ವಿಷಯಕ್ಕೆ ಹೋಗಿ

ಅಬಕಾರಿ ಡಿಸಿ ಸಮ್ಮುಖದಲ್ಲಿ ವಿವಾದಿತ ಮದ್ಯದಂಗಡಿ ಮರು ಅಳತೆ

            ಸಾರ್ವಜನಿಕ ಸ್ಥಳ ಮತ್ತು ದೇವಾಲಯಗಳೀಗೆ ಸಮೀಪದಲ್ಲಿದ್ದ ಹಾಗೂ ಅಕ್ಷೇಪಣಾರ್ಹ ಸ್ಥಳದಲ್ಲಿದ್ದ ಮದ್ಯದಂಗಡಿ ತೆರವಿನ ವಿವಾದ ತಾರಕಕ್ಕೇರಿದ್ದು ಅದರ ಮರು ಅಳತೆಕಾರ್ಯ ಬುಧವಾರ ಅಬಕಾರಿ ಡಿಸಿ ಮೋಹನ್ ಕುಮಾರ್ ಅವರ ಸಮಕ್ಷಮ ನಡೆಯಿತು.
ಅಕ್ಷೇಪಣಾರ್ಹ ಮದ್ಯದಂಗಡಿಯಿಂದ ಸಮೀಪದ ದೇವಾಲಯಗಳಿಗೆ ಇರುವ ದೂರವನ್ನು ಅಬಕಾರಿ ಡಿಸಿ ಖುದ್ದು ಅಳತೆ ಮಾಡಿಸುತ್ತಿರುವುದು.


                           ಪಟ್ಟಣದ ಟೌನ್ ಕೊಅಪರೇಟಿವ್ ಸೊಸೈಟಿಯ ಕಟ್ಟದಲ್ಲಿ ಇರುವ ಎನ್.ಜಿ.ನಾಗರಾಜು ಅವರ ಶ್ರೀರಂಗನಾಥ ಮದ್ಯದಂಗಡಿಯು ಹುಳಿಯಾರಮ್ಮ, ಅನಂತಶಯನ ರಂಗನಾಥಸ್ವಾಮಿ, ಬೀರಲಿಂಗೇಶ್ವರಸ್ವಾಮಿ, ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜ್ಯ ಹೆದ್ದಾರಿಗೆ ಸಮೀಪದಲಿದ್ದು , ಸಾರ್ವಜನಿಕರ, ಸಂಘ ಸಂಸ್ಥೆಯವರ , ದೇವಾಲಯ ಸಮಿತಿಯವರಿಂದ ಅಕ್ಷೇಪಣೆಗೆ ಒಳಗಾಗಿತ್ತು. ಬಾರನ್ನು ಸ್ಥಳಾಂತರಿಸುವಂತೆ ಅಬಕಾರಿ ಡಿಸಿ ಯಿಂದ ಹಿಡಿದು ಆಯುಕ್ತರು ಹಾಗೂ ಅಬಕಾರಿ ಸಚಿವರವರೆಗೂ ಎಡತಾಕಿ ದೂರು ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ತಿಂಗಳು ಅಬಕಾರಿ ಡಿಸಿಯವರೇ ಖುದ್ದು ಅಳತೆ ಮಾಡಲು ಬರಬೇಕಿತ್ತು ಆದರೆ ಅವರು ಗೈರಾಗಿದ್ದರಿಂದ ಅಳತೆ ನಡೆಯದೆ ಮುಂದೂಡಲಾಗಿತ್ತು. ಅಂದು ನಡೆಯಬೇಕಾಗಿದ್ದ ಅಳತೆಕಾರ್ಯ ಬುಧವಾರ ಡಿಸಿ ಅವರ ಉಪಸ್ಥಿತಿಯಲ್ಲಿ ಮತ್ತೆ ಮರುಅಳತೆ ನಡೆಯಿತು.
ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆದ ಆಳತೆ ಕಾರ್ಯ ವೀಕ್ಷಿಸುತ್ತಿರುವ ಸಾರ್ವಜನಿಕರು. 
                                       ಅಬಕಾರಿ ಉಪ ಆಯುಕ್ತರು , ಅಬಕಾರಿ ಉಪಅಧೀಕ್ಷಕರು,ಅಬಕಾರಿ ನಿರೀಕ್ಷಕರು ಸೇರಿದಂತೆ ಹತ್ತಾರು ಅಧಿಕಾರಿಗಳಿದ್ದ ತಂಡ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಅಳತೆಕಾರ್ಯ ನಡೆಸಿದರು. ಮದ್ಯದಂಗಡಿಯಿಂದ ಗ್ರಾಮದೇವತೆ ಹುಳಿಯಾರಮ್ಮ ದೇವಸ್ಥಾನಕ್ಕೆ 46 ಮೀ , ಅನಂತಶಯನರಂಗನಾಥಸ್ವಾಮಿ ದೇವಸ್ಥಾನಕ್ಕೆ 96.3ಮೀ , ಬೀರಲಿಂಗೇಶ್ವರ ದೇವಸ್ಥಾನ, ಕೆಂಚಮ್ಮ ದೇವಸ್ಥಾನ, ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜ್ಯ ಹೆದ್ದಾರಿಯವರೆಗೆ ಇರುವ ದೂರವನ್ನು ಆಳತೆ ಮಾಡಿ ಮಹಜರ್ ಮಾಡಲಾಯಿತು.

                                            ಕಳೆದ ಬಾರಿ ಅಬಕಾರಿ ಇಲಾಖೆಯವರ ಮೇಲೆ ಸಾರ್ವಜನಿಕರು ರೊಚ್ಚಿಗೆದ್ದಿದ್ದರಿಂದ ಈಸಲ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಪಿಎಸೈ ಘೋರ್ಪಡೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

                                   ಅದೇ ಸಮಯದಲ್ಲಿ ಸಾರ್ವಜನಿಕರಿಂದ ಬಾರ್ನ ವಿರುದ್ದ ಅನೇಕ ದೂರು ಕೇಳಿಬಂದರೂ ಸಹ ಯಾರ ಸಮಸ್ಯೆಯನ್ನು ಆಲಿಸದ ಉಪ ಆಯುಕ್ತರು ತಾವು Court ಆದೇಶದ ಪ್ರಕಾರ ಆಳತೆ ಕಾರ್ಯಕ್ಕೆ ಬಂದಿದ್ದು ಅದರಂತೆ ಅಳತೆಕಾರ್ಯ ನಡೆಸಿದ್ದು ನಿಮ್ಮ ಯಾವುದೇ ದೂರುಗಳಿಗೂ ಪ್ರತಿಕ್ರಿಯಿಸಲಾರೆ ಎಂದಿದ್ದು ನೆರದಿದ್ದವರ ಆಕ್ರೋಶಕ್ಕೆ ಕಾರಣವಾಯಿತು. ಸನ್ನದು ಸ್ಥಳವು ಅಬಕಾರಿ ಷರತ್ತು ಉಲ್ಲಂಘಿಸಿದ್ದು ತಾವೀಗಾಗಲೆ ಬಾರನ್ನು ಸ್ಥಳಾಂತರಿಸಲು ಆದೇಶಿಸಿದ್ದು ಮಾಲೀಕರು ಕೋಟರ್್ನ ಮೊರೆ ಹೋಗಿರುವುದರಿಂದ ಮುಂದಿನ ಪ್ರಕ್ರಿಯೆವರೆಗೆ ಕಾಯಬೇಕಿದೆ ಎಂದರು.


                                         ಅಬಕಾರಿ ಡಿಸಿ ಮೋಹನ್ ಕುಮಾರ್ , ತಿಪಟೂರು ವಿಭಾಗದ ಉಪಧೀಕ್ಷಕ ತಿಪ್ಪೇಸ್ವಾಮಿ, ಚಿ.ನಾ.ಹಳ್ಳಿ ವಿಭಾಗದ ಅಬಕಾರಿನಿರೀಕ್ಷಕ ವಿಜಯ್ ಕುಮಾರ್ ಸೇರಿದಂತೆ ಸಹಕಾರ ಸಂಘದ ಪದಾಧಿಕಾರಿಗಳು,ದೇವಾಲಯ ಆಡಳಿತಮಂಡಳಿಯವರು, ಸಂಘಸಂಸ್ಥೆಗಳ ಪ್ರತಿನಿಧಿಗಳು,ಸಾರ್ವಜನಿಕರು ಹಾಜರಿದ್ದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...