ವಿಷಯಕ್ಕೆ ಹೋಗಿ

ನೆಪಮಾತ್ರಕ್ಕೆ ನಡೆಯುತ್ತವೆಯೇ ಗ್ರಾಮ ಸಭೆ

            ಸರ್ಕಾರದ ಸವಲತ್ತಿಗಾಗಿ ಅರ್ಹಫಲಾನುಭವಿಗಳನ್ನು ಗುರ್ತಿಸಲು ನಡೆಯುವ ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳಲ್ಲಿ ಜನರು ಹಾಗೂ ಜನಪ್ರತಿನಿಧಿಗಳು ಇಲ್ಲದೆ ನೆಪಮಾತ್ರಕ್ಕೆ ಒಬ್ಬಿಬ್ಬರ ಹಾಜರಾತಿಯಲ್ಲಿ ನಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
 ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರ್ಯಾಂಟ್ ಮನೆಗಾಗಿ ಸಾರ್ವಜನಿಕರು ಅರ್ಜಿಸಲ್ಲಿಸುತ್ತಿರುವುದು.

ಸಾರ್ವಜನಿಕರಿಗೆ ಗ್ರಾಮಸಭೆ ಬಗ್ಗೆ ಸೂಕ್ತ ಪ್ರಚಾರವಿಲ್ಲದ ಕಾರಣ ಸಭೆಗೆ ಹಾಕಿಸಿದ್ದ ಕುರ್ಚಿಗಳು ಖಾಲಿಖಾಲಿ.

               ಈಗಾಗಲೇ ಹೋಬಳಿಯ ಹಲವು ಗ್ರಾ.ಪಂ.ಗಳಲ್ಲಿ ಇಂತಹ ಸಭೆಗಳು ಬೇಕಾಬಿಟ್ಟಿಯಾಗಿ ನಡೆದಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಶನಿವಾರದಂದು ಕೆಂಕೆರೆ ಗ್ರಾಮಪಂಚಾಯ್ತಿಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಹದಿನೆಂಟು ಸದಸ್ಯರ ಪೈಕಿ ಮೂರ್ನಾಲ್ಕು ಮಂದಿ, ಜಿಲ್ಲಾ ಹಾಗೂ ತಾ.ಪಂ.ಸದಸ್ಯರುಗಳ ಸುಳಿವೇ ಇಲ್ಲದಿರುವುದು ದುರ್ವೈವವಾಗಿದೆ.
          ಹೋಬಳಿ ಕೆಂಕೆರೆ ಗ್ರಾಮಪಂಚಾಯ್ತಿಗೆ 2014-15 ನೇ ಸಾಲಿನ ಇಂದಿರಾ ಆವಾಜ್ ಯೋಜನೆಯಡಿ ಮಂಜೂರಾಗಿದ್ದ ಮನೆಗಳನ್ನು ಹಂಚಲು ಫಲಾನುಭವಿಗಳ ಆಯ್ಕೆಗಾಗಿ ಶನಿವಾರ ಗ್ರಾಮ ಸಭೆ ಅಯೋಜಿಸಿದ್ದು ಒಂದೆಡೆ ಸದಸ್ಯರುಗಳೇ ಗೈರಾಗಿದ್ದಾರೆ ಮತ್ತೊಂದೆಡೆ ಗ್ರಾಮಸ್ಥರ ಅನುಪಸ್ಥಿತಿಯೂ ಎದ್ದುಕಾಣುತಿತ್ತು.
         ಪ್ರಚಾರದ ಕೊರತೆ : ಗ್ರಾಮ ಸಭೆ ನಡೆಯುವುದರ ಬಗ್ಗೆ ಹೆಚ್ಚು ಪ್ರಚಾರವಿಲ್ಲ ಎಂಬುದಕ್ಕೆ ಸಭೆಗೆ ಆಗಮಿಸಿದ್ದ ಬೆರಳೆಣಿಯಷ್ಟು ಸಾರ್ವಜನಿಕರು ಸಾಕ್ಷಿಯಾಗಿದ್ದಾರೆ. ಅಲ್ಲದೆ ಗ್ರಾಮ ಸಭೆ ನಡೆಯುತ್ತಿರುವ ಬಗ್ಗೆ ಬ್ಯಾನರ್ ಕೂಡ ಕಂಡುಬರಲಿಲ್ಲ. ಗ್ರಾಮ ಸಭೆ ಬಗ್ಗೆ ತಿಳಿದವರು ಅವರಿವರನ್ನು ಕೇಳಿ ಅರ್ಜಿ ಬರೆದು ನೀಡುತ್ತಿದ್ದರೆ ಉಳಿದವರು ಸುಮ್ಮನೆ ಕುಳಿತು ನೋಡುತ್ತಿದ್ದರು.
ನಿರಾಸಕ್ತಿ: ತಮ್ಮಿಂದ ಅರ್ಜಿ ಪಡೆಯುವ ಸಲುವಾಗಿ ಈಗ ನೆಪಮಾತ್ರಕ್ಕೆ ಗ್ರಾಮ ಸಭೆ ಮಾಡುತ್ತಿದ್ದು ನಂತರ ತಮಗೆ ಬೇಕಾದವರಿಗೆ ಮನೆ ಹಂಚಿಕೆ ಮಾಡುತ್ತಾರೆ, ಈ ಹಿಂದೆಯೂ ಸಹ ಮನೆವುಳ್ಳವರಿಗೆ ಮತ್ತೆ ಗ್ರ್ಯಾಂಟ್ ಮಂಜೂರು ಮಾಡಿದ್ದು, ಶೌಚಾಲಯವಿದ್ದವರಿಗೆ ಪುನ: ಶೌಚಾಲಯ ಗ್ರ್ಯಾಂಟ್ ನೀಡಿದ್ದಾರಲ್ಲದೆ ಈ ಹಿಂದೆ ನಿರ್ಮಿಸಿಕೊಂಡಿರುವ ಅನೇಕ ಶೌಚಾಲಯಗಳ ಬಿಲ್ ಸಂದಾಯ ಮಾಡದೇ ಸತಾಯಿಸುತ್ತಿದ್ದಾರೆಂದು ಗ್ರಾಮಸ್ಥರಾದ ಉದಯ್ ಕುಮಾರ್ ಹೇಳುತ್ತಾರೆ.
ಸವಲತ್ತು ಯಾರಿಗೆ ಕೊಡಬೇಕು ಎಂಬುದನ್ನು ಸದಸ್ಯರು ಮೊದಲೇ ನಿರ್ಧರಿಸಿಕೊಂಡಿರುತ್ತಾರೆ ನೆಪಮಾತ್ರಕ್ಕೆ ಇಂತ ಸಭೆಗಳು ನಡೆಯುತ್ತವಾದ್ದರಿಂದ ಸಭೆಗೆ ಹೋಗುವುದರಲ್ಲಿ ಅರ್ಥವಿಲ್ಲ ಎನ್ನುತ್ತಾರೆ ಮಹೇಶ್.
          ಪ್ರಸಕ್ತ ಸಾಲಿನಲ್ಲಿ ಎಸ್.ಸಿ-5, ಎಸ್.ಟಿ- 2, ಅಲ್ಪಸಂಖ್ಯಾತರಿಗೆ- 1, ಜನರಲ್ ಗೆ - 4 ಒಟ್ಟು 12 ಮನೆ ಗ್ರ್ಯಾಂಟ್ ಬಂದಿದ್ದು ಈ ಸಭೆಯಲ್ಲಿ ಫಲಾನುಭವಿಗಳಿಂದ ಅರ್ಜಿ ಪಡೆದಿದ್ದು ಸರ್ವಸದಸ್ಯರ ಸಭೆಯಲ್ಲಿ ಅರ್ಹಫಲಾನುಭವಿಗಳನ್ನು ಗುರ್ತಿಸಿ ಅವರಿಗೆ ಮನೆ ಗ್ರ್ಯಾಂಟ್ ನೀಡಲಾಗುತ್ತದೆ, ಯಾವುದೇ ರೀತಿಯ ಗೊಂದಲಕ್ಕೆ ಎಡೆಮಾಡಿಕೊಡುವುದಿಲ್ಲ ಎನ್ನುತ್ತಾರೆ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ.
ಈ ಸಂಧರ್ಭದಲ್ಲಿ ಉಪಾಧ್ಯಕ್ಷೆ ರೇಣುಕ , ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜೇಂದ್ರ, ಪಿಡಿಓ ಮಹಬೂಬ್ ಸಾಬ್, ಸದಸ್ಯರಾದ ಬಸವರಾಜು,ರಾಧಾ, ಬಿಲ್ ಕಲೆಕ್ಟರ್ ಜಯಣ್ಣ,ಯುವರಾಜ್ ಸೇರಿದಂತೆ ಕೆಲವೇ ಮಂದಿ ಸಾರ್ವಜನಿಕರು ಉಪಸ್ಥಿತರಿದ್ದರು.
-------------------------
           ಸರ್ಕಾರದ ವತಿಯಿಂದ ಒಂದು ಗ್ರಾಮಕ್ಕೆ ಸಾಮಾನ್ಯ ಅಥವಾ ಮತ್ತಾವುದೇ ವರ್ಗಕ್ಕೆ ಕೇವಲ ಎರಡು ಅಥವಾ ಮೂರು ಮನೆಗಳನ್ನು ಮಂಜೂರಾಗಿರುತ್ತವೆ ಆದರೆ ಆಕಾಂಕ್ಷಿಗಳು ಹತ್ತಕ್ಕೂ ಹೆಚ್ಚು ಜನರಿರುತ್ತಾರೆ. ಇದರಿಂದ ನಾವುಗಳು ಹೋಗಿ ಯಾರೋ ಒಬ್ಬ ಅರ್ಹರನ್ನು ಆಯ್ಕೆ ಮಾಡಿದರೆ ಉಳಿದವರ ನಿಂದನೆಗೆ ಗುರಿಯಾಗಬೇಕಾಗುತ್ತದೆಂದು ಸಭೆಗೆ ತಾವಾಗಿಯೇ ಗೈರು ಆಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತಾ.ಪಂ.ಸದಸ್ಯ ಕೆಂಕೆರೆ ನವೀನ್ ಅಭಿಪ್ರಾಯಪಡುತ್ತಾರೆ
--------------------

ಚುನಾವಣೆಗೆ ಮುನ್ನಾ ಮನೆ ಬಾಗಿಲಿಗೆ ಬಂದು ನಮಗೊಂದು ಓಟುಕೊಡಿ ಎಂದು ಬೇಡಿಕೊಳ್ಳುವ ಸದಸ್ಯರು ಗೆದ್ದ ನಂತರ ನಮ್ಮ ಬೀದಿಯ ಕಡೆ ಬರುವುದನ್ನೇ ಕಡಿಮೆ ಮಾಡುತ್ತಾರೆ. ತಾವು ಯಾವ ಕೆಲಸ ಮಾಡಿದರೆ ಹಣ ದೊರೆಯುತ್ತದೆ ಎಂಬುದನ್ನು ತಿಳಿದು ಆ ಕೆಲಸಗಳನ್ನು ಮಾಡಲು ಮುಂದಾಗುತ್ತಾರೆ ಹೊರತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. >---- ಗ್ರಾಮಸ್ಥರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...