ವಿಷಯಕ್ಕೆ ಹೋಗಿ

ಒಂದು ಛಾಯಾಚಿತ್ರದ ಹಿಂದೆ ಸಾವಿರಾರು ಪದಗಳಿರುತ್ತವೆ : ತಿಮ್ಮೇಗೌಡ

         ಛಾಯಾಗ್ರಾಹಕ ತನ್ನ ಕಲ್ಪನೆಗನುಣವಾಗಿ ತೆಗೆಯುವ ಛಾಯಾಚಿತ್ರದ ಹಿಂದೆ ಸಾವಿರಾರು ಪದಗಳಿರುತ್ತವೆ .ವೀಕ್ಷಿಸಿದವರು ಅವರವರ ಮನೋಭಿಲಾಷೆಗೆ ತಕ್ಕಂತೆ ಅರ್ಥಯಿಸಿಕೊಳ್ಳುತ್ತಾರೆ. ಒಂದು ಪುಟದಲ್ಲಿ ಹೇಳುವುದನ್ನು ಕೇವಲ ಒಂದು ಪೋಟೋದಲ್ಲಿ ಅರ್ಥೈಸಬಹುದು ಎಂದು ಛಾಯಾಗ್ರಾಹಕ ದಂಡಿನಶಿವರ ತಿಮ್ಮೇಗೌಡ ತಿಳಿಸಿದರು.
          ಹುಳಿಯಾರು ಹೋಬಳಿ ಛಾಯಾಚಿತ್ರ ಗ್ರಾಹಕರ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ 175 ನೇ ವರ್ಷದ ಛಾಯಾಚಿತ್ರಗ್ರಾಹಕರ ದಿನದ ಅಂಗವಾಗಿ ಪಟ್ಟಣದ ಗಣಪತಿ ದೇವಾಲಯದಲ್ಲಿ ಅಯೋಜಿಸಿದ್ದ ಮಕ್ಕಳ ಭಾವಚಿತ್ರ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಳಿಯಾರಿನಲ್ಲಿ ನಡೆದ ಮಕ್ಕಳ ಭಾವಚಿತ್ರ ಸ್ಪರ್ಧೆ ಉದ್ಘಾಟಿಸಿದ ಛಾಯಾಗ್ರಾಹಕ ದಂಡಿನಶಿವರ ತಿಮ್ಮೇಗೌಡ ಮಾತನಾಡುತ್ತಿರುವುದು.
          ಛಾಯಾಚಿತ್ರ ತೆಗೆಯಲು ಪ್ರಸ್ತುತ ಅತ್ಯಾಧುನಿಕ ತಂತ್ರಜ್ಞಾನವಿದ್ದು ಸುಲಭವಾಗಿ ಚಿತ್ರಗಳನ್ನು ಚಿತ್ರಿಸಬಹುದಾಗಿದೆ. ಆದರೆ ಕಳೆದ ಕೆಲ ವರ್ಷ ಹಿಂದಕ್ಕೆ ನಾವು ತಿರುಗಿ ನೋಡಿದರೆ ಅಂದು ಕಪ್ಪು-ಬಿಳುಪು ಪೋಟೋ ಪ್ರಿಂಟ್ ಹಾಕುವುದು ಸಹ ಸಾಹಸದ ಕೆಲಸವಾಗಿತ್ತು ಅಂದಿನ ಛಾಯಾಗ್ರಾಹಕರ ಉತೃಷ್ಟ ಸೃಜನಶೀಲತೆಯನ್ನು ಮೆಚ್ಚಲೇಬೇಕು ಎಂದರು. ನಾವು ಅಳಿದರೂ ಸಹ ನಾವು ತೆಗೆದ ಪೋಟೋಗಳು ಉಳಿಯುತ್ತದಲ್ಲದೆ , ಇದರಿಂದ ನಮ್ಮ ಹೆಸರು ಸಹ ಉಳಿಯುತ್ತದೆ ಆ ನಿಟ್ಟಿನಲ್ಲಿ ಛಾಯಾಗ್ರಾಹಕರು ಸದಾ ಉತ್ತಮ ಚಿತ್ರಗಳನ್ನು ಚಿತ್ರಿಸಿಸುವಲ್ಲಿ ಮುಂದಾಗಿ ಎಂದು ಕಿವಿಮಾತು ಹೇಳಿದರು. ಇಡಿ ಜಿಲ್ಲೆಯಲ್ಲಿ ಗಮನಿಸಿದರೆ ಹಿರಿಯ ಛಾಯಾಗ್ರಾಹಕರು ಹುಳಿಯಾರಿನಲ್ಲಿರುವುದು ಶ್ಲಾಘನೀಯ ಎಂದರು.
          ಈ ಬಾರಿ ಐ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ದಂಡಿನಶಿವರದ ಚೇತನ್ ಕುಮಾರ್ ಮಾತನಾಡಿ, ನಾವು ಪ್ರೇಕ್ಷಣೀಯ ಸ್ಥಳಗಳಲ್ಲಿ ಹಿಂದಿನ ಕಾಲದವರು ಚಿತ್ರಿಸಿದ ಚಿತ್ರಗಳನ್ನು ನೋಡಿ ಅಂದಿನ ಜೀವನದ ಬಗ್ಗೆ ತಿಳಿಯುವ ರೀತಿ ಇಂದು ಚಿತ್ರಿಸುವ ಚಿತ್ರಗಳು ಮುಂದಿನ ಪೀಳಿಗೆಯವರಿಗೆ ಮಾರ್ಗದರ್ಶಕವಾಗಲಿದೆ . ಛಾಯಾಚಿತ್ರದಲ್ಲಿ ವ್ಯಕ್ತವಾಗುವ ಭಾವನೆ ಎಲ್ಲಾ ಭಾಷಿಕರಿಗೂ ಅರ್ಥವಾಗುವಂತದ್ದಾಗಿದ್ದು , ಅದನ್ನು ಯಾರೂ ಅರ್ಥೈಸುವ ಅವಶ್ಯಕತೆಯಿಲ್ಲ ಎಂದರು.

         ಸಂಘದ ಅಧ್ಯಕ್ಷ ರಾಜುಬಡಗಿ ಅಧ್ಯಕ್ಷತೆವಹಿಸಿದ್ದು, ತಾಂಡಾವಾಚಾರ್,ದುರ್ಗರಾಜ್, ಚಂದ್ರಶೇಖರ್,ಸುದರ್ಶನ್, ಈಶ್ವರ್,ರವಿ,ಯತೀಶ್, ಮೋಹನ್,ಕೆಂಕೆರೆಮಂಜು, ರಘು, ಓಂಕಾರ್ , ಮಹೇಶ್, ಶಿವು ಇನ್ನಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವನ್ಯಪ್ರಾಣಿ ಛಾಯಾಗ್ರಾಹ ಹಾಗೂ ರಾಜ್ಯಪ್ರಶಸ್ತಿ ವಿಜೇತ ಸೀಗೇಬಾಗಿ ವರದರಾಜ್ ಅವರನ್ನು ಸನ್ಮಾನಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...