ವಿಷಯಕ್ಕೆ ಹೋಗಿ

ಹೆದ್ದಾರಿಗೆ ಭೂಸ್ವಾಧೀನಗೊಂಡ ಭೂಮಾಲಿಕರಿಂದ ದಾಖಲಾತಿ ಸ್ವೀಕಾರ

        ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 234 ಕ್ಕೆ ಸಂಬಂಧಪಟ್ಟಂತೆ ಹುಳೀಯಾರು-ಶಿರಾ ಮಾರ್ಗ ಮಧ್ಯೆ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನು ಮಾಲೀಕರುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಜಮೀನಿನ ದಾಖಲಾತಿಗಳು, ಜಮೀನಿಗೆ ಬೇಕೆಂದಿರುವ ಪರಿಹಾರದ ಮೊತ್ತ ಇನ್ನಿತರ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ಮಾಹಿತಿವುಳ್ಳ ಅರ್ಜಿಯನ್ನು ಭರ್ತಿ ಮಾಡಿಸಿಕೊಳ್ಳುವ ಮೂಲಕ ವಿಶೇಷ ಭೂಸ್ವಾಧೀನಾಧಿಕಾರಿಗಳು ಸ್ವೀಕರಿಸಿದರು.
ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಹೆದ್ದಾರಿ ಭೂಸ್ವಾಧೀನ ಅಧಿಕಾರಿಗಳಿಗೆ ಭೂಮಾಲೀಕರು ದಾಖಲಾತಿಗಳನ್ನು ಸಲ್ಲಿಸಿದರು.
           ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ದಾಖಲಾತಿ ಸ್ವೀಕಾರ ಸಭೆಯಲ್ಲಿ ರಸ್ತೆ ವಿಸ್ತರಣೆಯಿಂದ ಜಮೀನು ಕಳೆದುಕೊಂಡ ರೈತರು ಪರಿಹಾರ ಪಡೆಯುವ ನಿಟ್ಟಿನಲ್ಲಿ ಜಮೀನಿನ ಮೂಲ ದಾಖಲಾತಿ ಪತ್ರಗಳು, ಕ್ರಯಪತ್ರ, ಮ್ಯುಟೇಶನ್, ಪಹಣಿ, ಕಂದಾಯಪಾವತಿ ರಸೀದಿ, ಭೂಪರಿವರ್ತನೆ ಆದೇಶ, ಸಾಗುವಳಿಚೀಟಿ, ರೆವಿನ್ಯೂ ನಕ್ಷೆಯೊಂದಿಗೆ ಮುಂತಾದ ದಾಖಲೆಗಳ ನಕಲನ್ನು ವಿಶೇಷಭೂಸ್ವಾಧೀನಾಧಿಕಾರಿಯಾದ ರಶ್ಮಿ ಅವರಿಗೆ ನೀಡಿದರು.
          ಪರಿಹಾರ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ರಶ್ಮಿ ಅವರು, ರಾಷ್ಟ್ರೀಯ ಹೆದ್ದಾರಿ 234 ಮಂಗಳೂರಿನಿಂದ ಪ್ರಾರಂಭವಾಗಿ ತಮಿಳುನಾಡಿನ ವಿಲ್ಲುಪುರಂಗೆ ಸಂಪರ್ಕ ಕಲ್ಪಿಸಲಿದ್ದು ಹುಳಿಯಾರು ಮಾರ್ಗವಾಗಿ ಶಿರಾವರೆಗೆ ಹಾದು ಹೋಗಿರುವ ಈ ರಸ್ತೆಗೆ ಸದ್ಯ ಭೂಸ್ವಾಧೀನ ಕಾರ್ಯ ಅಂತಿಮವಾಗಿದೆ ಎಂದರು. ಹುಳಿಯಾರು-ಶಿರಾ ಸೆಕ್ಷನ್ ಗೆ ಸಂಬಂಧಿಸಿದಂತೆ ಕಿಮೀ 243.30 ರಿಂದ 290.2 ವರೆಗೆ ಹುಳಿಯಾರು-ಬಳ್ಳೆಕಟ್ಟೆ-ಮಾರುಹೊಳೆ-ಹೊಯ್ಸಳಕಟ್ಟೆ-ಬೆಳ್ಳಾರ-ಬುಕ್ಕಾಪಟ್ಟಣ-ಮೇಕರೆಹಳ್ಳಿ ಮಾರ್ಗದ ವರೆಗೆ ಹೆದ್ದಾರಿ ವಿಸ್ತರಣೆಗೆ ಅವಶ್ಯ ಬೇಕಾಗಿರುವ ಜಮೀನನ್ನು ಹೆದ್ದಾರಿ ಕಾಯ್ದೆ ಅನ್ವಯ ವಶಪಡಿಸಿಕೊಂಡಿದ್ದು, ನಿಯಮದಂತೆ ಸಂಬಂಧಪಟ್ಟ ಜಮೀನುಗಳ ಮಾಲೀಕರ ಪಟ್ಟಿಯನ್ನು ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಭೂಮಾಲೀಕರಿಗೆ ನೋಟೀಸ್ ನೀಡಲಾಗಿದ್ದು , ಭೂಮಾಲೀಕರಿಗೆ ಅನುಕೂಲ ಮಾಡುವ ದೃಷ್ಠಿಯಿಂದ ಪ್ರಾಧಿಕಾರವೇ ಭೂಮಾಲೀಕರ ಬಳಿ ಬಂದು ದಾಖಲೆ ಸ್ವೀಕರಿಸಲಾಗುತ್ತಿದೆ ಎಂದರು.
         ನೊಂದಣಿ ಕಛೇರಿಯಲ್ಲಿ ಅತಿಹೆಚ್ಚು ಬೆಲೆಗೆ ನೋಂದಣಿಯಾಗಿರುವ ದರದಂತೆ ಪರಿಹಾರ ವಿತರಿಸಲಾಗುವುದು, ಇನ್ನು ಹೆಚ್ಚಿನ ಬೆಲೆ ಬೇಕೆಂದಿದ್ದಲ್ಲಿ ಸ್ಥಳೀಯವಾಗಿ ಮಾರಾಟವಾಗಿರುವ ಜಾಗದ ದಾಖಲಾತಿಗಳನ್ನು ನೀಡಿದಲ್ಲಿ ಮಾತ್ರವೇ ಅದರಂತೆ ಪರಿಹಾರ ಹೆಚ್ಚಳ ಮಾಡಬಹುದೆಂದರು. ವಶಪಡಿಸಿಕೊಂಡ ಜಮೀನಲ್ಲಿ ಭೂಮಿಯನ್ನು ಹೊರತುಪಡಿಸಿ ತಂತಿಬೇಲಿ, ಬೆಳೆ,ಬೋರ್ ವೆಲ್, ತೋಟಗಾರಿಕೆ ಬೆಳೆಗಳು ಮುಂತಾದವುಗಳಿದ್ದಲ್ಲಿ ಅವುಗಳಿಗೂ ಸಹ ನಿಗದಿ ಪಡಿಸಿದ ಮೊತ್ತವನ್ನು ಪರಿಹಾರವಾಗಿ ಪಡೆಯಬಹುದೆಂದರು.
            ಭೂಮಿ ಕಳೆದುಕೊಂಡ ಹೋಬಳಿಯ ನಾನಾ ಗ್ರಾಮಗಳ ರೈತರು ಸಧ್ಯ ಪ್ರಾಧಿಕಾರ ನೀಡುವ ಹಣವನ್ನು ಪಡೆದುಕೊಂಡು ನಂತರ ಹೆಚ್ಚುವರಿ ಪರಿಹಾರ ಕೋರಿ ದಾಖಲಾತಿಗಳೊಂದಿಗೆ ಅರ್ಜಿಸಲ್ಲಿಸಬಹುದು . ಜಿಲ್ಲಾಧಿಕಾರಿಗಳು ಆರ್ಬಿಟ್ರೇಟರ್ ಆಗಿರುವ ಸಮಿಯು ಹೆಚ್ಚಿನ ದರ ನೀಡುವಂತೆ ನಿರ್ದೇಶಿಸಿದಲ್ಲಿ ವ್ಯತ್ಯಾಸದ ಮೊತ್ತವನ್ನು ಬಡ್ಡಿಸೇರಿಸಿ ನೀಡಲಾಗುವುದು ಎಂದರು.
        ರೈತರ ಸಮಸ್ಯೆ : ಸರ್ಕಾರದಿಂದ ಪರಿಹಾರ ದೊರೆಯುವುದು ಖಚಿತವಿದ್ದರೂ ಸಹ ಜಮೀನಿನ ದಾಖಲೆಗಳನ್ನು ಒದಗಿಸಲು ರೈತರು ಪರದಾಡುವಂತಾಯಿತು. ಕೆಲ ರೈತರುಗಳ ಜಮೀನಿನ ಅನುಭವದಲ್ಲಿದ್ದರೂ ಪಹಣಿ,ಮ್ಯುಟೇಷನ್ ಗಳು ಬದಲವಣೆಯಾಗದೆ, ಸಾಗುವಳಿ ಚೀಟಿ ಇದ್ದರೂ ಪೋಡಾಗದೆ ಇನ್ನು ಅನೇಕ ಸಮಸ್ಯೆಗಳಿಂದ ಕೂಡಿದ್ದು ದಾಖಲೆಗಳ ಸಲ್ಲಿಸುವಿಕೆಯಲ್ಲಿ ಗೊಂದಲ ಮೂಡಿತ್ತು.

        ಇವರೊಟ್ಟಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುರೇಶ್, ಅಜ್ಜಪ್ಪ, ಸದಾನಂದ್ ಹಾಗೂ ಭೂಸ್ವಾಧೀನ ಪ್ರಾಧಿಕಾರಾದ ಅಧಿಕಾರಿಗಳು ಆಗಮಿಸಿದ್ದರು. ಕಂಪನಹಳ್ಳಿ,ಮಾರುಹೊಳೆ,ಬೆಳ್ಳಾರ, ಹೊಯ್ಸಳಕಟ್ಟೆ,ಗಾಣಧಾಳು,ಯಗಚಿಹಳ್ಳಿ,ದಸೂಡಿ,ದಬ್ಬಗುಂಟೆ ಮುಂತಾದ ಭಾಗಗಳ ರೈತರುಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...