ವಿಷಯಕ್ಕೆ ಹೋಗಿ

ಹುಳಿಯಾರು : ಕರವೇಯಿಂದ ಸೈಕಲ್ ರೇಸ್

    ಹುಳಿಯಾರು ಪಟ್ಟಣದ ಕರ್ನಾಟಕ ರಕ್ಷಣಾ ವೇದಿಕೆವತಿಯಿಂದ 68ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಆಯೋಜಿಸಿದ್ದ ಮೂರನೇ ವರ್ಷದ ಜಿಲ್ಲಾ ಮಟ್ಟದ ಸೈಕಲ್ ರೇಸ್ ಶುಕ್ರವಾರ ಯಶಸ್ವಿಯಾಗಿ ಜರುಗಿತು.
ಹುಳಿಯಾರಿನ ಕರವೇವತಿಯಿಂದ ಆಯೋಜಿಸಿದ್ದ ಸೈಕಲ್ ರೇಸ್ ನಲ್ಲಿ ಪ್ರಥಮ ಸ್ಥಾನ ಪಡೆದ ಚಿ.ನಾ.ಹಳ್ಳಿ ಭರತ್ ಗೆ ಬಹುಮಾನವಾಗಿ ಸೈಕಲ್ ವಿತರಿಸಲಾಯಿತು.

ಹುಳಿಯಾರಿನ ಕರವೇವತಿಯಿಂದ ಆಯೋಜಿಸಿದ್ದ ಸೈಕಲ್ ರೇಸ್ ನಲ್ಲಿ ದ್ವಿತೀಯ ಸ್ಥಾನಗಳಿಸಿ ಆಕರ್ಷಕ ಟ್ರೋಪಿ ಪಡೆದ ಶ್ರೀನಿವಾಸನಾಯ್ಕ ಮತ್ತು ಎಂ.ನಾಗೇಶ್ .

ಹುಳಿಯಾರು ಪೋಲಿಸ್ ಠಾಣೆಯ ಸರ್ಕಲ್ ನಿಂದ ಪ್ರಾರಂಭವಾದ ಸೈಕಲ್ ರೇಸ್ ಗೆ ಕಿರುತೆರೆ ಕಲಾವಿದ ರಂಗನಾಥ್ ಚಾಲನೆ ನೀಡಿದರು. ರೇಸ್ ನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳು 20 ಕಿಮೀ ದೂರದ ಸಾಲ್ಕಟೆ ಕ್ರಾಸ್ ವರೆಗೆ ಹೋಗಿ ವಾಪಸ್ಸ್ ಪಟ್ಟಣದ ಕರವೇ ವೃತ್ತಕ್ಕೆ ಬರಬೇಕಾಗಿತ್ತು. ಒಟ್ಟು ಇಪ್ಪತ್ತು ಸ್ಪರ್ಧಿಗಳು ಸ್ಪರ್ಧಿಸಿದ್ದು 13 ಮಂದಿ ಮಾತ್ರ ಸ್ಪರ್ಧೆಯನ್ನು ಸಂಪೂರ್ಣವಾಗಿ ಮುಗಿಸಿ ಬಹುಮಾನಕ್ಕೆ ಬಾಜನರಾಗಿದ್ದಾರೆ..
            ವಿಜೇತರಾದವರು : ಚಿ.ನಾ. ಹಳ್ಳಿ ಭರತ್ ಪ್ರಥಮ ಸ್ಥಾನಗಳಿಸಿ ಸೈಕಲನ್ನು ಬಹುಮಾನವಾಗಿ ಪಡೆದರೆ , ಹುಳಿಯಾರಿನ ಶ್ರೀನಿವಾಸನಾಯ್ಕ ಮತ್ತು ಎಂ.ನಾಗೇಶ್ ದ್ವಿತೀಯ ಹಾಗೂ ಸ್ವಾಮಿ ತೃತೀಯ ಸ್ಥಾನದೊಂದಿಗೆ ಆಕರ್ಷಕ ಟ್ರೋಪಿ ಪಡೆದಿದ್ದಾರೆ. ದಿನೇಶ್ ಗೆ 4 ನೇಬಹುಮಾನವಾಗಿ ಮೊಬೈಲ್ ಹ್ಯಾಂಡ್ ಸೆಟ್, ಡ್ರೈವರ್ ಕುಮಾರ್ ಗೆ 5ನೇ ಬಹುಮಾನವಾಗಿ ಹಾಟ್ ಬಾಕ್ಸ್ ದೊರೆತರೆ, ನರೇಶ್ ಬಾಬು (6 ಸ್ಥಾನ), ಕೆಂಕೆರೆ ಚೇತನ್ (7ನೇ ಸ್ಥಾನ) ಪಡೆಯುವ ಮೂಲಕ ಸ್ಪೋರ್ಟ್ ಶೋಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ನಾಗರಾಜು(8ನೇ ಸ್ಥಾನ) , ಸುನಿಲ್( 9 ನೇ ಸ್ಥಾನ), ಸುಂದರ್ (10 ನೇ ಸ್ಥಾನ) ದೊಂದಿಗೆ ಟೀಶರ್ಟ್ ಪಡೆದರೆ ರಮೇಶ್ (11 ನೇ ಸ್ಥಾನ) , ಬಡಗಿ ಕುಮಾರ್ (12ನೇ ಸ್ಥಾನ), ಹೋಟೆಲ್ ಮಂಜುನಾಥ (13ನೇಸ್ಥಾನ)ದೊಂದಿಗೆ ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

             ಬಹುಮಾನ ವಿತರಣಾ ಸಮಾರಂಭದಲ್ಲಿ ಕರವೇ ಅಧ್ಯಕ್ಷ ಕೋಳಿಶ್ರೀನಿವಾಸ್, ಗೌರವಾಧ್ಯಕ್ಷ ಕ್ಯಾಸೆಟ್ ರಂಗಸ್ವಾಮಿ, ಲಕ್ಷ್ಮಿ ಬೇಕರಿ ಮಂಜುನಾಥ್, ಕಿರುತೆರೆ ಕಲಾವಿದ ರಂಗಸ್ವಾಮಿ (ಗೌಡಿ) , ಬಾಲಾಜಿ ಗಾರ್ಮೆಂಟ್ಸ್ ನ ಭರತ್ ಕುಮಾರ್, ರಾಯನ್ ಫುಟ್ ವೇರ ನ ಯೂಸೂಫ್ ಖಾನ್, ಲಕ್ಷ್ಮಿ ಬ್ಯಾಂಗಲ್ ಸ್ಟೋರ್ ನ ಶಿವಕುಮಾರ್, ಕರವೇ ಪದಾಧಿಕಾರಿಗಳಾದ ಮೆಡಿಕಲ್ ಚನ್ನಬಸವಯ್ಯ ,ಅಂಜನಮೂರ್ತಿ, ಕುಮಾರ್, ಮಂಜುನಾಥ, ಮುರುಳಿ, ಹರೀಶ್, ದಿವಾಕರ,ಸಿದ್ದೇಶ್,ರಘು,ನವೀನ್,ಬಸವರಾಜನಾಯ್ಕ,ನಾಗರಾಜು,ಯೋಗೀಶ್,ಮೋಹನ್ ಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.