ವಿಷಯಕ್ಕೆ ಹೋಗಿ

ಗೆದ್ದವರು ಬೀಗದೆ , ಸೋತವರು ಚಿಂತಿಸದೆ ಮುನ್ನಡೆಯಿರಿ : ಪರಶಿವಮೂರ್ತಿ

         ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪಾಠ ಹೇಗೆ ಮುಖ್ಯವೂ ಅದರಂತೆ ಅವರ ಶಾರೀರಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಆಟೋಟಗಳು ಅಷ್ಟೇ ಮುಖ್ಯವಾಗುತ್ತವೆ ಎಂದು ಜಿಲ್ಲಾ ಪ್ರಾಥಮಿಕಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಆರ್.ಪರಶಿವಮೂರ್ತಿ ತಿಳಿಸಿದರು.
          ಹುಳಿಯಾರಿನ ಎಂಪಿಎಸ್ ಶಾಲಾ ಮೈದಾನದಲ್ಲಿ ಮರೆನಡುಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಬಿ ವಿಭಾಗದ ಎರಡು ದಿನಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಳಿಯಾರಿನ ಎಂಪಿಎಸ್ ಶಾಲಾ ಮೈದಾನದಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಆರ್.ಪರಶಿವಮೂರ್ತಿ ಉದ್ಘಾಟಿಸಿದರು.
         ಪ್ರತಿಯೊಂದು ಆಟದಲ್ಲಿ ಸೋಲು-ಗೆಲುವು ಎನ್ನುವುದು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಗೆದ್ದವರು ಬೀಗದೆ , ಸೋತವರು ಚಿಂತಿಸದೆ ಮುನ್ನಡೆಯಬೇಕು ಹಾಗೂ ಶಾಲಾ ಕಾಲೇಜುಗಳಲ್ಲಿ ಆಯೋಜಿಸುವ ಇಂತಹ ಕ್ರೀಡಾಕೂಟಗಳಲ್ಲಿ ಮಕ್ಕಳು ಸ್ವಯಂಪ್ರೇರಣೆಯಿಂದ ಭಾಗವಹಿಸಬೇಕು ಎಂದರು. ಹೋಬಳಿ ಮಟ್ಟದಲ್ಲಿ ಗೆದ್ದವರಿಗೆ ತಾಲ್ಲೂಕು,ಜಿಲ್ಲಾ,ರಾಜ್ಯಮಟ್ಟದ ಕ್ರಿಡಾಕೂಟದಲ್ಲಿ ಭಾಗವಹಿಸಬಹುದಾಗಿದ್ದು ಕ್ರೀಡಾಪಟುಗಳು ಶ್ರದ್ಧೆಯಿಂದ ಆಟಗಳನ್ನಾಡುತ್ತಾ, ಶಾಲೆಗೆ,ಊರಿಗೆ ಕೀರ್ತಿ ತನ್ನಿ ಎಂದು ಕಿವಿಮಾತು ಹೇಳಿದರು.
        ಸಿಆರ್ ಪಿ ಪ್ರೇಮಲೀಲಾ ಮಾತನಾಡಿ ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಕ್ರೀಡಾಕೂಟ ಸೂಕ್ತವೇದಿಕೆಯಾಗಿದೆ.ಅಲ್ಲದೆ ಪ್ರತಿಭೆಯೆಂಬುದು ಪ್ರತಿಯೊಂದು ಮಗುವಿನಲ್ಲಿ ಸುಪ್ತವಾಗಿರುತ್ತದೆ ಕ್ರಿಡಾಕೂಟ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಅದನ್ನು ಪ್ರದರ್ಶಿಸುವಂತೆ ತಿಳಿಸಿದರಲ್ಲದೆ ಕ್ರಿಡಾಪಟುಗಳಿಗೆ ಶುಭಹಾರೈಸಿದರು.

         ನರಸಿಂಹಮೂರ್ತಿ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.ಶಾಲಾ ಎಸ್ಡಿಎಂಸಿಯ ಅಧ್ಯಕ್ಷ ಲಿಂಗರಾಜು,ಎಂಪಿಎಸ್ ಶಾಲೆಯ ನಂದವಾಡಗಿ,ಮರೆನಾಡುಪಾಳ್ಯದ ಮುಖ್ಯಶಿಕ್ಷಕ ಹೊನ್ನಪ್ಪ, ಕ್ಲಸ್ಟರ್ ಮಟ್ಟದ ಸಿ.ಆರ್.ಪಿಗಳು,ಶಾಲಾ ಶಿಕ್ಷಕರು ಉಪಸ್ಥಿತರಿದ್ದ ಕ್ರೀಡಾಕೂಟದಲ್ಲಿ ಶಿಕ್ಷಕ ಹನುಮಂತರಾಜ್ ಸ್ವಾಗತಿಸಿ,ನಿರೂಪಿಸಿ,ಮೃತ್ಯುಂಜಯ ವಂದಿಸಿದರು. ಕ್ರೀಡಾಕೂಟಕ್ಕೆ ಭಾಗವಹಿಸಿದ್ದ ಕ್ರೀಡಾಳುಗಳಿಂದ ಕಾರ್ಯಕ್ರಮಕ್ಕು ಮುನ್ನಾ ಪಥಸಂಚನ ನಡೆಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...