ವಿಷಯಕ್ಕೆ ಹೋಗಿ

ರಾಗಿ ಬಳಕೆಯಿಂದ ಉತ್ತಮ ಆರೋಗ್ಯ ವೃದ್ದಿ : ಮೂಕಪ್ಪ ಪೂಜಾರ್

         ಆಹಾರ ಧಾನ್ಯಗಳಲ್ಲಿ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ರಾಗಿಯ ಬಳಕೆಯಿಂದ ಯಾವುದೇ ಕಾಯಿಲೆಗಳು ನಮ್ಮತ್ತ ಸುಳಿಯುವುದಿಲ್ಲ ಹಾಗೂ ಆರೋಗ್ಯ ವೃದ್ದಿಯಾಗುತ್ತದೆ ಎಂದು ಬ್ಯಾಡಗಿಯ ಬರಗಾಲ ವಿಜ್ಞಾನಿ ಪ್ರಶಸ್ತಿ ವಿಜೇತ ಮೂಕಪ್ಪ ಪೂಜಾರ್ ತಿಳಿಸಿದರು.
          ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ವತಿಯಿಂದ ಆಯೋಜಿಸಿದ್ದ ರಾಗಿ ಬೇಸಾಯದ ನಾಟಿಪದ್ದತಿ ಕುರಿತ ವಿಚಾರ ಸಂಕಿರ್ಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
 ಹುಳಿಯಾರು ಹೋಬಳಿ ಹೊಯ್ಸಳಕಟ್ಟೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆಯಡಿ ನಡೆದ ರಾಗಿ ಬೇಸಾಯದ ನಾಟಿಪದ್ದತಿ ಕುರಿತ ವಿಚಾರ ಸಂಕಿರಣವನ್ನು . ತಾ.ಪಂ.ಉಪಾಧ್ಯಕ್ಷ ಆರ್.ಪಿ.ವಸಂತಯ್ಯ ಉದ್ಘಾಟಿಸಿದರು.
          ಇಂದಿನ ಆಧುನಿಕಯುಗ ಸಿರಿಧಾನ್ಯಗಳ ಬಳಕೆ ಕಡಿಮೆಯಾಗುವಂತೆ ಮಾಡಿದೆ ಎಂದ ಅವರು ಇವುಗಳ ಪೈಕಿ ರಾಗಿ ಹೆಚ್ಚು ಮಹತ್ವವನ್ನು ಪಡೆದಿದೆ. ರಾಗಿಯಿಂದ ಅನೇಕ ಆಹಾರ ಪದಾರ್ಥಗಳನ್ನು ತಯಾರಿಸಬಹುದಾಗಿದ್ದು ಅದರ ಬಳಕೆ ಆಗುತ್ತಿಲ್ಲ ಎಂದು ವಿಷಾಧಿಸಿದರು. ರಾಗಿಯನ್ನು ನಾಟಿಪದ್ಧತಿಯಿಂದ ಅತಿ ಹೆಚ್ಚು ಇಳುವರಿ ಪಡೆಯಬಹುದು ಎಂದ ಅವರು ತಾವೇ ಸ್ವತ: ಒಂದು ಎಕರೆಗೆ 18 ಕ್ಚಿಂಟಲ್ ಬೆಳೆದ ವಿಧಾನವನ್ನು ರೈತರಿಗೆ ಹಾಗೂ ರೈತ ಮಹಿಳೆಯರಿಗೆ ವಿವರಿಸಿದರು.
         ತಾ.ಪಂ.ಉಪಾಧ್ಯಕ್ಷ ಆರ್.ಪಿ.ವಸಂತಯ್ಯ ಮಾತನಾಡಿ ಸರ್ಕಾರ ನೀಡುವ ಒಂದು ರೂ ಕೆ.ಜಿ ಅಕ್ಕಿಯನ್ನು ನಂಬಿಕೊಂಡು ಕೃಷಿ ಚಟುವಟಿಕೆಗಳನ್ನೇ ಮರೆಯುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ರಾಗಿ ಬೆಳೆಯುತ್ತಿದ್ದ ಪ್ರದೇಶದಲ್ಲೂ ಬೇರೆಬೇರೆ ವಾಣಿಜ್ಯ ಬೆಳೆಗಳು ಲಗ್ಗೆ ಇಟ್ಟಿವೆ. ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ರೈತರೇ ಆಹಾರಕ್ಕೆ ಕೈವೊಡ್ಡುವ ಕಾಲ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.
ಯೋಜನೆ ತಾಲ್ಲೂಕು ನಿರ್ದೇಶಕ ರೋಹಿತಾಕ್ಷ ಕಾರ್ಯಕ್ರಮ ಧರ್ಮಸ್ಥಳ ಯೋಜನೆಯು ವೈಯ್ಯಕ್ತಿಕ ಹಾಗೂ ಸಮುದಾಯ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸ್ವಾವಲಂಬನೆಯ ಬದುಕು ಬಿತ್ತುವ ಕಾರ್ಯ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಯಡಿ ಒಬ್ಬ ವ್ಯಕ್ತಿ ಪ್ರತಿ ವಾರ ಹತ್ತು ರೂ ನಂತೆ ಉಳಿತಾಯ ಮಾಡಿದ್ದ ಹಣದ ಮೊತ್ತ ಕಳೆದ ಜೂನ್ ಅಂತ್ಯಕ್ಕೆ 72 ಕೋಟಿಯಾಗಿದೆ ಎಂದರು. ಈಗಾಗಲೇ ಜಿಲ್ಲೆಯಲ್ಲಿನ ಪ್ರಗತಿ ಬಂಧು ಸ್ವಸಹಾಯ ಗುಂಪುಗಳಿಗೆ 608 ಕೋಟಿಯಷ್ಟು ಸಾಲ ನೀಡಿದಿದ್ದು, ಅದರಲ್ಲಿ 303ಕೋಟಿ ಸಾಲ ತೀರುವಳಿಯಾಗಿದೆ ಎಂದರು.

          ಮಾಜಿ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮದಾಸಪ್ಪ ಅಧ್ಯಕ್ಷತೆವಹಿಸಿದ್ದರು. ನವಜೀವನ ಸಮಿತಿ ತಾಲ್ಲೂಕು ಅಧ್ಯಕ್ಷ ದಶರಥ, ತಾ.ಪಂ.ಸದಸ್ಯೆ ಕವಿತಾ , ನಿವೃತ್ತ ಶಿಕ್ಷಕ ವದ್ದೀಗಪ್ಪ, ಮುಖಂಡ ಜಯಲಿಂಗರಾಜು ಇತರರಿದ್ದರು. ಕೃಷಿಇಲಾಖೆಯ ಸಹಾಯಕ ಅಧಿಕಾರಿ ನೂರುಲ್ಲಾ,ಯಗಚಿಹಳ್ಳಿಯ ಪ್ರಗತಿಪರ ರೈತ ಎಲ್.ವಿಜಯ್ ಕುಮಾರ್ ರಾಗಿ ನಾಟಿಪದ್ಧತಿಯ ವಿವಿಧ ಹಂತಗಳು ಹಾಗೂ ವಿಶೇಷತೆಗಳ ಬಗ್ಗೆ ವಿವರ ನೀಡಿದರು.ಯೋಜನೆಯ ಗಾಣಧಾಳು ವಲಯ ಮೇಲ್ವಿಚಾರಕ ಕೆ.ಎಸ್.ಸುರೇಶ್ ಸ್ವಾಗತಿಸಿ, ತಾಲ್ಲೂಕು ಕೃಷಿ ಮೇಲ್ವಿಚಾರಕ ಎಸ್.ಎಚ್.ನಾಗಪ್ಪ ನಿರೂಪಿಸಿ,ವಂದಿಸಿದರು.ಸುಮಾರು 300ಕ್ಕೂ ಹೆಚ್ಚು ರೈತ ಮಹಿಳೆಯರು ಭಾಗವಹಿಸಿದ್ದು ವಿಶೇಷವಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.