ವಿಷಯಕ್ಕೆ ಹೋಗಿ

ಬಾಣಂತಿ ಸಾವು : ವೈದ್ಯರ ವಿರುದ್ದ ಗ್ರಾಮಸ್ಥರ ಆಕ್ರೋಶ - ನರ್ಸಿಂಗ್ ಹೋಂ ನಲ್ಲೇ ಶವವಿಟ್ಟು ಪ್ರತಿಭಟನೆ

            ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ದಬ್ಬಗುಂಟೆಯ ಗ್ರಾಮಸ್ಥರು ಹಾಗೂ ಆಕೆಯ ಕುಟುಂಬದವರು ಗುರುವಾರ ಮಧ್ಯಾಹ್ನ ಪಟ್ಟಣದ ಸ್ಪಂದನ ನರ್ಸಿಂಗ್ ಹೋ ನಲ್ಲಿ ಬಾಣಂತಿಯ ಶವವಿಟ್ಟು ಪ್ರತಿಭಟಿಸಿದ್ದಾರೆ.
ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ನರ್ಸಿಂಗ್ ಹೋಂ ಮುಂದೆ ಗ್ರಾಮಸ್ಥರು ಜಮಾಯಿಸಿರುವುದು.

           ವಿವರ: ಸೌಂದರ್ಯ (20) ಎಂಬಾಕೆಯನ್ನು ಹೆರಿಗೆಂದು ಕಳೆದ 6 ರ ಬುಧವಾರ ರಾತ್ರಿ ಹತ್ತಿರದ ದಬ್ಬಗುಂಟೆ ಗ್ರಾಮದಿಂದ ಪಟ್ಟಣದ ಸ್ಪಂದನ ನರ್ಸಿಂಗ್ ಹೋಂ ಗೆ ಕರೆತರಲಾಗಿತ್ತು . ಹೆರಿಗೆ ನೋವುಬಾರದೆ ಹೆರಿಗೆ ಮಾಡುವುದಿಲ್ಲ ಎಂದು ಹೇಳಿದ ವೈದ್ಯರು ಗುರುವಾರ ಬೆಳಗಿನ ಜಾವ ಶಸ್ತ್ರಚಿಕಿತ್ಸೆ ಮೂಲಕ ಡಿಲಿವರಿ ಮಾಡಿ, ಹೆಣ್ಣುಮಗು ಹಾಗೂ ಬಾಣಂತಿಯನ್ನು ಆರು ದಿನಗಳಕಾಲ ನರ್ಸಿಂಗ್ ಹೋಂ ನಲ್ಲಿ ಇರಬೇಕೆಂದು ಹೇಳಿ ದಾಖಲು ಮಾಡಿಕೊಂಡು ಚಿಕಿತ್ಸೆ ಮುಂದುವರಿಸಿದ್ದಾರೆ. ಆದರೆ ಮೂರ್ನಾಲ್ಕು ದಿನದ ತರುವಾರ ಬಾಣಂತಿಗೆ ಸ್ಪಲ್ಪ ಕೆಮ್ಮು ಕಾಣಿಸಿಕೊಂಡಾಗ ಕಫಕಟ್ಟಿಕೊಂಡಿದೆ ಇದೇನು ಸಮಸ್ಯೆಯಲ್ಲ ಎಂದು ಹೇಳಿದ್ದಾರೆ. ಆದರೆ ನಿನ್ನೆ ಬುಧವಾರ ಬೆಳಿಗ್ಗೆ ಆಕೆಯ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿ ಖುದ್ದಾಗೆ ತಾವೆ ಅಂಬ್ಯೂಲೆನ್ಸ್ ವ್ಯವಸ್ಥೆ ಮಾಡಿ ಬೆಂಗಳೂರಿಗೆ ಕಳುಹಿಸಿದ್ದಾರೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ಈಗಾಗಲೇ ತಡವಾಗಿದೆ ಎಂದು ವಾಪಸ್ಸ್ ಕಳುಹಿಸಿದ್ದರಿಂದ ಕೂಡಲೇ ದಾಸರಹಳ್ಳಿ ಖಾಸಗಿ ನರ್ಸಿಂಗ್ ಹೋಂಗೆ ದಾಖಲು ಮಾಡಿತಾದರೂ ಮುಂಜಾನೆ ವೇಳೆಗೆ ಬಾಣಂತಿ ಅಸುನೀಗಿದ್ದಾರೆ.
         ಅಳಲು : ಮಗುವನ್ನು ಬಿಟ್ಟು ಮಡಿದ ಬಾಣಂತಿಯ ಸಾವಿಗೆ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು. ಚಿಕಿತ್ಸೆ ಸಾಧ್ಯವಿಲ್ಲವೆಂದು ಮುಂಚಿತವಾಗಿ ತಿಳಿಸಿದ್ದಲ್ಲಿ ಹೇಗಾದರು ಮಾಡಿ ಬದುಕಿಸಿಕೊಳ್ಳುತ್ತಿದ್ದೆವು. ಚಿಕಿತ್ಸೆಗೆ ನಿರ್ಲಕ್ಷ ತೋರಿದ ವೈದ್ಯರೇ ನನ್ನ ಮಗಳ ಸಾವಿಗೆ ಕಾರಣ ಎಂದು ಬಾಣಂತಿಯ ತಾಯಿ ಉಮಾದೇವಿ ಹಾಗೂ ಪತಿ ಮುನಿರಾಜ್ ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದ ದೃಶ್ಯ ಮನಕರಗುವಂತಿತ್ತು .
ಬಾಣಂತಿ ಸಾವಿಗೆ ಹುಳಿಯಾರಿನ ನರ್ಸಿಂಗ್ ಹೋಂ ನ ವೈದ್ಯರ ನಿರ್ಲಕ್ಷವೇ ಕಾರಣವೆಂದು ನರ್ಸಿಂಗ್ ಹೋಂ ಗೆ ಮತ್ತೆ ಬಾಣಂತಿ ಶವ ತಂದಿಟ್ಟಿರುವುದು.

        ಆಕ್ರೋಶ : ಬಾಣಂತಿಗೆ ಸರಿಯಾಗಿ ಚಿಕಿತ್ಸೆ ನೀಡದೆ ಸುಮ್ಮನೆ ಹಣದಾಸೆಗಾಗಿ ಆಕೆಯನ್ನು ನರ್ಸಿಂಗ್ ಹೋಂನಲ್ಲಿ ಆಡ್ಮಿಟ್ ಮಾಡಿಕೊಂಡು ಕೊನೆಗಳಿಗೆಯಲ್ಲಿ ಈ ರೀತಿ ಬೇರೆಡೆಗೆ ಕಳುಹಿಸಿರುವುದು ವೈದ್ಯರ ಬೇಜವಬ್ದಾರಿಯನ್ನು ತೋರಿಸುತ್ತದೆ .ಈ ಸಾವಿಗೆ ನರ್ಸಿಂಗ್ ಹೋಂ ನ ವೈದ್ಯರೇ ಕಾರಣರಾಗಿದ್ದು ಅದರ ಹೊಣೆಯನ್ನು ಅವರೆ ಹೊರಬೇಕು ಹಾಗೂ ನಮಗೆ ನ್ಯಾಯ ಸಿಗಬೇಕೆಂದು ಬಾಣಂತಿಯ ಕುಟುಂಬದವರು ಸೇರಿದಂತೆ ಗ್ರಾಮಸ್ಥರು ಪಟ್ಟು ಹಿಡಿದು ನರ್ಸಿಂಗ್ ಹೋಂ ಒಳಗೆ ಬಾಣಂತಿಯ ಶವವನಿಟ್ಟು ಪ್ರತಿಭಟಿಸಿದರು.

           ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ನರ್ಸಿಂಗ್ ಹೋಂ ವೈದ್ಯರು ಬಾರದೆ ಜವಬ್ದಾರಿ ಉತ್ತರ ನೀಡುವವರೂ ಕಾಣದಿದ್ದು ಪ್ರತಿಭಟನಾಕಾರರನ್ನು ಕೆರಳುವಂತೆ ಮಾಡಿತ್ತು , ಸಂಜೆಯಾದರೂ ಗ್ರಾಮಸ್ಥರು ಅಲ್ಲಿಂದ ಕದಲದೆ ಅಲ್ಲೇ ಮೊಕ್ಕಾಂ ಹೂಡಿದ್ದು , ಗ್ರಾಮಗಳಿಂದ ತಂಡವಾಗಿ ಜನರು ಬರುತ್ತಲೇ ಇದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಹೆಚ್ಚಿನ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ನರ್ಸಿಂಗ್ ಹೋಂನ ಸುತ್ತಾ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದ್ದು , ಸಂಜೆಯಾದರೂ ಶವವನ್ನು ನರ್ಸಿಂಗ್ ಹೋಂ ನಲ್ಲೇ ಬಿಡಲಾಗಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.