ವಿಷಯಕ್ಕೆ ಹೋಗಿ

ಹಂದನಕೆರೆ ಠಾಣೆಯಲ್ಲಿ ಜನಸಂಪರ್ಕ ಸಭೆ

          ಹುಳಿಯಾರು  ಸಮೀಪದ ಹಂದನಕೆರೆ ಪೊಲಿಸ್ ಠಾಣಾ ವ್ಯಾಪ್ತಿಯ ಜನರ ಸಮಸ್ಯೆಗಳ ಕುರಿತಂತೆ ಜನಸಂಪರ್ಕ ಸಭೆ ತಿಪಟೂರು ಉಪವಿಭಾಗಾಧಿಕಾರಿ ಕಾರ್ತೀಕ್ ರೆಡ್ಡಿ ಅವರ ನೇತೃತ್ವದಲ್ಲಿ ಶನಿವಾರದಂದು ಠಾಣೆಯಲ್ಲಿ ನಡೆಯಿತು.
ಹುಳಿಯಾರು ಸಮೀಪದ ಹಂದನಕೆರೆ ಠಾಣೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಎಎಸ್ಪಿ ಕಾರ್ತೀಕ್ ರೆಡ್ಡಿ ಮಾತನಾಡಿದರು.
              ಸಭೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು ಹಂದನಕೆರೆ ಭಾಗಕ್ಕೆ ಸೂಕ್ತ ಬಸ್ ಸಂಚಾರದ ವ್ಯವಸ್ಥೆ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ 108 ಅಂಬ್ಯುಲೆನ್ಸ್ ಸೇವೆ ಕಲ್ಪಿಸುವಂತೆ ಹಾಗೂ ರಾತ್ರಿ ಪಾಳಯದ ಗಸ್ತಿಗೆ ಹೆಚ್ಚುವರಿ ಪೋಲಿಸ್ ಸಿಬ್ಬಂದಿಯನ್ನು ಹಾಕುವಂತೆ ಜೊತೆಗೆ ಇನ್ನಿತರ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಉಪವಿಭಾಗಾಧಿಕಾರಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು. ಹಂದನಕೆರೆಯು ಜಿಲ್ಲೆಯ ಗಡಿಭಾಗವಾಗಿದ್ದು ಕೆಲ ಮೂಲಭೂತಸೌಕರ್ಯಗಳು ಸಮರ್ಪಕವಾಗಿ ಇಲ್ಲಿನ ಜನತೆಗೆ ದೊರೆಯುತ್ತಿಲ್ಲ ಈ ಬಗ್ಗೆ ತಮ್ಮ ಗಮನಕ್ಕೂ ಬಂದಿದೆ ಎಂದರು. ಈ ಭಾಗಕ್ಕೆ ಸೂಕ್ತ ಬಸ್ ಸಂಚಾರ ಕಲ್ಪಿಸುವಂತೆ ತಿಪಟೂರು ಡಿಪೋ ಮ್ಯಾನೇಜರ್ ಅವರಲ್ಲಿ ಮಾತನಾಡುವುದಾಗಿ ತಿಳಿಸಿದರಲ್ಲದೆ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ 108 ವಾಹನವನ್ನು ಶೀಘ್ರವೇ ಒದಗಿಸುವಂತೆ ತಾಲ್ಲೂಕು ಟಿಎಚ್ ಓ ಶಿವಕುಮಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ತಿಳಿಸಿದರು. ಹಂದನಕೆರೆ ಹೋಬಳಿ ಕೇಂದ್ರದ ಸುತ್ತಮುತ್ತ ಸಾಕಷ್ಟು ಹಳ್ಳಿಗಳಿದ್ದು ಯಾವುದೇ ರೀತಿಯ ಅಹಿತಕರಘಟನೆಗಳು ಘಟಿಸದಂತೆ ಕ್ರಮವಹಿಸುವನಿಟ್ಟಿನಲ್ಲಿ ರಾತ್ರಿ ಗಸ್ತಿಗಾಗಿ ಈಗಿರುವ ಸಿಬ್ಬಂದಿಯ ಜೊತೆಗೆ ಹೆಚ್ಚುವರಿಯಾಗಿ ಸಿಬ್ಬಂದಿಯನ್ನು ಹಾಕಿಕೊಡುವ ಭರವಸೆಯನ್ನು ನೀಡಿದರು.
             ಹಂದನಕೆರೆ ಠಾಣೆಯ ಪಿಎಸೈ ಹೆಚ್.ವಿ.ಸುನಿಲ್ ಮಾತನಾಡಿ, ಯಾವುದೇ ರೀತಿಯ ಸಮಸ್ಯೆಗಳನ್ನು ತಮ್ಮತಮ್ಮಲೇ ಬಗೆಹರಿಸ್ಕೊಳ್ಳಲು ಹೋಗಿ ದೊಡ್ಡ ಸಮಸ್ಯೆಯನ್ನು ಸೃಷ್ಠಿಸುವ ಬದಲು ತಮ್ಮ ಏನೇ ಸಮಸ್ಯೆ, ದೂರುಗಳನ್ನು ಠಾಣೆಯ ಗಮನಕ್ಕೆ ತರುವ ಮೂಲಕ ಅದನ್ನು ಶಾಂತರೀತಿಯಲ್ಲಿ ಬಗೆಹರಿಸಿಕೊಳ್ಳಿ ಎಂದರು. ಕಾನೂನಿನ ಉಲ್ಲಂಘನೆಯಾಗುವಂತೆ ಯಾವುದೇ ಕಾರ್ಯಗಳಿಗೆ ಆಸ್ಪದಕೊಡದಂತೆ ಶಾಂತರೀತಿಯಲ್ಲಿ ಸಾಗುವಂತೆ ತಿಳಿಸಿದರು.


ಸಿಪಿಐ ಜಯಕುಮಾರ್ ಅಧ್ಯಕ್ಷತೆವಹಿಸಿದ್ದು, ತಾ.ಪಂ. ಸದಸ್ಯ ಶಿವರಾಜ್,ಗ್ರಾ.ಪಂ.ಅಧ್ಯಕ್ಷೆ ಮಂಜಮ್ಮ ಸೇರಿದಂತೆ ಹೋಬಳಿಯ ಮುಖಂಡರು, ಠಾಣೆಯ ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...