ವಿಷಯಕ್ಕೆ ಹೋಗಿ

ನೆಟ್ ವರ್ಕ್ ಸಮಸ್ಯೆ : ಸಿಬ್ಬಂದಿ ಕೂಡಿಹಾಕಿ ಆಕ್ರೋಶ

       ತನ್ನ ಅಸಮರ್ಪಕ ಸೇವೆಯಿಂದ ಕಳೆದೆರಡು ತಿಂಗಳಿದ ಮೊಬೈಲ್ ಸಂಪರ್ಕ ಸೇವೆ ಕಡಿತಗೊಳಿಸಿದ ಎಂಟಿಎಸ್ ಕಂಪನಿಯ ವಿರುದ್ದ ಆಕ್ರೋಶಗೊಂಡ ಗ್ರಾಹಕರು ಸಿಬ್ಬಂದಿಯನ್ನು ಕೂಡಿಹಾಕಿ ಆಕ್ರೋಶವ್ಯಕ್ತಪಡಿಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆಯಿತು.
ಹುಳಿಯಾರು ಪಟ್ಟಣದ ಕರವೇ ಕಾರ್ಯಕರ್ತರು ಎಂಟಿಎಸ್ ಸಿಬ್ಬಂದಿಯನ್ನು ಮಂಗಳವಾರ ಕೂಡಿಹಾಕಿ ಟವರ್ ಎದುರು ಪ್ರತಿಭಟಿಸಿದರು
          ಪಟ್ಟಣದಲ್ಲಿ ಕಳೆದ ಆರೇಳು ವರ್ಷಗಳಿಂದ ಸೇವೆ ನೀಡುತ್ತಿರುವ ಎಂಟಿಎಸ್ ವ್ಯಾಪ್ತಿಯಲ್ಲಿ ಸಹಸ್ರಾರು ಗ್ರಾಹಕರಿದ್ದಾರೆ. ಆದರೆ ಕಳೆದೆರಡು ತಿಂಗಳಿಂದ ನೆಟ್ ವರ್ಕ್ ಸಮಸ್ಯೆ ಉಂಟಾಗಿದ್ದು ದಿನ ವಿಡಿ ಮೊಬೈಲ್ ಸಂಪರ್ಕ ಸಿಗದೆ ಗ್ರಾಹಕರು ಬೇಸತ್ತಿದ್ದರು. ಈ ಬಗ್ಗೆ ಹಲವಾರು ಬಾರಿ ಕಂಪನಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿ ಬೇಜವಬ್ದಾರಿ ಉತ್ತರ ನೀಡುತ್ತಿದ್ದರೆ ಹೊರತು ಸಮಸ್ಯೆ ಬಗೆಹರಿಸಲು ಮುಂದಾಗಿರಲಿಲ್ಲ. ಕಳದ ಹದಿನೈದು ದಿನದಿಂದ ಸಂಪೂರ್ಣ ಸಂಪರ್ಕ ಕಡಿತಗೊಂಡು ಗ್ರಾಹಕರು ಪರದಾಡುವಂತಾಗಿತ್ತು. ಕಂಪನಿಯ ವರ್ತನೆಯಿಂದ ಬೇಸತ್ತಿದ್ದ ಗ್ರಾಹಕರು ಟವರ್ ಬಳಿ ಆಗಮಿಸುವ ಸಿಬ್ಬಂದಿಯನ್ನು ಎದುರು ನೋಡುತ್ತಿದ್ದರು.
          ಮಂಗಳವಾರ ಟವರ್ ನಿರ್ವಹಣೆಗೆ ಸಂಜಯ್ ಪಾಲ್ , ಸಂತೋಷ್ ಎಂಬ ಇಬ್ಬರು ಸಿಬ್ಬಂದಿ ಆಗಮಿಸಿದ್ದನ್ನು ಕಂಡ ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಗಳ ನೇತೃತ್ವದಲ್ಲಿ ಆಗಮಿಸಿದ್ದ ಸಿಬ್ಬಂದಿಯನ್ನು ಟವರ್ ಕಾಂಪೌಡ್ ನಲ್ಲಿ ಕೂಡಿ ಹಾಕಿ ನಂತರ ಠಾಣೆಗೆ ಕರೆದೊಯ್ದು ತಮ್ಮ ಅಹವಾಲು ಸಮೇತ ದೂರು ನೀಡಿದರು. ಸಂಸ್ಥೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸುವವರೆಗೂ ಸಿಬ್ಬಂದಿಯನ್ನು ಆಚೆಗೆ ಬಿಡಕೂಡದೆಂದು ಒತ್ತಾಯಿಸಿದರು. ಸಮಸ್ಯೆ ಆಲಿಸಿದ ಪಿಎಸೈ ವೈ.ಘೋರ್ಪಡೆ ಎಂಟಿಎಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು ರಿಲಯನ್ಸ್ ನೆಟ್ ವರ್ಕ್ ನೊಂದಿಗೆ ನಮ್ಮ ಕಂಪನಿ ಒಪ್ಪಂದ ಮಾಡಿಕೊಂಡಿದ್ದು ಇದೀಗ ರಿಲಿಯನ್ಸ್ ಸೇವೆ ಸ್ಥಗಿತಗೊಳಿಸಿರುವುದರಿಂದ ತಾತ್ಕಾಲಿಕ ಸಮಸ್ಯೆ ಉಂಟಾಗಿದೆ. ಇನ್ನೊಂದು ತಿಂಗಳಲ್ಲಿ ನಮ್ಮದೆ ಟವರ್ ನಿರ್ಮಾಣ ಮಾಡುತ್ತಿದ್ದು ಅಲ್ಲಿಯವರೆಗೆ ಸೇವೆಯಲ್ಲಿ ಏರುಪೇರಾಗುವ ಸಂಭವವಿದ್ದು ಗ್ರಾಹಕರು ಸಹಕರಿಸಬೇಕೆಂದು ವಿನಂತಿಸಿಕೊಂಡರು.
ಗಾಹಕರ ಸೇವಾ ನ್ಯೂನ್ಯತೆ ಉಂಟುಮಾಡಿರುವ ಕಂಪನಿಯ ವರ್ತನೆಯ ವಿರುದ್ದ ಬೇಸರಿಸಿದ ಗ್ರಾಹಕರು ಸಮರ್ಪಕ ಸೇವೆ ನೀಡದಿದ್ದಲ್ಲಿ ಕಂಪನಿಯ ವಿರುದ್ದ ಬಾರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

         ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಕೋಳಿ ಶ್ರೀನಿವಾಸ್, ಚನ್ನಬಸವಯ್ಯ,ರಘು,ಅಂಜನ್ ಕುಮಾರ್,ರಂಗಸ್ವಾಮಿ,ನವೀನ್,ಹರೀಶ್, ಬಡಗಿರಾಜು,ವಕೀಲ ಮೋಹನ್ ಮೂರ್ತಿ,ಬೇಕರಿಪ್ರಕಾಶ್, ಜಗದೀಶ್, ಬಸವರಾಜು ರಾಘವೇಂದ್ರ ಸೇರಿದಂತೆ ಮತ್ತಿತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...