ಹುಳಿಯಾರು ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಜನಜಂಗುಳಿಯೇ ಸೇರಿತ್ತು. ಅವರೆಲ್ಲಾ ಹಬ್ಬ ಮುಗಿಸಿ ವಾಪಸ್ಸ್ ಬೆಂಗಳೂರಿಗೆ ಹೋಗಲು ಹೊರಟು ನಿಂತವರಾಗಿದ್ದರು. ಬೆಂಗಳೂರು ಕಡೆ ಹೋಗಲು ಯಾವ ಬಸ್ ಬಂದರೂ ಸಹ ಅವೆಲ್ಲಾ ಪುಲ್ ರಶ್ ಆಗಿ ಕಾಲಿಡುವುದಕ್ಕು ಆಸ್ಪದವಿರಲಿಲ್ಲ.
![]() |
ಹುಳಿಯಾರು ಬಸ್ ನಿಲ್ದಾಣಕ್ಕೆ ಬಂದ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹತ್ತಲು ಮುಗಿಬೀಳುತ್ತಿರುವ ಪ್ರಯಾಣಿಕರು.
|
|
ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಸಾಕಷ್ಟು ಮಂದಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವವರೇ ಆಗಿದ್ದು ಗೌರಿ-ಗಣೇಶ ಹಬ್ಬಕ್ಕೆಂದು ತಂತಮ್ಮ ಊರುಗಳಿಗೆ ಬಂದಿದ್ದರು. ಹಬ್ಬ ಹಾಗೂ ಭಾನುವಾರದ ರಜೆ ಮುಗಿಸಿ ಸೋಮವಾರದಂದು ವಾಪಸ್ಸ್ ಕೆಲಸಕ್ಕೆ ಹಾಜರಾಗಲು ಬಸ್ ನಲ್ಲಿ ತೆರಳಲು ಬಂದಿದ್ದರಿಂದ ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ಬಸ್ ನಿಲ್ದಾಣ ಗಿಜುಗುಟ್ಟುತ್ತಿತ್ತು. ಎಲ್ಲಾ ಬಸ್ಸುಗಳು ಹೊಸದುರ್ಗದಿಂದ ಬರುತ್ತಿದ್ದವಾದ್ದರಿಂದ ಹುಳಿಯಾರಿಗೆ ಬರುವಷ್ಟರಲ್ಲೇ ಬಸ್ ಸೀಟ್ ಗಳೆಲ್ಲಾ ತುಂಬಿದ್ದು ಪ್ರಯಾಣಿಕರು ಪರದಾಡುವಂತಾಗಿತ್ತು. ಬರುತ್ತಿದ್ದ ಬಸ್ ಗೆ ಒಮ್ಮೆಲೆ ಎಲ್ಲಾ ಪ್ರಯಾಣಿಕರು ನುಗ್ಗುತ್ತಿದ್ದರಿಂದ ಬಸ್ ಹತ್ತುವುದೆ ತ್ರಾಸದಾಯಕವಾಗಿತ್ತು. ಸರ್ಕಾರಿ ಬಸ್ ಜೊತೆಗೆ ಇಂದು ಹೆಚ್ಚುವರಿಯಾಗಿ ಖಾಸಗಿ ಬಸ್ ಗಳು ಸಂಚರಿಸಿದ್ದರೂ ಕೂಡ ಎಲ್ಲಾ ಬಸ್ ಗಳು ಪುಲ್ ರಶ್ ಆಗಿದ್ದು ನಿಂತುಕೊಂಡು ಹೋಗಲು ಕೂಡ ಆಗದಷ್ಟು ಕಿಕ್ಕಿರಿದು ಪ್ರಯಾಣಿಕರು ತುಂಬಿದ್ದರು. ಇದರಿಂದ ಬೆಂಗಳುರಿಗೆ ಹೋಗುವುದು ಬಲು ಪ್ರಯಾಸವಾಗಿಬಿಟ್ಟಿತ್ತು.
ಬಸ್,ಲಾರಿ,ಕಾರು ಸೇರಿದಂತೆ ಯಾವುದೇ ವಾಹನ ಬಂದರೂ ಸರಿ ಪ್ರಯಾಣಿಸಲು ತಯಾರಿದ್ದ ಜನರಿಂದ ಖಾಸಗಿ ಬಸ್ ನವರು ಇದೇ ಸಮಯವೆಂದು ಮಾಮೂಲಿ 110 ರೂ ಬದಲಿಗೆ 150 ರೂ ನಂತೆ ಹೆಚ್ಚುವರಿಯಾಗಿ ಹಣವಸೂಲಿ ಮಾಡುತ್ತಿದ್ದರು ಸಹ ಇದ್ಯಾವುದರ ಬಗ್ಗೆ ತಲೆಕೆಡಿಸಿಕೊಳ್ಳದ ಜನ ಹೇಗಾದರೂ ಸರಿ ಬೆಂಗಳುರು ತಲುಪಬೇಕೆಂದು ಧಾವಂತದಲ್ಲಿದ್ದರು.
ಒಟ್ಟಾರೆ ಪ್ರತಿ ವರ್ಷ ಗೌರಿ ಗಣೇಶ ಹಬ್ಬ ಹಾಗೂ ಆಯುಧ ಪೂಜೆ ಸಮಯದಲ್ಲಿ ಪ್ರಯಾಣಿಕ ಈ ಸಮಸ್ಯೆ ಬಗ್ಗೆ ಸಾರಿಗೆ ಇಲಾಖೆಯವರಿಗೆ ಅರಿವಿದ್ದರು ಸಹ ಹೆಚ್ಚುವರಿ ಬಸ್ ಗಳನ್ನು ಬಿಡದೆ ಇರುವುದು ಪ್ರಯಾಣಿಕರಲ್ಲಿ ಇಲಾಖೆಯ ಕಾರ್ಯವೈಖರಿ ಬಗ್ಗೆ ಹರಿಹಾಯುತ್ತಿದ್ದರು .ಇನ್ನಾದರೂ ಸಾರಿಗೆ ಇಲಾಖೆಯವರು ಹಬ್ಬದ ಸಮಯದಲ್ಲಾದರೂ ಬೆಂಗಳೂರು - ಹುಳಿಯಾರು ವಿಶೇಷ ಬಸ್ ಗಳನ್ನು ಬಿಟ್ಟರೆ ಈ ಭಾಗದಕ್ಕೆ ಜನಕ್ಕೆ ಹೆಚ್ಚು ಅನುಕೂಲಕರವಾಗಲಿದೆ.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ