ವಿಷಯಕ್ಕೆ ಹೋಗಿ

ನೆಟ್ ವರ್ಕ್ ಸಮಸ್ಯೆ : ಸಿಬ್ಬಂದಿ ಕೂಡಿಹಾಕಿ ಆಕ್ರೋಶ

       ತನ್ನ ಅಸಮರ್ಪಕ ಸೇವೆಯಿಂದ ಕಳೆದೆರಡು ತಿಂಗಳಿದ ಮೊಬೈಲ್ ಸಂಪರ್ಕ ಸೇವೆ ಕಡಿತಗೊಳಿಸಿದ ಎಂಟಿಎಸ್ ಕಂಪನಿಯ ವಿರುದ್ದ ಆಕ್ರೋಶಗೊಂಡ ಗ್ರಾಹಕರು ಸಿಬ್ಬಂದಿಯನ್ನು ಕೂಡಿಹಾಕಿ ಆಕ್ರೋಶವ್ಯಕ್ತಪಡಿಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆಯಿತು.
ಹುಳಿಯಾರು ಪಟ್ಟಣದ ಕರವೇ ಕಾರ್ಯಕರ್ತರು ಎಂಟಿಎಸ್ ಸಿಬ್ಬಂದಿಯನ್ನು ಮಂಗಳವಾರ ಕೂಡಿಹಾಕಿ ಟವರ್ ಎದುರು ಪ್ರತಿಭಟಿಸಿದರು
          ಪಟ್ಟಣದಲ್ಲಿ ಕಳೆದ ಆರೇಳು ವರ್ಷಗಳಿಂದ ಸೇವೆ ನೀಡುತ್ತಿರುವ ಎಂಟಿಎಸ್ ವ್ಯಾಪ್ತಿಯಲ್ಲಿ ಸಹಸ್ರಾರು ಗ್ರಾಹಕರಿದ್ದಾರೆ. ಆದರೆ ಕಳೆದೆರಡು ತಿಂಗಳಿಂದ ನೆಟ್ ವರ್ಕ್ ಸಮಸ್ಯೆ ಉಂಟಾಗಿದ್ದು ದಿನ ವಿಡಿ ಮೊಬೈಲ್ ಸಂಪರ್ಕ ಸಿಗದೆ ಗ್ರಾಹಕರು ಬೇಸತ್ತಿದ್ದರು. ಈ ಬಗ್ಗೆ ಹಲವಾರು ಬಾರಿ ಕಂಪನಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿ ಬೇಜವಬ್ದಾರಿ ಉತ್ತರ ನೀಡುತ್ತಿದ್ದರೆ ಹೊರತು ಸಮಸ್ಯೆ ಬಗೆಹರಿಸಲು ಮುಂದಾಗಿರಲಿಲ್ಲ. ಕಳದ ಹದಿನೈದು ದಿನದಿಂದ ಸಂಪೂರ್ಣ ಸಂಪರ್ಕ ಕಡಿತಗೊಂಡು ಗ್ರಾಹಕರು ಪರದಾಡುವಂತಾಗಿತ್ತು. ಕಂಪನಿಯ ವರ್ತನೆಯಿಂದ ಬೇಸತ್ತಿದ್ದ ಗ್ರಾಹಕರು ಟವರ್ ಬಳಿ ಆಗಮಿಸುವ ಸಿಬ್ಬಂದಿಯನ್ನು ಎದುರು ನೋಡುತ್ತಿದ್ದರು.
          ಮಂಗಳವಾರ ಟವರ್ ನಿರ್ವಹಣೆಗೆ ಸಂಜಯ್ ಪಾಲ್ , ಸಂತೋಷ್ ಎಂಬ ಇಬ್ಬರು ಸಿಬ್ಬಂದಿ ಆಗಮಿಸಿದ್ದನ್ನು ಕಂಡ ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಗಳ ನೇತೃತ್ವದಲ್ಲಿ ಆಗಮಿಸಿದ್ದ ಸಿಬ್ಬಂದಿಯನ್ನು ಟವರ್ ಕಾಂಪೌಡ್ ನಲ್ಲಿ ಕೂಡಿ ಹಾಕಿ ನಂತರ ಠಾಣೆಗೆ ಕರೆದೊಯ್ದು ತಮ್ಮ ಅಹವಾಲು ಸಮೇತ ದೂರು ನೀಡಿದರು. ಸಂಸ್ಥೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸುವವರೆಗೂ ಸಿಬ್ಬಂದಿಯನ್ನು ಆಚೆಗೆ ಬಿಡಕೂಡದೆಂದು ಒತ್ತಾಯಿಸಿದರು. ಸಮಸ್ಯೆ ಆಲಿಸಿದ ಪಿಎಸೈ ವೈ.ಘೋರ್ಪಡೆ ಎಂಟಿಎಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು ರಿಲಯನ್ಸ್ ನೆಟ್ ವರ್ಕ್ ನೊಂದಿಗೆ ನಮ್ಮ ಕಂಪನಿ ಒಪ್ಪಂದ ಮಾಡಿಕೊಂಡಿದ್ದು ಇದೀಗ ರಿಲಿಯನ್ಸ್ ಸೇವೆ ಸ್ಥಗಿತಗೊಳಿಸಿರುವುದರಿಂದ ತಾತ್ಕಾಲಿಕ ಸಮಸ್ಯೆ ಉಂಟಾಗಿದೆ. ಇನ್ನೊಂದು ತಿಂಗಳಲ್ಲಿ ನಮ್ಮದೆ ಟವರ್ ನಿರ್ಮಾಣ ಮಾಡುತ್ತಿದ್ದು ಅಲ್ಲಿಯವರೆಗೆ ಸೇವೆಯಲ್ಲಿ ಏರುಪೇರಾಗುವ ಸಂಭವವಿದ್ದು ಗ್ರಾಹಕರು ಸಹಕರಿಸಬೇಕೆಂದು ವಿನಂತಿಸಿಕೊಂಡರು.
ಗಾಹಕರ ಸೇವಾ ನ್ಯೂನ್ಯತೆ ಉಂಟುಮಾಡಿರುವ ಕಂಪನಿಯ ವರ್ತನೆಯ ವಿರುದ್ದ ಬೇಸರಿಸಿದ ಗ್ರಾಹಕರು ಸಮರ್ಪಕ ಸೇವೆ ನೀಡದಿದ್ದಲ್ಲಿ ಕಂಪನಿಯ ವಿರುದ್ದ ಬಾರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

         ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಕೋಳಿ ಶ್ರೀನಿವಾಸ್, ಚನ್ನಬಸವಯ್ಯ,ರಘು,ಅಂಜನ್ ಕುಮಾರ್,ರಂಗಸ್ವಾಮಿ,ನವೀನ್,ಹರೀಶ್, ಬಡಗಿರಾಜು,ವಕೀಲ ಮೋಹನ್ ಮೂರ್ತಿ,ಬೇಕರಿಪ್ರಕಾಶ್, ಜಗದೀಶ್, ಬಸವರಾಜು ರಾಘವೇಂದ್ರ ಸೇರಿದಂತೆ ಮತ್ತಿತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.