ವಿಷಯಕ್ಕೆ ಹೋಗಿ

ರಸ್ತೆ ತುಂಬಾ ಗುಂಡಿ : ದುಸ್ಥರವಾದ ಸಂಚಾರ

        ಹುಳಿಯಾರು ಪಟ್ಟಣದಲ್ಲಿ ಹಾದು ಹೋಗಿರುವ ರಸ್ತೆಗಳೆಲ್ಲಾ ಗುಂಡಿಬಿದ್ದು ವಾಹನಗಳ ಸಂಚಾರ ದುಸ್ಥರವಾಗಿದೆ. ಪಟ್ಟಣದಿಂದ ಶಿರಾ ರಸ್ತೆ, ತಿಪಟೂರು ರಸ್ತೆ, ಹೊಸದುರ್ಗ ರಸ್ತೆ, ಪಂಚನಹಳ್ಳಿ ರಸ್ತೆಗಳೆಲ್ಲಾ ಗುಂಡಿಬಿದ್ದು ಅವ್ಯವಸ್ಥೆಯಾಗಿದ್ದು ನಿತ್ಯ ಸಂಚಾರಕ್ಕೆ ಕಿರಿಕಿಯುಂಟಾಗಿವೆ.
ಹುಳಿಯಾರು-ಹೊಸದುರ್ಗ ಮಾರ್ಗದಲ್ಲಿನ ಕೇಶವಾಪುರದ ಹತ್ತಿರ ರಸ್ತೆಯಲ್ಲಿ ಗುಂಡಿಬಿದ್ದಿರುವುದು.
             ಕೇಶವಾಪುರ ತಿರುವಿನಲ್ಲಿ , ಬಿ,ಎಚ್,ರಸ್ತೆ ಹಳೆ ಪೋಸ್ಟ್ ಅಫೀಸ್ ಮುಂಭಾಗದಲ್ಲಿ, ಎಪಿಎಂಸಿ ಮುಭಾಗದ, ಮೀಸೆ ರಂಗಪ್ಪನ ಅಂಗಡಿ ಮುಂಭಾಗ, ಗಾಂಧಿಪೇಟೆ ತಿರುವಿನಲ್ಲಿ, ಕೆಂಚಮ್ಮನ ತೋಪಿನ ಬಳಿ, ಮಂಜುನಾಥ ಸಾಮಿಲ್ ಮುಂಭಾಗದಲ್ಲಿರುವ ಪ್ರಾಣಕಂಟಕವಾಗಿರುವ ಗುಂಡಿಯಲ್ಲದೆ , ಯೂಸೂಫ್ ಖಾನ್ ಪೆಟ್ರೋಲ್ ಬಂಕ್ ಮುಂಭಾಗ, ಒಣಕಾಲುವೆ , ಎಪಿಎಂಸಿ ಹೊಟೆಲ್ ನ ಮುಂಭಾಗದ ಸೇತುವೆ ಮೇಲಿನ ದಿಣ್ಣೆ ಆಪಾಯಕ್ಕೆ ಬಾಯ್ತೆರೆದು ನಿಂತಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಸಾಕು ಅನಾಹುತ ಕಟ್ಟಿಟ್ಟಬುತ್ತಿ ಎಂಬಂತಿದೆ.
              ಈ ಗುಂಡಿಗಳು ವರ್ಷೊಂಭತ್ತು ಕಾಲವೂ ಇದ್ದೇಯಿದ್ದು ಪಿಡಬ್ಲ್ಯೂಡಿ ಇಲಾಖೆಯವರಾಗಲಿ ಸ್ಥಳೀಯ ಗ್ರಾ.ಪಂ.ನವರಾಗಲಿ ಕಡೆಗೆ ನಿತ್ಯ ಸಂಚರಿಸುವ ವಾಹನ ಸವಾರರೂ ಈ ಬಗ್ಗೆ ಗಮನಕೊಡದಿರುವುದು ಸೋಜಿಗದ ಸಂಗತಿಯಾಗಿದೆ. ರಸ್ತೆಗೆ ಹಾಕಿದ್ದ ಟಾರು ಸಂಪೂರ್ಣವಾಗಿ ಕಿತ್ತು ಹೋಗಿ ದಪ್ಪದಪ್ಪ ಜಲ್ಲಿಯಲ್ಲಾ ಮೇಲೆ ಬಂದಿರುವ ಜೊತೆಗೆ ದೊಡ್ಡ ಗುಂಡಿಗಳು ಬಿದ್ದು ದ್ವಿಚಕ್ರವಾಹನ ಸವಾರರಿಗೆ ಹೆಚ್ಚಿನ ತೊಂದರೆಯಾಗಿದೆ. ಆಗಾಗ್ಗೆ ಬೈಕ್ ಸವಾರರು ಆಯತಪ್ಪಿ ಬಿದ್ದು ಏಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗುವುದು ಮಾಮೂಲಿಯಾಗಿದೆ.
               ಹೊಸದುರ್ಗದಿಂದ ಬೆಂಗಳೂರು ಕಡೆ ಹಾಗೂ ಪಂಚನಹಳ್ಳಿ, ಅರಸೀಕೆರೆಯಿಂದ ಹುಳಿಯಾರಿಗೆ ನಿತ್ಯ ನೂರಾರು ಬಸ್, ಆಟೋ, ಲಾರಿಸೇರಿದಂತೆ ಇತರೆ ವಾಹನಗಳು ಬಹುಪ್ರಯಾಸದಿಂದ ತಿರುಗಾಡುತ್ತವೆಯಾದರೂ ಸಹ ಇದುವರೆಗೂ ಈ ಗುಂಡಿಗಳನ್ನು ಮುಚ್ಚಿ ಟಾರ್ ಹಾಕುವುದಾಗಲಿ ಅಥವಾ ಮಣ್ಣು ಹಾಕುವುದಕ್ಕೂ ಯಾರೊಬ್ಬರು ಮುಂದಾಗಿಲ್ಲವೆಂದು ಸ್ಥಳೀಯರು ದೂರುತ್ತಾರೆ. ಮಳೆಗಾಲದಲ್ಲಂತೂ ಹೆಚ್ಚು ತೊಂದರೆಯಾಗುತ್ತಿದ್ದು ಈ ಗುಂಡಿಗಳ ತುಂಬೆಲ್ಲಾ ನೀರು ತುಂಬಿಕೊಂಡು ರಸ್ತೆಯೇ ಕಾಣದಂತಾಗುತ್ತದೆ. ಈ ಗುಂಡಿಗಳಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದ್ದು ಯಾವಾಗ ಯಾರು ಬಿದ್ದೇಳುತ್ತಾರೋ ಎಂಬ ಭಯದಿಂದ ಸಂಚರಿಸುವಂತ ಸ್ಥಿತಿ ಇದೆ.

            ಕೇಶವಾಪುರ ಮಾರ್ಗ ತೀರ ಹದಗೆಟ್ಟಿದ್ದು ಈ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 234 ಹಾದು ಹೋಗಲಿದ್ದು ಆ ರಸ್ತೆಯ ಕಾಮಗಾರಿಗೆ ಚಾಲನೆ ದೊರೆತಿರುವ ಹಿನ್ನಲೆಯಿಂದ ಯಾರೂ ಸಹ ಇದರ ಬಗ್ಗೆ ಗಮನಕೊಡದೆ ಹೇಗೂ ಹೊಸ ರೋಡ್ ಆಗುತ್ತಿದೆಯಲ್ಲಾ ಆಗ ಎಲ್ಲಾ ಸರಿಯಾಗುತ್ತದೆ ಎಂಬ ಉದಾಸೀನತೆಯ ನಿಲುವಿನೊಂದಿದೆ ಇಲಾಖೆಯವರು ಸುಮ್ಮನಿದ್ದಾರೆಂದು ಇಲ್ಲಿ ನಿತ್ಯ ಸಂಚರಿಸುವ ಪ್ರಯಾಣಿಕರು ಆರೋಪಿಸುತ್ತಾರೆ. ರಾಷ್ಟ್ರೀಯ ಹೆದ್ದಾರಿ ಕಾರ್ಯ ಯಾವಾಗ ಇಲ್ಲಿಗೆ ಬರುತ್ತದೆಯೋ ಏನು ಎಂಬುದು ಇಲ್ಲಿ ಯಾರಿಗೂ ಸರಿಯಾಗಿ ತಿಳಿದಿಲ್ಲ , ಅದುವರೆವಿಗಾದರೂ ಈಗ ಬಿದ್ದಿರುವ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಇನ್ನೂ ಮುಂದೆ ಇಲ್ಲಿ ಯಾವುದೇ ರೀತಿಯ ಅಪಘಾತಗಳು ಸಂಭವಿಸಿದಲ್ಲಿ ಪಿಡಬ್ಲೂಡಿ ಹಾಗೂ ಸ್ಥಳಿಯ ಗ್ರಾ.ಪಂ.ನವರೇ ಅದರ ಹೊಣೆ ಹೊರಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...