ವಿಷಯಕ್ಕೆ ಹೋಗಿ

ಹುಳಿಯಾರು ಕೆರೆ ಒತ್ತುವರಿ ತೆರವಿಗೆ ಕ್ಷಣಗಣನೆ ಪುನರ್ವಸತಿ ಭಾಗ್ಯ ಇದೆಯೋ , ಇಲ್ಲವೋ ಎಂಬುದು ಯಕ್ಷಪ್ರಶ್ನೆ

           ತಾಲ್ಲೂಕು ಆಡಳಿತದಿಂದ ಹುಳಿಯಾರು ಅಮಾನಿಕೆರೆ ಒತ್ತುವರಿ ಜಾಗದ ಸರ್ವೆಕಾರ್ಯ ಮುಗಿದಿದ್ದು ತೆರವುಗೊಳಿಸಲು ಕ್ಷಣಗಣನೆ ನಡೆದಿದೆ. ಹಿಂದೆ ಹಲವು ಬಾರಿ ಕಾರ್ಯಾಚರಣೆ ನಡೆದಿದ್ದರೂ ಸಹ ರಾಜಕೀಯ ಒತ್ತಡದ ನಡುವೆ ಕೈಬಿಡಲಾಗಿತ್ತು. ಸದ್ಯ ಕೋರ್ಟ್ ಆದೇಶದಂತೆ ಅತಿಕ್ರಮ ತೆರವುಗೊಳಿಸಲು ಮುಂದಾಗಿರುವ ತಾಲ್ಲೂಕು ಆಡಳಿತ ಈ ನಿಟ್ಟಿನಲ್ಲಿ ಕೆರೆ ಅಂಗಳದ ಸಮೀಕ್ಷೆ ಪೂರ್ಣಗೊಳಿಸಿ ಒತ್ತುವರಿ ಜಾಗವನ್ನು ಗುರುತು ಮಾಡಿದ್ದಾರೆ.
ಹುಳಿಯಾರಿನ ಶಂಕರಪುರಬಡಾವಣೆಯ ಕೆರೆ ಅಂಗಳದಲ್ಲಿನ ನಿರ್ಗತಿಕರ ಗುಡಿಸಲುಗಳು.
            ಹುಳಿಯಾರು ಕೆರೆ ಸಾಕಷ್ಟು ವಿಸ್ತೀರ್ಣವಾಗಿದ್ದು ಕೇಶವಾಪುರ, ವಳಗೆರೆಹಳ್ಳಿ,ಶಂಕರಪುರ ಹಾಗೂ ಬಸ್ ನಿಲ್ದಾಣದ ಸೇರಿದಂತೆ ಒಟ್ಟು 45 ಎಕರೆ ಪ್ರದೇಶದಷ್ಟು ಜಾಗ ಜಮೀನು , ಇಟ್ಟಿಗೆ ಫ್ಯಾಕ್ಟರಿ,ಮನೆ ಹಾಗೂ ಅಂಗಡಿದಾರರಿಂದ ಒತ್ತುವರಿಯಾಗಿದೆ.ಸಮೀಕ್ಷೆಯಲ್ಲಿ 199 ಮಂದಿಯ ಪಟ್ಟಿ ಮಾಡಲಾಗಿದ್ದು ಅದರಲ್ಲಿ 90 ಹಾಗೂ 86 ಅಂಗಡಿಗಳು ಸೇರಿದೆ.
        ಗುಡಿಸಲುವಾಸಿಗಳು: ಸುಮಾರು 90ಕ್ಕೂ ಅಧಿಕ ಕುಟುಂಬಗಳು ಕಳೆದ ಹತ್ತಾರು ವರ್ಷಗಳಿಂದ ಮನೆಕಟ್ಟಿಕೊಂಡು ಇಲ್ಲಿ ಬೀಡುಬಿಟ್ಟಿದ್ದು, ಬಹುತೇಕರು ನಿರ್ಗತಿಕರು ಹಾಗೂ ಕೂಲಿನಾಲಿ ಮಾಡುವ ಗುಡಿಸಲು ವಾಸಿಗಳೇ ಜನರೇ ಆಗಿದ್ದು, ನಿತ್ಯ ಕೂಲಿಮಾಡಿ ಅದರಿಂದ ಬರುವ ಪುಡಿಗಾಸಿನಿಂದ ಜೀವನ ನಡೆಸುತ್ತಿದ್ದಾರೆ,ಇವರಿಗೆ ಸ್ವಂತ ಜಮೀನಾಗಲಿ, ಖಾಯಂ ಕೆಲಸಗಳಾಗಲಿ,ವರಮಾನ ಬರುವ ಯಾವುದೇ ಮೂಲವೂ ಸಹ ಇಲ್ಲದ ಇವರು ಕೆರೆ ಅಂಗಳದಲ್ಲಿ ಗುಡಿಸಲು ಕಟ್ಟಿಕೊಂಡು ಹೇಗೋ ಜೀವನ ನಡೆಸುತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ಅವರ ಹೆಸರಿದ್ದು ಚುನಾವಣೆಗಳಲ್ಲಿ ತಮ್ಮ ಮತವನ್ನು ಸಹ ಚಲಾಯಿಸಿದ್ದಾರೆ. ಇದೀಗ ಕೆರೆ ಒತ್ತುವರಿ ನಡೆಯುತ್ತಿರುವುದರಿಂದ ಈ ಎಲ್ಲರೂ ತಮ್ಮ ಮನೆ,ಗುಡಿಸಲುಗಳನ್ನು ಕಳೆದುಕೊಂಡು ನಿರ್ಗತಿಕರಾಗುವಂತ ಪರಿಸ್ಥಿತಿ ಎದುರಾಗಿದೆ.
         ಶಂಕರಪುರ 6 ನೇ ಬ್ಲಾಕ್ ನ ನಿವಾಸಿಗಳೆಂದು ಪರಿಗಣಿಸುವ ಇವರನ್ನು ಇಲ್ಲಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆಯೇ ಹೊರತು ಇವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲ. ಅಲ್ಲದೆ ಇದುವರೆಗೂ ಇಲ್ಲಿನ ನಿವಾಸಿಗಳಿಗೆ ಬೇರೆಡೆ ನಿವೇಶನವನ್ನು ನೀಡುವ ಯಾವುದೇ ವ್ಯವಸ್ಥೆ ಮಾಡಿಲ್ಲ. ಆ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಗಮನಗೊಡದಿರುವುದು ಇಲ್ಲಿನ ನಿವಾಸಿಗಳಲ್ಲಿ ಬೇಸರವನ್ನುಂಟುಮಾಡಿದೆ.
      ಅನೇಕ ವರ್ಷದಿಂದ ಪಟ್ಟಣದಲ್ಲೇ ವಾಸವಾಗಿರುವ ಇಲ್ಲಿನ ನಿವಾಸಿಗಳು ತೆರವು ಕಾರ್ಯಾಚರಣೆಯಿಂದ ಈಗಿರುವ ತಮ್ಮ ಸೂರನ್ನು ಕಳೆದುಕೊಂಡು ಬೀದಿಗೆ ಬಂದಂತಾಗುತ್ತದೆ. ನಿರಾಶ್ರಿತರಾಗುವ ಇವರ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಲಿದ್ದು, ಸರ್ಕಾರ ಇವರಿಗೆ ಬೇರೆಡೆ ಎಲ್ಲಾದರೂ ಜಾಗ ಕಲ್ಪಿಸಿಕೊಡುವ ಮೂಲಕ ಅವರಿಗೆ ನೆರವಿನ ಹಸ್ತ ಚಾಚುತದೋ ಇಲ್ಲವೋ ಎಂಬುದು ತಿಳಿಯದಾಗಿದೆ
        ನಿವಾಸಿಗಳಲ್ಲಿ ಆತಂಕ : ಕೆರೆ ಸರ್ವೆಕಾರ್ಯ ಆಗಿದೆ ಇನ್ನೇನು ನಮ್ಮ ಮನೆಗಳನ್ನು ತೆರವು ಮಾಡುತ್ತಾರೆ ಮುಂದೆ ನಾವು ಎಲ್ಲಿಗೆ ಹೋಗುವುದು, ಏನು ಮಾಡುವುದು ಎಂಬ ದುಗುಡ ಇಲ್ಲಿನ ನಿವಾಸಿಗಳನ್ನು ಕಾಡುತ್ತಿದೆ. ಈ ಹಿಂದೆಯೇ ಹಲವಾರು ಬಾರಿ ನಿವೇಶನಕ್ಕಾಗಿ ಹಾಗೂ ಹಕ್ಕುಪತ್ರಕ್ಕಾಗಿ ಅರ್ಜಿಸಲುತ್ತಲೇ ಬಂದಿದ್ದರೂ ಯಾರೊಬ್ಬರೂ ಕಿವಿಗೊಡದಿದ್ದಿದ್ದು , ಇವರ ಅನಧಿಕೃತ ಗುಡಿಸಲು ವಾಸಿಗಳೆಂದೆ ಗುರ್ತಿಸುವಂತಾಯಿತು. ಸದ್ಯ ಯಾವ ಕ್ಷಣದಲ್ಲಿ ಜೆಸಿಬಿ ಯಂತ್ರಗಳು ನಮ್ಮ ಮನೆ ಕೆಡವಲಿವೆ ಎಂಬ ಆತಂಕದಲ್ಲಿರುವ ಇವರ ಕೂಗಿಗೆ ಸರ್ಕಾರ ಸ್ಪಂದಿಸುತ್ತದೆಯೋ ಎಂದು ಕಾದುನೋಡಬೇಕಿದೆ.
       ವ್ಯಾಪಾರಸ್ಥರಿಗೆ ದುಗುಡ : ತಾಲ್ಲೂಕು ಆಡಳಿತ ಬಸ್ ನಿಲ್ದಾಣದಲ್ಲಿ ತಲೆ ಎತ್ತಿರುವ 86 ಅಂಗಡಿಗಳ ಪಟ್ಟಿ ಮಾಡಿದ್ದು, ತೆರವಿಗೆ ಮುಂದಾದರೆ ಮುಂದೇನು ಎಂಬ ಪ್ರಶ್ನೆ ಅಂಗಡಿದಾರರಿಗೆ ಕಾಡಿದೆ.
ಕೆರೆ ಪ್ರದೇಶದಲ್ಲಿ ಕಟ್ಟಡ ಕಟ್ಟಿ ವಹಿವಾಟು ನಡೆಸುತ್ತಿರುವ ಅಂಗಡಿದಾರರನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದ್ದು ಎಲ್ಲೆಡೆ ಕಾರ್ಯಾಚರಣೆ ನಡೆಯುತ್ತಿರುವುದರಿಂದ ನಾವೂ ಕೂಡ ಜಾಗ ಕಳೆದುಕೊಳ್ಳುತ್ತೇವೆ ಎಂಬುದು ಒತ್ತುವರಿದಾರರಿಗೆ ಮನದಟ್ಟಾಗಿದ್ದು , ಮುಂದೇನು ಎಂಬ ಚಿಂತೆ ಆವರಿಸಿದೆ.
        ಒಟ್ಟಾರೆ ಒತ್ತುವರಿ ತೆರವಿಗೆ ಮುಂದಾಗಿರುವ ತಾಲ್ಲೂಕು ಆಡಳಿತದ ಕ್ರಮ ಎಲ್ಲರನ್ನೂ ಆತಂಕಕ್ಕೀಡುಮಾಡಿದೆ.ಮತ ಕೇಳಲು ಬರುವ ಜನಪ್ರತಿನಿಧಿಗಳು ಈ ಸಮಯದಲ್ಲಿ ಬಂದು ನಮಗೆ ಒತ್ತಾಸೆಯಾಗಿ ನಿಲ್ಲಲ್ಲಿ ಎಂಬುದು ಇವರ ಮನದಾಳದ ಮಾತಾಗಿದೆ.
---------------------------------

ಹುಳಿಯಾರು ಕೆರೆ ಅಂಗಳ ಒತ್ತುವರಿ ಮಾಡಿಕೊಂಡು ಅನಧಿಕೃತ ವಾಸವಿರುವ ಕುಟುಂಬಗಳನ್ನು ಗುರ್ತಿಸಲಾಗಿದ್ದು ಅವರ ಪುನರ್ವಸತಿಗಾಗಿ ಸರ್ಕಾರಿ ಖಾಲಿ ಜಾಗವನ್ನು ಗುರ್ತಿಸಿ ಅಭಿವೃದ್ದಿಪಡಿಸಿ ನಿರಾಶ್ರಿತರಿಗೆ ನಿವೇಶನ ಕಲ್ಪಿಸಿಕೊಡುವ ಪ್ರಯತ್ನ ಮಾಡಲಾಗುವುದು : ತಹಶೀಲ್ದಾರ್ ಕಾಮಕ್ಷಮ್ಮ.
ಕಳೆದ ಮೂವತ್ತೈದು ವರ್ಷದಿಂದ ಇಲ್ಲಿಯೇ ಕಮ್ಮಾರಿಕೆ ಮಾಡಿಕೊಂಡು ಸಣ್ಣ ಮನೆ ಕಟ್ಟಿಕೊಂಡು ವಾಸಮಾಡಿಕೊಂಡಿದ್ದೇನೆ ಈಗ ದಿಢೀರನೇ ನಮ್ಮ ಮನೆಗಳನ್ನು ತೆರವು ಮಾಡಿದರೆ ನಾವೆಲ್ಲಿಗೆ ಹೋಗೋದು, ಬೇರೆಡೆಯಾದರೂ ಒಂಚೂರು ಜಾಗಕೊಡಿ ಸ್ವಾಮೀ ಹೇಗೋ ಜೀವನ ಸಾಗಿಸುತ್ತೇವೆ : ಮನೆ ಕಳೆದುಕೊಳ್ಳಲಿರುವ ಲಕ್ಷ್ಮಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...