ವಿಷಯಕ್ಕೆ ಹೋಗಿ

ಬಾವುಟ ಮಾರಾಟ ಬಲು ಜೋರು

             ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು ಪಟ್ಟಣದ ಅಂಗಡಿಗಳಲ್ಲಿ ತ್ರಿವರ್ಣ ಧ್ವಜ ,ಬ್ಯಾಂಡ್,ಟೋಪಿ ,ಟೇಪ್ ಗಳ ಮಾರಾಟ ಭರದಿಂದ ಸಾಗಿದೆ.ಒಂದೆಡೆ ಶಾಲಾಮಕ್ಕಳು ಅಂಗಡಿಗಳ ಮುಂದೆ ಇವುಗಳನ್ನು ಕೊಳ್ಳಲು ಮುಗಿಬಿದಿದ್ದರೆ ಆಟೋ ರಿಕ್ಷಾ ,ವ್ಯಾನ್ ಡ್ರೈವರ್ ಗಳು ಸಹ ವಾಹನಕ್ಕೆ ಕಟ್ಟಲು ಯಾರಿಗೇನೂ ಕಮ್ಮಿಯಿಲ್ಲದಂತೆ ಬಾವುಟಗಳ ಕೊಳ್ಳಲು ಮುಂದಾಗಿದ್ದಾರೆ.
             ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಸಂದರ್ಭಗಳಲ್ಲಿ ಬಾವುಟಗಳನ್ನು ವಾಹನಗಳಿಗೆ ಕಟ್ಟಿ , ಬಾವುಟ ಚಿತ್ರವಿರುವ ಬ್ಯಾಡ್ಜ್ ದಿರುಸುಗಳಲ್ಲಿ ಧರಿಸಿಕೊಂಡರೆ ಒಂದುರೀತಿಯ ದೇಶಭಕ್ತಿಯ ಭಾವನೆ ಮೂಡುವುದಿದ್ದು ಅದಕ್ಕಾಗೆ ಈ ದಿನಗಳಲ್ಲಿ ರಾಷ್ಟ್ರಧ್ವಜ ಸೇರಿದಂತೆ ವಂದೇ ಮಾತರಂ, ಮೇರಾ ಭಾರತ್ ಮಹಾನ್ ಮುಂತಾದ ರಾಷ್ಟ್ರ ಪ್ರೇಮ ಮೆರೆಯುವ ಬ್ಯಾಡ್ಜ್‌ಗಳ ಬೇಡಿಕೆ ಹೆಚ್ಚು.
ಹುಳಿಯಾರಿನ ಅಂಗಡಿಯೊಂದರಲ್ಲಿ ಮಾರಾಟಕ್ಕೆ ಪ್ರದರ್ಶಿಸಿರುವ ತ್ರಿವರ್ಣ ಬಾವುಟ ಹಾಗೂ ಇನ್ನಿತರ ವಸ್ತುಗಳು .
            ಕಳೆದೆರಡು ವರ್ಷಗಳಿಂದ ಪ್ಲಾಸ್ಟಿಕ್ ಬಾವುಟ ಮಾರಾಟ ಮಾಡುವುದಕ್ಕೆ ನಿಷೇದ ಹೇರಿದ್ದರಿಂದ ಮಾರಾಟವನ್ನೆ ಸ್ಥಗಿತಗೊಳಿಸಿದ್ದಾಗಿ ಹೇಳುತ್ತಾರೆ ಉಮಾಸ್ಟೋರಿನ ಮಾಲಿಕ ಬದರೀಶ್.ಬಾವುಟ ಕೇಳಿ ಬರುವ ಮಕ್ಕಳೂ ಬಾವುಟ ದೊರೆಯದೆ ನಿರಾಶರಾಗಿ ಹೋಗುತ್ತಿದ್ದನ್ನು ಕಂಡು ಮನಸ್ಸು ಕರಗಿ ಮತ್ತೆ ಬಾವುಟ ಮಾರಾಟಕ್ಕೆ ತೊಡಗಿರುವುದಾಗಿ ಅವರು ಹೇಳುತ್ತಾರೆ.ಪ್ಲಾಸ್ಟಿಕ್ ಬಾವುಟಗಳನ್ನು ಮಕ್ಕಳು ಎಲ್ಲೆಂದರಲ್ಲಿ ಬಿಸಾಕಿ ಹೋಗುವದನ್ನು ಮನಗಂಡು ನಿಷೇದಿಸಿದ್ದರಿಂದ ಸಮಸ್ಯೆ ಬಗೆಹರಿಯಲಿಲ್ಲ. ಇದರಿಂದ ಮಕ್ಕಳ ಮನಸ್ಸು ಧ್ವಜಾರೋಹಣದ ನೆಮ್ಮದಿ ಕಾಣದೆ ಮುದುರುತ್ತದೆ.ವರ್ಷವಿಡಿ ಪ್ಲಾಸ್ಟಿಕ್ ಬಳಕೆ ಎಗ್ಗಿಲ್ಲದೆ ನಡೆಯುವಾಗ ಇದೊಂದು ದಿನ ಮಾತ್ರ ನಿಷೇಧಿಸುವುದರಿಂದ ಏನು ಪ್ರಯೋಜನ . ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಸಂದರ್ಭಗಳಲ್ಲಿ ಬಾವುಟ ಮಾರಾಟವಿದ್ದು ಉಳಿದಂತೆ ಜೋಪಾನಮಾಡಿಡುವುದೆ ದುಸ್ಥರದ ಕೆಲಸವಾಗುತ್ತದೆ ಎನುತ್ತಾರೆ .
ಬಾವುಟಗಳ ಮಾರಾಟ ವರ್ಷದಲ್ಲಿ ಎರಡು ಮೂರು ಬಾರಿ ಮಾತ್ರ ನಡೆಯುವುದಿದ್ದು ಅದೂ ಕೂಡ ಹತ್ತದಿನೈದು ದಿನಗಳು ಮಾತ್ರ ದೊರೆಯುತ್ತದೆ. ಬಟ್ಟೆ ಬಾವುಟ ದುಬಾರಿಯಾಗಿದ್ದು . ಖಾದಿ ಸೇರಿದಂತೆ ಕಾಟನ್, ಪಾಲಿಸ್ಟರ್ ನ ಎಲ್ಲಾ ಅಳತೆಯ,ನಿಗದಿಪಡಿಸಿದ ಬಾವುಟಗಳು ದೊರೆಯುವುದಾದರೂ ಕಡಿಮೆ ಬೆಲೆಯ ಪ್ಲಾಸ್ಟಿಕ್ ಬಾವುಟಗಳಿಗೆ ಬೇಡಿಕೆ ಹೆಚ್ಚು ಆಟೋರಿಕ್ಷಾ,ಬಸ್,ಮ್ಯಾಕ್ಸಿ ಕ್ಯಾಬ್,ಸೈಕಲ್,ಬೈಕ್ ಗಳಿಗೆ ಬಟ್ಟೆ ಬಾವುಟಗಳ ಬೇಡಿಕೆ ಕಂಡು ಬಂದರೆ ಶಾಲಾಮಕ್ಕಳು ಮಾತ್ರ ಪ್ಲಾಸ್ಟಿಕ್ ಬಾವುಟಕ್ಕೆ ಮೊರೆಹೋಗಿದ್ದಾರೆ.
             ನಿಷೇಧ:ಇಂತಹ ದಿನಗಳಂದು ಪ್ಲಾಸ್ಟಿಕ್ ಬಾವುಟಗಳ ಬಳಕೆಮಾಡಿ ನಂತರ ಎಲ್ಲೆಂದರಲ್ಲಿ ಎಸೆದು ಹೋಗುವ ಜನರ ಮನೋಭಾವದಿಂದಾಗಿ ರಾಷ್ಟ್ರಧ್ವಜಕ್ಕೆ ಅವಮಾನಮಾಡಿದಂತಾಗುತ್ತೆದೆ ಎನ್ನುವ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಇವುಗಳನ್ನು ಉಪಯೋಗಿಸದಂತೆ ನಿಷೆಧ ಹೇರಲಾಗಿತ್ತಾದರೂ ಬಳಕೆ ಮಾತ್ರ ದಿನೇ ದಿನೆ ಹೆಚ್ಚುತ್ತಲೇ ಇದೆ .
          ಇನ್ನೇನು ಸ್ವಾತಂತ್ರ್ಯ ದಿನಾಚರಣೆಗೆ ಎಣಿಕೆ ಪ್ರಾರಂಭವಾಗಿದ್ದು ಅಂಗಡಿಗಳವರು ಕೊನೆ ಕ್ಷಣದ ವ್ಯಾಪಾರದ ನೀರಿಕ್ಷೆಯಲ್ಲಿದ್ದಾರೆ.

ಬಾವುಟ ಕೊಳ್ಳುವುದರಿಂದ ದೇಶ ಪ್ರೇಮದ ಮನೋಭಾವ ಉಂಟಾಗುತ್ತದೆ , ನಾನು ಸೇರಿದಂತೆ ಆಟೋಚಾಲಕರ ಸಂಘದಿಂದ ಪ್ರತಿಯೊಬ್ಬರು ಆಟೋಗೆ ಬಾವುಟ ಕಟ್ಟಿ ಸ್ವತಂತ್ರ್ಯ ದಿನವನ್ನು ಆಚರಿಸುತ್ತಿದ್ದೆವೆಂದು ಅಭಿಮಾನದಿಂದ ನುಡಿಯುತ್ತಾರೆ ವಂದೆಮಾತರಂ ಆಟೋ ಚಾಲಕರ ಸಂಘದ ಆಟೋ ಚಾಲಕ ರಂಗಸ್ವಾಮಿ. 



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...