗ್ರಾಮಪಂಚಾಯ್ತಿಗೆ 2014-15 ನೇ ಸಾಲಿನ ಇಂದಿರಾ ಆವಾಜ್ ಯೋಜನೆಯಡಿ ಮಂಜೂರಾಗಿದ್ದ ಮನೆಗಳನ್ನು ಹಂಚಲು ಫಲಾನುಭವಿಗಳ ಆಯ್ಕೆಗಾಗಿ ಶನಿವಾರ ಗ್ರಾಮ ಸಭೆ ಅಯೋಜಿಸಿದ್ದು ಒಂದೆಡೆ ಸದಸ್ಯರುಗಳೇ ಗೈರಾಗಿದ್ದಾರೆ ಮತ್ತೊಂದೆಡೆ ಗ್ರಾಮಸ್ಥರ ಅನುಪಸ್ಥಿತಿಯೂ ಎದ್ದುಕಾಣುತಿತ್ತು.
         ಪ್ರಚಾರದ ಕೊರತೆ : ಗ್ರಾಮ ಸಭೆ ನಡೆಯುವುದರ ಬಗ್ಗೆ ಹೆಚ್ಚು ಪ್ರಚಾರವಿಲ್ಲ ಎಂಬುದಕ್ಕೆ ಸಭೆಗೆ ಆಗಮಿಸಿದ್ದ ಬೆರಳೆಣಿಯಷ್ಟು ಸಾರ್ವಜನಿಕರು ಸಾಕ್ಷಿಯಾಗಿದ್ದಾರೆ. ಅಲ್ಲದೆ ಗ್ರಾಮ ಸಭೆ ನಡೆಯುತ್ತಿರುವ ಬಗ್ಗೆ ಬ್ಯಾನರ್ ಕೂಡ ಕಂಡುಬರಲಿಲ್ಲ. ಗ್ರಾಮ ಸಭೆ ಬಗ್ಗೆ ತಿಳಿದವರು ಅವರಿವರನ್ನು ಕೇಳಿ ಅರ್ಜಿ ಬರೆದು ನೀಡುತ್ತಿದ್ದರೆ ಉಳಿದವರು ಸುಮ್ಮನೆ ಕುಳಿತು ನೋಡುತ್ತಿದ್ದರು.
ನಿರಾಸಕ್ತಿ: ತಮ್ಮಿಂದ ಅರ್ಜಿ ಪಡೆಯುವ ಸಲುವಾಗಿ ಈಗ ನೆಪಮಾತ್ರಕ್ಕೆ ಗ್ರಾಮ ಸಭೆ ಮಾಡುತ್ತಿದ್ದು ನಂತರ ತಮಗೆ ಬೇಕಾದವರಿಗೆ ಮನೆ ಹಂಚಿಕೆ ಮಾಡುತ್ತಾರೆ, ಈ ಹಿಂದೆಯೂ ಸಹ ಮನೆವುಳ್ಳವರಿಗೆ ಮತ್ತೆ ಗ್ರ್ಯಾಂಟ್ ಮಂಜೂರು ಮಾಡಿದ್ದು, ಶೌಚಾಲಯವಿದ್ದವರಿಗೆ ಪುನ: ಶೌಚಾಲಯ ಗ್ರ್ಯಾಂಟ್ ನೀಡಿದ್ದಾರಲ್ಲದೆ ಈ ಹಿಂದೆ ನಿರ್ಮಿಸಿಕೊಂಡಿರುವ ಅನೇಕ ಶೌಚಾಲಯಗಳ ಬಿಲ್ ಸಂದಾಯ ಮಾಡದೇ ಸತಾಯಿಸುತ್ತಿದ್ದಾರೆಂದು ಗ್ರಾಮಸ್ಥರಾದ ಉದಯ್ ಕುಮಾರ್ ಹೇಳುತ್ತಾರೆ.
ಸವಲತ್ತು ಯಾರಿಗೆ ಕೊಡಬೇಕು ಎಂಬುದನ್ನು ಸದಸ್ಯರು ಮೊದಲೇ ನಿರ್ಧರಿಸಿಕೊಂಡಿರುತ್ತಾರೆ ನೆಪಮಾತ್ರಕ್ಕೆ ಇಂತ ಸಭೆಗಳು ನಡೆಯುತ್ತವಾದ್ದರಿಂದ ಸಭೆಗೆ ಹೋಗುವುದರಲ್ಲಿ ಅರ್ಥವಿಲ್ಲ ಎನ್ನುತ್ತಾರೆ ಮಹೇಶ್.
          ಪ್ರಸಕ್ತ ಸಾಲಿನಲ್ಲಿ ಎಸ್.ಸಿ-5, ಎಸ್.ಟಿ- 2, ಅಲ್ಪಸಂಖ್ಯಾತರಿಗೆ- 1, ಜನರಲ್ ಗೆ - 4 ಒಟ್ಟು 12 ಮನೆ ಗ್ರ್ಯಾಂಟ್ ಬಂದಿದ್ದು ಈ ಸಭೆಯಲ್ಲಿ ಫಲಾನುಭವಿಗಳಿಂದ ಅರ್ಜಿ ಪಡೆದಿದ್ದು ಸರ್ವಸದಸ್ಯರ ಸಭೆಯಲ್ಲಿ ಅರ್ಹಫಲಾನುಭವಿಗಳನ್ನು ಗುರ್ತಿಸಿ ಅವರಿಗೆ ಮನೆ ಗ್ರ್ಯಾಂಟ್ ನೀಡಲಾಗುತ್ತದೆ, ಯಾವುದೇ ರೀತಿಯ ಗೊಂದಲಕ್ಕೆ ಎಡೆಮಾಡಿಕೊಡುವುದಿಲ್ಲ ಎನ್ನುತ್ತಾರೆ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ.
ಈ ಸಂಧರ್ಭದಲ್ಲಿ ಉಪಾಧ್ಯಕ್ಷೆ ರೇಣುಕ , ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜೇಂದ್ರ, ಪಿಡಿಓ ಮಹಬೂಬ್ ಸಾಬ್, ಸದಸ್ಯರಾದ ಬಸವರಾಜು,ರಾಧಾ, ಬಿಲ್ ಕಲೆಕ್ಟರ್ ಜಯಣ್ಣ,ಯುವರಾಜ್ ಸೇರಿದಂತೆ ಕೆಲವೇ ಮಂದಿ ಸಾರ್ವಜನಿಕರು ಉಪಸ್ಥಿತರಿದ್ದರು.
-------------------------
           ಸರ್ಕಾರದ ವತಿಯಿಂದ ಒಂದು ಗ್ರಾಮಕ್ಕೆ ಸಾಮಾನ್ಯ ಅಥವಾ ಮತ್ತಾವುದೇ ವರ್ಗಕ್ಕೆ ಕೇವಲ ಎರಡು ಅಥವಾ ಮೂರು ಮನೆಗಳನ್ನು ಮಂಜೂರಾಗಿರುತ್ತವೆ ಆದರೆ ಆಕಾಂಕ್ಷಿಗಳು ಹತ್ತಕ್ಕೂ ಹೆಚ್ಚು ಜನರಿರುತ್ತಾರೆ. ಇದರಿಂದ ನಾವುಗಳು ಹೋಗಿ ಯಾರೋ ಒಬ್ಬ ಅರ್ಹರನ್ನು ಆಯ್ಕೆ ಮಾಡಿದರೆ ಉಳಿದವರ ನಿಂದನೆಗೆ ಗುರಿಯಾಗಬೇಕಾಗುತ್ತದೆಂದು ಸಭೆಗೆ ತಾವಾಗಿಯೇ ಗೈರು ಆಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತಾ.ಪಂ.ಸದಸ್ಯ ಕೆಂಕೆರೆ ನವೀನ್ ಅಭಿಪ್ರಾಯಪಡುತ್ತಾರೆ
--------------------

ಚುನಾವಣೆಗೆ ಮುನ್ನಾ ಮನೆ ಬಾಗಿಲಿಗೆ ಬಂದು ನಮಗೊಂದು ಓಟುಕೊಡಿ ಎಂದು ಬೇಡಿಕೊಳ್ಳುವ ಸದಸ್ಯರು ಗೆದ್ದ ನಂತರ ನಮ್ಮ ಬೀದಿಯ ಕಡೆ ಬರುವುದನ್ನೇ ಕಡಿಮೆ ಮಾಡುತ್ತಾರೆ. ತಾವು ಯಾವ ಕೆಲಸ ಮಾಡಿದರೆ ಹಣ ದೊರೆಯುತ್ತದೆ ಎಂಬುದನ್ನು ತಿಳಿದು ಆ ಕೆಲಸಗಳನ್ನು ಮಾಡಲು ಮುಂದಾಗುತ್ತಾರೆ ಹೊರತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. >---- ಗ್ರಾಮಸ್ಥರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.