ವಿಷಯಕ್ಕೆ ಹೋಗಿ

ಹುಳಿಯಾರಿನ ಕಲ್ಪತರು ಇಟ್ಟಿಗೆ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು ಹೆದ್ದಾರಿತಡೆ: ಕಾರ್ಖಾನೆ ಮುಂದೆ ಶವವಿಟ್ಟು ಪ್ರತಿಭಟನೆ

ಪಟ್ಟಣದ ಒಣಕಾಲುವೆ ಬಳಿಯ ರಂಗನಾಥ ಶೆಟ್ರು ಅವರಿಗೆ ಸೇರಿದ್ದ ಕಲ್ಪತರು ಬ್ರಿಕ್ಸ್ ಅಂಡ್ ಟೈಲ್ಸ್ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ನಡೆದಿದ್ದು ಕುಪಿತರಾದ ಸಾರ್ವಜನಿಕರು ಹಾಗೂ ಮೃತನ ಸಂಬಂಧಿಕರು ಕಾರ್ಖಾನೆಯ ಬಾಗಿಲಲ್ಲಿ ಶವವಿಟ್ಟು ಹೆದ್ದಾರಿ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದು , ರಾತ್ರಿಯಾದರೂ ಮುಂದುವರೆದಿದೆ.
ಹುಳಿಯಾರು ಪಟ್ಟಣದ ಕಲ್ಪತರು ಟೈಲ್ಸ್ ಅಂಡ್ ಬ್ರಿಕ್ಸ್ ಕಾರ್ಖಾನೆಯೆದುರು ಶಾಮಿಯಾನ ಹಾಕಿ ಪ್ರತಿಭಟನೆ ನಡೆಸುತ್ತಿರುವುದು.

 ಮೃತ ವ್ಯಕ್ತಿಯ ಶವವನ್ನು ಕಾರ್ಖಾನೆಯ ಮುಖ್ಯದ್ವಾರದಲ್ಲಿಟ್ಟಿರುವುದು. 

ಕೆರೆಸೂರಗೊಂಡನ ಹಳ್ಳಿಯ ರವಿ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಕೆಲಸ ಮಾಡುವ ವೇಳೆ ವಿದ್ಯುತ್ ತಗುಲಿದ್ದ ಪರಿಣಾಮ ಮೃತ ಪಟ್ಟಿದ್ದು , ಆ ಸಮಯದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದನ್ನು ಬಿಟ್ಟರೆ ಮಾಲೀಕರು ಬಂದು ಏನಾಯಿತು ಎಂಬುದನ್ನು ವಿಚಾರಿಸಿಲ್ಲವೆಂದು ಮೃತ ವ್ಯಕ್ತಿಯ ಗ್ರಾಮದವರು, ಸಂಬಂಧಿಕರು ಸೇರಿ ಮೃತ ವ್ಯಕ್ತಿಯ ಶವವನ್ನು ಆಸ್ಪತ್ರೆಯಿಂದ ಕಾರ್ಖಾನೆಯಲ್ಲಿಗೆ ಕೊಂಡೈದು ಮುಖ್ಯದ್ವಾರದಲ್ಲಿಟ್ಟು ಪ್ರತಿಭಟಿಸಿ ಸ್ಥಳಕ್ಕೆ ಮಾಲೀಕರು ಬರುವವರೆಗೂ ಶವತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಕಾರ್ಖಾನೆಯ ಕಾರ್ಮಿಕ ಮೃತಪಟ್ಟರು ಮಾಲೀಕರು ಸ್ಥಳಕ್ಕೆ ಬಾರದೆ ಪೋಲೀಸರನ್ನು ಕರೆಸಿ ನಮ್ಮನ್ನೆಲ್ಲಾ ಹೆದರಿಸುವ ತಂತ್ರಮಾಡಿದ್ದಾರೆ . ಕಾರ್ಖಾನೆಯಲ್ಲಿ ಕೆಲಸ ಮಾಡುವವರಿಗೆ ಸೂಕ್ತ ರಕ್ಷಣೆಯಿಲ್ಲದೆ ಸಾವು ಸಂಭವಿಸಿದ್ದು, ಈ ಬಗ್ಗೆ ಕಾರ್ಖಾನೆಯ ವಿರುದ್ದ ಕಾರ್ಮಿಕ ಇಲಾಖೆಯವರು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವ್ಯಕ್ತಿಯ ಶವವನ್ನು ಕಾರ್ಖಾನೆಯಲ್ಲಿಗೆ ತಂದು ಹಾಕಿಕೊಂಡು ಗಂಟೆಗಟ್ಟಲೇ ಕಳೆದರೂ ಸಹ ಮಾಲೀಕರು ಬಾರದಿದ್ದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಹುಳಿಯಾರು- ಹೊಸದುರ್ಗ ರಸ್ತೆಗೆ ಮರದದಿಮ್ಮಿ, ಕರೆಂಟ್ ಕಂಬ ಅಡ್ಡಹಾಕಿದ ಪರಿಣಾಮ ವಾಹನಗಳು ಸಾಲುಸಾಲಾಗಿ ನಿಂತಿವೆ ಪ್ರತಿಭಟನೆ ಇನ್ನೂ ಮುಂದುವರೆದಿದೆ.ಪ್ರತಿಭಟನೆಯಿಂದ ಗಂಟೆಗಟ್ಟಲೇ ರಸ್ತೆ ತಡೆ ನಡೆದರೂ ಸಹ ತೆರವುಗೊಳಿಸದ ಪೋಲಿಸಿನವರ ಕಾರ್ಯವೈಖರಿ ಬಗ್ಗೆ ವಾಹನಚಾಲಕರು ,ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದ ದೃಶ್ಯ ಕಂಡುಬಂತು.
ಕರೆಂಟ್ ಶಾಕಿನಿಂದಲ್ಲ: ವಿಷಯ ತಿಳಿದ ಬೆಸ್ಕಾಂನ ಅಧಿಕಾರಿ ಉಮೇಶ್ಚಂದ್ರ ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು , ಇದು ಕರೆಂಟ್ ಶಾಕ್ ನಿಂದಾದ ಘಟನೆಯಲ್ಲ ಏಕೆಂದರೆ ವ್ಯಕ್ತಿಯ ದೇಹದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ, ಕರೆಂಟ್ ಶಾಕ್ ಹೊಡೆದರೆ ಮೈಬಣ್ಣ ಬದಲಾಗುತ್ತದೆ, ಅಲ್ಲದೆ ಮಾರ್ಕ್ ಗಳು ಸಹ ಆಗುತ್ತದೆ ಆದರೆ ಮೃತ ವ್ಯಕ್ತಿಯನ್ನು ಗಮನಿಸಿದರೆ ಯಾವುದೇ ರೀತಿಯ ಇಂತಹ ಗುರುತುಗಳು ಕಂಡುಬರುತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಮೃತ ಪತ್ನಿಯ ರೋಧನ ಮುಗಿಲು ಮುಟ್ಟಿದ್ದು ಇದನ್ನು ಕಂಡ ಗ್ರಾಮಸ್ಥರು ಹಾಗೂ ಸಂಬಂಧಿಕರುಎಷ್ಟೇ ಸಮಯ ಕಳೆದರೂ ಸರಿ ಮಾಲೀಕರು ಬಾರದೆ ಮೃತ ದೇಹವನ್ನು ಸ್ಥಳದಿಂದ ಕದಲಿಸುವುದಿಲ್ಲ ಎಂದು ಕೂತಿರುವುದು ಪರಿಸ್ಥಿಯನ್ನು ಬಿಗಡಾಯಿಸುವಂತೆ ಮಾಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...