ವಿಷಯಕ್ಕೆ ಹೋಗಿ

ರಾಗಿ ಬಳಕೆಯಿಂದ ಉತ್ತಮ ಆರೋಗ್ಯ ವೃದ್ದಿ : ಮೂಕಪ್ಪ ಪೂಜಾರ್

         ಆಹಾರ ಧಾನ್ಯಗಳಲ್ಲಿ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ರಾಗಿಯ ಬಳಕೆಯಿಂದ ಯಾವುದೇ ಕಾಯಿಲೆಗಳು ನಮ್ಮತ್ತ ಸುಳಿಯುವುದಿಲ್ಲ ಹಾಗೂ ಆರೋಗ್ಯ ವೃದ್ದಿಯಾಗುತ್ತದೆ ಎಂದು ಬ್ಯಾಡಗಿಯ ಬರಗಾಲ ವಿಜ್ಞಾನಿ ಪ್ರಶಸ್ತಿ ವಿಜೇತ ಮೂಕಪ್ಪ ಪೂಜಾರ್ ತಿಳಿಸಿದರು.
          ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ವತಿಯಿಂದ ಆಯೋಜಿಸಿದ್ದ ರಾಗಿ ಬೇಸಾಯದ ನಾಟಿಪದ್ದತಿ ಕುರಿತ ವಿಚಾರ ಸಂಕಿರ್ಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
 ಹುಳಿಯಾರು ಹೋಬಳಿ ಹೊಯ್ಸಳಕಟ್ಟೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆಯಡಿ ನಡೆದ ರಾಗಿ ಬೇಸಾಯದ ನಾಟಿಪದ್ದತಿ ಕುರಿತ ವಿಚಾರ ಸಂಕಿರಣವನ್ನು . ತಾ.ಪಂ.ಉಪಾಧ್ಯಕ್ಷ ಆರ್.ಪಿ.ವಸಂತಯ್ಯ ಉದ್ಘಾಟಿಸಿದರು.
          ಇಂದಿನ ಆಧುನಿಕಯುಗ ಸಿರಿಧಾನ್ಯಗಳ ಬಳಕೆ ಕಡಿಮೆಯಾಗುವಂತೆ ಮಾಡಿದೆ ಎಂದ ಅವರು ಇವುಗಳ ಪೈಕಿ ರಾಗಿ ಹೆಚ್ಚು ಮಹತ್ವವನ್ನು ಪಡೆದಿದೆ. ರಾಗಿಯಿಂದ ಅನೇಕ ಆಹಾರ ಪದಾರ್ಥಗಳನ್ನು ತಯಾರಿಸಬಹುದಾಗಿದ್ದು ಅದರ ಬಳಕೆ ಆಗುತ್ತಿಲ್ಲ ಎಂದು ವಿಷಾಧಿಸಿದರು. ರಾಗಿಯನ್ನು ನಾಟಿಪದ್ಧತಿಯಿಂದ ಅತಿ ಹೆಚ್ಚು ಇಳುವರಿ ಪಡೆಯಬಹುದು ಎಂದ ಅವರು ತಾವೇ ಸ್ವತ: ಒಂದು ಎಕರೆಗೆ 18 ಕ್ಚಿಂಟಲ್ ಬೆಳೆದ ವಿಧಾನವನ್ನು ರೈತರಿಗೆ ಹಾಗೂ ರೈತ ಮಹಿಳೆಯರಿಗೆ ವಿವರಿಸಿದರು.
         ತಾ.ಪಂ.ಉಪಾಧ್ಯಕ್ಷ ಆರ್.ಪಿ.ವಸಂತಯ್ಯ ಮಾತನಾಡಿ ಸರ್ಕಾರ ನೀಡುವ ಒಂದು ರೂ ಕೆ.ಜಿ ಅಕ್ಕಿಯನ್ನು ನಂಬಿಕೊಂಡು ಕೃಷಿ ಚಟುವಟಿಕೆಗಳನ್ನೇ ಮರೆಯುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ರಾಗಿ ಬೆಳೆಯುತ್ತಿದ್ದ ಪ್ರದೇಶದಲ್ಲೂ ಬೇರೆಬೇರೆ ವಾಣಿಜ್ಯ ಬೆಳೆಗಳು ಲಗ್ಗೆ ಇಟ್ಟಿವೆ. ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ರೈತರೇ ಆಹಾರಕ್ಕೆ ಕೈವೊಡ್ಡುವ ಕಾಲ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.
ಯೋಜನೆ ತಾಲ್ಲೂಕು ನಿರ್ದೇಶಕ ರೋಹಿತಾಕ್ಷ ಕಾರ್ಯಕ್ರಮ ಧರ್ಮಸ್ಥಳ ಯೋಜನೆಯು ವೈಯ್ಯಕ್ತಿಕ ಹಾಗೂ ಸಮುದಾಯ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸ್ವಾವಲಂಬನೆಯ ಬದುಕು ಬಿತ್ತುವ ಕಾರ್ಯ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಯಡಿ ಒಬ್ಬ ವ್ಯಕ್ತಿ ಪ್ರತಿ ವಾರ ಹತ್ತು ರೂ ನಂತೆ ಉಳಿತಾಯ ಮಾಡಿದ್ದ ಹಣದ ಮೊತ್ತ ಕಳೆದ ಜೂನ್ ಅಂತ್ಯಕ್ಕೆ 72 ಕೋಟಿಯಾಗಿದೆ ಎಂದರು. ಈಗಾಗಲೇ ಜಿಲ್ಲೆಯಲ್ಲಿನ ಪ್ರಗತಿ ಬಂಧು ಸ್ವಸಹಾಯ ಗುಂಪುಗಳಿಗೆ 608 ಕೋಟಿಯಷ್ಟು ಸಾಲ ನೀಡಿದಿದ್ದು, ಅದರಲ್ಲಿ 303ಕೋಟಿ ಸಾಲ ತೀರುವಳಿಯಾಗಿದೆ ಎಂದರು.

          ಮಾಜಿ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮದಾಸಪ್ಪ ಅಧ್ಯಕ್ಷತೆವಹಿಸಿದ್ದರು. ನವಜೀವನ ಸಮಿತಿ ತಾಲ್ಲೂಕು ಅಧ್ಯಕ್ಷ ದಶರಥ, ತಾ.ಪಂ.ಸದಸ್ಯೆ ಕವಿತಾ , ನಿವೃತ್ತ ಶಿಕ್ಷಕ ವದ್ದೀಗಪ್ಪ, ಮುಖಂಡ ಜಯಲಿಂಗರಾಜು ಇತರರಿದ್ದರು. ಕೃಷಿಇಲಾಖೆಯ ಸಹಾಯಕ ಅಧಿಕಾರಿ ನೂರುಲ್ಲಾ,ಯಗಚಿಹಳ್ಳಿಯ ಪ್ರಗತಿಪರ ರೈತ ಎಲ್.ವಿಜಯ್ ಕುಮಾರ್ ರಾಗಿ ನಾಟಿಪದ್ಧತಿಯ ವಿವಿಧ ಹಂತಗಳು ಹಾಗೂ ವಿಶೇಷತೆಗಳ ಬಗ್ಗೆ ವಿವರ ನೀಡಿದರು.ಯೋಜನೆಯ ಗಾಣಧಾಳು ವಲಯ ಮೇಲ್ವಿಚಾರಕ ಕೆ.ಎಸ್.ಸುರೇಶ್ ಸ್ವಾಗತಿಸಿ, ತಾಲ್ಲೂಕು ಕೃಷಿ ಮೇಲ್ವಿಚಾರಕ ಎಸ್.ಎಚ್.ನಾಗಪ್ಪ ನಿರೂಪಿಸಿ,ವಂದಿಸಿದರು.ಸುಮಾರು 300ಕ್ಕೂ ಹೆಚ್ಚು ರೈತ ಮಹಿಳೆಯರು ಭಾಗವಹಿಸಿದ್ದು ವಿಶೇಷವಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...