ವಿಷಯಕ್ಕೆ ಹೋಗಿ

ಜಯರಾಂ ಅವಧಿಯಲ್ಲಿ ಎಪಿಎಂಸಿ ಮುನ್ನಡೆ

          ಜಿಲ್ಲೆಯಲ್ಲಿ ಹುಳಿಯಾರು ಎಪಿಎಂಸಿ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾಗಿದ್ದು ಇದರ ಮುನ್ನೆಡೆಗೆ ಈ ಮಾರುಕಟ್ಟೆಯ ಕಾರ್ಯದರ್ಶಿಯಾಗಿದ್ದ ಜಯರಾಂ ಅವರ ಪರಿಶ್ರಮವೂ ಕಾರಣವಾಗಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಳ್ಳಿ ರಾಜ್ ಕುಮಾರ್ ಶ್ಲಾಘಿಸಿದರು.
         ಪಟ್ಟಣದ ಕೃಷಿಉತ್ಪನ್ನ ಮಾರುಕಟ್ಟೆಯಲ್ಲಿ ಆರೂವರೆ ವರ್ಷಗಳ ಕಾಲ ಕಾರ್ಯದರ್ಶಿಯಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿ, ತುಮಕೂರು ಎಪಿಎಂಸಿಗೆ ಜಯರಾಂ ವರ್ಗಾವಣೆಗೊಂಡಿರುವ ಹಿನ್ನಲೆಯಲ್ಲಿ ಗುರುವಾರದಂದು ಎಪಿಎಂಸಿ ಕಾರ್ಯಕಾರಿ ಮಂಡಳಿ ಹಾಗೂ ವರ್ತಕಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಹುಳಿಯಾರು ಎಪಿಎಂಸಿಯ ಕಾರ್ಯದರ್ಶಿಯಾದ ಜಯರಾಂ ಅವರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಾರ್ಯಕಾರಿಮಂಡಳಿ ಹಾಗೂ ವರ್ತಕರ ಸಂಘದವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
              ಮಾರುಕಟ್ಟೆಯಲ್ಲಿ ಚಿರಪರಿಚಿತರಾಗಿದ್ದ ಜಯರಾಂ ಅವರು ತಮ್ಮ ಅವಧಿಯಲ್ಲಿ ಇಲ್ಲಿನ ರೈತರು ಹಾಗೂ ವರ್ತಕರೊಂದಿಗೆ ಉತ್ತಮ ಭಾಂದವ್ಯಹೊಂದಿ ದಕ್ಷತೆಯಿಂದ ಸೇವೆ ನೀಡಿದ್ದು, ಮುಂದೆಯೂ ಸಹ ಜಿಲ್ಲಾ ಎಪಿಎಂಸಿಯಲ್ಲಿ ಇದೇರೀತಿ ಉತ್ತಮ ಸೇವೆ ನೀಡಿ ಮಾರುಕಟ್ಟೆಯನ್ನು ಮುನ್ನಡೆಸಲಿ ಎಂದರು.
                ಎಪಿಎಂಸಿ ಅಧ್ಯಕ್ಷ ಬಿ.ಸಣ್ಣಯ್ಯ ಮಾತನಾಡಿ, ಜಯರಾಂ ಅವರು ಮಾರುಕಟ್ಟೆಯಲ್ಲಿ ಎದುರಾಗುತ್ತಿದ್ದ ಸಮಸ್ಯೆಗಳ ಬಗ್ಗೆ ಹಾಗೂ ಯಾವ ರೀತಿ ಬಗೆಹರಿಸಬಹುದು ಎಂಬುದರ ಬಗ್ಗೆ ಕಾರ್ಯಕಾರಿ ಮಂಡಳಿಯವರಿಂದ ಚರ್ಚಿಸುತ್ತಿದ್ದರಲ್ಲದೆ, ಸಲಹೆ ಸೂಚನೆಗಳನ್ನು ನೀಡುತ್ತಿದ್ದರು. ಅವರು ಈ ಎಪಿಎಂಸಿ ತೊರೆದು ಹೋಗುತ್ತಿರುವುದು ನಮ್ಮೆಲ್ಲರಿಗೂ ಒಂದು ರೀತಿ ನಷ್ಟವಾದಂತಾಗಿದೆ ಎಂದರು.
          ಸನ್ಮಾನ ಸ್ವೀಕರಿಸಿದ ಕಾರ್ಯದರ್ಶಿ ಜಯರಾಂ ಮಾತನಾಡಿ, ನಾನು ಈ ಮಾರುಕಟ್ಟೆಗೆ ಬರುವ ಮೊದಲು ಭಯಪಟ್ಟಿದ್ದೆ ಆದರೆ ಇಲ್ಲಿಗೆ ಬಂದ ನಂತರ ಕಾರ್ಯಕಾರಿ ಮಂಡಳಿಯವರು, ಈ ಕ್ಷೇತ್ರದ ಶಾಸಕರುಗಳು, ವರ್ತಕರು,ರೈತರು ತಮ್ಮೊಂದಿಗೆ ಸಹಕಾರಯುತವಾಗಿ ನಡೆದುಕೊಂಡಿದ್ದು ಅವರೆಲ್ಲರಿಗೂ ತಾವು ಚಿರಋಣಿ ಎಂದರು. ನಬಾರ್ಡ್ ನಲ್ಲಿ ನಾಲ್ಕು ಕೌಂಟರ್ ತೆರೆಯುವ ಮೂಲಕ ಜಿಲ್ಲೆಯಲ್ಲೇ ಹೆಚ್ಚು ಕೊಬ್ಬರಿ ಖರೀದಿ ನಡೆಸಿರುವ ಹೆಗ್ಗಳಿಕೆ ಹುಳಿಯಾರು ಮಾರುಕಟ್ಟೆಗಿದ್ದು, ಅದು ತಮ್ಮ ಅವಧಿಯಲ್ಲಿ ಆಗಿರುವುದಕ್ಕೆ ತಮಗೆ ಹೆಮ್ಮೆಯಿದೆ ಎಂದರು.

.        ಈ ಸಂದರ್ಭದಲ್ಲಿ ಎಪಿಎಂಸಿ ಉಪಾಧ್ಯಕ್ಷ ವೈ.ಸಿ.ಸಿದ್ರಾಮಯ್ಯ,ಮಾಜಿಅಧ್ಯಕ್ಷ ಶಿವರಾಜ್, ನಿರ್ದೇಶಕರಾದ ಸಣ್ಣಕರಿಯಪ್ಪ,ರುದ್ರೇಶ್, ಸೋಮಶೇಖರಯ್ಯ, ಬಸವರಾಜು, ಈಶ್ವರಮೂರ್ತಿ , ವರ್ತರ ಸಂಘದ ಶಾಂತಣ್ಣ,ಎಲ್.ಆರ್.ಬಾಲಾಜಿ, ಎಂ.ಎಸ್.ಆರ್ ನಟರಾಜ್, ಸಹಕಾರ್ಯದರ್ಶಿ ನಾಗೇಂದ್ರಪ್ಪ ಸೇರಿದಂತೆ ಎಪಿಎಂಸಿ ನಿರ್ದೇಶಕರು,ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...