ವಿಷಯಕ್ಕೆ ಹೋಗಿ

ಹುಳಿಯಾರು ಕೆರೆ ಒತ್ತುವರಿ ತೆರವಿಗೆ ಕ್ಷಣಗಣನೆ ಪುನರ್ವಸತಿ ಭಾಗ್ಯ ಇದೆಯೋ , ಇಲ್ಲವೋ ಎಂಬುದು ಯಕ್ಷಪ್ರಶ್ನೆ

           ತಾಲ್ಲೂಕು ಆಡಳಿತದಿಂದ ಹುಳಿಯಾರು ಅಮಾನಿಕೆರೆ ಒತ್ತುವರಿ ಜಾಗದ ಸರ್ವೆಕಾರ್ಯ ಮುಗಿದಿದ್ದು ತೆರವುಗೊಳಿಸಲು ಕ್ಷಣಗಣನೆ ನಡೆದಿದೆ. ಹಿಂದೆ ಹಲವು ಬಾರಿ ಕಾರ್ಯಾಚರಣೆ ನಡೆದಿದ್ದರೂ ಸಹ ರಾಜಕೀಯ ಒತ್ತಡದ ನಡುವೆ ಕೈಬಿಡಲಾಗಿತ್ತು. ಸದ್ಯ ಕೋರ್ಟ್ ಆದೇಶದಂತೆ ಅತಿಕ್ರಮ ತೆರವುಗೊಳಿಸಲು ಮುಂದಾಗಿರುವ ತಾಲ್ಲೂಕು ಆಡಳಿತ ಈ ನಿಟ್ಟಿನಲ್ಲಿ ಕೆರೆ ಅಂಗಳದ ಸಮೀಕ್ಷೆ ಪೂರ್ಣಗೊಳಿಸಿ ಒತ್ತುವರಿ ಜಾಗವನ್ನು ಗುರುತು ಮಾಡಿದ್ದಾರೆ.
ಹುಳಿಯಾರಿನ ಶಂಕರಪುರಬಡಾವಣೆಯ ಕೆರೆ ಅಂಗಳದಲ್ಲಿನ ನಿರ್ಗತಿಕರ ಗುಡಿಸಲುಗಳು.
            ಹುಳಿಯಾರು ಕೆರೆ ಸಾಕಷ್ಟು ವಿಸ್ತೀರ್ಣವಾಗಿದ್ದು ಕೇಶವಾಪುರ, ವಳಗೆರೆಹಳ್ಳಿ,ಶಂಕರಪುರ ಹಾಗೂ ಬಸ್ ನಿಲ್ದಾಣದ ಸೇರಿದಂತೆ ಒಟ್ಟು 45 ಎಕರೆ ಪ್ರದೇಶದಷ್ಟು ಜಾಗ ಜಮೀನು , ಇಟ್ಟಿಗೆ ಫ್ಯಾಕ್ಟರಿ,ಮನೆ ಹಾಗೂ ಅಂಗಡಿದಾರರಿಂದ ಒತ್ತುವರಿಯಾಗಿದೆ.ಸಮೀಕ್ಷೆಯಲ್ಲಿ 199 ಮಂದಿಯ ಪಟ್ಟಿ ಮಾಡಲಾಗಿದ್ದು ಅದರಲ್ಲಿ 90 ಹಾಗೂ 86 ಅಂಗಡಿಗಳು ಸೇರಿದೆ.
        ಗುಡಿಸಲುವಾಸಿಗಳು: ಸುಮಾರು 90ಕ್ಕೂ ಅಧಿಕ ಕುಟುಂಬಗಳು ಕಳೆದ ಹತ್ತಾರು ವರ್ಷಗಳಿಂದ ಮನೆಕಟ್ಟಿಕೊಂಡು ಇಲ್ಲಿ ಬೀಡುಬಿಟ್ಟಿದ್ದು, ಬಹುತೇಕರು ನಿರ್ಗತಿಕರು ಹಾಗೂ ಕೂಲಿನಾಲಿ ಮಾಡುವ ಗುಡಿಸಲು ವಾಸಿಗಳೇ ಜನರೇ ಆಗಿದ್ದು, ನಿತ್ಯ ಕೂಲಿಮಾಡಿ ಅದರಿಂದ ಬರುವ ಪುಡಿಗಾಸಿನಿಂದ ಜೀವನ ನಡೆಸುತ್ತಿದ್ದಾರೆ,ಇವರಿಗೆ ಸ್ವಂತ ಜಮೀನಾಗಲಿ, ಖಾಯಂ ಕೆಲಸಗಳಾಗಲಿ,ವರಮಾನ ಬರುವ ಯಾವುದೇ ಮೂಲವೂ ಸಹ ಇಲ್ಲದ ಇವರು ಕೆರೆ ಅಂಗಳದಲ್ಲಿ ಗುಡಿಸಲು ಕಟ್ಟಿಕೊಂಡು ಹೇಗೋ ಜೀವನ ನಡೆಸುತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ಅವರ ಹೆಸರಿದ್ದು ಚುನಾವಣೆಗಳಲ್ಲಿ ತಮ್ಮ ಮತವನ್ನು ಸಹ ಚಲಾಯಿಸಿದ್ದಾರೆ. ಇದೀಗ ಕೆರೆ ಒತ್ತುವರಿ ನಡೆಯುತ್ತಿರುವುದರಿಂದ ಈ ಎಲ್ಲರೂ ತಮ್ಮ ಮನೆ,ಗುಡಿಸಲುಗಳನ್ನು ಕಳೆದುಕೊಂಡು ನಿರ್ಗತಿಕರಾಗುವಂತ ಪರಿಸ್ಥಿತಿ ಎದುರಾಗಿದೆ.
         ಶಂಕರಪುರ 6 ನೇ ಬ್ಲಾಕ್ ನ ನಿವಾಸಿಗಳೆಂದು ಪರಿಗಣಿಸುವ ಇವರನ್ನು ಇಲ್ಲಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆಯೇ ಹೊರತು ಇವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲ. ಅಲ್ಲದೆ ಇದುವರೆಗೂ ಇಲ್ಲಿನ ನಿವಾಸಿಗಳಿಗೆ ಬೇರೆಡೆ ನಿವೇಶನವನ್ನು ನೀಡುವ ಯಾವುದೇ ವ್ಯವಸ್ಥೆ ಮಾಡಿಲ್ಲ. ಆ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಗಮನಗೊಡದಿರುವುದು ಇಲ್ಲಿನ ನಿವಾಸಿಗಳಲ್ಲಿ ಬೇಸರವನ್ನುಂಟುಮಾಡಿದೆ.
      ಅನೇಕ ವರ್ಷದಿಂದ ಪಟ್ಟಣದಲ್ಲೇ ವಾಸವಾಗಿರುವ ಇಲ್ಲಿನ ನಿವಾಸಿಗಳು ತೆರವು ಕಾರ್ಯಾಚರಣೆಯಿಂದ ಈಗಿರುವ ತಮ್ಮ ಸೂರನ್ನು ಕಳೆದುಕೊಂಡು ಬೀದಿಗೆ ಬಂದಂತಾಗುತ್ತದೆ. ನಿರಾಶ್ರಿತರಾಗುವ ಇವರ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಲಿದ್ದು, ಸರ್ಕಾರ ಇವರಿಗೆ ಬೇರೆಡೆ ಎಲ್ಲಾದರೂ ಜಾಗ ಕಲ್ಪಿಸಿಕೊಡುವ ಮೂಲಕ ಅವರಿಗೆ ನೆರವಿನ ಹಸ್ತ ಚಾಚುತದೋ ಇಲ್ಲವೋ ಎಂಬುದು ತಿಳಿಯದಾಗಿದೆ
        ನಿವಾಸಿಗಳಲ್ಲಿ ಆತಂಕ : ಕೆರೆ ಸರ್ವೆಕಾರ್ಯ ಆಗಿದೆ ಇನ್ನೇನು ನಮ್ಮ ಮನೆಗಳನ್ನು ತೆರವು ಮಾಡುತ್ತಾರೆ ಮುಂದೆ ನಾವು ಎಲ್ಲಿಗೆ ಹೋಗುವುದು, ಏನು ಮಾಡುವುದು ಎಂಬ ದುಗುಡ ಇಲ್ಲಿನ ನಿವಾಸಿಗಳನ್ನು ಕಾಡುತ್ತಿದೆ. ಈ ಹಿಂದೆಯೇ ಹಲವಾರು ಬಾರಿ ನಿವೇಶನಕ್ಕಾಗಿ ಹಾಗೂ ಹಕ್ಕುಪತ್ರಕ್ಕಾಗಿ ಅರ್ಜಿಸಲುತ್ತಲೇ ಬಂದಿದ್ದರೂ ಯಾರೊಬ್ಬರೂ ಕಿವಿಗೊಡದಿದ್ದಿದ್ದು , ಇವರ ಅನಧಿಕೃತ ಗುಡಿಸಲು ವಾಸಿಗಳೆಂದೆ ಗುರ್ತಿಸುವಂತಾಯಿತು. ಸದ್ಯ ಯಾವ ಕ್ಷಣದಲ್ಲಿ ಜೆಸಿಬಿ ಯಂತ್ರಗಳು ನಮ್ಮ ಮನೆ ಕೆಡವಲಿವೆ ಎಂಬ ಆತಂಕದಲ್ಲಿರುವ ಇವರ ಕೂಗಿಗೆ ಸರ್ಕಾರ ಸ್ಪಂದಿಸುತ್ತದೆಯೋ ಎಂದು ಕಾದುನೋಡಬೇಕಿದೆ.
       ವ್ಯಾಪಾರಸ್ಥರಿಗೆ ದುಗುಡ : ತಾಲ್ಲೂಕು ಆಡಳಿತ ಬಸ್ ನಿಲ್ದಾಣದಲ್ಲಿ ತಲೆ ಎತ್ತಿರುವ 86 ಅಂಗಡಿಗಳ ಪಟ್ಟಿ ಮಾಡಿದ್ದು, ತೆರವಿಗೆ ಮುಂದಾದರೆ ಮುಂದೇನು ಎಂಬ ಪ್ರಶ್ನೆ ಅಂಗಡಿದಾರರಿಗೆ ಕಾಡಿದೆ.
ಕೆರೆ ಪ್ರದೇಶದಲ್ಲಿ ಕಟ್ಟಡ ಕಟ್ಟಿ ವಹಿವಾಟು ನಡೆಸುತ್ತಿರುವ ಅಂಗಡಿದಾರರನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದ್ದು ಎಲ್ಲೆಡೆ ಕಾರ್ಯಾಚರಣೆ ನಡೆಯುತ್ತಿರುವುದರಿಂದ ನಾವೂ ಕೂಡ ಜಾಗ ಕಳೆದುಕೊಳ್ಳುತ್ತೇವೆ ಎಂಬುದು ಒತ್ತುವರಿದಾರರಿಗೆ ಮನದಟ್ಟಾಗಿದ್ದು , ಮುಂದೇನು ಎಂಬ ಚಿಂತೆ ಆವರಿಸಿದೆ.
        ಒಟ್ಟಾರೆ ಒತ್ತುವರಿ ತೆರವಿಗೆ ಮುಂದಾಗಿರುವ ತಾಲ್ಲೂಕು ಆಡಳಿತದ ಕ್ರಮ ಎಲ್ಲರನ್ನೂ ಆತಂಕಕ್ಕೀಡುಮಾಡಿದೆ.ಮತ ಕೇಳಲು ಬರುವ ಜನಪ್ರತಿನಿಧಿಗಳು ಈ ಸಮಯದಲ್ಲಿ ಬಂದು ನಮಗೆ ಒತ್ತಾಸೆಯಾಗಿ ನಿಲ್ಲಲ್ಲಿ ಎಂಬುದು ಇವರ ಮನದಾಳದ ಮಾತಾಗಿದೆ.
---------------------------------

ಹುಳಿಯಾರು ಕೆರೆ ಅಂಗಳ ಒತ್ತುವರಿ ಮಾಡಿಕೊಂಡು ಅನಧಿಕೃತ ವಾಸವಿರುವ ಕುಟುಂಬಗಳನ್ನು ಗುರ್ತಿಸಲಾಗಿದ್ದು ಅವರ ಪುನರ್ವಸತಿಗಾಗಿ ಸರ್ಕಾರಿ ಖಾಲಿ ಜಾಗವನ್ನು ಗುರ್ತಿಸಿ ಅಭಿವೃದ್ದಿಪಡಿಸಿ ನಿರಾಶ್ರಿತರಿಗೆ ನಿವೇಶನ ಕಲ್ಪಿಸಿಕೊಡುವ ಪ್ರಯತ್ನ ಮಾಡಲಾಗುವುದು : ತಹಶೀಲ್ದಾರ್ ಕಾಮಕ್ಷಮ್ಮ.
ಕಳೆದ ಮೂವತ್ತೈದು ವರ್ಷದಿಂದ ಇಲ್ಲಿಯೇ ಕಮ್ಮಾರಿಕೆ ಮಾಡಿಕೊಂಡು ಸಣ್ಣ ಮನೆ ಕಟ್ಟಿಕೊಂಡು ವಾಸಮಾಡಿಕೊಂಡಿದ್ದೇನೆ ಈಗ ದಿಢೀರನೇ ನಮ್ಮ ಮನೆಗಳನ್ನು ತೆರವು ಮಾಡಿದರೆ ನಾವೆಲ್ಲಿಗೆ ಹೋಗೋದು, ಬೇರೆಡೆಯಾದರೂ ಒಂಚೂರು ಜಾಗಕೊಡಿ ಸ್ವಾಮೀ ಹೇಗೋ ಜೀವನ ಸಾಗಿಸುತ್ತೇವೆ : ಮನೆ ಕಳೆದುಕೊಳ್ಳಲಿರುವ ಲಕ್ಷ್ಮಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.