ವಿಷಯಕ್ಕೆ ಹೋಗಿ

ಹೆದ್ದಾರಿಗೆ ಭೂಸ್ವಾಧೀನಗೊಂಡ ಭೂಮಾಲಿಕರಿಂದ ದಾಖಲಾತಿ ಸ್ವೀಕಾರ

        ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 234 ಕ್ಕೆ ಸಂಬಂಧಪಟ್ಟಂತೆ ಹುಳೀಯಾರು-ಶಿರಾ ಮಾರ್ಗ ಮಧ್ಯೆ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನು ಮಾಲೀಕರುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಜಮೀನಿನ ದಾಖಲಾತಿಗಳು, ಜಮೀನಿಗೆ ಬೇಕೆಂದಿರುವ ಪರಿಹಾರದ ಮೊತ್ತ ಇನ್ನಿತರ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ಮಾಹಿತಿವುಳ್ಳ ಅರ್ಜಿಯನ್ನು ಭರ್ತಿ ಮಾಡಿಸಿಕೊಳ್ಳುವ ಮೂಲಕ ವಿಶೇಷ ಭೂಸ್ವಾಧೀನಾಧಿಕಾರಿಗಳು ಸ್ವೀಕರಿಸಿದರು.
ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಹೆದ್ದಾರಿ ಭೂಸ್ವಾಧೀನ ಅಧಿಕಾರಿಗಳಿಗೆ ಭೂಮಾಲೀಕರು ದಾಖಲಾತಿಗಳನ್ನು ಸಲ್ಲಿಸಿದರು.
           ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ದಾಖಲಾತಿ ಸ್ವೀಕಾರ ಸಭೆಯಲ್ಲಿ ರಸ್ತೆ ವಿಸ್ತರಣೆಯಿಂದ ಜಮೀನು ಕಳೆದುಕೊಂಡ ರೈತರು ಪರಿಹಾರ ಪಡೆಯುವ ನಿಟ್ಟಿನಲ್ಲಿ ಜಮೀನಿನ ಮೂಲ ದಾಖಲಾತಿ ಪತ್ರಗಳು, ಕ್ರಯಪತ್ರ, ಮ್ಯುಟೇಶನ್, ಪಹಣಿ, ಕಂದಾಯಪಾವತಿ ರಸೀದಿ, ಭೂಪರಿವರ್ತನೆ ಆದೇಶ, ಸಾಗುವಳಿಚೀಟಿ, ರೆವಿನ್ಯೂ ನಕ್ಷೆಯೊಂದಿಗೆ ಮುಂತಾದ ದಾಖಲೆಗಳ ನಕಲನ್ನು ವಿಶೇಷಭೂಸ್ವಾಧೀನಾಧಿಕಾರಿಯಾದ ರಶ್ಮಿ ಅವರಿಗೆ ನೀಡಿದರು.
          ಪರಿಹಾರ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ರಶ್ಮಿ ಅವರು, ರಾಷ್ಟ್ರೀಯ ಹೆದ್ದಾರಿ 234 ಮಂಗಳೂರಿನಿಂದ ಪ್ರಾರಂಭವಾಗಿ ತಮಿಳುನಾಡಿನ ವಿಲ್ಲುಪುರಂಗೆ ಸಂಪರ್ಕ ಕಲ್ಪಿಸಲಿದ್ದು ಹುಳಿಯಾರು ಮಾರ್ಗವಾಗಿ ಶಿರಾವರೆಗೆ ಹಾದು ಹೋಗಿರುವ ಈ ರಸ್ತೆಗೆ ಸದ್ಯ ಭೂಸ್ವಾಧೀನ ಕಾರ್ಯ ಅಂತಿಮವಾಗಿದೆ ಎಂದರು. ಹುಳಿಯಾರು-ಶಿರಾ ಸೆಕ್ಷನ್ ಗೆ ಸಂಬಂಧಿಸಿದಂತೆ ಕಿಮೀ 243.30 ರಿಂದ 290.2 ವರೆಗೆ ಹುಳಿಯಾರು-ಬಳ್ಳೆಕಟ್ಟೆ-ಮಾರುಹೊಳೆ-ಹೊಯ್ಸಳಕಟ್ಟೆ-ಬೆಳ್ಳಾರ-ಬುಕ್ಕಾಪಟ್ಟಣ-ಮೇಕರೆಹಳ್ಳಿ ಮಾರ್ಗದ ವರೆಗೆ ಹೆದ್ದಾರಿ ವಿಸ್ತರಣೆಗೆ ಅವಶ್ಯ ಬೇಕಾಗಿರುವ ಜಮೀನನ್ನು ಹೆದ್ದಾರಿ ಕಾಯ್ದೆ ಅನ್ವಯ ವಶಪಡಿಸಿಕೊಂಡಿದ್ದು, ನಿಯಮದಂತೆ ಸಂಬಂಧಪಟ್ಟ ಜಮೀನುಗಳ ಮಾಲೀಕರ ಪಟ್ಟಿಯನ್ನು ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಭೂಮಾಲೀಕರಿಗೆ ನೋಟೀಸ್ ನೀಡಲಾಗಿದ್ದು , ಭೂಮಾಲೀಕರಿಗೆ ಅನುಕೂಲ ಮಾಡುವ ದೃಷ್ಠಿಯಿಂದ ಪ್ರಾಧಿಕಾರವೇ ಭೂಮಾಲೀಕರ ಬಳಿ ಬಂದು ದಾಖಲೆ ಸ್ವೀಕರಿಸಲಾಗುತ್ತಿದೆ ಎಂದರು.
         ನೊಂದಣಿ ಕಛೇರಿಯಲ್ಲಿ ಅತಿಹೆಚ್ಚು ಬೆಲೆಗೆ ನೋಂದಣಿಯಾಗಿರುವ ದರದಂತೆ ಪರಿಹಾರ ವಿತರಿಸಲಾಗುವುದು, ಇನ್ನು ಹೆಚ್ಚಿನ ಬೆಲೆ ಬೇಕೆಂದಿದ್ದಲ್ಲಿ ಸ್ಥಳೀಯವಾಗಿ ಮಾರಾಟವಾಗಿರುವ ಜಾಗದ ದಾಖಲಾತಿಗಳನ್ನು ನೀಡಿದಲ್ಲಿ ಮಾತ್ರವೇ ಅದರಂತೆ ಪರಿಹಾರ ಹೆಚ್ಚಳ ಮಾಡಬಹುದೆಂದರು. ವಶಪಡಿಸಿಕೊಂಡ ಜಮೀನಲ್ಲಿ ಭೂಮಿಯನ್ನು ಹೊರತುಪಡಿಸಿ ತಂತಿಬೇಲಿ, ಬೆಳೆ,ಬೋರ್ ವೆಲ್, ತೋಟಗಾರಿಕೆ ಬೆಳೆಗಳು ಮುಂತಾದವುಗಳಿದ್ದಲ್ಲಿ ಅವುಗಳಿಗೂ ಸಹ ನಿಗದಿ ಪಡಿಸಿದ ಮೊತ್ತವನ್ನು ಪರಿಹಾರವಾಗಿ ಪಡೆಯಬಹುದೆಂದರು.
            ಭೂಮಿ ಕಳೆದುಕೊಂಡ ಹೋಬಳಿಯ ನಾನಾ ಗ್ರಾಮಗಳ ರೈತರು ಸಧ್ಯ ಪ್ರಾಧಿಕಾರ ನೀಡುವ ಹಣವನ್ನು ಪಡೆದುಕೊಂಡು ನಂತರ ಹೆಚ್ಚುವರಿ ಪರಿಹಾರ ಕೋರಿ ದಾಖಲಾತಿಗಳೊಂದಿಗೆ ಅರ್ಜಿಸಲ್ಲಿಸಬಹುದು . ಜಿಲ್ಲಾಧಿಕಾರಿಗಳು ಆರ್ಬಿಟ್ರೇಟರ್ ಆಗಿರುವ ಸಮಿಯು ಹೆಚ್ಚಿನ ದರ ನೀಡುವಂತೆ ನಿರ್ದೇಶಿಸಿದಲ್ಲಿ ವ್ಯತ್ಯಾಸದ ಮೊತ್ತವನ್ನು ಬಡ್ಡಿಸೇರಿಸಿ ನೀಡಲಾಗುವುದು ಎಂದರು.
        ರೈತರ ಸಮಸ್ಯೆ : ಸರ್ಕಾರದಿಂದ ಪರಿಹಾರ ದೊರೆಯುವುದು ಖಚಿತವಿದ್ದರೂ ಸಹ ಜಮೀನಿನ ದಾಖಲೆಗಳನ್ನು ಒದಗಿಸಲು ರೈತರು ಪರದಾಡುವಂತಾಯಿತು. ಕೆಲ ರೈತರುಗಳ ಜಮೀನಿನ ಅನುಭವದಲ್ಲಿದ್ದರೂ ಪಹಣಿ,ಮ್ಯುಟೇಷನ್ ಗಳು ಬದಲವಣೆಯಾಗದೆ, ಸಾಗುವಳಿ ಚೀಟಿ ಇದ್ದರೂ ಪೋಡಾಗದೆ ಇನ್ನು ಅನೇಕ ಸಮಸ್ಯೆಗಳಿಂದ ಕೂಡಿದ್ದು ದಾಖಲೆಗಳ ಸಲ್ಲಿಸುವಿಕೆಯಲ್ಲಿ ಗೊಂದಲ ಮೂಡಿತ್ತು.

        ಇವರೊಟ್ಟಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುರೇಶ್, ಅಜ್ಜಪ್ಪ, ಸದಾನಂದ್ ಹಾಗೂ ಭೂಸ್ವಾಧೀನ ಪ್ರಾಧಿಕಾರಾದ ಅಧಿಕಾರಿಗಳು ಆಗಮಿಸಿದ್ದರು. ಕಂಪನಹಳ್ಳಿ,ಮಾರುಹೊಳೆ,ಬೆಳ್ಳಾರ, ಹೊಯ್ಸಳಕಟ್ಟೆ,ಗಾಣಧಾಳು,ಯಗಚಿಹಳ್ಳಿ,ದಸೂಡಿ,ದಬ್ಬಗುಂಟೆ ಮುಂತಾದ ಭಾಗಗಳ ರೈತರುಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...