ವಿಷಯಕ್ಕೆ ಹೋಗಿ

ವರಮಹಾಲಕ್ಷ್ಮಿ ಹಬ್ಬ: ಹೂ ಹಣ್ಣು ದರ ಗಗನಕ್ಕೆ

        ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ದತೆ ನಡೆದಿದ್ದು ಗಗನಕ್ಕೇರಿರಿರುವ ದರಗಳ ನಡುವೆ ಹಬ್ಬವನ್ನು ಸ್ವಾಗತಿಸುವಂತಾಗಿದೆ. ಹಬ್ಬಕ್ಕಾಗಿ ಇಂದಿನ ಸಂತೆಯಲ್ಲಿ ಹಾಗೂ ಬಸ್ ನಿಲ್ದಾಣದ ಅಂಗಡಿಗಳಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗೆ ಜನಸಂದಣೆ ಕಂಡೂಬಂದರೂ ವ್ಯಾಪಾರಮಾತ್ರ ನಿರಾಶದಾಯಕವಾಗಿತ್ತು.


         ಹೂವು : ಕನಕಾಂಬರ ಮಾರೊಂದಕ್ಕೆ 30 ರೂಪಾಯಿದ್ದಿದ್ದು ಇಂದು 60 ರೂ. ದಾಟಿತ್ತು. ಕಾಕಡ 20 ರೂಪಾಯಿಯಿಂದ 60 ರೂಪಾಯಿಗೆ ಜಿಗಿದರೆ ,ಬಟನ್ಸ್ ಮಾರಿಗೆ 100 ರೂಪಾಯಿ,ಮಲ್ಲೆ ಹೂವಿಗೆ 40 ರೂಪಾಯಿ ಮುಟ್ಟಿದರೆ ,ಗುಲಾಬಿ ಒಂದಕ್ಕೆ 5ರೂ ,ಹಾರಗಳು 50 ರಿಂದ 150ರೂಗೆ ಮಾರಾಟವಾಯಿತು. ಲಕ್ಷ್ಮೀ ಹಬ್ಬಕ್ಕೆ ತಾವರೆ ಹಾಗೂ ಕೇದಗೆ ಬೇಕಾಗಿದ್ದು ಬೇರೆಡೆಯಿಂದ ಎಷ್ಟು ಕೊಟ್ಟಾದರೂ ಸರಿ ಬೇಕೆನ್ನುವವರಿದ್ದಾರೆ..ಶಾವಂತಿಗೆ ಬೆಲೆ ಕೈಗೆಟಕದಂತಿದ್ದು, ಮಾರೊಂದಕ್ಕೆ 300 ರೂವರೆಗೆ ಇದ್ದು ತಂದು ಮಾರುವ ಉಸಾಬರಿಯೇ ಬೇಡವಂದು ಕೈಬಿಟ್ಟಿದ್ದಾರೆ.
        ಹಣ್ಣು: ಹಣ್ಣುಗಳು ಬೆಲೆ ಸಹ ಏರಿಕೆಯಾಗಿದ್ದು ಸೇಬು ಕೆ.ಜಿ.ಗೆ 120 ರಿಂದ 200ರೂ. ಕಿತ್ತಳೆ 120, ದ್ರಾಕ್ಷಿ 100, ಮೊಸಂಬೆ 80,ಮರಸೇಬು 100 ರೂ ,ವಿಳ್ಯದಎಲೆ ಒಂದುಕಟ್ಟಿಗೆ 40ರೂ, ಪುಟ್ಟ ಬಾಳೆ ಕೆಜಿ. 60ರೂ ದಾಟಿ ಗ್ರಾಹಕರ ಜೇಬಿಗೆ ಭಾರವಾಗಿದೆ.
               ತರಕಾರಿ ಬೆಲೆಯಲ್ಲಿ ಮಾತ್ರ ಅಷ್ಟಾಗಿ ಏರಿಕೆ ಕಾಣದಿದ್ದು ಕ್ಯಾರೇಟ್, ಬೀನ್ಸ್ ಕೆಜಿಗೆ 60 ಆದರೆ ಟಮೋಟ 50 ಅಲೂಗೆಡ್ಡೆ 40, ಮೂಲಂಗಿ 30, ಬದನೆಕಾಯಿ 30ರೂಪಾಯಿ ಆಸುಪಾಸಿನಲ್ಲಿತ್ತು.
           ವರಮಹಾಲಕ್ಷ್ಮಿ ಹಬ್ಬ ಹೆಣ್ಣುಮಕ್ಕಳ ಹಬ್ಬವಾಗಿದ್ದು ಸಂತೆಯ ತುಂಬಾ ಮಹಿಳೆಯರೆ ಹೆಚ್ಚಾಗಿ ಕಂಡುಬಂದರು. ಬೆಲೆ ಎಷ್ಟಾದರೂ ಸರಿ ಶ್ರಾವಣದ ಎರಡನೇ ಶುಕ್ರವಾರ ಬರುವ ಲಕ್ಷ್ಮಿ ಹಬ್ಬದ ಆಚರಣೆ ಸಂಪ್ರದಾಯವಾಗಿದ್ದು ಬಿಡಲು ಸಾಧ್ಯವಿಲ್ಲದೆ ಆಚರಿಸಲೇಬೇಕೆಂಬ ಮನಸ್ಥಿತಿಯಲ್ಲಿರುವ ಗ್ರಾಹಕರು ಕೊಳ್ಳುವ ಪ್ರಮಾಣದಲ್ಲಿ ಇಳಿಕೆ ಮಾಡಿ ಬೇಕಾದ ಹಣ್ಣುಹೂಗಳನ್ನು ಕೊಂಡೊಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

             ಒಟ್ಟಾರೆ ಹಬ್ಬದ ಪ್ರಯುಕ್ತ ಸಂತೆ ಹಾಗೂ ಬಸ್ ನಿಲ್ದಾಣದಲ್ಲಿ ಜನಸಂದಣಿ ಕಂಡುಬಂತು.ಮುಂದೆ ಹಬ್ಬದ ಸಾಲುಸಾಲೇ ಬರಲಿದ್ದು ಈ ಹಬ್ಬದಲ್ಲೆ ಹೂವಿನ ಬೆಲೆ ವಿಪರೀತ ಏರಿಕೆಯಾಗಿದ್ದು ಮುಂದೇನು ಎನ್ನುವ ಮನೋಭಾವ ಗ್ರಾಹಕರಲ್ಲಿ ಕಂಡುಬಂತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.