ವಿಷಯಕ್ಕೆ ಹೋಗಿ

ಹುಳಿಯಾರಿಗೊಂದು ಕ್ರೀಡಾಂಗಣ ಮಂಜೂರು ಮಾಡಿಕೊಡಿ

           ದೊಡ್ಡ ಹೋಬಳಿ ಕೇಂದ್ರವಾಗಿರುವ ಹುಳಿಯಾರು ವ್ಯಾಪ್ತಿಯಲ್ಲಿ ಸಾಕಷ್ಟು ಶಾಲೆಗಳಿದ್ದು, ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರೂ ಸಹ ಹೋಬಳಿ ಹಂತದ ಆಟೋಟಗಳನ್ನು ನಡೆಸಲು ಪಟ್ಟಣದಲ್ಲಿ ಸೂಕ್ತ ಕ್ರೀಡಾಂಗಣವಿಲ್ಲ . ಕ್ಷೇತ್ರದ ಜನಪ್ರತಿನಿಧಿಗಳಾಗಲಿ, ಶಿಕ್ಷಣ ಇಲಾಖೆಯವರಾಗಲಿ ಈ ಬಗ್ಗೆ ಗಮನಮಾಡಿ ಪಟ್ಟಣಕ್ಕೆ ಕ್ರೀಡಾಂಗಣ ಮಂಜೂರು ಮಾಡಿಕೊಡಿ ಎಂದು ವಾಸವಿ ಸಂಸ್ಥೆಯ ನಿರ್ದೇಶಕ ಎಲ್.ಆರ್.ಚಂದ್ರಶೇಖರ್ ಮನವಿ ಮಾಡಿದರು.
             ಹುಳಿಯಾರಿನ ಟಿ.ಆರ್.ಎಸ್,ಆರ್ ಶಾಲಾವತಿಯಿಂದ ವಾಸವಿ ಶಾಲಾ ಆವರಣದಲ್ಲಿ ಶುಕ್ರವಾರದಂದು ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲೆಗಳ 2014-15 ನೇ ಸಾಲಿನ " ಎ" ವಿಭಾಗದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು.
ಹುಳಿಯಾರಿನ ಟಿ.ಆರ್.ಎಸ್,ಆರ್ ಶಾಲಾವತಿಯಿಂದ ವಾಸವಿ ಶಾಲಾ ಆವರಣದಲ್ಲಿ ನಡೆದ ಹೋಬಳಿ ಮಟ್ಟದ ಪ್ರೌಢಶಾಲೆಗಳ " ಎ" ವಿಭಾಗದ ಕ್ರೀಡಾಕೂಟದ ಉದ್ಘಾಟನೆಯನ್ನು ಕಾರ್ಯದರ್ಶಿ ರಾಮದಾಸ್ ನೆರವೇರಿಸಿದರು.
            ಹೋಬಳಿ ಎಲ್ಲಾ ಶಾಲೆಗಳ ಮಕ್ಕಳೂ ಸಹ ಪ್ರತಿಭಾವಂತರಾಗಿದ್ದಾರೆ. ಆದರೆ ಕೆಲ ಶಾಲೆಗಳಲ್ಲಿ ಆಟದ ಮೈದಾನವಿಲ್ಲದೆ ಆ ಶಾಲೆಯ ಮಕ್ಕಳು ಕ್ರೀಡಾಚಟುವಟಿಕೆಯಲ್ಲಿ ಪಾಲ್ಗೊಳ್ಳದೆ ಹಿಂದೆಯೇ ಉಳಿಯುವಂತಾಗಿದೆ ಎಂದರು. ಹುಳಿಯಾರು ಹೋಬಳಿಯ ಹಲವಾರು ಕ್ರೀಡಾಪಟುಗಳು ತಾಲ್ಲೂಕು,ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿಯೂ ಸಹ ಬಹುಮಾನಗಳಿಸಿದ ನಿದರ್ಶನಗಳಿವೆ ಎಂದರು. ವಿದ್ಯಾರ್ಥಿಗಳು ಸಿಂಹಾವಲೋಕನದಲ್ಲಿ ಸಾಗಬೇಕಿದ್ದು ನಾವು ಹಿಂದೆ ನಡೆದು ಬಂದ ಹಾದಿಯನ್ನು ಮರೆಯದೆ ಸಾಗಬೇಕು ಹಾಗೂ ಆಟಗಳನ್ನು ಪ್ರಾಮಾಣಿಕವಾಗಿ ಆಡಬೇಕಿದೆ ಎಂದರಲ್ಲದೆ ಪ್ರೇಕ್ಷಕರು ಕ್ರೀಡಾಪಟುಗಳನ್ನು ಹುರಿದುಂಬಿಸುವ ಕಾರ್ಯ ಮಾಡಬೇಕೆ ಹೊರತು ಅವರಲ್ಲಿ ಮತ್ತೊಬ್ಬರ ಮೇಲೆ ದ್ವೇಷ ಮೂಡುವಂತೆ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
            ಪ್ರತಿಜ್ಞಾನವಿಧಿ ಬೋಧಿಸಿದ ದೈಹಿಕ ಶಿಕ್ಷಣ ಸಂಯೋಜಕ ನರಸಿಂಹಮೂರ್ತಿ ಮಾತನಾಡಿ, ಕ್ರೀಡಾಕೂಟವೆಂಬುದು ಪರೀಕ್ಷೆಯಿದ್ದಂತೆ, ಪರೀಕ್ಷೆಯಲ್ಲಿ ನಕಲು ಮಾಡಿದರೆ ಯಾವರೀತಿ ಶಿಕ್ಷೆಯಿದೆ ಅದೇರಿತಿ ಕ್ರೀಡೆಯಲ್ಲಿಯೂ ಸಹ ತಪ್ಪೆಸಗುವವರಿಗೆ ತಕ್ಕ ಶಿಕ್ಷೆಲಭಿಸುತ್ತದೆ ಎಂದರು. ಮಕ್ಕಳನ್ನು ಏಕಾಗ್ರತೆಯತ್ತ ಕೊಂಡೈಯುವ ಉತ್ತಮ ಮಾರ್ಗ ಕ್ರೀಡೆಯಾಗಿದ್ದು, ಶಾಲಾಶಿಕ್ಷಕರು ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಒಂದಲ್ಲ ಒಂದು ಆಟದಲ್ಲಿ ತೊಡಗಿಕೊಳ್ಳುವಂತೆ ಉತ್ತೇಜಿಸಬೇಕು ಆಗ ವಿದ್ಯಾರ್ಥಿಗಳಲ್ಲಿ ಉತ್ತಮ ಕಲಿಕೆಯುಂಟಾಗುತ್ತದೆ ಎಂದರು.
ಹುಳಿಯಾರಿನ ವಾಸವಿಶಾಲಾವರಣದಲ್ಲಿ ಸೋನೆಮಳೆಯಲ್ಲೇ ಆರಂಭವಾದ ಕ್ರೀಡಾಕೂಟದಲ್ಲಿ ಸಿಪಿಓ ನರಸಿಂಹಮೂರ್ತಿ ಪ್ರತಿಜ್ಞಾನವಿಧಿ ಬೋಧಿಸಿದರು.

              ಕ್ರೀಡಾಕೂಟದ ಅಧ್ಯಕ್ಷತೆವಹಿಸಿದ್ದ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್ ಮಾತನಾಡಿ ಆಟದಲ್ಲಿ ಸೋಲುಗೆಲವು ಸಾಮಾನ್ಯವಾಗಿದ್ದು ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ, ಸಂತೋಷಯುತವಾಗಿ ಆಟವಾಡಿ ಎಂದರು. ಸಂಸ್ಥೆಯ ಕಾರ್ಯದರ್ಶಿ ರಾಮನಾಥ್ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಜ್ಯೋತಿನಾಗರಾಜು,ಮುಖ್ಯಶಿಕ್ಷಕರಾದ ಎಂ.ವಿ.ರಮೇಶ್, ಮಹೇಶ್, ಸ್ಕೌಟ್ ಗೈಡ್ಸ್ ನ ಗಂಗಾಧರ್ ಉಪಸ್ಥಿತರಿದ್ದು ಬಸವರಾಜು ನಿರೂಪಿಸಿ,ನಟರಾಜ್ ವಂದಿಸಿದರು.ಸೋನೆಮಳೆಯಲ್ಲೇ ಪ್ರಾರಂಭವಾದ ಕ್ರೀಡಾಕೂಟದಲ್ಲಿ ಹೋಬಳಿಯ ಶಾಲಾಮಕ್ಕಳು ಉತ್ಸಾಹದಿಂದ ಪಾಲ್ಗೊಳ್ಳುವ ಆಟೋಟಗಳನ್ನು ಆಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...