ವಿಷಯಕ್ಕೆ ಹೋಗಿ

ಬಿಜೆಪಿ ತೆಕ್ಕೆಗೆ ಹುಳಿಯಾರು ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷಗಾದಿ 2 ನೇ ಬಾರಿ ಸಣ್ಣಯ್ಯನಿಗೊಲಿದ ಎಪಿಎಂಸಿ ಅಧ್ಯಕ್ಷಗಾದಿ

           ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಈ ಬಾರಿಯೂ ಬಿಜೆಪಿಗೆ ಒಲಿದಿದ್ದು, ಈ ಸ್ಥಾನಗಳಿಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಸಣ್ಣಯ್ಯವರು ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಬಿಜೆಪಿಯವರೇ ಆದ ದ್ರಾಕ್ಷಾಯಿಣಿ ಅವರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಹುಳಿಯಾರು ಎಪಿಎಂಸಿ ಮಾರುಕಟ್ಟೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿಯ ಸಣ್ಣಯ್ಯ ಹಾಗೂ ದ್ರಾಕ್ಷಾಯಿಣಿ ಅವರನ್ನು ಬೆಂಬಲಿಗರು ಅಭಿನಂದಿಸಿದರು.
          ಸರ್ಕಾರದ ಆದೇಶದಂತೆ ಅಧಿಕಾರ ವಿಕೇಂದ್ರಿಕರಣದಂತೆ ಬಿಜೆಪಿ-ಕೆಜೆಪಿ ಹೊಂದಾಣಿಕೆಯಲ್ಲಿ ಅಧ್ಯಕ್ಷರ ಸ್ಥಾನ ಹಂಚಿಕೆ ಮಾಡಿಕೊಂಡು ಕಳೆದ ಐದು ತಿಂಗಳ ಹಿಂದೆ ಸಣ್ಣಯ್ಯ ಅವರು ಅಧ್ಯಕ್ಷರಾಗಿದ್ದರು. ಈಗ ಅವಧಿ ಮುಗಿದಿದ್ದ ಕಾರಣ ಈ ಚುನಾವಣೆ ನಡೆಸಿದ್ದು ಎಪಿಎಂಸಿಯ ಒಟ್ಟು 16 ಸದಸ್ಯರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸಣ್ಣಯ್ಯ ಹಾಗೂ ಕಾಂಗ್ರೆಸ್ ನಿಂದ ಸಿದ್ರಾಮಯ್ಯ ನಾಮಪತ್ರ ಸಲ್ಲಿಸಿದ್ದರು.
        ಕೂತೂಹಲಕಾರಿ ಚುನಾವಣೆ : ಈ ಬಾರಿಯ ಎಪಿಎಂಸಿ ಚುನಾವಣೆ ಬಾರಿ ಕುತೂಹಲಕಾರಿಯಾಗಿ ನಡೆದಿದ್ದು, ಈ ಹಿಂದೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ಸಾಮಾನ್ಯವಾಗಿ ಅವಿರೋಧವಾಗಿ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲ ಮಾತ್ರ 9 ಸದಸ್ಯರನ್ನು ಹೊಂದಿದ ಬಿಜೆಪಿಯೇ ಗೆಲ್ಲುವ ಭರವಸೆಯಿದ್ದರೂ ಕೂಡ ಕಾಂಗ್ರೆಸ್ ನ ಸಿದ್ರಾಮಯ್ಯ ಸ್ಪರ್ಧಿಸಿದ್ದು ತೀವ್ರ ಪೈಪೂಟಿಗೆ ಕಾರಣವಾಯಿತು. ಸಚಿವರ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿಯ ಸದಸ್ಯರನ್ನು ಸೆಳೆಯಬಹುದೆಂಬ ನಿರೀಕ್ಷೆಯಿಂದ ಚುನಾವಣೆ ರಂಗೇರಿತ್ತು. 11 ಗಂಟೆಗಿದ್ದ ಚುನಾವಣೆಗೆ ಎರಡು ಕಡೆಯ ಕಾರ್ಯಕರ್ತರು ಬೆಳಗಿನಿಂದಲೆ ಜಮಾಯಿಸಿದ್ದರು. ಕಡೆ ಕ್ಷಣದವರೆಗೂ ಸಿದ್ರಾಮಯ್ಯ ಹಾಗೂ ಸಣ್ಣಯ್ಯ ಇಬ್ಬರಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬುದು ಕೂತೂಹಲ ಕೆರಳಿಸಿತ್ತು.
       ಕಾಂಗ್ರೆಸ್ ನ ಸಿದ್ರಾಮಯ್ಯ ಅವರು ಅಧ್ಯಕ್ಷರಾಗಬೇಕು ಎಂಬ ನಿಲುವಿನಿಂದ ಉಳಿದ ಸದಸ್ಯರನ್ನು ತಮ್ಮತ್ತ ಸೆಳೆಯುವ ಯತ್ನ ಮಾಡಿದ್ದರು ಎಂಬ ಮಾತುಗಳು ಒಂದೆಡೆ ಕೇಳಿಬಂದರೆ, ಮತ್ತೊಂದೆಡೆ ಬಿಜೆಪಿಯ ನಾಯಕರು ತಮ್ಮ ಬೆಂಬಲಿತ ಸದಸ್ಯರಿಗೆ ಸಣ್ಣಯ್ಯನವರಿಗೆ ಮತ ಚಲಾಯಿಸುವಂತೆ ಹುಕುಂ ಹೊರಡಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು.
         ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಕಾಮಾಕ್ಷಮ್ಮ ಆಗಮಿಸಿದ್ದು ಅವರ ಸಮಕ್ಷಮದಲ್ಲಿ ಮತದಾನ ನಡೆದು ಸಣ್ಣಯ್ಯ ಅವರಿಗೆ 9 ಮತಗಳು ಹಾಗೂ ಸಿದ್ರಾಮಯ್ಯನಿಗೆ 6 ಮತಗಳು ಲಭಿಸಿದ್ದು, 1 ಮತ ತಿರಸ್ಕೃತವಾಗಿ ಅಂತಿಮವಾಗಿ ಹೆಚ್ಚು ಮತಪಡೆದ ಸಣ್ಣಯ್ಯ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಯಿತು.
       ಪೊಲೀಸ್ ಬಂದೋಬಸ್ತ್ : ಇದೇ ಮೊದಲ ಬಾರಿಗೆ ಬಾರಿ ಸಂಖ್ಯೆಯ ಪೊಲೀಸರು ಎಪಿಎಂಸಿಗೆ ಜಮಾಯಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಚುನಾವಣೆಯಲ್ಲಿ ಯಾವುದೇ ರೀತಿಯ ಅವಗಡಗಳು ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಸರ್ಕಲ್ ಇಸ್ಪೆಕ್ಟರ್ ಜಯಕುಮಾರ್ ಹಾಗೂ ಪಿಎಸೈ ಘೋರ್ಪಡೆ ಖುದ್ದು ಹಾಜರಿದ್ದರು. ಅಲ್ಲದೆ ಚುನಾವಣೆ ಮುಗಿಯುವ ತನಕವೂ ಸಹ ಸದಸ್ಯರ ಮೊಬೈಲ್ ಗಳನ್ನು ನಿಷೇಧಿಸಿದ್ದರು.

         ಗೆಲುವಿನ ನಗೆ ಬೀರಿದ ಸಣ್ಣಯ್ಯ ಅವರನ್ನು ಮಾಜಿಶಾಸಕ ಕೆ.ಎಸ್.ಕಿರಣ್ ಕುಮಾರ್ , ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್, ತಾ.ಪಂ.ಸದಸ್ಯರಾದ ಕೆಂಕೆರೆ ನವೀನ್, ವಸಂತಯ್ಯ, ಶಶಿಧರ್, ಸೀತಾರಾಮ್, ಎಪಿಎಂಸಿ ಸದಸ್ಯರಾದ ಸಿಂಗದಹಳ್ಳಿ ರಾಜ್ ಕುಮಾರ್, ಶಿವರಾಜ್,ಶಾಂತಣ್ಣ, ಜಿಲ್ಲಾ ಹಾಲುಉತ್ಪಾದಕರ ಸಂಘದ ಹಳೆಮನೆ ಶಿವನಂಜಪ್ಪ ಸೇರಿದಂತೆ ಎಪಿಎಂಸಿ ಸದಸ್ಯರು, ಬಿಜೆಪಿಯ ಅನೇಕ ಕಾರ್ಯಕರ್ತರು ಆಗಮಿಸಿ ಅಭಿನಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...