ವಿಷಯಕ್ಕೆ ಹೋಗಿ

ಸಾಧನೆಗೆ ಪರಿಶ್ರಮ ಮುಖ್ಯ : ಕುಗ್ರಾಮದ ಹುಡುಗ ಇಂದು ಜಿಲ್ಲಾಧಿಕಾರಿ ಸ್ಥಾನಕ್ಕೆ

          ವಿದ್ಯಾರ್ಥಿ ಜೀವನದಲ್ಲಿ ಸಾಧನೆಯ ಗುರಿಹೊಂದಿ ಅಭ್ಯಾಸಮಾಡಿದಲ್ಲಿ ಜೀವನದಲ್ಲಿ ಉನ್ನತಘಟ್ಟ ಮುಟ್ಟಬಹುದು ಎಂಬುದಕ್ಕೆ ಹೋಬಳಿಯ ಹೆಚ್.ಮೇಲನಹಳ್ಳಿಯ ಎಂ.ಕೆ.ಶ್ರೀರಂಗಯ್ಯ ಅವರು ಜಿಲ್ಲಾಧಿಕಾರಿ ಸ್ಥಾನಕ್ಕೆ ಏರಿರುವುದು ಸಾಕ್ಷಿಯಾಗಿದೆ.
ಅಪರಜಿಲ್ಲಾಧಿಕಾರಿ ಬಡ್ತಿಪಡೆದು ತಮ್ಮ ಸ್ವಗ್ರಾಮ ಹುಳಿಯಾರು ಹೋಬಳಿ ಹೆಚ್.ಮೇಲನಹಳ್ಳಿ ಆಗಮಿಸಿದ ಶ್ರೀರಂಗಯ್ಯ ಅವರನ್ನು ಗ್ರಾಮಸ್ಥರೆಲ್ಲಾ ಸೇರಿ ಪೂರ್ಣಕುಂಭದ ಮೂಲಕ ಸ್ವಾಗತಿಸಿದರು.
         ಈಗಲೂ ಸಹ ಸರಿಯಾದ ಸಂಪರ್ಕ ವ್ಯವಸ್ಥೆಯಿಲ್ಲದ ಕುಗ್ರಾಮವಾಗೆ ಉಳಿದಿರುವ ಹೆಚ್.ಮೇಲನಹಳ್ಳಿಯಲ್ಲಿ ಆಡಿ ಬೆಳೆದ ಶ್ರೀರಂಗಯ್ಯನವರು ಇಂದು ಚಿತ್ರದುರ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಬಡ್ತಿ ಪಡೆದ ಇವರನ್ನು ಸ್ವಗ್ರಾಮಕ್ಕೆ ಕರೆಸಿದ ಗ್ರಾಮದವರು ನಮ್ಮೂರ ಹುಡುಗ ಈಗ ಜಿಲ್ಲಾಧಿಕಾರಿಯೆಂದು ಈತನನ್ನು ಅಭೂತಪೂರ್ವವಾಗಿ ಸ್ವಾಗತಿಸಿ ಸಂಭ್ರಮಿಸಿದರು.
        ಇದಕ್ಕಾಗಿ ಗ್ರಾಮದ ರಸ್ತೆಗಳನೆಲ್ಲಾ ಹಸಿರು ತೋರಣಗಳಿಂದ ಅಲಂಕರಿಸಿ, ಗ್ರಾಮದ ಚಿಕ್ಕಮಕ್ಕಳು ಕಳಸವನ್ನು ಹೊತ್ತು ,ನಾದಸ್ವರದ ಪೂರ್ಣಕುಂಬ ಸ್ವಾಗತ ನೀಡಿ ಜಿಲ್ಲಾಧಿಕಾರಿ ದಂಪತಿಗಳನ್ನು ಗ್ರಾಮದ ದೇವಾಲಯದ ಬಳಿ ಎದುರುಗೊಂಡು ಮೆರವಣಿಗೆಯಲ್ಲಿ ಕರೆದೊಯ್ದರು.
         ಊರಹಬ್ಬವೇನೋ ಎಂಬಂತೆ ಹಳ್ಳಿಯಲ್ಲಿನ ಎಲ್ಲರೂ ಪಾಲ್ಗೊಂಡು ಅಭಿನಂಧನಾ ಸಮಾರಂಭ ಏರ್ಪಡಿಸಿ ಕ್ಷೇತ್ರದ ಶಾಸಕರನ್ನು, ಶಿಕ್ಷಣಕ್ಕೆ ಸಹಕರಿಸಿದ್ದ ಎಲ್ಲಾ ಸ್ನೇಹಿತರು, ಶಿಕ್ಷಕರನ್ನು ಅಕ್ಕಪಕ್ಕದ ಗ್ರಾಮಸ್ಥರನ್ನು ಬರಮಾಡಿಕೊಂಡು ಇವರನ್ನು ಸನ್ಮಾನಿಸಿ ಗೌರವಿಸಿದರು.
ಹುಳಿಯಾರು ಹೋಬಳಿ ಹೆಚ್.ಮೇಲನಹಳ್ಳಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶ್ರೀರಂಗಯ್ಯ ಅವರನ್ನು ಸನ್ಮಾನಿಸಲಾಯಿತು. 
       ಬಡತನದ ನಡುವೆ ಶಿಕ್ಷಣ: ಬಡತನ ಕುಟುಂಬದ ಹಿನ್ನಲೆಯ ಇವರು ಯಾವುದಕ್ಕು ಎದೆಗುಂದದೆ ಬೇರೆಯವರ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಾ ಜೊತೆಗಾರ ಹುಡುಗರೊಂದಿಗೆ ಬುಗುರಿ, ಗೋಲಿ ಆಡಿಕೊಂಡು ಬೆಳೆದು ಪ್ರಾಥಮಿಕ ಶಿಕ್ಷಣವನ್ನು ಇದೇ ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮುಗಿಸಿ, ನಂತರ ಚಿಕ್ಕನಾಯಕನಹಳ್ಳಿಯ ದೇಶಿಯ ವಿದ್ಯಾಪೀಠದಲ್ಲಿ ಪಿ.ಯು.ಸಿ. ಹಾಗೂ ತುಮಕೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬಿ.ಎಸ್.ಸಿ. ಪಡೆದರು . ಪ್ರತಿ ಹಂತದಲ್ಲೂ ಶಿಕ್ಷಣಕ್ಕಾಗಿ, ಪುಸ್ತಕ ಬಟ್ಟೆಗಾಗಿ ಸಮಸ್ಯೆಗಳನ್ನೇ ಎದುರಿಸಿ, ಒಂದು ಹಂತದಲ್ಲಿ ಹಾಸ್ಟಲ್ ದೊರೆಯದೆ ತಿನ್ನಲು ಊಟ, ತಿಂಡಿಯಿಲ್ಲದೆ ಮಲಗಿದ ದಿನಗಳಿದ್ದವು. ಸ್ನೇಹಿತರು ಮಧ್ಯಾಹ್ನ ಶಾಲೆಯಲ್ಲಿ ಕೊಡುತಿದ್ದ ಉಪ್ಪಿಟ್ಟನ್ನು ಪೇಪರಲ್ಲಿ ಕಟ್ಟಿಕೊಂಡು ತಂದು ವಾಸವಿದ್ದ ರೂಮಿನ ಕಿಟಕಿಯಲ್ಲಿ ಇಟ್ಟು ಹೋಗಿದ್ದ ದಿನಗಳಿದ್ದವು.
         ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್.ಸಿ. ಇಂಗ್ಲೀಷ್ ಮತ್ತು ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಂತರ ಎಲ್.ಎಲ್.ಬಿ. ಶಿಕ್ಷಣದಲ್ಲೂ ಸಹಾ ಉತ್ತಮ ಫಲಿತಾಂಶ ಪಡೆದಿರುವ ಇವರು ಶೈಕ್ಷಣಿಕ ಹಂತವನ್ನು ಮತ್ತೊಬ್ಬರ ನೆರವು ಹಾಗೂ ಸಹಾಯದಿಂದ ಮುಗಿದ ದಿನಗಳನ್ನು ಇನ್ನು ಮರೆತಿಲ್ಲ.
      ಉದ್ಯೋಗದ ಹಾದಿ : ಮಂಡ್ಯಜಿಲ್ಲೆಯ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಸಲ್ಲಿಸಿ ನಂತರದ ದಿನಗಳಲ್ಲಿ, ತುಮಕೂರು ಹಾಲೂ ಒಕ್ಕೂಟ್ಟದಲ್ಲಿ, ಬೆಂಗಳೂರು ಯೋಜನ ಇಲಾಖೆಯಲ್ಲಿ ಸಹನಿರ್ದೇಶಕರಾಗಿ ಉಪನಿರ್ದೇಶಕರಾಗಿ ಪ್ರಗತಿ ಕಾಣುತ್ತಾ ಹೋದ ಇವರು ಕೆ.ಎ.ಎಸ್. ತೇರ್ಗಡೆಯಾಗಿ ಬೆಂಗಳೂರು ಮತ್ತು ಕುಣಿಗಲ್ ನಲ್ಲಿ ತಹಶೀಲ್ದಾರ್ ಆಗಿ , ಎ.ಸಿ.ಯಾಗಿ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಇದೀಗ ಅಪರ ಜಿಲ್ಲಾಧಿಕಾರಿಯಾಗಿ ಭಡ್ತಿ ಪಡೆದು ಚಿತ್ರದುರ್ಗದಲ್ಲಿ ಸೇವೆಸಲ್ಲಿಸುತ್ತಿದ್ದಾರೆ.
          ಈ ಹಿನ್ನಲೆಯಲ್ಲಿ ನಮ್ಮೂರಿನ ಹುಡುಗ ಜಿಲ್ಲೆಗೆ ಅಧಿಕಾರಿಯಾಗಿರುವುದು ನಮ್ಮ ಗ್ರಾಮಕ್ಕೆ ಒಂದು ಕಿರೀಟವಿಟ್ಟಂತೆ ಎಂದು ಭಾವಿಸಿದ ಗ್ರಾಮಸ್ಥರು ಅಭಿಮಾನಪೂರ್ವಕವಾಗಿ ಕರೆದು ಸತ್ಕರಿಸಿದರು.
ಇವರ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು , ಉತ್ತಮ ಶಿಕ್ಷಣ ಯಶಸ್ಸಿಗೆ ದಾರಿ ಎಂಬುದನ್ನ ಇವರು ತೋರಿಸಿದ್ದಾರೆ. ಇವರನ್ನು ಮಾದರಿಯಾಗಿ ಇಟ್ಟುಕೊಂಡು ಇಂದಿನ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಹುದ್ದೆಗಳನ್ನ ಹೊಂದಿ ಸಮಾಜದ ಅಭಿವೃದ್ದಿಗೆ ಮುಂದಾಗುವಂತೆ ಸಲಹೆ ನೀಡಿದರು.
ಈ ಸಮಾರಂಭದಲ್ಲಿ ಹೊಸದುರ್ಗ ತಹಶೀಲ್ದಾರ್ ಲಕ್ಷ್ಮಣಪ್ಪ, ಹಿರಿಯ ಶಿಕ್ಷಕ ಪ್ರಸನ್ನಕುಮಾರ ಶೆಟ್ರು, ಮಹದೇವಮ್ಮ ಶ್ರೀರಂಗಯ್ಯ, ವಕೀಲ ಸದಾಶಿವು, ಪಿ.ಎಸ್.ಐ.ಘೋರ್ಪಡೆ, ಶಿಕ್ಷಕರಾದ ರಾಜಣ್ಣ, ಮಂಜುಳ, ನಾಗರಾಜು, ಸಿದ್ದಯ್ಯ, ಕರಿಯಪ್ಪ, ಮುಖಂಡರಾದ ಶಾಂತಮೂರ್ತಿ, ಮೋಹನ್, ಬಸವರಾಜು, ಮಲ್ಲಿಕಾರ್ಜುನಯ್ಯ, ಸುರೇಶ್ ಇತರರು ಹಾಜರಿದ್ದರು.
------------------------------

         ವಿದ್ಯೆ ಯಾರ ಸ್ವತ್ತು ಅಲ್ಲ ಆದು ಸಾಧಕನ ಸ್ವತ್ತು, ಶ್ರದ್ಧೆ ಹಾಗೂ ಪರಿಶ್ರಮದಿಂದ ಓದಿದರೆ ಏನೂ ಬೇಕಾದರು ಸಾಧಿಸಬಹುದು ಎಂಬುದಕ್ಕೆ ಇವರು ಸಾಕ್ಷಿ : ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ , 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.