ವಿಷಯಕ್ಕೆ ಹೋಗಿ

ಜೀವನದಲ್ಲಿ ನೈತಿಕ ಮೌಲ್ಯಗಳ ಪಾತ್ರ ಮಹತ್ವದ್ದು : ವಿರೇಶಾನಂದ ಸ್ವಾಮೀಜಿ

          ಮಾನವ ತನ್ನ ಜೀವನದಲ್ಲಿ ನೆಮ್ಮದಿ ಬದುಕನ್ನು ಬಾಳಬೇಕಾದರೆ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ ಎಂದು ತುಮಕೂರಿನ ಶ್ರೀರಾಮಕೃಷ್ಣಾಶ್ರಮದ ವಿರೇಶಾನಂದ ಸರಸ್ವತಿ ಸ್ವಾಮೀಜಿಯವರು ತಿಳಿಸಿದರು
           ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಶೈಕ್ಷಣಿಕ ಮಾರ್ಗದರ್ಶಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ನೈತಿಕ ಶಿಕ್ಷಣ ಕುರಿತು ಉಪನ್ಯಾಸ ನೀಡಿದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಶ್ರೀರಾಮಕೃಷ್ಣಾಶ್ರಮದ ವಿರೇಶಾನಂದ ಸರಸ್ವತಿ ಸ್ವಾಮೀಜಿಯವರು ನೈತಿಕ ಶಿಕ್ಷಣ ಕುರಿತು ಉಪನ್ಯಾಸ ನೀಡಿದರು.
     ವಿದ್ಯಾರ್ಥಿ ಜೀವನದಲ್ಲಿ ಅಂಕಪಟ್ಟಿಯೊಂದೆ ಮಾನದಂಡವಾಗದೆ ಆತ್ಮವಿಶ್ವಾಸ,ಆತ್ಮಗೌರವ,ಆತ್ಮನಿಯಂತ್ರಣ,ಆತ್ಮಸಮರ್ಥನೆ,ಆತ್ಮಾವಾಲೋಕನ ಎಂಬ ಪಂಚಶೀಲ ಸೂತ್ರಗಳನ್ನು ಅಳವಡಿಸಿಕೊಂಡವನು ಮಾತ್ರ ನಿಜವಾದ ವಿದ್ಯಾವಂತನಾಗುತ್ತಾನೆ ಎಂದರು.
      
        ವಿದ್ಯಾರ್ಥಿ ಜೀವನದಲ್ಲಿ ಏನು ಕಲಿಯುತ್ತಾರೋ ಅದು ಅವರ ಮುಂದಿನ ಜೀವನವನ್ನು ರೂಪಿಸಿಸುತ್ತದೆ. ಈ ನಿಟ್ಟಿನಲ್ಲಿ ನೈತಿಕ ಶಿಕ್ಷಣವೆಂಬುದು ಇಂದಿನ ವಿದ್ಯಾರ್ಥಿ ಸಮೂಹಕ್ಕೆ ಅಗತ್ಯವಾಗಿದೆ ಎಂದರು.ಕಟ್ಟಡಕ್ಕೆ ಬುನಾದಿ ಎಷ್ಟು ಮುಖ್ಯವೋ, ವಿದ್ಯಾರ್ಥಿಜೀವನದ ನೈತಿಕತೆಯೂ ಅಷ್ಟೇ ಮುಖ್ಯವಾಗಿದೆ ಇಲ್ಲವಾದರೆ ಜೀವನದಲ್ಲಿ ಸದಾಕಾಲ ಮತ್ತೊಬ್ಬರ ಹಂಗಿನಲ್ಲಿ ಬದುಕನ್ನು ಸಾಗಿಸಬೇಕಾಗುತ್ತದೆ . ಆದ್ದರಿಂದ ನೈತಿಕ ಮೌಲ್ಯಗಳನ್ನು ಅರಿತು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಂದರ ಜೀವನವನ್ನು ನಡೆಸುವಂತೆ ಆಶಿಸಿದರು.
          
              ಪ್ರಸ್ತುತದಲ್ಲಿ ನೆಪ ಮಾತ್ರಕ್ಕೆ ಪರೀಕ್ಷೆಗಳು ನಡೆಯುತ್ತಿವೆಯೇ ಹೊರತು ಮಕ್ಕಳಲ್ಲಿ ಉತ್ತಮ ಗುಣಮಟ್ಟ ತುಂಬುವಲ್ಲಿ ವಿಫಲವಾಗಿವೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಬರಿ ಪುಸ್ತಕದ ವಿಚಾರಗಳನ್ನು ತಿಳಿಸುವುದಷ್ಟಕ್ಕೆ ಮಾತ್ರ ಸೀಮಿತ ಮಾಡದೆ ಸಮಾಜದ ಬಗೆಗಿನ ವಿಚಾರಗಳನ್ನು ತಿಳಿಸಿ ಉತ್ತಮ ಪ್ರಜೆಗಳಾಗು ರೂಪಗೊಳ್ಳುವಂತೆ ಮಾಡಬೇಕಿದೆ ಎಂದು ಕಿವಿಮಾತು ಹೇಳಿದರು.
             
               ಮಕ್ಕಳಿಗೆ ಬೋಧನೆ ಮಾಡುವ ಶಿಕ್ಷಕರಿಗೂ ನಿರಂತರ ಕಲಿಕೆಯ ಅಗತ್ಯವಿದ್ದು, ಎಲ್ಲಾ ವಿಷಯಗಳನ್ನು ಪರಾಮರ್ಶಿಸಿ ಅರಿವುಂಟು ಮಾಡಿಕೊಂಡಾಗ ಉತ್ತಮ ಬೋಧನೆ ಮಾಡಬಹುದು ಎಂದರು.


       ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಡಿ.ಇಂದಿರಾ,ಎಸ್ಡಿಎಂಸಿ ಉಪಾಧ್ಯಕ್ಷ ರಂಗನಕೆರೆಮಹೇಶ್,ನಿವೃತ್ತಶಿಕ್ಷಕರಾದ ತ.ಶಿ.ಬಸವಮೂರ್ತಿ,ಎಸ್.ಜಿ. ಚಿಕ್ಕಣ್ಣ, ಕುಮಾರಸ್ವಾಮಿ,ಮುಖ್ಯಶಿಕ್ಷಕ ಬಸವಲಿಂಗಯ್ಯ, ಎಸ್ಡಿಎಂಸಿಯ ಜಾಫರ್,ಉಪನ್ಯಾಸಕ ಶಿವರುದ್ರಯ್ಯ,ಶಶಿಭೂಷಣ್ ಸೇರಿದಂತೆ ಇತರರ ಶಿಕ್ಷಕರು ಉಪಸ್ಥಿತರಿದ್ದು ಸಂಗೀತ ಶಿಕ್ಷಕ ಸುಭಾಷ್ ಪಾಟೀಲ್ ಪ್ರಾರ್ಥಿಸಿ, ಕುಮಾರಸ್ವಾಮಿ ಸ್ವಾಗತಿಸಿ ಮನ್ಸೂರ್ ಅಹಮದ್ ನಿರೂಪಿಸಿ,ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...