ವಿಷಯಕ್ಕೆ ಹೋಗಿ

ಮಾಡಾಳು ಗೌರಮ್ಮನಿಗೆ ಜನಸಾಗರ

               ನಾಡಿನೆಲ್ಲೆಡೆ ಗಣೇಶನನ್ನು ಪ್ರತಿಷ್ಠಾಪಿಸಿ ಉತ್ಸವ ಮಾಡುವುದು ವಾಡಿಕೆಯಾದರೆ ಹುಳಿಯಾರು ಗಡಿಭಾಗದಲ್ಲಿರುವ ಅರಸೀಕೆರೆ ತಾಲ್ಲೂಕಿನ ಮಾಡಾಳು ಗ್ರಾಮದಲ್ಲಿ ಮಾತ್ರ ಗೌರಿಗೆ ಪ್ರಾಮುಖ್ಯತೆ. ರಾಜ್ಯದಲ್ಲಿ ಕೆಲವೇ ಕಡೆ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜಿಸುವುದಿದ್ದು , ಅದರಲ್ಲಿ ಮಾಡಾಳಿನ ಸ್ವರ್ಣಗೌರಿ ಹೆಚ್ಚು ಪ್ರಸಿದ್ದಿ. ಪ್ರತಿ ವರ್ಷ ಭಾದ್ರಪದ ಮಾಸದಲ್ಲಿ ಒಂಭತ್ತು ದಿನಗಳಕಾಲ ವಿಜೃಂಭಣೆಯಿಂದ ಇಲ್ಲಿ ಜಾತ್ರಾಮಹೋತ್ಸವ ನಡೆಯಲಿದ್ದು , ಲಕ್ಷಾಂತರ ಭಕ್ತರು ಗೌರಮ್ಮನ ದರ್ಶನ ಪಡೆಯುತ್ತಾರೆ.
ಮಾಡಾಳು ಶ್ರೀಸ್ವರ್ಣಗೌರಿ.
          ಗೌರಿಹಬ್ಬದ ದಿನದಂದು ಅಮ್ಮನವರನ್ನು ಊರಿನ ಬಸವೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ . ಹಾರನಹಳ್ಳಿಯ ಕೋಡಿಮಠದಿಂದ ಕಳೆದ ನೂರೈವತ್ತು ವರ್ಷದ ಹಿಂದೆ ಸ್ವರ್ಣಗೌರಿ ದೇವಿಗೆ ವಜ್ರದ ಮೂಗುತಿಯನ್ನು ನೀಡಿದ್ದು, ಗೌರಿಗೆ ಅಂದಿನಿಂದ ಇಂದಿನವರೆಗೆ ಕೋಡಿಮಠದ ಸ್ವಾಮೀಜಿಯವರೆ ಮೂಗುತಿಯನ್ನು ಗೌರಿಗೆ ತೊಡಿಸಿ ಸಂಪ್ರದಾಯದಂತೆ ಪೂಜಿಸಿ ಪ್ರತಿಷ್ಠಾಪಿಸುವ ಪರಿಪಾಟ ನಡೆದು ಬಂದಿದೆ.ಅಂತೆಯೇ ಶಿವಾನಂದ ಶಿವಯೋಗಿ ರಾಜೇಂದ್ರಸ್ವಾಮಿ ಅವರ ಉಪಸ್ಥಿತಿಯಲ್ಲಿ ಅಮ್ಮನವರ ಮೂಲ ಸನ್ನಿಧಿಯಾದ ಬಾವಿಮನೆಯಿಂದ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ನೂರಾರು ಭಕ್ತರ ಜಯಕಾರದೊಂದಿಗೆ ಮೆರವಣಿಗೆ ಮೂಲಕ ಬಸವೇಶ್ವರ ದೇವಾಲಯಕ್ಕೆ ಕರೆತಂದು ಪ್ರತಿಷ್ಠಾಪಿಸಲಾಯಿತು. ಅಂದಿನಿಂದ ಒಟ್ಟು ಒಂಭತ್ತು ದಿನಗಳಕಾಲ ಹಗಲಿರುಳು ಎನ್ನದೆ ನಡೆಯುವ ಈ ಜಾತ್ರಾಮಹೋತ್ಸವದಲ್ಲಿ ನಾಡಿನಾದ್ಯಂತ ಅಸಂಖ್ಯಾತ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಕೃತಾರ್ಥರಾಗುತ್ತಾರೆ.
ಜನ ಸಾಗರ : ಈ ಸಮಯದಲ್ಲಿ ಮಾಡಾಳು ಗ್ರಾಮದ ಎಲ್ಲಿ ನೋಡಿದರು ಗೌರಮ್ಮನ ಭಕ್ತರೇ ಕಾಣಸಿಗುತ್ತಾರೆ . ಗೌರಿಯ ದರ್ಶನಕ್ಕಾಗಿ ದೇವಾಲಯದ ಆವರಣದಿಂದ ರಸ್ತೆಯ ತನಕ ಉದ್ದ ಸರದಿಯಿದ್ದರೂ ಸಹ ಬೇಸರಿಸದೆ ಸರದಿಯಲ್ಲಿ ಸಾಗಿ ಸ್ವರ್ಣಗೌರಿಯನ್ನು ನೋಡಿ ದನ್ಯತೆ ಹೊಂದುತ್ತಾರೆ.
ಕರ್ಪೂರದ ಹರಕೆ : ಭಕ್ತಾದಿಗಳು ದೇವಾಲಯದ ಎದುರಲ್ಲಿರುವ ಅಗ್ನಿಕುಂಡದಲ್ಲಿ ಕರ್ಪೂರ ಹಚ್ಚಿ, ತಲೆಯ ಮೇಲೆ ದುಗ್ಗಲ ಹೊತ್ತು ತಮ್ಮ ಹರಕೆ ತೀರಿಸುತ್ತಾರೆ. ಸೀರೆ ಹಾಗೂ ಅನ್ನದಾಸೋಹಕ್ಕೆ ಮಡಿಲಕ್ಕಿ ಕೊಡುವ ಮೂಲಕ ಕಾಣಿಕೆ ಸಮರ್ಪಿಸುತ್ತಾರೆ. ಸಹಸ್ರಾರು ಸಂಖ್ಯೆಯ ಮಹಿಳೆಯರು ದುಗ್ಗಲ ಹೊರುವುದರಿಂದ ದೇವಾಲಯದ ಆವರಣದ ತುಂಬೆಲ್ಲಾ ಕರ್ಪೂರದ ಹೊಗೆಯಿಂದ ತುಂಬಿರುತ್ತದೆ.
ಒಂಭತ್ತು ದಿನಗಳ ಕಾಲ ನಿರಂತರವಾಗಿ ಕರ್ಪೂರದಿಂದ ಉರಿಯುವ ಮಾಡಾಳು ಗೌರಮ್ಮನ ಅಗ್ನಿಕುಂಡ.
               ಬೇರೆಲ್ಲೂ ಕಾಣದ ಇಲ್ಲಿನ ಗೌರಮ್ಮನ ಮುಖಭಾವ ವಿಶೇಷವಾಗಿದ್ದು ಪ್ರತಿವರ್ಷವೂ ಇದರಲ್ಲಿ ಕಿಂಚಿತ್ತು ವ್ಯತ್ಯಾಸವಾಗದಂತೆ ರೂಪಿಸುತ್ತಿರುವ ಹೆಗ್ಗಳಿಕೆ ಇಲ್ಲಿನ ಅಚಾರ್ ವಂಶಸ್ಥರದ್ದಾಗಿದೆ. ವಜ್ರದ ಮೂಗುತಿ ಹೊರತು ಪಡಿಸಿ ನಿರಾಭರಣವಾಗಿರುವ ಅಮ್ಮನವರು ಸಹಸ್ರಾರು ಭಕ್ತರನ್ನು ಸೆಳೆಯುತ್ತಿರುವುದು ಗಮನಾರ್ಹವಾಗಿದೆ. ಜಾತ್ರಾಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಾಗಿ ಸಮುದಾಯ ಭವನದ ಮುಂಭಾಗದಲ್ಲಿ ಪ್ರಸಾದ ರೂಪವಾಗಿ ಪ್ರತಿನಿತ್ಯ ಅನ್ನಸಂತರ್ಪಣೆಯನ್ನು ನಡೆಸಲಾಗುತ್ತದೆ.
          ನಾಳೆ ಶುಕ್ರವಾರ ಅಮ್ಮನವರ ದುಗ್ಗಳ ಸೇವೆ ಹಾಗೂ ಚಂದ್ರಮಂಡಲೋತ್ಸವ ನಡೆಯಲಿದ್ದು , ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರು ಲಕ್ಷಾಂತರ ರೂಪಾಯಿಯ ಕರ್ಪೂರ ಹಚ್ಚಿ ಭಕ್ತಿಯ ಪರಾಕಷ್ಟೆ ಮೆರೆಯಲಿದ್ದಾರೆ. ಶನಿವಾರದಂದು ಅಮ್ಮನವರ ಮೆರವಣಿಗೆ ಪ್ರಾರಂಭವಾಗಿ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಪೂಜೆ ಹಾಗೂ ಮಡಲಕ್ಕಿ ಸ್ವೀಕರಿಸಿ ನಂತರ ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಕಲ್ಯಾಣಿಗೆ ಸಂಜೆ ವೇಳೆಗೆ ಕರೆದೊಯ್ದು ವಾಡಿಕೆಯಂತೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಯವರ ಉಪಸ್ಥಿತಿಯಲ್ಲಿ ಅಮ್ಮನವರಿಗೆ ಧರಿಸಿದ್ದ ಮೂಗುತಿಯನ್ನು ತೆಗೆದ ನಂತರ ಭಕ್ತಿಪೂರ್ವಕವಾಗಿ ವಿಸರ್ಜಿಸಲಾಗುವುದು.

          ಒಟ್ಟು ಒಂಭತ್ತು ದಿನಗಳ ಕಾಲ ನಡೆಯುವ ಈ ಪೂಜಾಕೈಂಕರ್ಯದಲ್ಲಿ ಲಕ್ಷಾಂತರ ಜನ ಮುತ್ತಿನಗೌರಿಯ ದರ್ಶನ ಪಡೆಯಲಿದ್ದು ಈ ಸಮಯದಲ್ಲಿ ಲಕ್ಷಾಂತರ ರೂಪಾಯಿಯ ಕರ್ಪೂರವನ್ನು ಹಚ್ಚಿ ದೇವಿಗೆ ಸಮರ್ಪಿಸಲಾಗುವುದು. 












ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...