ವಿಷಯಕ್ಕೆ ಹೋಗಿ

ಬಿಜೆಪಿ ತೆಕ್ಕೆಗೆ ಹುಳಿಯಾರು ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷಗಾದಿ 2 ನೇ ಬಾರಿ ಸಣ್ಣಯ್ಯನಿಗೊಲಿದ ಎಪಿಎಂಸಿ ಅಧ್ಯಕ್ಷಗಾದಿ

           ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಈ ಬಾರಿಯೂ ಬಿಜೆಪಿಗೆ ಒಲಿದಿದ್ದು, ಈ ಸ್ಥಾನಗಳಿಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಸಣ್ಣಯ್ಯವರು ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಬಿಜೆಪಿಯವರೇ ಆದ ದ್ರಾಕ್ಷಾಯಿಣಿ ಅವರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಹುಳಿಯಾರು ಎಪಿಎಂಸಿ ಮಾರುಕಟ್ಟೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿಯ ಸಣ್ಣಯ್ಯ ಹಾಗೂ ದ್ರಾಕ್ಷಾಯಿಣಿ ಅವರನ್ನು ಬೆಂಬಲಿಗರು ಅಭಿನಂದಿಸಿದರು.
          ಸರ್ಕಾರದ ಆದೇಶದಂತೆ ಅಧಿಕಾರ ವಿಕೇಂದ್ರಿಕರಣದಂತೆ ಬಿಜೆಪಿ-ಕೆಜೆಪಿ ಹೊಂದಾಣಿಕೆಯಲ್ಲಿ ಅಧ್ಯಕ್ಷರ ಸ್ಥಾನ ಹಂಚಿಕೆ ಮಾಡಿಕೊಂಡು ಕಳೆದ ಐದು ತಿಂಗಳ ಹಿಂದೆ ಸಣ್ಣಯ್ಯ ಅವರು ಅಧ್ಯಕ್ಷರಾಗಿದ್ದರು. ಈಗ ಅವಧಿ ಮುಗಿದಿದ್ದ ಕಾರಣ ಈ ಚುನಾವಣೆ ನಡೆಸಿದ್ದು ಎಪಿಎಂಸಿಯ ಒಟ್ಟು 16 ಸದಸ್ಯರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸಣ್ಣಯ್ಯ ಹಾಗೂ ಕಾಂಗ್ರೆಸ್ ನಿಂದ ಸಿದ್ರಾಮಯ್ಯ ನಾಮಪತ್ರ ಸಲ್ಲಿಸಿದ್ದರು.
        ಕೂತೂಹಲಕಾರಿ ಚುನಾವಣೆ : ಈ ಬಾರಿಯ ಎಪಿಎಂಸಿ ಚುನಾವಣೆ ಬಾರಿ ಕುತೂಹಲಕಾರಿಯಾಗಿ ನಡೆದಿದ್ದು, ಈ ಹಿಂದೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ಸಾಮಾನ್ಯವಾಗಿ ಅವಿರೋಧವಾಗಿ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲ ಮಾತ್ರ 9 ಸದಸ್ಯರನ್ನು ಹೊಂದಿದ ಬಿಜೆಪಿಯೇ ಗೆಲ್ಲುವ ಭರವಸೆಯಿದ್ದರೂ ಕೂಡ ಕಾಂಗ್ರೆಸ್ ನ ಸಿದ್ರಾಮಯ್ಯ ಸ್ಪರ್ಧಿಸಿದ್ದು ತೀವ್ರ ಪೈಪೂಟಿಗೆ ಕಾರಣವಾಯಿತು. ಸಚಿವರ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿಯ ಸದಸ್ಯರನ್ನು ಸೆಳೆಯಬಹುದೆಂಬ ನಿರೀಕ್ಷೆಯಿಂದ ಚುನಾವಣೆ ರಂಗೇರಿತ್ತು. 11 ಗಂಟೆಗಿದ್ದ ಚುನಾವಣೆಗೆ ಎರಡು ಕಡೆಯ ಕಾರ್ಯಕರ್ತರು ಬೆಳಗಿನಿಂದಲೆ ಜಮಾಯಿಸಿದ್ದರು. ಕಡೆ ಕ್ಷಣದವರೆಗೂ ಸಿದ್ರಾಮಯ್ಯ ಹಾಗೂ ಸಣ್ಣಯ್ಯ ಇಬ್ಬರಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬುದು ಕೂತೂಹಲ ಕೆರಳಿಸಿತ್ತು.
       ಕಾಂಗ್ರೆಸ್ ನ ಸಿದ್ರಾಮಯ್ಯ ಅವರು ಅಧ್ಯಕ್ಷರಾಗಬೇಕು ಎಂಬ ನಿಲುವಿನಿಂದ ಉಳಿದ ಸದಸ್ಯರನ್ನು ತಮ್ಮತ್ತ ಸೆಳೆಯುವ ಯತ್ನ ಮಾಡಿದ್ದರು ಎಂಬ ಮಾತುಗಳು ಒಂದೆಡೆ ಕೇಳಿಬಂದರೆ, ಮತ್ತೊಂದೆಡೆ ಬಿಜೆಪಿಯ ನಾಯಕರು ತಮ್ಮ ಬೆಂಬಲಿತ ಸದಸ್ಯರಿಗೆ ಸಣ್ಣಯ್ಯನವರಿಗೆ ಮತ ಚಲಾಯಿಸುವಂತೆ ಹುಕುಂ ಹೊರಡಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು.
         ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಕಾಮಾಕ್ಷಮ್ಮ ಆಗಮಿಸಿದ್ದು ಅವರ ಸಮಕ್ಷಮದಲ್ಲಿ ಮತದಾನ ನಡೆದು ಸಣ್ಣಯ್ಯ ಅವರಿಗೆ 9 ಮತಗಳು ಹಾಗೂ ಸಿದ್ರಾಮಯ್ಯನಿಗೆ 6 ಮತಗಳು ಲಭಿಸಿದ್ದು, 1 ಮತ ತಿರಸ್ಕೃತವಾಗಿ ಅಂತಿಮವಾಗಿ ಹೆಚ್ಚು ಮತಪಡೆದ ಸಣ್ಣಯ್ಯ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಯಿತು.
       ಪೊಲೀಸ್ ಬಂದೋಬಸ್ತ್ : ಇದೇ ಮೊದಲ ಬಾರಿಗೆ ಬಾರಿ ಸಂಖ್ಯೆಯ ಪೊಲೀಸರು ಎಪಿಎಂಸಿಗೆ ಜಮಾಯಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಚುನಾವಣೆಯಲ್ಲಿ ಯಾವುದೇ ರೀತಿಯ ಅವಗಡಗಳು ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಸರ್ಕಲ್ ಇಸ್ಪೆಕ್ಟರ್ ಜಯಕುಮಾರ್ ಹಾಗೂ ಪಿಎಸೈ ಘೋರ್ಪಡೆ ಖುದ್ದು ಹಾಜರಿದ್ದರು. ಅಲ್ಲದೆ ಚುನಾವಣೆ ಮುಗಿಯುವ ತನಕವೂ ಸಹ ಸದಸ್ಯರ ಮೊಬೈಲ್ ಗಳನ್ನು ನಿಷೇಧಿಸಿದ್ದರು.

         ಗೆಲುವಿನ ನಗೆ ಬೀರಿದ ಸಣ್ಣಯ್ಯ ಅವರನ್ನು ಮಾಜಿಶಾಸಕ ಕೆ.ಎಸ್.ಕಿರಣ್ ಕುಮಾರ್ , ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್, ತಾ.ಪಂ.ಸದಸ್ಯರಾದ ಕೆಂಕೆರೆ ನವೀನ್, ವಸಂತಯ್ಯ, ಶಶಿಧರ್, ಸೀತಾರಾಮ್, ಎಪಿಎಂಸಿ ಸದಸ್ಯರಾದ ಸಿಂಗದಹಳ್ಳಿ ರಾಜ್ ಕುಮಾರ್, ಶಿವರಾಜ್,ಶಾಂತಣ್ಣ, ಜಿಲ್ಲಾ ಹಾಲುಉತ್ಪಾದಕರ ಸಂಘದ ಹಳೆಮನೆ ಶಿವನಂಜಪ್ಪ ಸೇರಿದಂತೆ ಎಪಿಎಂಸಿ ಸದಸ್ಯರು, ಬಿಜೆಪಿಯ ಅನೇಕ ಕಾರ್ಯಕರ್ತರು ಆಗಮಿಸಿ ಅಭಿನಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...