ವಿಷಯಕ್ಕೆ ಹೋಗಿ

ಬಾವುಟ ಮಾರಾಟ ಬಲು ಜೋರು

             ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು ಪಟ್ಟಣದ ಅಂಗಡಿಗಳಲ್ಲಿ ತ್ರಿವರ್ಣ ಧ್ವಜ ,ಬ್ಯಾಂಡ್,ಟೋಪಿ ,ಟೇಪ್ ಗಳ ಮಾರಾಟ ಭರದಿಂದ ಸಾಗಿದೆ.ಒಂದೆಡೆ ಶಾಲಾಮಕ್ಕಳು ಅಂಗಡಿಗಳ ಮುಂದೆ ಇವುಗಳನ್ನು ಕೊಳ್ಳಲು ಮುಗಿಬಿದಿದ್ದರೆ ಆಟೋ ರಿಕ್ಷಾ ,ವ್ಯಾನ್ ಡ್ರೈವರ್ ಗಳು ಸಹ ವಾಹನಕ್ಕೆ ಕಟ್ಟಲು ಯಾರಿಗೇನೂ ಕಮ್ಮಿಯಿಲ್ಲದಂತೆ ಬಾವುಟಗಳ ಕೊಳ್ಳಲು ಮುಂದಾಗಿದ್ದಾರೆ.
             ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಸಂದರ್ಭಗಳಲ್ಲಿ ಬಾವುಟಗಳನ್ನು ವಾಹನಗಳಿಗೆ ಕಟ್ಟಿ , ಬಾವುಟ ಚಿತ್ರವಿರುವ ಬ್ಯಾಡ್ಜ್ ದಿರುಸುಗಳಲ್ಲಿ ಧರಿಸಿಕೊಂಡರೆ ಒಂದುರೀತಿಯ ದೇಶಭಕ್ತಿಯ ಭಾವನೆ ಮೂಡುವುದಿದ್ದು ಅದಕ್ಕಾಗೆ ಈ ದಿನಗಳಲ್ಲಿ ರಾಷ್ಟ್ರಧ್ವಜ ಸೇರಿದಂತೆ ವಂದೇ ಮಾತರಂ, ಮೇರಾ ಭಾರತ್ ಮಹಾನ್ ಮುಂತಾದ ರಾಷ್ಟ್ರ ಪ್ರೇಮ ಮೆರೆಯುವ ಬ್ಯಾಡ್ಜ್‌ಗಳ ಬೇಡಿಕೆ ಹೆಚ್ಚು.
ಹುಳಿಯಾರಿನ ಅಂಗಡಿಯೊಂದರಲ್ಲಿ ಮಾರಾಟಕ್ಕೆ ಪ್ರದರ್ಶಿಸಿರುವ ತ್ರಿವರ್ಣ ಬಾವುಟ ಹಾಗೂ ಇನ್ನಿತರ ವಸ್ತುಗಳು .
            ಕಳೆದೆರಡು ವರ್ಷಗಳಿಂದ ಪ್ಲಾಸ್ಟಿಕ್ ಬಾವುಟ ಮಾರಾಟ ಮಾಡುವುದಕ್ಕೆ ನಿಷೇದ ಹೇರಿದ್ದರಿಂದ ಮಾರಾಟವನ್ನೆ ಸ್ಥಗಿತಗೊಳಿಸಿದ್ದಾಗಿ ಹೇಳುತ್ತಾರೆ ಉಮಾಸ್ಟೋರಿನ ಮಾಲಿಕ ಬದರೀಶ್.ಬಾವುಟ ಕೇಳಿ ಬರುವ ಮಕ್ಕಳೂ ಬಾವುಟ ದೊರೆಯದೆ ನಿರಾಶರಾಗಿ ಹೋಗುತ್ತಿದ್ದನ್ನು ಕಂಡು ಮನಸ್ಸು ಕರಗಿ ಮತ್ತೆ ಬಾವುಟ ಮಾರಾಟಕ್ಕೆ ತೊಡಗಿರುವುದಾಗಿ ಅವರು ಹೇಳುತ್ತಾರೆ.ಪ್ಲಾಸ್ಟಿಕ್ ಬಾವುಟಗಳನ್ನು ಮಕ್ಕಳು ಎಲ್ಲೆಂದರಲ್ಲಿ ಬಿಸಾಕಿ ಹೋಗುವದನ್ನು ಮನಗಂಡು ನಿಷೇದಿಸಿದ್ದರಿಂದ ಸಮಸ್ಯೆ ಬಗೆಹರಿಯಲಿಲ್ಲ. ಇದರಿಂದ ಮಕ್ಕಳ ಮನಸ್ಸು ಧ್ವಜಾರೋಹಣದ ನೆಮ್ಮದಿ ಕಾಣದೆ ಮುದುರುತ್ತದೆ.ವರ್ಷವಿಡಿ ಪ್ಲಾಸ್ಟಿಕ್ ಬಳಕೆ ಎಗ್ಗಿಲ್ಲದೆ ನಡೆಯುವಾಗ ಇದೊಂದು ದಿನ ಮಾತ್ರ ನಿಷೇಧಿಸುವುದರಿಂದ ಏನು ಪ್ರಯೋಜನ . ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಸಂದರ್ಭಗಳಲ್ಲಿ ಬಾವುಟ ಮಾರಾಟವಿದ್ದು ಉಳಿದಂತೆ ಜೋಪಾನಮಾಡಿಡುವುದೆ ದುಸ್ಥರದ ಕೆಲಸವಾಗುತ್ತದೆ ಎನುತ್ತಾರೆ .
ಬಾವುಟಗಳ ಮಾರಾಟ ವರ್ಷದಲ್ಲಿ ಎರಡು ಮೂರು ಬಾರಿ ಮಾತ್ರ ನಡೆಯುವುದಿದ್ದು ಅದೂ ಕೂಡ ಹತ್ತದಿನೈದು ದಿನಗಳು ಮಾತ್ರ ದೊರೆಯುತ್ತದೆ. ಬಟ್ಟೆ ಬಾವುಟ ದುಬಾರಿಯಾಗಿದ್ದು . ಖಾದಿ ಸೇರಿದಂತೆ ಕಾಟನ್, ಪಾಲಿಸ್ಟರ್ ನ ಎಲ್ಲಾ ಅಳತೆಯ,ನಿಗದಿಪಡಿಸಿದ ಬಾವುಟಗಳು ದೊರೆಯುವುದಾದರೂ ಕಡಿಮೆ ಬೆಲೆಯ ಪ್ಲಾಸ್ಟಿಕ್ ಬಾವುಟಗಳಿಗೆ ಬೇಡಿಕೆ ಹೆಚ್ಚು ಆಟೋರಿಕ್ಷಾ,ಬಸ್,ಮ್ಯಾಕ್ಸಿ ಕ್ಯಾಬ್,ಸೈಕಲ್,ಬೈಕ್ ಗಳಿಗೆ ಬಟ್ಟೆ ಬಾವುಟಗಳ ಬೇಡಿಕೆ ಕಂಡು ಬಂದರೆ ಶಾಲಾಮಕ್ಕಳು ಮಾತ್ರ ಪ್ಲಾಸ್ಟಿಕ್ ಬಾವುಟಕ್ಕೆ ಮೊರೆಹೋಗಿದ್ದಾರೆ.
             ನಿಷೇಧ:ಇಂತಹ ದಿನಗಳಂದು ಪ್ಲಾಸ್ಟಿಕ್ ಬಾವುಟಗಳ ಬಳಕೆಮಾಡಿ ನಂತರ ಎಲ್ಲೆಂದರಲ್ಲಿ ಎಸೆದು ಹೋಗುವ ಜನರ ಮನೋಭಾವದಿಂದಾಗಿ ರಾಷ್ಟ್ರಧ್ವಜಕ್ಕೆ ಅವಮಾನಮಾಡಿದಂತಾಗುತ್ತೆದೆ ಎನ್ನುವ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಇವುಗಳನ್ನು ಉಪಯೋಗಿಸದಂತೆ ನಿಷೆಧ ಹೇರಲಾಗಿತ್ತಾದರೂ ಬಳಕೆ ಮಾತ್ರ ದಿನೇ ದಿನೆ ಹೆಚ್ಚುತ್ತಲೇ ಇದೆ .
          ಇನ್ನೇನು ಸ್ವಾತಂತ್ರ್ಯ ದಿನಾಚರಣೆಗೆ ಎಣಿಕೆ ಪ್ರಾರಂಭವಾಗಿದ್ದು ಅಂಗಡಿಗಳವರು ಕೊನೆ ಕ್ಷಣದ ವ್ಯಾಪಾರದ ನೀರಿಕ್ಷೆಯಲ್ಲಿದ್ದಾರೆ.

ಬಾವುಟ ಕೊಳ್ಳುವುದರಿಂದ ದೇಶ ಪ್ರೇಮದ ಮನೋಭಾವ ಉಂಟಾಗುತ್ತದೆ , ನಾನು ಸೇರಿದಂತೆ ಆಟೋಚಾಲಕರ ಸಂಘದಿಂದ ಪ್ರತಿಯೊಬ್ಬರು ಆಟೋಗೆ ಬಾವುಟ ಕಟ್ಟಿ ಸ್ವತಂತ್ರ್ಯ ದಿನವನ್ನು ಆಚರಿಸುತ್ತಿದ್ದೆವೆಂದು ಅಭಿಮಾನದಿಂದ ನುಡಿಯುತ್ತಾರೆ ವಂದೆಮಾತರಂ ಆಟೋ ಚಾಲಕರ ಸಂಘದ ಆಟೋ ಚಾಲಕ ರಂಗಸ್ವಾಮಿ. 



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...