ವಿಷಯಕ್ಕೆ ಹೋಗಿ

ಭ್ರಷ್ಟಾಚಾರ ಮಟ್ಟಹಾಕಲು ಪ್ರಮುಖ ಆಸ್ತ್ರ ಆರ್.ಟಿ.ಐ ಕಾಯ್ದೆ

            ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಮಟ್ಟ ಹಾಕುವ ಉದ್ದೇಶದಿಂದ ಮಾಹಿತಿಹಕ್ಕು ಕಾಯ್ದೆ ಜಾರಿಯಲಿದ್ದು ಪ್ರತಿಯೊಬ್ಬರೂ ಸಹ ಇದರಡಿಯಲ್ಲಿ ನ್ಯಾಯಸಮ್ಮತವಾಗಿ ಅರ್ಜಿಸಲ್ಲಿಸಿ ಮಾಹಿತಿ ಪಡೆಯಬಹುದು ಎಂದು ಸಾಮಾಜಿಕ ಕಾರ್ಯಕರ್ತ ಸಾ.ಚಿ.ರಾಜ್ ಕುಮಾರ್ ತಿಳಿಸಿದರು.
             ಹುಳಿಯಾರಿನ ಗಣಪತಿ ದೇವಾಲಯದಲ್ಲಿ ನಡೆನುಡಿ,ಸ್ವಚ್ಚ ಸಮಾಜದಡಿ ಆಯೋಜಿಸಿದ್ದ ಚಳುವಳಿಯಾಗಿ ಮಾಹಿತಿಹಕ್ಕು ಕಾಯ್ದೆ ಮತ್ತು ಲೋಕಾಯುಕ್ತಕಾಯ್ದೆ ಎಂಬ ವಿಚಾರ ಗೋಷ್ಠಿಯಲ್ಲಿ ಮಾಹಿತಿಹಕ್ಕು ಕಾಯ್ದೆಯ ಸ್ವರೂಪ ಮತ್ತು ಮಹತ್ವ ಕುರಿತು ಅವರು ಮಾಹಿತಿ ತಿಳಿಸಿದರು.
ಹುಳಿಯಾರಿನಲ್ಲಿ ನಡೆದ ಚಳುವಳಿಯಾಗಿ ಮಾಹಿತಿಹಕ್ಕು ಹಾಗೂ ಲೋಕಾಯುಕ್ತ ಕಾಯ್ದೆ ವಿಚಾರ ಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತ ಸಾ.ಚಿ.ರಾಜ್ ಕುಮಾರ್ ಮಾತನಾಡಿದರು.
               ಸಂವಿಧಾನದಲ್ಲಿ ಪ್ರಜೆಗಳೇ ಪ್ರಭುಗಳು ಎಂದಿದ್ದರೂ ಪ್ರಾಯೋಗಿಕವಾಗಿ ಅದು ಜಾರಿಯಲಿಲ್ಲ, ನಮಗೆ ದೊರೆಯಬೇಕಾದ ಸೌಲಭ್ಯಗಳಬಗ್ಗೆ, ಯೋಜನೆಗಳ ಬಗ್ಗೆ, ಸ್ಥಳೀಯ ಆಡಳಿತಕ್ಕೆ ಬರುವ ಅನುದಾನಗಳ ಬಗ್ಗೆ ಸೇರಿದಂತೆ ಇನ್ನಿತ ವಿಚಾರಗಳ ಬಗ್ಗೆ ಮಾಹಿತಿ ಕೇಳುವುದು ದುಸ್ಥರದ ಸಂಗತಿಯಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಆರ್.ಟಿ.ಐ ಕಾಯ್ದೆ ಜಾರಿಗೊಳಿಸಿದ್ದು ನಮ್ಮ ಹಕ್ಕುಗಳಿಗೆ ಧಕ್ಕೆಯಾಗದಂತೆ ಹಾಗೂ ನಮಗೆ ಬೇಕಾದ ಮಾಹಿತಿಯನ್ನು ಇದರಡಿಯಲ್ಲಿ ಪಡೆಯಬಹುದಾಗಿದೆ ಎಂದರು. ಸರ್ಕಾರ ರೂಪಿಸುವ ಯೋಜನೆಗಳಿಗೆ ವ್ಯಯಿಸುವ ಹಣ ನಾವುಕಟ್ಟುವ ತೆರಿಗೆಯೇ ಆಗಿದೆ. ಆದರೆ ಇಂದಿನ ಅಧಿಕಾರಿಗಳು,ಜನಪ್ರತಿನಿಧಿಗಳು ಸರ್ಕಾರದಿಂದ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸದೆ ವಂಚನೆಯಲ್ಲಿ ತೊಡಗಿದ್ದಾರೆ. ಇನ್ನಾದರೂ ನಾವುಗಳು ಎಚ್ಚೆತ್ತು ನಮ್ಮಗ್ರಾಮಗಳ ಮಟ್ಟದಲ್ಲಿ ಆಗುತ್ತಿರುವಂತ ಭ್ರಷ್ಟಾಚಾರದ ಬಗ್ಗೆ ಧ್ವನಿಯತ್ತಬೇಕಿದೆ ಎಂದರು. ಅದಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಸಂಘಟನೆಗಳನ್ನು ರಚಿಸಿಕೊಂಡು ಅವುಗಳ ಮೂಲಕ ನಮಗೆ ದೊರೆಯಬೇಕಾದ ಮಾಹಿತಿ ಹಾಗೂ ಸೌಲಭ್ಯಗಳನ್ನು ಪಡೆಯೋಣ ಎಂದು ತಿಳಿಸಿದರು.
ದಲಿತಬಹುಜನ ಚಳುವಳಿಯ ವೆಂಕಟೇಶ್ ಮಾತನಾಡಿ, ಸರ್ಕಾರದ ಸವಲತ್ತುಗಳಿಂದ ವಂಚಿತರಾದ ಸಮುದಾಯಗಳು ಯಾವರೀತಿ ಈ ಕಾಯ್ದೆಯಡಿ ತಮಗೆ ದೊರೆಯಬೇಕಾದ ಮಾಹಿತಿಯನ್ನು ಪಡೆಯಬಹುದು ಎಂದನ್ನು ತಿಳಿಸಿದರು. ಮಾಹಿತಿಹಕ್ಕು ಪಡೆಯಲು ಅನುಸರಿಸಬೇಕಾದ ಮಾರ್ಗಸೂಚಿ , ಅರ್ಜಿ ಬರೆಯುವ ಪರಿ, ಅದಕ್ಕೆ ತಗುಲುವ ವೆಚ್ಚ ಸೇರಿದಂತೆ ತಾವು ಬರೆದ ಅರ್ಜಿಯನ್ನು ಯಾರಿಗೆ ನೀಡುವ ಮೂಲಕ ಮಾಹಿತಿ ಪಡೆಯಬಹುದು ಎಂಬುದನ್ನು ತಿಳಿಸಿದರು.
           ಸಾಮಾಜಿಕ ಕಾರ್ಯಕರ್ತ ಹಾಗೂ ಪಶುವೈದ್ಯಾಧಿಕಾರಿ ರಘುಪತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ,ಶೋಷಿತವರ್ಗಗಳ ಅಭಿವೃದ್ಧಿಯಾಗಬೇಕೆಂದರೆ ಅದು ಹೋರಾಟದಿಂದ ಮಾತ್ರ ಸಾಧ್ಯ. ಅದಕ್ಕಾಗಿ ಸಂಘಟನೆಯಾಗಬೇಕು ಆ ಮೂಲಕ ನಮ್ಮನ್ನು ಶೋಷಿಸುತ್ತಿರುವವರನ್ನು ಜಾಗೃತರನಾಗಿ ಮಾಡುವ ಕಾರ್ಯವಾಗಬೇಕಿದೆ ಎಂದರು. ಒಬ್ಬರಿಗೊಬ್ಬರು ಸಹಕಾರಯುತವಾಗಿ,ಪ್ರತಿಫಲಾಪೇಕ್ಷೆಯಿಲ್ಲದೆ ತಮಗೆ ಸಿಗಬೇಕಾದ ಮಾಹಿತಿಯನ್ನು ಆರ್.ಟಿ.ಐ ಕಾಯ್ದೆಯಡಿ ಪಡೆಯುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಶ್ರೀಪಾದಭಟ್,ಲೋಕೇಶ್, ಹುಳಿಯಾರಿನ ಜಯಲಕ್ಷ್ಮಿ, ಚಿಕ್ಕಣ್ಣ,ರಾಘವೇಂದ್ರ,ರಾಜಣ್ಣ,ಕೆಂಕೆರೆಮಂಜು ಸೇರಿದಂತೆ ಹೋಬಳಿಯ ವಿವಿಧ ಗ್ರಾಮಗಳ ಗ್ರಾಮಸ್ಥರು,ವಿವಿಧ ಸಮುದಾಯದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...