ವಿಷಯಕ್ಕೆ ಹೋಗಿ

ಇವರಿಗೆ ಬೀದಿಬದಿಯ ಆರ್ಕೆಸ್ಟ್ರಾವೇ ಜೀವನಾಧಾರ

             ಆರ್ಕೇಸ್ಟ್ರಾ ಅಂದರೆ ಜಗಮಗಿಸುವ ಲೈಟು,ಆಳೆತ್ತರದ ಸ್ಪೀಕರ್ ,ಚಿತ್ತಾರದ ಬಟ್ಟೆಗಳೊಂದಿಗೆ ಸುಸ್ಸಜ್ಜಿತ ವೇದಿಕೆ ಹೀಗೆಲ್ಲಾ ಕಲ್ಪನೆ ಬರುತ್ತೆ.ಆದ್ರೆ ಇದ್ಯಾವುದೆ ಪರಿಕರಿಗಳಿಲ್ಲದೆ ಹಿಂಬದಿಗೊಂದು ಬ್ಯಾನರ್ ಕಟ್ಟಿ,ಮೊಬೈಲ್ ಮೂಲಕೆವೇ ಧ್ವನಿವರ್ಧಕದಲ್ಲಿ ಹಾಡು ಹಾಡಿಸಿ,ಹಾಡಿಗೆ ತಕ್ಕ ಹೆಜ್ಜೆ ಹಾಕಿ ಕುಣಿಯುತ್ತಾ ಜನರನ್ನು ರಂಜಿಸುವ ಮುಖಾಂತರ ಅವರು ನೀಡುವ ಹಣದಿಂದಲೆ ಜೀವನಬಂಡಿ ಸಾಗಿಸುತ್ತಿದ್ದಾರೆ ನಾರಾಯಣ್ಣಪ್ಪ.
ಹುಳಿಯಾರಿನ ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ಮೈಸೂರಿನ ವಿನಾಯಕ ಕಲಾತಂಡದವರ ನೃತ್ರ ಪ್ರದರ್ಶನ ನೋಡಲು ಸೇರಿದ್ದ ಜನರು

ಬಸ್ ನಿಲ್ದಾಣದಲ್ಲಿ ಹಾಡೊಂದಕ್ಕೆ ನೃತ್ಯ ಮಾಡುತ್ತಿರುವ ಕಲಾವಿದ.

           ಮೂಲತಹ ರಂಗಭೂಮಿ ಕಲಾವಿದರಾದ ನಾರಾಯಣ್ಣಪ್ಪನ ಕುಟುಂಬದ ಹಿರಿಯರು ಬೀದಿನಾಟಕಗಳನಾಡುತ್ತ ಬದುಕು ಕಟ್ಟಿಕೊಂಡವರು.ಆದ್ರೆ ಬೀದಿನಾಟಕಗಳಿಂದ ಕಲಾಪೋಷಣೆಯೆ ಹೊರತು ಉದರಕ್ಕೆ ನೆರವಾಗಲ್ಲ ಅಂದ ಅರಿತ ನಾರಾಯಣಪ್ಪ ಮುಖ ಮಾಡಿದ್ದು ಆರ್ಕೆಸ್ಟ್ರಾ ಕಡೆ.ಹಾಡಲಿಕ್ಕೆ ಸುಮಧುರ ಕಂಠವಿಲ್ಲ,ಶಾಸ್ತ್ರೀಯ ಕುಣಿತ ಕಲಿಯದಿದ್ದರೂ ಸ್ವಂತ ಬದುಕು ಕಟ್ಟಿಕೊಳ್ಳಬೇಕೆಂಬ ಛಲದಿಂದ ಹಾಡಿಗೆ ಕುಣಿತವನ್ನು ಮೇಳೈಸಿ ಕಾರ್ಯಕ್ರಮ ನೀಡಲು ಶುರುಮಾಡಿದ್ರು.ಒಂದು ವರ್ಗದ ಜನಕ್ಕೆ ಇದು ಮನರಂಜನೆಯಾದರೆ ಇವರಿಗೆ ಜೀವನಕ್ಕೆ ದಾರಿಯಾಯಿತು.ಅಲ್ಲಿಂದ ಮುಂದೆ ಅದನ್ನೆ ಕಾಯಕ ಮಾಡಿಕೊಂಡು ಇಂದಿಗೂ ಅದರಲ್ಲೆ ಬದುಕು ಕಟ್ಟಿಕೊಂಡಿದ್ದಾರೆ.
           ಮೂಲತಹ ಮೈಸೂರಿನ ಶಾದನಹಳ್ಳಿಯವರಾದ ಇವರು ಹೆಂಡತಿ,ಮಕ್ಕಳು,ಸೊಸೆ,ಮೊಮ್ಮಗು ಕೂಡಿಕೊಂಡು ವಿನಾಯಕ ಕಲಾತಂಡ ಹಾಗೂ ಮಂಜುನಾಥ ಬೀದಿ ನಾಟಕ ಮಂಡಳಿ ಎಂಬ ತಂಡ ಕಟ್ಟಿಕೊಂಡಿದ್ದಾರೆ. ಕಳೆದ 1977 ರಿಂದ ಕಲಾಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಇದುವರೆಗೂ ರಾಜ್ಯದ ಅನೇಕ ಜಿಲ್ಲೆ.ಊರುಗಳನ್ನು ಸುತ್ತಿದ್ದಾರೆ.
           ಪುಡಿಗಾಸೆ ಆಧಾರ: ನಮ್ಮ ತಂದೆಯವರು ಬೀದಿ ನಾಟಕಗಳನ್ನು ಅಭಿನಯಿಸುತ್ತಿದ್ದರು ಅವರು ಹಾಕಿಕೊಟ್ಟ ಹಾದಿಯಲ್ಲೇ ನಾನು ಸಾಗುತ್ತಿದ್ದೇನೆ. ನಮಗೆ ಆದಾಯ ಬರುವ ಯಾವುದೇ ಮೂಲವಿಲ್ಲ ನಾವು ನೀಡುವ ಕಾರ್ಯಕ್ರಮದಿಂದ ಬರುವ ಪುಡಿಗಾಸೆ ನಮಗೆ ಆಧಾರ ಎನ್ನುತ್ತಾರೆ ತಂಡ ಮುಖ್ಯಸ್ಥ ನಾರಾಯಣಪ್ಪ.
          ಒಮ್ಮೆ ಕಾರ್ಯಕ್ರಮ ನೀಡಿದರೆ ಐದರಿಂದ ಎಂಟು ನೂರು ಮಾತ್ರ ಸಿಗುತ್ತದೆ, ಸಣ್ಣ ಗ್ರಾಮಗಳಲ್ಲಿ ಒಂದು ದಿನ ಮಾತ್ರ ಕಾರ್ಯಕ್ರಮ ನೀಡುತ್ತೇವೆ, ದೊಡ್ಡ ಊರುಗಳಲ್ಲಿ ಮೂರ್ನಾಲ್ಕು ಕಡೆ ಕಾರ್ಯಕ್ರಮ ನೀಡುತ್ತೇವೆ. ನಮ್ಮ ಮಗ,ಸೊಸೆ,ಮೊಮ್ಮಕ್ಕಳು ಸಹ ತಮ್ಮೊಂದಿಗೆ ಕೈ ಜೋಡಿಸಿದ್ದಾರೆ. ನಮಗೆ ಸರ್ಕಾರದಿಂದಾಗಲಿ, ಸಂಘ ಸಂಸ್ಥೆಯವರಿಂದಾಗಲಿ ಯಾವುದೇ ನೆರವು ಸಿಕ್ಕಿಲ್ಲ ವೀಕ್ಷಕರು ಕೊಡುವ ಪುಡಿಗಾಸೆ ಇಂದಿಗೂ ನಮ್ಮನ್ನು ಸಾಕುತ್ತಿದೆ ಎನ್ನುವ ನಾರಾಯಣಪ್ಪ ಮುಂದೂಕೂಡ ಇದು ನಮ್ಮನ್ನು ಕೈ ಬಿಡುವುದಿಲ್ಲ ಎನ್ನುವ ಆಶಾಭಾವನೆ ವ್ಯಕ್ತಪಡಿಸುತ್ತಾರೆ.

               ಕಳೆದೆರಡು ದಿನಗಳಿಂದ ಹುಳಿಯಾರಿನಲ್ಲಿ ಬೀಡು ಬಿತ್ತಿರುವ ಇವರು ರಾಂಗೋಪಾಲ್ ಸರ್ಕಲ್,ಆಸ್ಪತ್ರೆ ಆವರಣ,ಬಸ್ ನಿಲ್ದಾಣ,ಸ್ಟೇಷನ್ ಮುಂಭಾಗ ಮುಂತಾದೆಡೆ ಪ್ರದರ್ಶನ ನೀಡುತಿದ್ದಾರೆ.ಈ ಕಲಾತಂಡದಲ್ಲಿ ಎಂಟರಿಂದ ಹತ್ತು ಮಂದಿಯಿದ್ದು, ಪ್ರಮುಖ ಸ್ಥಳಗಳಲ್ಲಿ ಕನ್ನಡ ಕಟ್ಟಾಳುಗಳ ಭಾವಚಿತ್ರವಿರುವ ಬ್ಯಾನರನ್ನು ಕಟ್ಟಿ ಅದರ ಮುಂದೆ ಕನ್ನಡ ಹಾಗೂ ಇತರ ಭಾಷೆಗಳ ಹಳೆಯ ,ಹೊಸ ಚಿತ್ರಗೀತೆಗಳಿಗೆ ಹೆಜ್ಜೆಹಾಕುತ್ತಾ ಜನರನ್ನು ತಮ್ಮೆಡೆಗೆ ಸೆಳೆಯುತ್ತಿರುವ ಇವರು ನಿತ್ಯ ಮೂರ್ನಾಲ್ಕು ಕಡೆ ಪ್ರದರ್ಶನ ನೀಡುತ್ತಿದ್ದಾರೆ.ದಿನವೊಂದಕ್ಕೆ ವೀಕ್ಷಕರು ನೀಡುವ ಹಣ ಏಳೆಂಟುನೂರು ಸಂಗ್ರಹವಾಗುತ್ತಿದ್ದು ವೀಕ್ಷಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.