ವಿಷಯಕ್ಕೆ ಹೋಗಿ

ಅಬಕಾರಿ ಡಿಸಿ ಸಮ್ಮುಖದಲ್ಲಿ ವಿವಾದಿತ ಮದ್ಯದಂಗಡಿ ಮರು ಅಳತೆ

            ಸಾರ್ವಜನಿಕ ಸ್ಥಳ ಮತ್ತು ದೇವಾಲಯಗಳೀಗೆ ಸಮೀಪದಲ್ಲಿದ್ದ ಹಾಗೂ ಅಕ್ಷೇಪಣಾರ್ಹ ಸ್ಥಳದಲ್ಲಿದ್ದ ಮದ್ಯದಂಗಡಿ ತೆರವಿನ ವಿವಾದ ತಾರಕಕ್ಕೇರಿದ್ದು ಅದರ ಮರು ಅಳತೆಕಾರ್ಯ ಬುಧವಾರ ಅಬಕಾರಿ ಡಿಸಿ ಮೋಹನ್ ಕುಮಾರ್ ಅವರ ಸಮಕ್ಷಮ ನಡೆಯಿತು.
ಅಕ್ಷೇಪಣಾರ್ಹ ಮದ್ಯದಂಗಡಿಯಿಂದ ಸಮೀಪದ ದೇವಾಲಯಗಳಿಗೆ ಇರುವ ದೂರವನ್ನು ಅಬಕಾರಿ ಡಿಸಿ ಖುದ್ದು ಅಳತೆ ಮಾಡಿಸುತ್ತಿರುವುದು.


                           ಪಟ್ಟಣದ ಟೌನ್ ಕೊಅಪರೇಟಿವ್ ಸೊಸೈಟಿಯ ಕಟ್ಟದಲ್ಲಿ ಇರುವ ಎನ್.ಜಿ.ನಾಗರಾಜು ಅವರ ಶ್ರೀರಂಗನಾಥ ಮದ್ಯದಂಗಡಿಯು ಹುಳಿಯಾರಮ್ಮ, ಅನಂತಶಯನ ರಂಗನಾಥಸ್ವಾಮಿ, ಬೀರಲಿಂಗೇಶ್ವರಸ್ವಾಮಿ, ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜ್ಯ ಹೆದ್ದಾರಿಗೆ ಸಮೀಪದಲಿದ್ದು , ಸಾರ್ವಜನಿಕರ, ಸಂಘ ಸಂಸ್ಥೆಯವರ , ದೇವಾಲಯ ಸಮಿತಿಯವರಿಂದ ಅಕ್ಷೇಪಣೆಗೆ ಒಳಗಾಗಿತ್ತು. ಬಾರನ್ನು ಸ್ಥಳಾಂತರಿಸುವಂತೆ ಅಬಕಾರಿ ಡಿಸಿ ಯಿಂದ ಹಿಡಿದು ಆಯುಕ್ತರು ಹಾಗೂ ಅಬಕಾರಿ ಸಚಿವರವರೆಗೂ ಎಡತಾಕಿ ದೂರು ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ತಿಂಗಳು ಅಬಕಾರಿ ಡಿಸಿಯವರೇ ಖುದ್ದು ಅಳತೆ ಮಾಡಲು ಬರಬೇಕಿತ್ತು ಆದರೆ ಅವರು ಗೈರಾಗಿದ್ದರಿಂದ ಅಳತೆ ನಡೆಯದೆ ಮುಂದೂಡಲಾಗಿತ್ತು. ಅಂದು ನಡೆಯಬೇಕಾಗಿದ್ದ ಅಳತೆಕಾರ್ಯ ಬುಧವಾರ ಡಿಸಿ ಅವರ ಉಪಸ್ಥಿತಿಯಲ್ಲಿ ಮತ್ತೆ ಮರುಅಳತೆ ನಡೆಯಿತು.
ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆದ ಆಳತೆ ಕಾರ್ಯ ವೀಕ್ಷಿಸುತ್ತಿರುವ ಸಾರ್ವಜನಿಕರು. 
                                       ಅಬಕಾರಿ ಉಪ ಆಯುಕ್ತರು , ಅಬಕಾರಿ ಉಪಅಧೀಕ್ಷಕರು,ಅಬಕಾರಿ ನಿರೀಕ್ಷಕರು ಸೇರಿದಂತೆ ಹತ್ತಾರು ಅಧಿಕಾರಿಗಳಿದ್ದ ತಂಡ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಅಳತೆಕಾರ್ಯ ನಡೆಸಿದರು. ಮದ್ಯದಂಗಡಿಯಿಂದ ಗ್ರಾಮದೇವತೆ ಹುಳಿಯಾರಮ್ಮ ದೇವಸ್ಥಾನಕ್ಕೆ 46 ಮೀ , ಅನಂತಶಯನರಂಗನಾಥಸ್ವಾಮಿ ದೇವಸ್ಥಾನಕ್ಕೆ 96.3ಮೀ , ಬೀರಲಿಂಗೇಶ್ವರ ದೇವಸ್ಥಾನ, ಕೆಂಚಮ್ಮ ದೇವಸ್ಥಾನ, ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜ್ಯ ಹೆದ್ದಾರಿಯವರೆಗೆ ಇರುವ ದೂರವನ್ನು ಆಳತೆ ಮಾಡಿ ಮಹಜರ್ ಮಾಡಲಾಯಿತು.

                                            ಕಳೆದ ಬಾರಿ ಅಬಕಾರಿ ಇಲಾಖೆಯವರ ಮೇಲೆ ಸಾರ್ವಜನಿಕರು ರೊಚ್ಚಿಗೆದ್ದಿದ್ದರಿಂದ ಈಸಲ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಪಿಎಸೈ ಘೋರ್ಪಡೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

                                   ಅದೇ ಸಮಯದಲ್ಲಿ ಸಾರ್ವಜನಿಕರಿಂದ ಬಾರ್ನ ವಿರುದ್ದ ಅನೇಕ ದೂರು ಕೇಳಿಬಂದರೂ ಸಹ ಯಾರ ಸಮಸ್ಯೆಯನ್ನು ಆಲಿಸದ ಉಪ ಆಯುಕ್ತರು ತಾವು Court ಆದೇಶದ ಪ್ರಕಾರ ಆಳತೆ ಕಾರ್ಯಕ್ಕೆ ಬಂದಿದ್ದು ಅದರಂತೆ ಅಳತೆಕಾರ್ಯ ನಡೆಸಿದ್ದು ನಿಮ್ಮ ಯಾವುದೇ ದೂರುಗಳಿಗೂ ಪ್ರತಿಕ್ರಿಯಿಸಲಾರೆ ಎಂದಿದ್ದು ನೆರದಿದ್ದವರ ಆಕ್ರೋಶಕ್ಕೆ ಕಾರಣವಾಯಿತು. ಸನ್ನದು ಸ್ಥಳವು ಅಬಕಾರಿ ಷರತ್ತು ಉಲ್ಲಂಘಿಸಿದ್ದು ತಾವೀಗಾಗಲೆ ಬಾರನ್ನು ಸ್ಥಳಾಂತರಿಸಲು ಆದೇಶಿಸಿದ್ದು ಮಾಲೀಕರು ಕೋಟರ್್ನ ಮೊರೆ ಹೋಗಿರುವುದರಿಂದ ಮುಂದಿನ ಪ್ರಕ್ರಿಯೆವರೆಗೆ ಕಾಯಬೇಕಿದೆ ಎಂದರು.


                                         ಅಬಕಾರಿ ಡಿಸಿ ಮೋಹನ್ ಕುಮಾರ್ , ತಿಪಟೂರು ವಿಭಾಗದ ಉಪಧೀಕ್ಷಕ ತಿಪ್ಪೇಸ್ವಾಮಿ, ಚಿ.ನಾ.ಹಳ್ಳಿ ವಿಭಾಗದ ಅಬಕಾರಿನಿರೀಕ್ಷಕ ವಿಜಯ್ ಕುಮಾರ್ ಸೇರಿದಂತೆ ಸಹಕಾರ ಸಂಘದ ಪದಾಧಿಕಾರಿಗಳು,ದೇವಾಲಯ ಆಡಳಿತಮಂಡಳಿಯವರು, ಸಂಘಸಂಸ್ಥೆಗಳ ಪ್ರತಿನಿಧಿಗಳು,ಸಾರ್ವಜನಿಕರು ಹಾಜರಿದ್ದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.