ವಿಷಯಕ್ಕೆ ಹೋಗಿ

ಜೀವನದಲ್ಲಿ ಸದ್ಗುಣಗಳಿರಬೇಕು : ಡಾ|| ಗೋಪಾಲಕೃಷ್ಣ

         ಸಂಸ್ಕಾರವಂತ ಮನುಷ್ಯ ತನ್ನ ಜೀವನದಲ್ಲಿ ಏನೆಲ್ಲಾ ಅನುಭವಿಸಲು ಮುಂದಾಗುತ್ತಾನೆ ,ಆದರೆ ಮನಸ್ಸು ಪರಿಶುದ್ದವಿಲ್ಲದೆ ಯಾವುದನ್ನು ಅನುಭವಿಸುದರೂ ಅದರಿಂದ ಯಾವುದೇ ರೀತಿಯ ತೃಪ್ತಿ ಸಿಗುವುದಿಲ್ಲವಾದ್ದರಿಂದ ಮಾನವ ತನ್ನ ಜೀವನದಲ್ಲಿ ಸದ್ಗುಣಗಳನ್ನು ಹೊಂದಿ ಪರಿಶುದ್ಧ ಮನಸ್ಸಿನಿಂದ ಸಾಗಬೇಕು ಎಂದು ಡಾ|| ಗೋಪಾಲಕೃಷ್ಣ ತಿಳಿಸಿದರು.
ಹುಳಿಯಾರಿನ ಸನ್ಮಾರ್ಗ ಥಿಯಸಾಫಿಕಲ್ ಸೊಸೈಟಿಯಲ್ಲಿ ಡಾ|| ಗೋಪಾಲಕೃಷ್ಣ ನಿತ್ಯ ಜೀವನದ ಪರಿಶುದ್ಧತೆಗೆ ಸಪ್ತ ಸೂತ್ರಗಳ ಕುರಿತ ವಿಶೇಷ ಉಪನ್ಯಾಸ ನೀಡಿದರು
           ದಿವಂಗತ ಹೆಚ್.ಎ.ಭಾಸ್ಕರಾಚಾರ್ ಅವರ ಸ್ಮರಣಾರ್ಥ ಹುಳಿಯಾರಿನ ಸನ್ಮಾರ್ಗ ಥಿಯಸಾಫಿಕಲ್ ಸೊಸೈಟಿಯಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ನಿತ್ಯ ಜೀವನದ ಪರಿಶುದ್ಧತೆಗೆ ಸಪ್ತ ಸೂತ್ರಗಳ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

              ಮನುಷ್ಯನ ಮನಸ್ಸು ಸಹ ದೇಹದ ಒಂದು ರೀತಿಯ ಅಂಗವಾಗಿದ್ದು , ಮನಸ್ಸಿನ ಮಾತಿನಿಂತೆ ನಡೆಯುವುದು ಸಹಜ. ಇದರಿಂದ ಒಳ್ಳೆಯದ್ದು, ಕೆಟ್ಟದು ಎಲ್ಲವೂ ನಡೆಯುತ್ತದೆ. ಲಕ್ಷಾಂತರ ಜೀವರಾಶಿಗಳಲ್ಲಿ ಮನುಷ್ಯ ಮಾತ್ರ ಶಾಸ್ತ್ರ, ಧರ್ಮ ಜಪ, ತಪ ಸೇರಿದಂತೆ ಒಳ್ಳೆಯದು ಕೆಟ್ಟದು ಎಂದು ತಿಳಿಯುವ, ಯೋಚಿಸುವ ಬುದ್ಧಿಶಕ್ತಿಯನ್ನು ಹೊಂದಿದ್ದಾನೆ ಎಂದರು. ಮನಸ್ಸಿನಲ್ಲಿ ಪರಿಶುದ್ಧತೆಯಿಲ್ಲದೆ ಯಾವುದೇ ಕಾರ್ಯಗಳನ್ನು ಮಾಡಿದರೆ ಅದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದರು.

             ಜೀವನದಲ್ಲಿ ಶಾಂತಿ,ನೆಮ್ಮದಿ ಲಭಿಸಬೇಕಾದರೆ ಮಾನವ ಜೀವನದ ನಿರ್ವಹಣೆಯ ಸಪ್ತ ಸೂತ್ರಗಳನ್ನು ಅರಿತು ನಡೆಯಬೇಕು ಹಾಗೂ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಶಾಂತರೀತಿಯಲ್ಲಿ ಪರಿಹಾರ ಕಂಡುಕೊಂಡಾಗ ಮಾತ್ರ ಜೀವನ ಸುಖಕರವಾಗಿರುತ್ತದೆ ಎಂದರು. ನಿತ್ಯ ರಾತ್ರಿ ಮಲಗುವ ಮುನ್ನಾ ನಮ್ಮ ಮನಸ್ಸನ್ನು ನಾವೇ ಪ್ರಶ್ನಿಸಿಕೊಳ್ಳುತ್ತಾ ಈ ದಿನ ನಾನು ಯಾವಯಾವ ಕಾರ್ಯಗಳನ್ನು ಮಾಡಿದೆ ಎಂದು ಪರಾಮರ್ಶಿಸಿಕೊಳ್ಳಬೇಕು ಇದರಿಂದ ಮನಸ್ಸಿನ ಅನೇಕ ದುಗುಡಗಳಿಗೆ ಪರಿಹಾರ ಲಭಿಸುತ್ತದೆ. ಜೀವನದಲ್ಲಿ ಒಂದು ನಿರ್ದಿಷ್ಟ ಯೋಜನೆ ಇರಬೇಕು ಇಲ್ಲವಾದರೆ ಜೀವನವೆಂಬುದು ಸೂತ್ರ ಹರಿದ ಗಾಳಿಪಟದಂತಾಗುತ್ತದೆ. ಬಾಹ್ಯ ಶುಚ್ಚಿತ್ವಕ್ಕಿಂತ ಆಂತರಿಕ ಶುಚ್ಚಿತ್ವ ಪ್ರಮುಖವಾಗಿದ್ದು, ಉತ್ತಮ ಆಲೋಚನೆಗಳಲ್ಲಿ ತೋಡಗುವ ಮೂಲಕ
 ಜೀವನದಲ್ಲಿ ಯಶಸ್ಸುಗಳಿಸಬಹುದು ಎಂದು 
ಕಿವಿಮಾತು ಹೇಳಿದರು.

         ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸನ್ಮಾರ್ಗ ಥಿಯಸಾಫಿಕಲ್ ಸೊಸೈಟಿಯ ಅಧ್ಯಕ್ಷ ಹೆಚ್.ಬಿ.ಗೋಪಾಲಕೃಷ್ಣ ಮಾತನಾಡಿ ಜೀವನದಲ್ಲಿ ಸದಾಕಾಲ ಸುಖ ಸಂತೋಷ ತುಂಬಿರಬೇಕೆಂದರೆ ಮನಸ್ಸು ಪರಿಶುದ್ಧತೆಯಿಂದ ಕೂಡಿರಬೇಕು ಅದಕ್ಕಾಗಿ ಸಪ್ತ ಸೂತ್ರಗಳ ಅವಶ್ಯಕತೆಯಿದ್ದು ಅದನ್ನು ಪಾಲಿಸುತ್ತಾ ನಮ್ಮೆಲ್ಲರ ಜೀವನ ಸಮೃದ್ದವಾಗಿರಲಿ ಎಂದು ಆಶಿಸಿದರು.

 ಎಂ.ಆರ್.ಗೋಪಾಲ್ ಪ್ರಾಸ್ತಾವಿಕ ನುಡಿಗಳನ್ನಾಡಿ
ದರು, ವೆಂಕಟಾದ್ರಿ  ಭಜನಾಮಂಡಳಿಯ ಮಹಿಳೆಯರು ಸಂಕೀರ್ತನಾ ಕಾರ್ಯಕ್ರಮ ನಡೆಸಿಕೊಟ್ಟರು.ಮಹೇಶಾಚಾರ್ ಸ್ವಾಗತಿಸಿ, ಶಿಕ್ಷಕ ಜಗದೀಶ್ ನಿರೂಪಿಸಿ ,ಕಾರ್ಯದರ್ಶಿ ಸತೀಶ್ ವಂದಿಸಿದರು.











ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...