ವಿಷಯಕ್ಕೆ ಹೋಗಿ

ಮೊಬೈಲ್ ನಲ್ಲಿ ಪಡಿತರಚೀಟಿ ರಿಜಿಸ್ಟರ್ ಮಾಡುವಲ್ಲಿ ಗೊಂದಲ

             ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಪಡಿತರ ವಿತರಣೆಯಲ್ಲಿ ಕೆಲವೊಂದು ಸುಧಾರಣಾ ಕ್ರಮಕೈಗೊಂಡಿರುವ ಹಿನ್ನಲೆಯಲ್ಲಿ ಪಡಿತರ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ಕಾರ್ಡ್ ಸಂಖ್ಯೆ ಹಾಗೂ ಕಾರ್ಡ್ ನಲ್ಲಿರುವ ಸದಸ್ಯರ ಮತದಾನದ ಗುರುತಿನ ಚೀಟಿ(ಎಪಿಕ್) ಸಂಖ್ಯೆ ಹಾಗೂ ಆಧಾರ್ ಸಂಖ್ಯೆಯನ್ನು ಮೊಬೈಲ್ ಮೂಲಕ ನೊಂದಾಯಿಸುವಂತೆ ಕೋರಿದ್ದು ಎಸ್ ಎಂ ಎಸ್ ಮೂಲಕ ಮಾಹಿತಿ ಕಳುಹಿಸುವಲ್ಲಿ ಗ್ರಾಮೀಣ ಭಾಗದ ಕಾರ್ಡ್ ದಾರರು ಗೊಂದಲದಲ್ಲಿ ಸಿಲುಕಿ ಪೇಚಾಡುವಂತಾಗಿದೆ.
          ಅಸಲಿ ಪಡಿತರ ಕಾರ್ಡ್ ಹಾಗೂ ಒಂದೇ ಕುಟುಂಬದ ಸದಸ್ಯರು ಎರಡು ಕಾರ್ಡ್ ಗಳನ್ನು ಪಡೆದಿರುವುದನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಕುಟುಂಬದ ಸದಸ್ಯರ ಗುರುತಿನ ಚೀಟಿ(ಎಪಿಕ್) ಸಂಖ್ಯೆ ಹಾಗೂ ಆಧಾರ್ ಸಂಖ್ಯೆಯನ್ನು ಮೊಬೈಲ್ ಮೂಲಕ 9212357123 ಸಂಖ್ಯೆಗೆ ಸಂದೇಶ ಕಳುಹಿಸಿ ನೊಂದಾಯಿಸುವಂತೆ ಎಲ್ಲಾ ನ್ಯಾಯಬೆಲೆಅಂಗಡಿಗಳಲ್ಲಿ ತಿಳಿಸುತ್ತಿದ್ದು, ಯಾವ ರೀತಿ ಕಳುಹಿಸಬೇಕೆಂಬ ಒಂದು ಮಾದರಿಯನ್ನು ಅಂಗಡಿಯ ಫಲಕದಲ್ಲಿ ಲಗತ್ತಿಸಿದ್ದಾರೆ. ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರು ಹಾಗೂ 2010 ಕ್ಕಿಂತಲೂ ಹಿಂದೆ ಹೊಂದಿರುವ ಕಾರ್ಡ್ ಗಳನ್ನು ನವೀಕರಿಸಿಕೊಳ್ಳಲು ವಿವರವಾದ ಮಾಹಿತಿಯಿದ್ದರೂ ಸಹ ವಿವರವನ್ನು ಮೊಬೈಲ್ ಮೂಲಕ ಕಳುಹಿಸಬೇಕಾಗಿರುವುದೇ ತೊಡಕಿಗೆ ಕಾರಣವಾಗಿದೆ.
ಪಡಿತರ ಕಾರ್ಡ್ ಸಂಖ್ಯೆಯನ್ನು ಎಸ್ ಎಂಎಸ್ ಮೂಲಕ ನೊಂದಾಯಿಸುವಂತೆ ಇಲಾಖೆ ಕಳುಹಿಸಿರುವ ಜಾಹಿರಾತು.
           ಸಮಸ್ಯೆ: ಮೊದಲು ಕಾರ್ಡ್ ನ ಸಂಖ್ಯೆಯನ್ನು ರಿಜಿಸ್ಟರ್ ಮಾಡಿ ನಂತರ ಕಾರ್ಡ್ ಸದಸ್ಯರ ಗುರುತಿನ ಚೀಟಿ(ಎಪಿಕ್) ಸಂಖ್ಯೆ ಹಾಗೂ ಆಧಾರ್ ಸಂಖ್ಯೆಯನ್ನು ರಿಜಿಸ್ಟರ್ ಮಾಡಬೇಕಿದೆ. ಕೆಲವೊಮ್ಮೆ ಕಾರ್ಡ್ ಸಂಖ್ಯೆಯ ರಿಜಿಸ್ಟರ್ ಮಾಡಲು ಸಂದೇಶ ಕಳುಹಿಸಿದರೆ ಸ್ವೀಕೃತಿಯ ಬಗ್ಗೆ ಯಾವುದೇ ರೀತಿಯ ಸಂದೇಶ ಪುನ ಬರುತ್ತಿಲ್ಲ, ಅಲ್ಲದೆ ಕೆಲ ಸಮಯ ಕಾರ್ಡ್ ರಿಜಿಸ್ಟರ್ಡ್ ಎಂದು ಬಂದಿದ್ದರೂ ಸಹ ಸದಸ್ಯರ ಉಳಿದ ಆಧಾರ್ ಹಾಗೂ ಗುರುತಿನ ಸಂಖ್ಯೆ ಕಳುಹಿಸಿದರೆ ಯಾವುದೇ ಮಾಹಿತಿ ಬರುತ್ತಿಲ್ಲವಾಗಿ ಕಾರ್ಡ್ ದಾರರು ಪರದಾಡುವಂತಾಗಿದೆ. ಈ ಬಗ್ಗೆ ನ್ಯಾಯಬೆಲೆ ಅಂಗಡಿಯವರನ್ನು ಕೇಳಿದರೆ ಅವರಿಗೂ ಸಹ ಸರಿಯಾದ ಮಾಹಿತಿಯಿಲ್ಲದೆ ಕಾರ್ಡ್ ದಾರರೊಂದಿಗೆ ಸ್ಪಂದಿಸುತ್ತಿಲ್ಲ. ಕಾರ್ಡ್ ಗಾಗಿ ಭಾವಚಿತ್ರ ತೆಗಿಸಿದ ಸಂದರ್ಭದಲ್ಲಿ ಮೊಬೈಲ್ ನಂ ನೀಡಿದ್ದರೆ ಆ ನಂಬರ್ ನಿಂದಲ್ಲೇ ಕಾರ್ಡ್ ಗಳ ಸಂಖ್ಯೆ ರಿಜಿಸ್ಟರ್ ಮಾಡಬೇಕು ಎನ್ನುತ್ತಾರೆ ಕೆಲವರು. ಒಟ್ಟಾರೆ ಸರ್ಕಾರದ ಈ ಆದೇಶದಿಂದ ಸಾರ್ವಜನಿಕರಿಗೆ ಕಿರಿಕಿಯಾಗಿದ್ದು ನಿತ್ಯದ ಕೆಲಸ ಕಾರ್ಯಗಳನ್ನು ಬಿಟ್ಟು ಅಲೆಯುವಂತಾಗಿದೆ.
ಪಡಿತರ ಕಾರ್ಡ್ ಸಂಖ್ಯೆಯನ್ನು ಮೊಬೈಲ್ ಮೂಲಕ ನೊಂದಾಯೊಸುವ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಹಾಕಿರುವುದು.
             ಪಡಿತರ ಕಾರ್ಡ್ ಗಾಗಿ ಈಗಾಗಲೇ ಹಲವಾರು ಬಾರಿ ಕೇಳಿದ್ದೆಲ್ಲಾ ಮಾಹಿತಿ ಒದಗಿಸಿದ್ದರೂ ಸಹ ಇದೀಗ ಮತ್ತೊಮ್ಮೆ ಎಪಿಕ್ ಮತ್ತು ಆಧಾರ್ ಸಂಖ್ಯೆ ನೊಂದಾಯಿಸುವಂತೆ ಕೇಳಿರುವುದು ಕಾರ್ಡ್ ದಾರರಿಗೆ ತಲೆನೋವಾಗಿ ಪರಿಣಮಿಸಿದೆ. ಎಷ್ಟೋ ಹಳ್ಳಿಗಳಲ್ಲಿ ನೆಟ್ ವರ್ಕ್ ಇಲ್ಲದೆ ಎಸ್ ಎಂ ಎಸ್ ಕಳುಹಿಸಲು ಇತರೆಡೆಗೆ ಹೋಗುವಂತಾಗಿದ್ದು ಮಾಹಿತಿ ಕಳುಹಿಸಲು ಒಂದಿಡಿ ದಿನ ಸಮಯ ವ್ಯರ್ಥವಾಗುತ್ತಿದೆ. ಅಲ್ಲದೆ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಮಂದಿಗೆ ಮೇಸೇಜ್ ಯಾವರೀತಿ ಕಳುಹಿಸಬೇಕು ಎಂಬುದನ್ನು ಅರಿಯದೇ ಇದಕ್ಕಾಗಿ ಅವರಿವರನ್ನು ಕಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
            ಸದ್ಯ ಮೇಸೇಜ್ ಕಳುಹಿಸಿಕೊಡುವುದೇ ಕೆಲ ಅಂಗಡಿದಾರರಿಗೆ ಕೆಲಸವಾಗಿದ್ದು ಒಂದು ಕಾರ್ಡ್ ನ್ನು ನೊಂದಾಯಿಸಿದರೆ ಇಪ್ಪತ್ತು, ಮೂವತ್ತು,ಐವತ್ತು ರೂ ವರೆಗೆ ವಸೂಲಿ ಮಾಡುತ್ತಿದ್ದು, ಹೇಗಾದರೂ ಸರಿ ಮುಂದಿನ ತಿಂಗಳು ಪಡಿತರ ಬಂದರೆ ಸಾಕೆಂಬ ಭಾವನೆಯಲ್ಲಿರುವ ಕಾರ್ಡ್ ದಾರರು ತಕರಾರಿಲ್ಲದೆ ಕೇಳಿದ ಹಣಕೊಟ್ಟು ಸಾಕಪ್ಪ ಸಾಕು ಎಂದು ನಿಟ್ಟುಸಿರು ಬಿಡುತ್ತಿದ್ದಾರೆ.


           ಈ ಬಗ್ಗೆ ಇಲಾಖೆಯವರು ಕಾರ್ಡ್ ದಾರರ ಗೊಂದಲವನ್ನು ಮನಗಂಡು ಅವರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಿದೆ ಹಾಗೂ ಎಸ್.ಎಂ.ಎಸ್ ಮೂಲಕ ರಿಜಿಸ್ಟರ್ ಮಾಡುವ ಬದಲು ಪಡಿತರ ಅಂಗಡಿಗಳಲ್ಲೇ ಬೇಕಾದ ಮಾಹಿತಿಯನ್ನು ಸರಳ ಮಾದರಿಯಲ್ಲಿ ಪಡೆಯುವ ಕ್ರಮಕ್ಕೆ ಮುಂದಾಗಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.