ವಿಷಯಕ್ಕೆ ಹೋಗಿ

ಅಂಗಾರಕ ಸಂಕಷ್ಟಹರ ಚತುರ್ಥಿ ವ್ರತ


 ಹುಳಿಯಾರಿನ ಶ್ರೀಪ್ರಸನ್ನ ಗಣಪತಿ ದೇವಾಯಲದಲ್ಲಿ ಮಂಗಳವಾರದ ಅಂಗಾರಕ ಸಂಕಷ್ಟಹರ ಚತುರ್ಥಿ ವಿಧಿವತ್ತಾಗಿ ನೆರವೇರಿತು .
ಚೋಳರ ಕಾಲದ ಈ ಗಣಪತಿಯನ್ನು ನಂಬಿ ಕೆಟ್ಟವರಿಲ್ಲ,ನಂಬಿದವರನ್ನು ಕೈ ಬಿಡುಲ್ಲ
ಇಂದಿನ ಪೂಜೆ ಸತ್ಯನಾರಯಣ ಜೋಯಿಸ್,ಅರ್ಚಕ ರಾಜಣ್ಣ, ತಿಮ್ಲಾಪುರ ರವಿಕುಮಾರ್,ಚೇತನ್ ನಡೆಸಿಕೊಟ್ಟರು.
ಪೂಜೆಯ ಅಂಗವಾಗಿ ಗಣಪತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಅದೇನು ಗಣಪತಿಯ ಮಹಿಮೆಯೋ,ಭಕ್ತರ ಭಕ್ತಿಯ ಪರಾಕಾಷ್ಠೆಯೋ ದೇವಾಲಯದ ತುಂಬಾ ಜನವೋ ಜನ.ಎಂದು ಕಾಣದಿದ್ದ ಜನಸಂದಣಿಯಿದಿದ್ದು ವಿಶೇಷ.


ಏನಿದು ಅಂಗಾರಕ ಸಂಕಷ್ಟ ವ್ರತ:

ಬ್ದವೇ ಸೂಚಿಸುವಂತೆ ವಿಘ್ನಗಳೆಲ್ಲವನ್ನೂ ನಿವಾರಿಸುವ ಅಧಿದೇವತೆ ಗಣಪತಿ ಯಾಗಿದ್ದು , ಸಂಕಷ್ಟ ಪರಿಹಾರಕ್ಕಾಗಿ, ಮಾಡುವ ವ್ರತ ಸಂಕಷ್ಟಹರ ವ್ರತ. 

ಪ್ರತಿ ಹುಣ್ಣಿಮೆಯ ನಂತರ ಬರುವ ಚತುರ್ಥಿಯಂದು ವ್ರತ ಆಚರಿಸುತ್ತಾರಾದರೂ ಅದರಲ್ಲೂ ಮಂಗಳವಾರ ಬಂದರಂತೂ ವಿಶೇಷ ಮನ್ನಣೆ. ಈ ವ್ರತವನ್ನು ಪ್ರಾರಂಭಿಸುವವರು ಅಂಗಾರಕ ಚತುರ್ಥಿಯ ದಿನದಿಂದಲೇ ಪ್ರಾರಂಭಿಸುತ್ತಾರೆ. ವರ್ಷದಲ್ಲಿ ಒಂದು ಅಥವಾ ಎರಡು ಬಾರಿ ಮಾತ್ರ ಮಂಗಳವಾರ ಬರುವುದಿದ್ದು ಅಂದು ಗಣಪತಿಗೆ ವಿಶೇಷ ಪೂಜೆ ಸಲ್ಲುತ್ತದೆ. ಅಂಗಾರಕ ಎಂದರೆ ಮಂಗಳ ಅರ್ಥಾತ್ ಕುಜ. ಇವನದು ಸಿಂಧೂರ ವರ್ಣ, ಋಣ, ರೋಗಧಿ, ದಾರಿದ್ರ್ಯ, ಅಪಮೃತ್ಯುಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದ್ದಾನೆ. 21 ಚತುರ್ಥಿಗಳಂದು ನಿರಂತರವಾಗಿ ಈ ವ್ರತ ಆಚರಿಸಿದಲ್ಲಿ ವಿಶೇಷ ಫಲ ಪ್ರಾಪ್ತಿಯಾಗುತ್ತದೆಂಬ ನಂಬಿಕೆ ಇದೆ.

ವಿಘ್ನವಿನಾಶಕನಾದ ಗಣಪತಿಯ ಅನುಗ್ರಹವನ್ನು ಪಡೆದುಕೊಳ್ಳಲು ಇರುವ ನೂರಾರು ಮಾರ್ಗಗಳಲ್ಲಿ ಸುಲಭವಾದ ದಾರಿ ಇದಾಗಿದ್ದು ಈ ವ್ರತ ಆಚರಿಸುವವರು ಮುಂಜಾನೆ ಸ್ನಾನ ಮಾಡಿನಂತರ ದೇವರಿಗೆ ದೀಪ ಹಚ್ಚಿ 21 ನಮಸ್ಕಾರ ಮಾಡಿ ಆ ದಿನ ಮಧ್ಯಾಹ್ನ ಉಪವಾಸವಿದ್ದು ಮೋದಕಗಳನ್ನು ಮಾಡಿ ಗಣಪತಿಗೆ ಅರ್ಪಿಸಿ ರಾತ್ರಿ ಚಂದ್ರನನ್ನು ನೋಡಿದ ಬಳಿಕ ತರ್ಪಣ ಬಿಟ್ಟು ನಂತರ ಪ್ರಸಾದ ಸ್ವೀಕರಿಸಬಹುದು.


ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ |
ಭಕ್ತಾವಾಸಂ ಸ್ಮರೆ ನಿತ್ಯಂ ಆಯು: ಕಾಮರ್ಥ ಸಿದ್ಧಯೇ ||
ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಂ |
ತೃತಿಯಂ ಕೃಷ್ಣ ಪಿಂಗಾಕ್ಷಂ ಗಜವಕ್ತ್ರಂ ಚತುರ್ಥಕಂ ||
ಲಂಬೋದರಂ ಪಂಚಮಂ ಚ ಷಷ್ಟುಂ ವಿಕಟಮೇವ ಚ |
ಸಪ್ತಮಂ ವಿಘ್ನರಾಜಂ ಚ ಧೂಮ್ರವರ್ಣಮ್ ತಥ ಅಷ್ಟಕಂ ||
ನವಮಂ ಫಾಲ ಚಂದ್ರಮ್ ಚ ದಶಮಂ ತು ವಿನಾಯಕಂ |
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಂ ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಟೇ ನರಃ |
ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರಂ ಪ್ರಭೋ ||
ವಿಧ್ಯಾರ್ತಿ ಲಭತೇ ವಿಧ್ಯಾಂ, ಧನಾರ್ತಿ ಲಭತೇ ಧನಂ |
ಪುತ್ರಾರ್ತಿ ಲಭತೇ ಪುತ್ರಂ, ಮೊಕ್ಷಾರ್ತಿ ಲಭತೇ ಗತಿಂ ||
ಜಪೇತ್ ಗಣಪತಿ ಸ್ತೋತ್ರಂ ಷಡ್ ಭಿ: ಮಾಸಯ್ಹಿ ಫಲಂ ಲಭೆತ್ |
ಸಂವತ್ಸರೆಣ ಸಿದ್ಧಿಂ ಚ ಲಭತೇ ನಾತ್ರ ಸಂಶಯಃ ||
ಅಷ್ತೆಭ್ಯೋ ಬ್ರಾಹ್ಮಣೆಭ್ಯ: ಚ ಲಿಖಿತ್ವಾಯ ಸಮರ್ಪಯೇತ್ |
ತಸ್ಯ ವಿಧ್ಯಾ ಭವೇತ್ ಸರ್ವ ಗಣೇಶಸ್ಯ ಪ್ರಸಾದತಃ ||


|| ಇತಿ ನಾರದ ಪುರಾಣೇ ಸಂಕಷ್ಟಹರ ನಾಮ ಗಣಪತಿ ಸ್ತೋತ್ರಂ ||






ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.