ವಿಷಯಕ್ಕೆ ಹೋಗಿ

ಜಯರಾಂ ಅವಧಿಯಲ್ಲಿ ಎಪಿಎಂಸಿ ಮುನ್ನಡೆ

          ಜಿಲ್ಲೆಯಲ್ಲಿ ಹುಳಿಯಾರು ಎಪಿಎಂಸಿ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾಗಿದ್ದು ಇದರ ಮುನ್ನೆಡೆಗೆ ಈ ಮಾರುಕಟ್ಟೆಯ ಕಾರ್ಯದರ್ಶಿಯಾಗಿದ್ದ ಜಯರಾಂ ಅವರ ಪರಿಶ್ರಮವೂ ಕಾರಣವಾಗಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಳ್ಳಿ ರಾಜ್ ಕುಮಾರ್ ಶ್ಲಾಘಿಸಿದರು.
         ಪಟ್ಟಣದ ಕೃಷಿಉತ್ಪನ್ನ ಮಾರುಕಟ್ಟೆಯಲ್ಲಿ ಆರೂವರೆ ವರ್ಷಗಳ ಕಾಲ ಕಾರ್ಯದರ್ಶಿಯಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿ, ತುಮಕೂರು ಎಪಿಎಂಸಿಗೆ ಜಯರಾಂ ವರ್ಗಾವಣೆಗೊಂಡಿರುವ ಹಿನ್ನಲೆಯಲ್ಲಿ ಗುರುವಾರದಂದು ಎಪಿಎಂಸಿ ಕಾರ್ಯಕಾರಿ ಮಂಡಳಿ ಹಾಗೂ ವರ್ತಕಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಹುಳಿಯಾರು ಎಪಿಎಂಸಿಯ ಕಾರ್ಯದರ್ಶಿಯಾದ ಜಯರಾಂ ಅವರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಾರ್ಯಕಾರಿಮಂಡಳಿ ಹಾಗೂ ವರ್ತಕರ ಸಂಘದವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
              ಮಾರುಕಟ್ಟೆಯಲ್ಲಿ ಚಿರಪರಿಚಿತರಾಗಿದ್ದ ಜಯರಾಂ ಅವರು ತಮ್ಮ ಅವಧಿಯಲ್ಲಿ ಇಲ್ಲಿನ ರೈತರು ಹಾಗೂ ವರ್ತಕರೊಂದಿಗೆ ಉತ್ತಮ ಭಾಂದವ್ಯಹೊಂದಿ ದಕ್ಷತೆಯಿಂದ ಸೇವೆ ನೀಡಿದ್ದು, ಮುಂದೆಯೂ ಸಹ ಜಿಲ್ಲಾ ಎಪಿಎಂಸಿಯಲ್ಲಿ ಇದೇರೀತಿ ಉತ್ತಮ ಸೇವೆ ನೀಡಿ ಮಾರುಕಟ್ಟೆಯನ್ನು ಮುನ್ನಡೆಸಲಿ ಎಂದರು.
                ಎಪಿಎಂಸಿ ಅಧ್ಯಕ್ಷ ಬಿ.ಸಣ್ಣಯ್ಯ ಮಾತನಾಡಿ, ಜಯರಾಂ ಅವರು ಮಾರುಕಟ್ಟೆಯಲ್ಲಿ ಎದುರಾಗುತ್ತಿದ್ದ ಸಮಸ್ಯೆಗಳ ಬಗ್ಗೆ ಹಾಗೂ ಯಾವ ರೀತಿ ಬಗೆಹರಿಸಬಹುದು ಎಂಬುದರ ಬಗ್ಗೆ ಕಾರ್ಯಕಾರಿ ಮಂಡಳಿಯವರಿಂದ ಚರ್ಚಿಸುತ್ತಿದ್ದರಲ್ಲದೆ, ಸಲಹೆ ಸೂಚನೆಗಳನ್ನು ನೀಡುತ್ತಿದ್ದರು. ಅವರು ಈ ಎಪಿಎಂಸಿ ತೊರೆದು ಹೋಗುತ್ತಿರುವುದು ನಮ್ಮೆಲ್ಲರಿಗೂ ಒಂದು ರೀತಿ ನಷ್ಟವಾದಂತಾಗಿದೆ ಎಂದರು.
          ಸನ್ಮಾನ ಸ್ವೀಕರಿಸಿದ ಕಾರ್ಯದರ್ಶಿ ಜಯರಾಂ ಮಾತನಾಡಿ, ನಾನು ಈ ಮಾರುಕಟ್ಟೆಗೆ ಬರುವ ಮೊದಲು ಭಯಪಟ್ಟಿದ್ದೆ ಆದರೆ ಇಲ್ಲಿಗೆ ಬಂದ ನಂತರ ಕಾರ್ಯಕಾರಿ ಮಂಡಳಿಯವರು, ಈ ಕ್ಷೇತ್ರದ ಶಾಸಕರುಗಳು, ವರ್ತಕರು,ರೈತರು ತಮ್ಮೊಂದಿಗೆ ಸಹಕಾರಯುತವಾಗಿ ನಡೆದುಕೊಂಡಿದ್ದು ಅವರೆಲ್ಲರಿಗೂ ತಾವು ಚಿರಋಣಿ ಎಂದರು. ನಬಾರ್ಡ್ ನಲ್ಲಿ ನಾಲ್ಕು ಕೌಂಟರ್ ತೆರೆಯುವ ಮೂಲಕ ಜಿಲ್ಲೆಯಲ್ಲೇ ಹೆಚ್ಚು ಕೊಬ್ಬರಿ ಖರೀದಿ ನಡೆಸಿರುವ ಹೆಗ್ಗಳಿಕೆ ಹುಳಿಯಾರು ಮಾರುಕಟ್ಟೆಗಿದ್ದು, ಅದು ತಮ್ಮ ಅವಧಿಯಲ್ಲಿ ಆಗಿರುವುದಕ್ಕೆ ತಮಗೆ ಹೆಮ್ಮೆಯಿದೆ ಎಂದರು.

.        ಈ ಸಂದರ್ಭದಲ್ಲಿ ಎಪಿಎಂಸಿ ಉಪಾಧ್ಯಕ್ಷ ವೈ.ಸಿ.ಸಿದ್ರಾಮಯ್ಯ,ಮಾಜಿಅಧ್ಯಕ್ಷ ಶಿವರಾಜ್, ನಿರ್ದೇಶಕರಾದ ಸಣ್ಣಕರಿಯಪ್ಪ,ರುದ್ರೇಶ್, ಸೋಮಶೇಖರಯ್ಯ, ಬಸವರಾಜು, ಈಶ್ವರಮೂರ್ತಿ , ವರ್ತರ ಸಂಘದ ಶಾಂತಣ್ಣ,ಎಲ್.ಆರ್.ಬಾಲಾಜಿ, ಎಂ.ಎಸ್.ಆರ್ ನಟರಾಜ್, ಸಹಕಾರ್ಯದರ್ಶಿ ನಾಗೇಂದ್ರಪ್ಪ ಸೇರಿದಂತೆ ಎಪಿಎಂಸಿ ನಿರ್ದೇಶಕರು,ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...