ವಿಷಯಕ್ಕೆ ಹೋಗಿ

ವಿದ್ಯುತ್ ಶಾಕ್ 6 ಮೇಕೆ ಸಾವು

ಪಟ್ಟಣದ ಬಿ.ಎಚ್.ರಸ್ತೆಯ ಎಸ್.ಬಿ.ಐ ಬ್ಯಾಂಕ್ ಎದುರಿನ ಖಾಸಗಿ ಕಂಪನಿಗೆ ಸೇರಿದ ಟವರ್ ನಲ್ಲಿ ವಿದ್ಯುತ್ ಶಾಕ್ ನಿಂದಾಗಿ 6 ಮೇಕೆಗಳು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಕರಿಯಪ್ಪ ಎಂಬುವರಿಗೆ ಸೇರಿದ್ದ ಮೇಕೆಗಳು ಮೇಯುತ್ತಾ ಮೇಯುತ್ತಾ ಟವರ್ ಬಳಿ ಹೋಗಿದ್ದು ಅಲ್ಲಿ ಟವರ್ ಗೆ ವಿದ್ಯುತ್ ಸಂಪರ್ಕ ಪಡೆದಿದ್ದ ವೈರ್ ಗಳು ಅಸ್ಥವ್ಯಸ್ಥವಾಗಿ ಬಿದ್ದಿದ್ದು, ಮೇಕೆಗಳು ಆ ವೈರ್ ಗಳನ್ನು ತುಳಿದು ಸಾವನಪ್ಪಿವೆ.
ಹುಳಿಯಾರು ಪಟ್ಟಣದ ಟಾಟಾ ಡೆಕೋಮ ಟವರ್ ನ ಆವರಣದಲ್ಲಿ ವಿದ್ಯುತ್ ಶಾಕ್ ನಿಂದ ಸಾವನಪ್ಪಿದ ಮೇಕೆಗಳು.
ಟವರ್ ಇರುವ ಜಾಗದಲ್ಲಿ ಯಾವುದೇ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ, ಟವರ್ ಸುತ್ತಾ ಸರಿಯಾದ ಬೇಲಿಕೂಡ ಇಲ್ಲ , ವೈರ್ ಗಳೆಲ್ಲಾ ಕಿತ್ತು ಬಿದ್ದಿದ್ದರೂ ಸಹ ಅದನ್ನು ಕೂಡಲೇ ಸರಿ ಮಾಡಿಸದೆ ಹಾಗೆಯೇ ಬಿಟ್ಟು ತಮಗಿಷ್ಟ ಬಂದಾಗ ಸರಿ ಮಾಡಿಸುತ್ತಿದ್ದಾರೆ ಈ ಬಗ್ಗೆ ಹಲವಾರು ಬಾರಿ ಟವರ್ ನವರಿಗೆ ಎಚ್ಚರಿಸಿದ್ದರೂ ಸಹ ಗಮನ ಹರಿಸಿಲ್ಲವೆಂದು ಗ್ರಾ.ಪಂ. ಸದಸ್ಯ ಧನುಷ್ ರಂಗನಾಥ ಹಾಗೂ ಯುವಕಾಂಗ್ರೆಸ್ ನ ವೆಂಕಟೇಶ್ ಹರಿಹಾಯ್ದರು. ವೆಂಕಟಾಛಲಿ ಶೆಟ್ರು, ಪ್ರಭಾಕರ್,ನಾಗೇಶ್ ಎಂಬುವರು ಈ ಟವರ್ ಗೆ ಸ್ಥಳ ನೀಡಿದ್ದು ,ಪಟ್ಟಣದ ಹೃದಯಭಾಗದಲ್ಲಿರುವ ಟವರ್ ನಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇವುಗಳನ್ನು ಬೇರೆಡೆ ತೆರವುಗೊಳಿಸುವಂತೆ ಜಮೀನುದಾದರಿಗೂ ಹಾಗೂ ಕಂಪನಿಯವರಿಗೂ ಗ್ರಾ.ಪಂ.ನಿಂದ ನೋಟಿಸ್ ನೀಡಿದ್ದರೂ ಸಹ ಯಾರು ಈ ಬಗ್ಗೆ ಗಮನ ಮಾಡಿಲ್ಲ. ಅಲ್ಲದೆ ಪ್ರತಿ ವರ್ಷ ಪಂಚಾಯ್ತಿಯಿಂದ ಪಡೆಯಬೇಕಾದ ಅನುಮತಿಪತ್ರವನ್ನು ಸಹ ನವೀಕರಿಸದೆ ಹಾಗೆಯೇ ಮುಂದುವರೆಯುತ್ತಿದ್ದಾರೆ ಎಂದರು.

ಈಗ 6 ಮೇಕೆಗಳು ಸತ್ತು ಸುಮಾರು 60 ಸಾವಿರ ನಷ್ಟವಾಗಿದ್ದು ಅದಕ್ಕೆ ತಕ್ಕ ಪರಿಹಾರ ನೀಡುವಂತೆ ಹಾಗೂ ಶೀಘ್ರವೇ ಟವರ್ ಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ. ಇಲ್ಲವಾದರೆ ಪಂಚಾಯ್ತಿಯಿಂದಲೇ ಅವುಗಳ ತೆರವು ಕಾರ್ಯ ನಡೆಸುವುದಾಗಿ ಎಚ್ಚರಿಸಿದ್ದಾರೆ. ಸ್ಥಳಕ್ಕೆ ಎಸ್.ಓ ಉಮೇಶ್ ನಾಯಕ್ ಆಗಮಿಸಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...