ವಿಷಯಕ್ಕೆ ಹೋಗಿ

ರಸ್ತೆ ತುಂಬಾ ಗುಂಡಿ : ದುಸ್ಥರವಾದ ಸಂಚಾರ

        ಹುಳಿಯಾರು ಪಟ್ಟಣದಲ್ಲಿ ಹಾದು ಹೋಗಿರುವ ರಸ್ತೆಗಳೆಲ್ಲಾ ಗುಂಡಿಬಿದ್ದು ವಾಹನಗಳ ಸಂಚಾರ ದುಸ್ಥರವಾಗಿದೆ. ಪಟ್ಟಣದಿಂದ ಶಿರಾ ರಸ್ತೆ, ತಿಪಟೂರು ರಸ್ತೆ, ಹೊಸದುರ್ಗ ರಸ್ತೆ, ಪಂಚನಹಳ್ಳಿ ರಸ್ತೆಗಳೆಲ್ಲಾ ಗುಂಡಿಬಿದ್ದು ಅವ್ಯವಸ್ಥೆಯಾಗಿದ್ದು ನಿತ್ಯ ಸಂಚಾರಕ್ಕೆ ಕಿರಿಕಿಯುಂಟಾಗಿವೆ.
ಹುಳಿಯಾರು-ಹೊಸದುರ್ಗ ಮಾರ್ಗದಲ್ಲಿನ ಕೇಶವಾಪುರದ ಹತ್ತಿರ ರಸ್ತೆಯಲ್ಲಿ ಗುಂಡಿಬಿದ್ದಿರುವುದು.
             ಕೇಶವಾಪುರ ತಿರುವಿನಲ್ಲಿ , ಬಿ,ಎಚ್,ರಸ್ತೆ ಹಳೆ ಪೋಸ್ಟ್ ಅಫೀಸ್ ಮುಂಭಾಗದಲ್ಲಿ, ಎಪಿಎಂಸಿ ಮುಭಾಗದ, ಮೀಸೆ ರಂಗಪ್ಪನ ಅಂಗಡಿ ಮುಂಭಾಗ, ಗಾಂಧಿಪೇಟೆ ತಿರುವಿನಲ್ಲಿ, ಕೆಂಚಮ್ಮನ ತೋಪಿನ ಬಳಿ, ಮಂಜುನಾಥ ಸಾಮಿಲ್ ಮುಂಭಾಗದಲ್ಲಿರುವ ಪ್ರಾಣಕಂಟಕವಾಗಿರುವ ಗುಂಡಿಯಲ್ಲದೆ , ಯೂಸೂಫ್ ಖಾನ್ ಪೆಟ್ರೋಲ್ ಬಂಕ್ ಮುಂಭಾಗ, ಒಣಕಾಲುವೆ , ಎಪಿಎಂಸಿ ಹೊಟೆಲ್ ನ ಮುಂಭಾಗದ ಸೇತುವೆ ಮೇಲಿನ ದಿಣ್ಣೆ ಆಪಾಯಕ್ಕೆ ಬಾಯ್ತೆರೆದು ನಿಂತಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಸಾಕು ಅನಾಹುತ ಕಟ್ಟಿಟ್ಟಬುತ್ತಿ ಎಂಬಂತಿದೆ.
              ಈ ಗುಂಡಿಗಳು ವರ್ಷೊಂಭತ್ತು ಕಾಲವೂ ಇದ್ದೇಯಿದ್ದು ಪಿಡಬ್ಲ್ಯೂಡಿ ಇಲಾಖೆಯವರಾಗಲಿ ಸ್ಥಳೀಯ ಗ್ರಾ.ಪಂ.ನವರಾಗಲಿ ಕಡೆಗೆ ನಿತ್ಯ ಸಂಚರಿಸುವ ವಾಹನ ಸವಾರರೂ ಈ ಬಗ್ಗೆ ಗಮನಕೊಡದಿರುವುದು ಸೋಜಿಗದ ಸಂಗತಿಯಾಗಿದೆ. ರಸ್ತೆಗೆ ಹಾಕಿದ್ದ ಟಾರು ಸಂಪೂರ್ಣವಾಗಿ ಕಿತ್ತು ಹೋಗಿ ದಪ್ಪದಪ್ಪ ಜಲ್ಲಿಯಲ್ಲಾ ಮೇಲೆ ಬಂದಿರುವ ಜೊತೆಗೆ ದೊಡ್ಡ ಗುಂಡಿಗಳು ಬಿದ್ದು ದ್ವಿಚಕ್ರವಾಹನ ಸವಾರರಿಗೆ ಹೆಚ್ಚಿನ ತೊಂದರೆಯಾಗಿದೆ. ಆಗಾಗ್ಗೆ ಬೈಕ್ ಸವಾರರು ಆಯತಪ್ಪಿ ಬಿದ್ದು ಏಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗುವುದು ಮಾಮೂಲಿಯಾಗಿದೆ.
               ಹೊಸದುರ್ಗದಿಂದ ಬೆಂಗಳೂರು ಕಡೆ ಹಾಗೂ ಪಂಚನಹಳ್ಳಿ, ಅರಸೀಕೆರೆಯಿಂದ ಹುಳಿಯಾರಿಗೆ ನಿತ್ಯ ನೂರಾರು ಬಸ್, ಆಟೋ, ಲಾರಿಸೇರಿದಂತೆ ಇತರೆ ವಾಹನಗಳು ಬಹುಪ್ರಯಾಸದಿಂದ ತಿರುಗಾಡುತ್ತವೆಯಾದರೂ ಸಹ ಇದುವರೆಗೂ ಈ ಗುಂಡಿಗಳನ್ನು ಮುಚ್ಚಿ ಟಾರ್ ಹಾಕುವುದಾಗಲಿ ಅಥವಾ ಮಣ್ಣು ಹಾಕುವುದಕ್ಕೂ ಯಾರೊಬ್ಬರು ಮುಂದಾಗಿಲ್ಲವೆಂದು ಸ್ಥಳೀಯರು ದೂರುತ್ತಾರೆ. ಮಳೆಗಾಲದಲ್ಲಂತೂ ಹೆಚ್ಚು ತೊಂದರೆಯಾಗುತ್ತಿದ್ದು ಈ ಗುಂಡಿಗಳ ತುಂಬೆಲ್ಲಾ ನೀರು ತುಂಬಿಕೊಂಡು ರಸ್ತೆಯೇ ಕಾಣದಂತಾಗುತ್ತದೆ. ಈ ಗುಂಡಿಗಳಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದ್ದು ಯಾವಾಗ ಯಾರು ಬಿದ್ದೇಳುತ್ತಾರೋ ಎಂಬ ಭಯದಿಂದ ಸಂಚರಿಸುವಂತ ಸ್ಥಿತಿ ಇದೆ.

            ಕೇಶವಾಪುರ ಮಾರ್ಗ ತೀರ ಹದಗೆಟ್ಟಿದ್ದು ಈ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 234 ಹಾದು ಹೋಗಲಿದ್ದು ಆ ರಸ್ತೆಯ ಕಾಮಗಾರಿಗೆ ಚಾಲನೆ ದೊರೆತಿರುವ ಹಿನ್ನಲೆಯಿಂದ ಯಾರೂ ಸಹ ಇದರ ಬಗ್ಗೆ ಗಮನಕೊಡದೆ ಹೇಗೂ ಹೊಸ ರೋಡ್ ಆಗುತ್ತಿದೆಯಲ್ಲಾ ಆಗ ಎಲ್ಲಾ ಸರಿಯಾಗುತ್ತದೆ ಎಂಬ ಉದಾಸೀನತೆಯ ನಿಲುವಿನೊಂದಿದೆ ಇಲಾಖೆಯವರು ಸುಮ್ಮನಿದ್ದಾರೆಂದು ಇಲ್ಲಿ ನಿತ್ಯ ಸಂಚರಿಸುವ ಪ್ರಯಾಣಿಕರು ಆರೋಪಿಸುತ್ತಾರೆ. ರಾಷ್ಟ್ರೀಯ ಹೆದ್ದಾರಿ ಕಾರ್ಯ ಯಾವಾಗ ಇಲ್ಲಿಗೆ ಬರುತ್ತದೆಯೋ ಏನು ಎಂಬುದು ಇಲ್ಲಿ ಯಾರಿಗೂ ಸರಿಯಾಗಿ ತಿಳಿದಿಲ್ಲ , ಅದುವರೆವಿಗಾದರೂ ಈಗ ಬಿದ್ದಿರುವ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಇನ್ನೂ ಮುಂದೆ ಇಲ್ಲಿ ಯಾವುದೇ ರೀತಿಯ ಅಪಘಾತಗಳು ಸಂಭವಿಸಿದಲ್ಲಿ ಪಿಡಬ್ಲೂಡಿ ಹಾಗೂ ಸ್ಥಳಿಯ ಗ್ರಾ.ಪಂ.ನವರೇ ಅದರ ಹೊಣೆ ಹೊರಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.