ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಂಭ್ರಮದ ಸ್ವಾತಂತ್ಯ್ರೋತ್ಸವ

             ಹುಳಿಯಾರು  ಪಟ್ಟಣ ಸೇರಿದಂತೆ ಹೋಬಳಿಯ ಎಲ್ಲೆಡೆ 68 ನೇ ಸ್ವಾತಂತ್ರ್ಯೋತ್ಸವದ ಆಚರಣೆ ಶುಕ್ರವಾರ ಅದ್ದೂರಿಯಾಗಿ ನಡೆಯಿತು. ಎಂಪಿಎಸ್ ಶಾಲಾ ಆವರಣದಲ್ಲಿ ಗ್ರಾ.ಪಂ.ವತಿಯಿಂದ ಸಾರ್ವತ್ರಿಕವಾಗಿ ಆಯೋಜಿಸಿದ್ದ ಸ್ವಾತಂತ್ಯ್ರೋತ್ಸವದಲ್ಲಿ ಉಪತಹಶೀಲ್ದಾರ್ ಸತ್ಯನಾರಾಯಣ್ ಧ್ವಜಾರೋಹಣ ನೆರವೇರಿಸಿದರು.
ಹುಳಿಯಾರು ಗ್ರಾ.ಪಂ.ವತಿಯಿಂದ ಎಂಪಿಎಸ್ ಶಾಲಾವರಣಾದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಉಪತಹಶೀಲ್ದಾರ್ ಸತ್ಯನಾರಯಣ್ ಧ್ವಜಾರೋಹಣ ನೆರವೇರಿಸಿದರು.
             ನಂತರ ಮಾತನಾಡಿದ ಅವರು ತ್ಯಾಗ ಬಲಿದಾನಗಳಿಂದ ಪಡೆದ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳೂವ ಅಗತ್ಯವಿದ್ದು ಇದಕ್ಕಾಗಿ ಯುವಶಕ್ತಿಯ ಭಾಗವಹಿಸುವಿಕೆ ಅಗತ್ಯ ಬೇಕಾಗಿದೆ ಎಂದರು.
ನಮ್ಮದೇಶಕ್ಕೆ ಸ್ವಾತಂತ್ಯ್ರ ಬಂದು ವರ್ಷಗಳು ಉರುಳುತ್ತಿವೇ ಹೊರತು ಇಂದಿಗೂ ಆ ಸ್ವಾತಂತ್ರ್ಯ ಜನಸಾಮಾನ್ಯರಿಗೆ ಸಿಕ್ಕಿಲ್ಲ , ನಮ್ಮ ನಂತರ ಸ್ವಾತಂತ್ರ್ಯ ಪಡೆದ ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಇನ್ನೂ ಹೆಚ್ಚು ಅಭಿವೃದ್ದಿಯಾಗಬೇಕಿದೆ ಎಂದರು. ಪಟ್ಟಣದ ಎಲ್ಲಾ ಶಾಲಾಮಕ್ಕಳು ಒಂದೆಡೆ ಸೇರಿ ಈರೀತಿಯ ಕಾರ್ಯಕ್ರಮ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು ಇದು ನಿರಂತರವಾಗಿರಲ್ಲಿ ಎಂದು ಅಶಿಸಿದರು.
             ಧ್ವಜವಂದನೆ ಸ್ವೀಕರಿಸಿದ ಪಿಎಸೈ ಘೋರ್ಪಡೆ ಮಾತನಾಡಿ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಜಾತಿತಾರತಮ್ಯ , ಭ್ರಷ್ಟಾಚಾರ ಸೇರಿದಂತೆ ದೇಶಕ್ಕೆ ಮಾರಕವಾದ ಅನೇಕ ಚಟುವಟಿಕೆಗಳು ಮಿತಿ ಮೀರಿದ್ದು ಅವುಗಳನ್ನು ತೊಡೆದುಹಾಕುವಲ್ಲಿ ಯುವಜನಾಂಗ ಮುಂದಾಗಬೇಕೆಂದರು. ದೇಶದಲ್ಲಿರುವ ಎಲ್ಲಾ ಧರ್ಮದವರಲ್ಲಿ ನಾವೆಲ್ಲಾ ಭಾರತೀಯರು ಎಂಬ ವಿಶಾಲ ಮನೋಭಾವ ಮೂಡಬೇಕು ಹಾಗೂ ಸದಾಕಾಲ ದೇಶಸೇವೆಗೆ ಮುಂದಾಗಿರಬೇಕು ಎಂದರು.
              ಪಟ್ಟಣದ ಎಲ್ಲಾ ಶಾಲೆಯ ಮಕ್ಕಳು ಸಮವಸ್ತ್ರದಲ್ಲಿ ಪಥಸಂಚಲ ನಡೆಸಿ ಧ್ವಜವಂದನೆ ಸಲ್ಲಿಸಿದರಲ್ಲದೆ ದೇಶಭಕ್ತಿಗೀತೆಗಳಿಗೆ ಹೆಜ್ಜೆ ಹಾಕುವ ಮೂಲಕ ವಿವಿಧ ಸಾಂಸ್ಕೃತಿಕಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಅತ್ಯುತ್ತಮ ಪ್ರದರ್ಶನ ನೀಡಿದ ಶಾಲಾಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂಧರ್ಭದಲ್ಲಿ ಹಿರಿಯ ಸ್ವಾತಂತ್ಯ್ರ ಹೋರಾಟಗಾರರಿಗೆ ಸನ್ಮಾನ ಮಾಡಲಾಯಿತು.

             ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಅಧ್ಯಕ್ಷತೆವಹಿಸಿದ್ದು, ಸ್ವಾತಂತ್ರ್ಯ ಹೋರಾಟಗಾರ ಜಿ.ಎಸ್.ವೆಂಕಟಾಚಲಪತಿ ಶೆಟ್ರು, ಉಪಾಧ್ಯಕ್ಷೆ ಅಬೀದುನ್ನಿಸಾ, ತಾ.ಪಂ.ಅಧ್ಯಕ್ಷೆ ಲತಾ, ಜಿ.ಪಂ. ಸದಸ್ಯೆ ಮಂಜುಳಾ,ತಾ.ಪಂ.ಸದಸ್ಯೆ ಬೀಬೀಫಾತೀಮ, ಪಿಡಿಓ ಅಡವೀಶ್ ಕುಮಾರ್, ಗ್ರಾ.ಪಂ.ಸದಸ್ಯರಾದ ಅಶೋಕ್ ಬಾಬು, ರಂಗನಾಥ್, ಭೈರೇಶ್, ಅನ್ಸರ್ ಅಲಿ,ರಾಘವೇಂದ್ರ ,ಪುಟ್ಟರಾಜು, ಪುಟ್ಟಿಬಾಯಿ,ಗೀತಾ,ವೆಂಕಟಮ್ಮ,ದ್ರಾಕ್ಷಾಯಣಿಮ್ಮ ಸೇರಿದಂತೆ ಗ್ರಾ.ಪಂ.ಎಲ್ಲಾ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಯವರು ,ಶಾಲೆಗಳ ದೈಹಿಕ ಶಿಕ್ಷಕರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.













ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...