ವಿಷಯಕ್ಕೆ ಹೋಗಿ

ಕವಿಕಾವ್ಯ ಗೋಷ್ಠಿ : ಸರ್ವಜ್ಞನ ತ್ರಿಪದಿಗಳ ಕುರಿತು ಉಪನ್ಯಾಸ

     ಹುಳಿಯಾರು  ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಿಕೊಂಡು ಬರುತ್ತಿರುವ ಮನೆಮನೆಗಳಲ್ಲಿ ಕನ್ನಡ ಕವಿಕಾವ್ಯ ಗೋಷ್ಠಿ ಪಾಕ್ಷಿಕಕಾರ್ಯಕ್ರಮ ಪಟ್ಟಣದ ಡಿ.ಆರ್.ನರೇಂದ್ರಬಾಬು ಅವರ ಆನಂದಸಿಂಧು ನಿಲಯದಲ್ಲಿ ನಡೆಯಿತು.
ಹುಳಿಯಾರಿನ ಕಸಾಪ ವತಿಯಿಂದ ನಡೆದ ಮನೆಮನೆಗಳಲ್ಲಿ ಕನ್ನಡಕವಿಕಾವ್ಯ ಗೋಷ್ಠಿ ಕಾರ್ಯಕ್ರಮದಲ್ಲಿ ಶಿಕ್ಷಕ ಯಲ್ಲಪ್ಪ ಸರ್ವಜ್ಞನ ತ್ರಿಪದಿಗಳ ಕುರಿತು ಉಪನ್ಯಾಸ ನೀಡಿದರು.
          ಗೋಷ್ಠಿಯಲ್ಲಿ ಶಿಕ್ಷಕ ಯಲ್ಲಪ್ಪ ಸರ್ವಜ್ಞನ ವಚನಗಳ ಕುರಿತು ಸುದೀರ್ಘ ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ ಸರ್ವಜ್ಞನ ಹುಟ್ಟು,ಬದುಕು, ಆತ ರಚಿಸಿದ ತ್ರಿಪದಿಗಳ ಬಗ್ಗೆ ತಿಳಿಸುತ್ತಾ ಪ್ರಸ್ತುತ ಮಾನವನ ಜೀವನಕ್ಕೆ ಪೂರಕವಾದ ವಿಷಯಗಳನ್ನು ಒಳಗೊಂಡಂತೆ ತ್ರಿಪದಿಗಳನ್ನು ರಚಿಸಿದ್ದು, ಅವು ಇಂದಿಗೂ ಪ್ರಚಲಿತದಲ್ಲಿರುವುದು ಕಾಣಬಹುದಾಗಿದೆ ಎಂದರು. ವಿದ್ಯೆ,ದಾನ,ಕೌಟುಂಬಿಕ ಜೀವನ,ಗುರು,ಗುರುಹಿರಿಮೆ,ಭಕ್ತಿ, ಮಾತು, ಜ್ಞಾನ ಸೇರಿದಂತೆ ಅನೇಕ ವಿಷಯಗಳನ್ನು ಒಳಗೊಂಡಂತೆ ತ್ರಿಪದಿ ರಚಿಸಿದ್ದು ಅವುಗಳನ್ನು ಉಲ್ಲೇಕಿಸಿ ಅದರಲ್ಲಿ ಅಡಕವಾಗಿರುವ ಅಂಶಗಳನ್ನು ವಿವರಿಸಿದರು.
           ಸರ್ವಜ್ಞ ಎಂಬುವನು ಯಾವುದೇ ಉನ್ನತ ಅಭ್ಯಾಸ ಮಾಡಿದವನಲ್ಲ ಆದರೂ ಸಹ ಆತನಲ್ಲಿ ಜ್ಞಾನದ ಸಂಪತ್ತು ಮಾತ್ರ ಅಪಾರವಾಗಿತ್ತು. ಸರ್ವಜ್ಞ ತನ್ನ ಬಗ್ಗೆ ತಾನೇ ತ್ರಿಪದಿಗಳನ್ನು ರಚಿಸಿದ್ದು ತಾನು ಸರ್ವರೊಳಾಡಿ ಎಲ್ಲರಿಂದ ಒಂದೊಂದು ಅಕ್ಷರ ಕಲಿತವನ್ನು ಎಂದು ಹೇಳಿಕೊಂಡಿದ್ದಾನೆ. ಒಟ್ಟಾರೆ ಈತನ ಅಂದಿನ ನಿಲುವು ಇಂದಿನ ಸಮಾಜಕ್ಕೆ ಪೂರಕವಾಗಿದೆ ಎಂದರು.
        ಗೋಷ್ಠಿಯ ಅಧ್ಯಕ್ಷತೆವಹಿಸಿದ್ದ ಕನ್ನಡ ಶಿಕ್ಷಕಿ ಸಿ.ಟಿ.ವಿಜಯಲಕ್ಷ್ಮಿ ಮಾತನಾಡಿ , ಸರ್ವಜ್ಞನ ಕೆಲ ವಚನಗಳನ್ನು ಪಠಿಸಿ ಅವುಗಳ ವಿವರ ತಿಳಿಸಿದರು. ಅಲ್ಲದೆ ಕಸಾಪದಿಂದ ಇಂತಹ ಕಾರ್ಯಕ್ರಮ ಮಾಡಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚೆಚ್ಚು ಕಾರ್ಯಕ್ರಮಗಳು ನಡೆಯಲಿ ಎಂದು ಆಶಿಸಿದರು.

         ಈ ಸಂದರ್ಭದಲ್ಲಿ ಕಸಾಪದ ಗೌರವಾಧ್ಯಕ್ಷ ಹಾಗೂ ನಿವೃತ್ತ ಕನ್ನಡ ಉಪನ್ಯಾಸಕರಾದ ತ.ಶಿ.ಬಸವಮೂರ್ತಿ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿದರು. ನಿವೃತ್ತ ಶಿಕ್ಷಕ ಹು.ಲ.ವೆಂಕಟೇಶ್ "ಹೂವ ತರುವೆವು ಮನೆಗೆ ಹುಲ್ಲತರುವಾ" ಭಕ್ತಿಗೀತೆ ಹಾಡಿದರು. ಕಸಾಪದ ನಾರಾಯಣಪ್ಪ, ಚಿಕ್ಕಣ್ಣ, ದಯಾನಂದ್, ವೈದ್ಯ ಸಿದ್ದರಾಮಯ್ಯ, ವರ್ತಕಬಾಲಾಜಿ, ಭದ್ರೇಶ್, ಗುತ್ತಿಗೆದಾರ ಗಂಗಣ್ಣ, ರೈತಸಂಘದ ಸತೀಶ್,ಪ್ರದೀಪ್, ಪ್ರಸಾದ್, ಶಿಕ್ಷಕ ರಮೇಶ್, ಕಾಯಿಬಸವರಾಜು ಸೇರಿದಂತೆ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ಕು. ವರ್ಷಿಣಿ ಪ್ರಾರ್ಥಿಸಿ,ಶ್ರೀಮತಿ ನಾಗಲಕ್ಷ್ಮಿ ನರೇಂದ್ರಬಾಬು ಸ್ವಾಗತಿಸಿ, ನಾರಾಯಣಪ್ಪ ನಿರೂಪಿಸಿ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...