ವಿಷಯಕ್ಕೆ ಹೋಗಿ

ಹೋಬಳಿ ಮಟ್ಟದ "ಎ"ವಿಭಾಗದ ಕ್ರೀಡಾಕೂಟ ಶಾಂತರೀತಿಯಲ್ಲಿ ಮುಕ್ತಾಯ

             ಟಿ.ಆರ್.ಎಸ್.ಆರ್ ಶಾಲೆವತಿಯಿಂದ ಪಟ್ಟಣದ ವಾಸವಿ ಶಾಲಾ ಆವರಣದಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ "ಎ" ವಿಭಾಗದ ಕ್ರೀಡಾಕೂಟ ಶನಿವಾರ ಮುಕ್ತಾಯಗೊಂಡಿತು.
ಹುಳಿಯಾರಿನ ವಾಸವಿ ಶಾಲಾ ಆವರಣದಲ್ಲಿ ನಡೆಯುತ್ತಿರುವ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸೀಗೇಬಾಗಿ ಹಾಗೂ ಬಸವೇಶ್ವರ ಶಾಲೆಯ ಬಾಲಕಿಯರು ಕಬ್ಬಡಿ ಫೈನಲ್ ಪಂದ್ಯದಲ್ಲಿ ಸೆಣಸಿದರು.

ಹುಳಿಯಾರು ವಾಸವಿ ಶಾಲಾವರಣದಲ್ಲಿ ನಡೆದ ಕಬಡ್ಡಿ ಫೈನಲ್ ನಲ್ಲಿ ಜಯಗಳಿಸಿದ ಹುಳಿಯಾರು-ಕೆಂಕೆರೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಸೆಣಸಿದ್ದು ಹೀಗೆ.......

            ಕ್ರೀಡಾಕೂಟದ ಗುಂಪು ಆಟಗಳಾದ ಗಂಡುಮಕ್ಕಳ ವಿಭಾಗದಲ್ಲಿ ವಾಲಿಬಾಲ್ ನಲ್ಲಿ ಹುಳಿಯಾರು-ಕೆಂಕೆರೆ ಪ್ರೌಢಶಾಲೆ ಪ್ರಥಮ, ಜ್ಞಾನಜ್ಯೋತಿ ದ್ವಿತೀಯ ಸ್ಥಾನಗಳಿಸಿದರೆ, ಖೋಖೋದಲ್ಲಿ ವಾಸವಿ ಆಂಗ್ಲಶಾಲೆ ಪ್ರಥಮ, ಹುಳಿಯಾರು-ಕೆಂಕೆರೆ ಪ್ರೌಢಶಾಲೆ ದ್ವಿತೀಯ, ಬಾಲ್ ಬ್ಯಾಡ್ಮಿಂಟನ್ ನಲ್ಲಿ ಯಳನಡು ಪ್ರಥಮ,ವಾಸವಿ ಆಂಗ್ಲ ಶಾಲೆ ದ್ವಿತೀಯ, ಕಬಡ್ಡಿಯಲ್ಲಿ ಹುಳಿಯಾರು-ಕೆಂಕೆರೆ ಪ್ರೌಢಶಾಲೆ ಪ್ರಥಮ,ಟಿ.ಆರ್.ಎಸ್.ಆರ್ ಶಾಲೆ ದ್ವಿತೀಯ, ಥ್ರೋಬಾಲ್ ನಲ್ಲಿ ವಾಸವಿ ಆಂಗ್ಲಶಾಲೆ ಪ್ರಥಮ, ಬಸವೇಶ್ವರ ದ್ವಿತೀಯ, ಷಟಲ್ ನಲ್ಲಿ ವಾಸವಿ ಆಂಗ್ಲಶಾಲೆ ಪ್ರಥಮ,ಹುಳಿಯಾರು-ಕೆಂಕೆರೆ ಪ್ರೌಢಶಾಲೆ ದ್ವಿತೀಯ,
          ಹೆಣ್ಣುಮಕ್ಕಳ ವಿಭಾಗದಲ್ಲಿ ವಾಲಿಬಾಲ್ ನಲ್ಲಿ ವಾಸವಿ ಆಂಗ್ಲಮಾಧ್ಯಮಶಾಲೆ ಪ್ರಥಮ, ತಮ್ಮಡಿಹಳ್ಳಿಶಾಲೆ ದ್ವಿತೀಯ ಸ್ಥಾನಗಳಿಸಿದರೆ, ಖೋಖೋದಲ್ಲಿ ಟಿಆರ್.ಎಸ್.ಆರ್ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಕನಕದಾಸ ದ್ವಿತೀಯ, ಬಾಲ್ ಬ್ಯಾಡ್ಮಿಂಟನ್ ನಲ್ಲಿ ವಾಸವಿ ಆಂಗ್ಲಮಾಧ್ಯಮ ಶಾಲೆ ಪ್ರಥಮ,ಯಳನಡು ದ್ವಿತೀಯ, ಕಬಡ್ಡಿಯಲ್ಲಿ ಸೀಗೆಬಾಗಿ ಶಾಲೆ ಪ್ರಥಮ, ಬಸವೇಶ್ವರ ಶಾಲೆ ದ್ವಿತೀಯ,ಥ್ರೋಬಾಲ್ ನಲ್ಲಿ ವಾಸವಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಸರ್ಕಾರಿ ಉರ್ದುಶಾಲೆ ದ್ವಿತೀಯ,ಷಟಲ್ ನಲ್ಲಿ ವಾಸವಿ ಆಂಗ್ಲಮಾಧ್ಯಮ ಶಾಲೆ ಪ್ರಥಮ, ಹುಳಿಯಾರು-ಕೆಂಕೆರೆ ಪ್ರೌಢಶಾಲೆ ದ್ವಿತೀಯ ಸ್ಥಾನಗಳಿಸಿದ್ದಾರೆ.
           ಅಥ್ಲೆಟಿಕ್ಸ್ : ಹೆಣ್ಣುಮಕ್ಕಳ ವಿಭಾಗದಲ್ಲಿ 100ಮೀ, 200ಮೀ,800 ಮೀ, 1500ಮೀ ಓಟ , ರಿಲೇಓಟ,ಉದ್ದಜಿಗಿತ ದಲ್ಲಿ ಟಿಆರ್.ಎಸ್ ಆರ್ ಶಾಲೆಗೆ ಲಭಿಸಿದೆ. ಗಂಡುಮಕ್ಕಳ ವಿಭಾಗದಲ್ಲಿ 800 ಮೀ, 1500ಮೀ ಓಟ ವಾಸವಿ ಆಂಗ್ಲ ಮಾಧ್ಯಮ ಶಾಲೆಗೆ, ರಿಲೇಓಟ ,100ಮೀ ಯಳನಡುಶಾಲೆ, ಗುಂಡು ಎಸೆತದಲ್ಲಿ ಬಸವೇಶ್ವರ ಶಾಲೆ, 3000ಮೀ ಓಟದಲ್ಲಿ ಹುಳಿಯಾರು-ಕೆಂಕೆರೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

          ಕ್ರೀಡಾಕೂಟವು ಶಾಂತರೀತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶಕ್ಕೆ ಎಡೆಮಾಡಿಕೊಡದೆ ನಡೆದಿದ್ದು, ಹೋಬಳಿ ಎ ವಿಭಾಗದ ಎಲ್ಲಾ ಶಾಲೆಯ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಬಹುಮಾನ ಪಡೆದಿದ್ದಾರೆ.ಅಲ್ಲದೆ ದೈಹಿಕಶಿಕ್ಷಕರು,ಟೀಂ ಮ್ಯಾನೇಜರ್ ಸೇರಿದಂತೆ ಇತರ ಶಿಕ್ಷಕರು ಆಸಕ್ತಿಯುತವಾಗಿ ಆಟಗಳನ್ನು ಆಡಿಸಿದ್ದಾರೆ ಎಂದು ಕ್ರೀಡಾಕೂಟ ಆಯೋಜಿಸಿದ್ದ ಟಿ.ಆರ್.ಎಸ್.ಆರ್ ಶಾಲೆಯ ಮುಖ್ಯಶಿಕ್ಷಕ ಹೆಚ್.ವಿ.ರಮೇಶ್ ತಿಳಿಸಿದ್ದಾರೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...