ವಿಷಯಕ್ಕೆ ಹೋಗಿ

ಹುಳಿಯಾರು ಮಧ್ಯರಾತ್ರಿ ದ್ವಜಾರೋಹಣ

            ಹುಳಿಯಾರು  ಹೋಬಳಿ ಸ್ವಾತಂತ್ರ್ಯ ಹೋರಾಟಗಾರರ ಸಂಘ ಹಾಗೂ ರೈತಸಂಘದ ಸಹಯೋಗದಲ್ಲಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪಟ್ಟಣದ ಗಾಂಧಿಭವನದಲ್ಲಿ ಬುಧವಾರ ಮಧ್ಯರಾತ್ರಿ 12ರ ಸಮಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ 68ನೇ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸಲಾಯಿತು.
ಹುಳಿಯಾರಿನ ಗಾಂಧಿಭವನದಲ್ಲಿ ಮಧ್ಯರಾತ್ರಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಪಿಎಸೈ ಘೋರ್ಪಡೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
          ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪಿಎಸೈ ಘೋರ್ಪಡೆ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದು ಮಧ್ಯರಾತ್ರಿಯಾಗಿದ್ದು ಅದರ ಸವಿನೆನಪಿಗಾಗಿ ಇಲ್ಲೂ ಕೂಡ ಮಧ್ಯರಾತ್ರಿಯೇ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಸ್ವಾತಂತ್ಯ್ರಕ್ಕೆ ಹೋರಾಡಿದ ಹೋರಾಟಗಾರರ ನಡುವೆ ಮಧ್ಯರಾತ್ರಿಯಲ್ಲಿ ನಾನು ಧ್ವಜಾರೋಹಣ ಮಾಡುತ್ತಿರುವುದು ಇದೇ ಮೊದಲಾಗಿದ್ದು ಇದು ನನ್ನ ವೃತ್ತಿ ಜೀವನದ ಮರೆಯಲಾಗದ ಘಟನೆ ಎಂದರು. ಇಂತಹ ಆಚರಣೆಗಳು ಸದಾಕಾಲ ನಡೆಯುತ್ತಿರಬೇಕು, ಪ್ರಸ್ತುತ ದೇಶವ್ಯಾಪಿ ಅನೇಕ ಕಾನೂನುಬಾಹಿರ ಕೃತ್ಯಗಳು ಹಾಗೂ ಭ್ರಷ್ಟಾಚಾರ ಹೆಚ್ಚುತ್ತಿದ್ದು ಇವುಗಳು ದೇಶದ ಅಭಿವೃದ್ದಿಗೆ ಮಾರಕವಾಗಿವೆ ಎಂದು ವಿಷಾದಿಸಿದರು. ಇಂದಿನ ಯುವಕರಿಗೆ ಹಿಂದಿನವರ ಮಾರ್ಗದರ್ಶನ ಅಗತ್ಯವಿದ್ದು ರಾಷ್ಟ್ರನಾಯಕರ ಅದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಮುಂದಾಗಿ ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಕುಫ್ಫೂರು ಗದ್ದಿಗೆಮಠದ ಡಾ|| ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅಶೀರ್ವಚನ ನೀಡಿ, ದ್ವೇಷ ಅಸೂಯೆಗಳು ತಾಂಡವವಾಡಿ , ತ್ಯಾಗಮನೋಭಾವ ಇಲ್ಲವಾಗಿರುವುದು ದೇಶ ಹಿಂದುಳಿಯಲು ಕಾರಣಾವಾಗಿದೆ ಧಾರ್ಮಿಕ ಸಂಸ್ಕಾರದ ಹಿನ್ನಲೆಯಲ್ಲಿ ವೈಜ್ಞಾನಿಕ ಬೆಳವಣಿಗೆಯಾಗಬೇಕು. ಧಾರ್ಮಿಕ ಸಂಸ್ಕಾರದ ಮೂಲಕ ಸಮಾನತೆ , ಸದಾಚಾರ, ಮಾನವೀಯತೆ ಬೆಳೆಸಿಕೊಳ್ಳಿ ಎಂದು ಹೇಳಿದರು. ಪ್ರಸ್ತುತದಲ್ಲಿ ದೇಶವ್ಯಾಪಿ ಅನೇಕ ಜ್ವಲಂತಸಮಸ್ಯೆಗಳಿದ್ದು ಅವುಗಳ ನಿರ್ಮೂಲನೆಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲವೆಂದರು. ಇಂತಹ ಸಮಸ್ಯೆಗಳ ನಿರ್ಮೂಲನೆಗಾಗಿ ದೇಶದ ಪ್ರತಿಯೊಬ್ಬ ಪ್ರಜೆಯೂ ಪಣತೊಡಬೇಕಿದೆ ಎಂದರು.

           ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ವೆಂಕಟಾಛಲಪತಿ ಶೆಟ್ರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದು, ಧರ್ಮಸ್ಥಳ ಸಂಘದ ರೋಹಿತಾಕ್ಷ, ಹಸಿರುಸೇನೆಯ ಕೆಂಕೆರೆ ಸತೀಶ್, ರೈತಸಂಘದ ಮಲ್ಲಿಕಣ್ಣ, ಗಂಗಣ್ಣ, ಬಸ್ ಏಜೆಂಟರ್ ಸಂಘದ ಲೋಕೇಶಣ್ಣ, ಮುಖಂಡರಾದ ನಂದಿಹಳ್ಳಿ ಶಿವಣ್ಣ, ಜಲಾಲ್ ಸಾಬ್, ಬಡಗಿರಾಮಣ್ಣ, ಗ್ರಾ.ಪಂ.ಸದಸ್ಯ ಗಂಗಣ್ಣ , ಇಮ್ರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಈ ಸುದ್ದಿಗೆ ಸಂಬಂಧಿಸಿದ ಮತ್ತೊಷ್ಟು ಪೋಟೋ ಗಳು ಕೆಳಗಿವೆ.





             

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...