ವಿಷಯಕ್ಕೆ ಹೋಗಿ

ಹೆದ್ದಾರಿಗೆ ಭೂಸ್ವಾಧೀನಗೊಂಡ ಭೂಮಾಲಿಕರಿಂದ ದಾಖಲಾತಿ ಸ್ವೀಕಾರ

        ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 234 ಕ್ಕೆ ಸಂಬಂಧಪಟ್ಟಂತೆ ಹುಳೀಯಾರು-ಶಿರಾ ಮಾರ್ಗ ಮಧ್ಯೆ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನು ಮಾಲೀಕರುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಜಮೀನಿನ ದಾಖಲಾತಿಗಳು, ಜಮೀನಿಗೆ ಬೇಕೆಂದಿರುವ ಪರಿಹಾರದ ಮೊತ್ತ ಇನ್ನಿತರ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ಮಾಹಿತಿವುಳ್ಳ ಅರ್ಜಿಯನ್ನು ಭರ್ತಿ ಮಾಡಿಸಿಕೊಳ್ಳುವ ಮೂಲಕ ವಿಶೇಷ ಭೂಸ್ವಾಧೀನಾಧಿಕಾರಿಗಳು ಸ್ವೀಕರಿಸಿದರು.
ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಹೆದ್ದಾರಿ ಭೂಸ್ವಾಧೀನ ಅಧಿಕಾರಿಗಳಿಗೆ ಭೂಮಾಲೀಕರು ದಾಖಲಾತಿಗಳನ್ನು ಸಲ್ಲಿಸಿದರು.
           ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ದಾಖಲಾತಿ ಸ್ವೀಕಾರ ಸಭೆಯಲ್ಲಿ ರಸ್ತೆ ವಿಸ್ತರಣೆಯಿಂದ ಜಮೀನು ಕಳೆದುಕೊಂಡ ರೈತರು ಪರಿಹಾರ ಪಡೆಯುವ ನಿಟ್ಟಿನಲ್ಲಿ ಜಮೀನಿನ ಮೂಲ ದಾಖಲಾತಿ ಪತ್ರಗಳು, ಕ್ರಯಪತ್ರ, ಮ್ಯುಟೇಶನ್, ಪಹಣಿ, ಕಂದಾಯಪಾವತಿ ರಸೀದಿ, ಭೂಪರಿವರ್ತನೆ ಆದೇಶ, ಸಾಗುವಳಿಚೀಟಿ, ರೆವಿನ್ಯೂ ನಕ್ಷೆಯೊಂದಿಗೆ ಮುಂತಾದ ದಾಖಲೆಗಳ ನಕಲನ್ನು ವಿಶೇಷಭೂಸ್ವಾಧೀನಾಧಿಕಾರಿಯಾದ ರಶ್ಮಿ ಅವರಿಗೆ ನೀಡಿದರು.
          ಪರಿಹಾರ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ರಶ್ಮಿ ಅವರು, ರಾಷ್ಟ್ರೀಯ ಹೆದ್ದಾರಿ 234 ಮಂಗಳೂರಿನಿಂದ ಪ್ರಾರಂಭವಾಗಿ ತಮಿಳುನಾಡಿನ ವಿಲ್ಲುಪುರಂಗೆ ಸಂಪರ್ಕ ಕಲ್ಪಿಸಲಿದ್ದು ಹುಳಿಯಾರು ಮಾರ್ಗವಾಗಿ ಶಿರಾವರೆಗೆ ಹಾದು ಹೋಗಿರುವ ಈ ರಸ್ತೆಗೆ ಸದ್ಯ ಭೂಸ್ವಾಧೀನ ಕಾರ್ಯ ಅಂತಿಮವಾಗಿದೆ ಎಂದರು. ಹುಳಿಯಾರು-ಶಿರಾ ಸೆಕ್ಷನ್ ಗೆ ಸಂಬಂಧಿಸಿದಂತೆ ಕಿಮೀ 243.30 ರಿಂದ 290.2 ವರೆಗೆ ಹುಳಿಯಾರು-ಬಳ್ಳೆಕಟ್ಟೆ-ಮಾರುಹೊಳೆ-ಹೊಯ್ಸಳಕಟ್ಟೆ-ಬೆಳ್ಳಾರ-ಬುಕ್ಕಾಪಟ್ಟಣ-ಮೇಕರೆಹಳ್ಳಿ ಮಾರ್ಗದ ವರೆಗೆ ಹೆದ್ದಾರಿ ವಿಸ್ತರಣೆಗೆ ಅವಶ್ಯ ಬೇಕಾಗಿರುವ ಜಮೀನನ್ನು ಹೆದ್ದಾರಿ ಕಾಯ್ದೆ ಅನ್ವಯ ವಶಪಡಿಸಿಕೊಂಡಿದ್ದು, ನಿಯಮದಂತೆ ಸಂಬಂಧಪಟ್ಟ ಜಮೀನುಗಳ ಮಾಲೀಕರ ಪಟ್ಟಿಯನ್ನು ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಭೂಮಾಲೀಕರಿಗೆ ನೋಟೀಸ್ ನೀಡಲಾಗಿದ್ದು , ಭೂಮಾಲೀಕರಿಗೆ ಅನುಕೂಲ ಮಾಡುವ ದೃಷ್ಠಿಯಿಂದ ಪ್ರಾಧಿಕಾರವೇ ಭೂಮಾಲೀಕರ ಬಳಿ ಬಂದು ದಾಖಲೆ ಸ್ವೀಕರಿಸಲಾಗುತ್ತಿದೆ ಎಂದರು.
         ನೊಂದಣಿ ಕಛೇರಿಯಲ್ಲಿ ಅತಿಹೆಚ್ಚು ಬೆಲೆಗೆ ನೋಂದಣಿಯಾಗಿರುವ ದರದಂತೆ ಪರಿಹಾರ ವಿತರಿಸಲಾಗುವುದು, ಇನ್ನು ಹೆಚ್ಚಿನ ಬೆಲೆ ಬೇಕೆಂದಿದ್ದಲ್ಲಿ ಸ್ಥಳೀಯವಾಗಿ ಮಾರಾಟವಾಗಿರುವ ಜಾಗದ ದಾಖಲಾತಿಗಳನ್ನು ನೀಡಿದಲ್ಲಿ ಮಾತ್ರವೇ ಅದರಂತೆ ಪರಿಹಾರ ಹೆಚ್ಚಳ ಮಾಡಬಹುದೆಂದರು. ವಶಪಡಿಸಿಕೊಂಡ ಜಮೀನಲ್ಲಿ ಭೂಮಿಯನ್ನು ಹೊರತುಪಡಿಸಿ ತಂತಿಬೇಲಿ, ಬೆಳೆ,ಬೋರ್ ವೆಲ್, ತೋಟಗಾರಿಕೆ ಬೆಳೆಗಳು ಮುಂತಾದವುಗಳಿದ್ದಲ್ಲಿ ಅವುಗಳಿಗೂ ಸಹ ನಿಗದಿ ಪಡಿಸಿದ ಮೊತ್ತವನ್ನು ಪರಿಹಾರವಾಗಿ ಪಡೆಯಬಹುದೆಂದರು.
            ಭೂಮಿ ಕಳೆದುಕೊಂಡ ಹೋಬಳಿಯ ನಾನಾ ಗ್ರಾಮಗಳ ರೈತರು ಸಧ್ಯ ಪ್ರಾಧಿಕಾರ ನೀಡುವ ಹಣವನ್ನು ಪಡೆದುಕೊಂಡು ನಂತರ ಹೆಚ್ಚುವರಿ ಪರಿಹಾರ ಕೋರಿ ದಾಖಲಾತಿಗಳೊಂದಿಗೆ ಅರ್ಜಿಸಲ್ಲಿಸಬಹುದು . ಜಿಲ್ಲಾಧಿಕಾರಿಗಳು ಆರ್ಬಿಟ್ರೇಟರ್ ಆಗಿರುವ ಸಮಿಯು ಹೆಚ್ಚಿನ ದರ ನೀಡುವಂತೆ ನಿರ್ದೇಶಿಸಿದಲ್ಲಿ ವ್ಯತ್ಯಾಸದ ಮೊತ್ತವನ್ನು ಬಡ್ಡಿಸೇರಿಸಿ ನೀಡಲಾಗುವುದು ಎಂದರು.
        ರೈತರ ಸಮಸ್ಯೆ : ಸರ್ಕಾರದಿಂದ ಪರಿಹಾರ ದೊರೆಯುವುದು ಖಚಿತವಿದ್ದರೂ ಸಹ ಜಮೀನಿನ ದಾಖಲೆಗಳನ್ನು ಒದಗಿಸಲು ರೈತರು ಪರದಾಡುವಂತಾಯಿತು. ಕೆಲ ರೈತರುಗಳ ಜಮೀನಿನ ಅನುಭವದಲ್ಲಿದ್ದರೂ ಪಹಣಿ,ಮ್ಯುಟೇಷನ್ ಗಳು ಬದಲವಣೆಯಾಗದೆ, ಸಾಗುವಳಿ ಚೀಟಿ ಇದ್ದರೂ ಪೋಡಾಗದೆ ಇನ್ನು ಅನೇಕ ಸಮಸ್ಯೆಗಳಿಂದ ಕೂಡಿದ್ದು ದಾಖಲೆಗಳ ಸಲ್ಲಿಸುವಿಕೆಯಲ್ಲಿ ಗೊಂದಲ ಮೂಡಿತ್ತು.

        ಇವರೊಟ್ಟಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುರೇಶ್, ಅಜ್ಜಪ್ಪ, ಸದಾನಂದ್ ಹಾಗೂ ಭೂಸ್ವಾಧೀನ ಪ್ರಾಧಿಕಾರಾದ ಅಧಿಕಾರಿಗಳು ಆಗಮಿಸಿದ್ದರು. ಕಂಪನಹಳ್ಳಿ,ಮಾರುಹೊಳೆ,ಬೆಳ್ಳಾರ, ಹೊಯ್ಸಳಕಟ್ಟೆ,ಗಾಣಧಾಳು,ಯಗಚಿಹಳ್ಳಿ,ದಸೂಡಿ,ದಬ್ಬಗುಂಟೆ ಮುಂತಾದ ಭಾಗಗಳ ರೈತರುಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.