ವಿಷಯಕ್ಕೆ ಹೋಗಿ

ಅಂಗಾರಕ ಸಂಕಷ್ಟಹರ ಚತುರ್ಥಿ ವ್ರತ


 ಹುಳಿಯಾರಿನ ಶ್ರೀಪ್ರಸನ್ನ ಗಣಪತಿ ದೇವಾಯಲದಲ್ಲಿ ಮಂಗಳವಾರದ ಅಂಗಾರಕ ಸಂಕಷ್ಟಹರ ಚತುರ್ಥಿ ವಿಧಿವತ್ತಾಗಿ ನೆರವೇರಿತು .
ಚೋಳರ ಕಾಲದ ಈ ಗಣಪತಿಯನ್ನು ನಂಬಿ ಕೆಟ್ಟವರಿಲ್ಲ,ನಂಬಿದವರನ್ನು ಕೈ ಬಿಡುಲ್ಲ
ಇಂದಿನ ಪೂಜೆ ಸತ್ಯನಾರಯಣ ಜೋಯಿಸ್,ಅರ್ಚಕ ರಾಜಣ್ಣ, ತಿಮ್ಲಾಪುರ ರವಿಕುಮಾರ್,ಚೇತನ್ ನಡೆಸಿಕೊಟ್ಟರು.
ಪೂಜೆಯ ಅಂಗವಾಗಿ ಗಣಪತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಅದೇನು ಗಣಪತಿಯ ಮಹಿಮೆಯೋ,ಭಕ್ತರ ಭಕ್ತಿಯ ಪರಾಕಾಷ್ಠೆಯೋ ದೇವಾಲಯದ ತುಂಬಾ ಜನವೋ ಜನ.ಎಂದು ಕಾಣದಿದ್ದ ಜನಸಂದಣಿಯಿದಿದ್ದು ವಿಶೇಷ.


ಏನಿದು ಅಂಗಾರಕ ಸಂಕಷ್ಟ ವ್ರತ:

ಬ್ದವೇ ಸೂಚಿಸುವಂತೆ ವಿಘ್ನಗಳೆಲ್ಲವನ್ನೂ ನಿವಾರಿಸುವ ಅಧಿದೇವತೆ ಗಣಪತಿ ಯಾಗಿದ್ದು , ಸಂಕಷ್ಟ ಪರಿಹಾರಕ್ಕಾಗಿ, ಮಾಡುವ ವ್ರತ ಸಂಕಷ್ಟಹರ ವ್ರತ. 

ಪ್ರತಿ ಹುಣ್ಣಿಮೆಯ ನಂತರ ಬರುವ ಚತುರ್ಥಿಯಂದು ವ್ರತ ಆಚರಿಸುತ್ತಾರಾದರೂ ಅದರಲ್ಲೂ ಮಂಗಳವಾರ ಬಂದರಂತೂ ವಿಶೇಷ ಮನ್ನಣೆ. ಈ ವ್ರತವನ್ನು ಪ್ರಾರಂಭಿಸುವವರು ಅಂಗಾರಕ ಚತುರ್ಥಿಯ ದಿನದಿಂದಲೇ ಪ್ರಾರಂಭಿಸುತ್ತಾರೆ. ವರ್ಷದಲ್ಲಿ ಒಂದು ಅಥವಾ ಎರಡು ಬಾರಿ ಮಾತ್ರ ಮಂಗಳವಾರ ಬರುವುದಿದ್ದು ಅಂದು ಗಣಪತಿಗೆ ವಿಶೇಷ ಪೂಜೆ ಸಲ್ಲುತ್ತದೆ. ಅಂಗಾರಕ ಎಂದರೆ ಮಂಗಳ ಅರ್ಥಾತ್ ಕುಜ. ಇವನದು ಸಿಂಧೂರ ವರ್ಣ, ಋಣ, ರೋಗಧಿ, ದಾರಿದ್ರ್ಯ, ಅಪಮೃತ್ಯುಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದ್ದಾನೆ. 21 ಚತುರ್ಥಿಗಳಂದು ನಿರಂತರವಾಗಿ ಈ ವ್ರತ ಆಚರಿಸಿದಲ್ಲಿ ವಿಶೇಷ ಫಲ ಪ್ರಾಪ್ತಿಯಾಗುತ್ತದೆಂಬ ನಂಬಿಕೆ ಇದೆ.

ವಿಘ್ನವಿನಾಶಕನಾದ ಗಣಪತಿಯ ಅನುಗ್ರಹವನ್ನು ಪಡೆದುಕೊಳ್ಳಲು ಇರುವ ನೂರಾರು ಮಾರ್ಗಗಳಲ್ಲಿ ಸುಲಭವಾದ ದಾರಿ ಇದಾಗಿದ್ದು ಈ ವ್ರತ ಆಚರಿಸುವವರು ಮುಂಜಾನೆ ಸ್ನಾನ ಮಾಡಿನಂತರ ದೇವರಿಗೆ ದೀಪ ಹಚ್ಚಿ 21 ನಮಸ್ಕಾರ ಮಾಡಿ ಆ ದಿನ ಮಧ್ಯಾಹ್ನ ಉಪವಾಸವಿದ್ದು ಮೋದಕಗಳನ್ನು ಮಾಡಿ ಗಣಪತಿಗೆ ಅರ್ಪಿಸಿ ರಾತ್ರಿ ಚಂದ್ರನನ್ನು ನೋಡಿದ ಬಳಿಕ ತರ್ಪಣ ಬಿಟ್ಟು ನಂತರ ಪ್ರಸಾದ ಸ್ವೀಕರಿಸಬಹುದು.


ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ |
ಭಕ್ತಾವಾಸಂ ಸ್ಮರೆ ನಿತ್ಯಂ ಆಯು: ಕಾಮರ್ಥ ಸಿದ್ಧಯೇ ||
ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಂ |
ತೃತಿಯಂ ಕೃಷ್ಣ ಪಿಂಗಾಕ್ಷಂ ಗಜವಕ್ತ್ರಂ ಚತುರ್ಥಕಂ ||
ಲಂಬೋದರಂ ಪಂಚಮಂ ಚ ಷಷ್ಟುಂ ವಿಕಟಮೇವ ಚ |
ಸಪ್ತಮಂ ವಿಘ್ನರಾಜಂ ಚ ಧೂಮ್ರವರ್ಣಮ್ ತಥ ಅಷ್ಟಕಂ ||
ನವಮಂ ಫಾಲ ಚಂದ್ರಮ್ ಚ ದಶಮಂ ತು ವಿನಾಯಕಂ |
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಂ ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಟೇ ನರಃ |
ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರಂ ಪ್ರಭೋ ||
ವಿಧ್ಯಾರ್ತಿ ಲಭತೇ ವಿಧ್ಯಾಂ, ಧನಾರ್ತಿ ಲಭತೇ ಧನಂ |
ಪುತ್ರಾರ್ತಿ ಲಭತೇ ಪುತ್ರಂ, ಮೊಕ್ಷಾರ್ತಿ ಲಭತೇ ಗತಿಂ ||
ಜಪೇತ್ ಗಣಪತಿ ಸ್ತೋತ್ರಂ ಷಡ್ ಭಿ: ಮಾಸಯ್ಹಿ ಫಲಂ ಲಭೆತ್ |
ಸಂವತ್ಸರೆಣ ಸಿದ್ಧಿಂ ಚ ಲಭತೇ ನಾತ್ರ ಸಂಶಯಃ ||
ಅಷ್ತೆಭ್ಯೋ ಬ್ರಾಹ್ಮಣೆಭ್ಯ: ಚ ಲಿಖಿತ್ವಾಯ ಸಮರ್ಪಯೇತ್ |
ತಸ್ಯ ವಿಧ್ಯಾ ಭವೇತ್ ಸರ್ವ ಗಣೇಶಸ್ಯ ಪ್ರಸಾದತಃ ||


|| ಇತಿ ನಾರದ ಪುರಾಣೇ ಸಂಕಷ್ಟಹರ ನಾಮ ಗಣಪತಿ ಸ್ತೋತ್ರಂ ||






ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...