ವಿಷಯಕ್ಕೆ ಹೋಗಿ

ಅನ್ನ ನೀಡುವ ನೇಗಿಲಯೋಗಿಗೆ ಅನ್ನ ದೊರೆಯದಂತ ದುಸ್ಥಿತಿ : ಗೋವಿಂದರಾಜು

        ಬಿಸಿಲು,ಮಳೆಯನ್ನದೆ ತನ್ನ ಮೈ ಬೆವರು ಬಸಿದು ಹೊಲದಲ್ಲಿ ಕೆಲಸ ಮಾಡಿ ಆಹಾರ ಧಾನ್ಯಗಳನ್ನು ಬೆಳೆದು ಇಡಿ ರಾಷ್ಟ್ರಕ್ಕೆ ಅನ್ನ ನೀಡುವ ನೇಗಿಲಯೋಗಿಗೆ ಈ ಬಾರಿ ಉತ್ತಮ ಮಳೆಯಾಗದೆ ಬರಗಾಲ ಆವರಿಸಿ ಅನ್ನಕ್ಕಾಗಿ ಪರಿತಪಿಸುವಂತ ದುಸ್ಥಿತಿಯೊದಗಿದೆ ಎಂದು ರೈತಸಂಘದ ತುಮಕೂರು ಜಿಲ್ಲಾಧ್ಯಕ್ಷ ಗೋವಿಂದರಾಜು ವಿಷಾದಿಸಿದರು..
ಹುಳಿಯಾರಿನ ಲಿಂಗಪ್ಪನಪಾಳ್ಯದಲ್ಲಿ ರೈತಸಂಘದ ಗ್ರಾಮಘಟಕದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ಗೋವಿಂದರಾಜು ಸಂಘಟನೆ ಕುರಿತು ಮಾತನಾಡಿದರು.
         ಹುಳಿಯಾರು ಹೋಬಳಿ ಲಿಂಗಪ್ಪನಪಾಳ್ಯದ ಶ್ರೀರಾಮದೇವರ ದೇವಾಲಯದ ಆವರಣದಲ್ಲಿ ಭಾನುವಾರ ಸಂಜೆ ನಡೆದ ರೈತಸಂಘ (ಪುಟ್ಟಣ್ಣಯ್ಯ ಬಣ) ಹಾಗೂ ಹಸಿರುಸೇನೆಯ ಗ್ರಾಮಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
         ರೈತರೇ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ ಇಂದು ರೈತಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಮುಂದಾಗುತ್ತಿಲ್ಲ. ಅಲ್ಲದೆ ರಾಜಕಾರಣಿಗಳು ತಮ್ಮ ಪಕ್ಷದ ಹಿತವನ್ನೇ ಮುಖ್ಯವಾಗಿಸಿ ಕೊಂಡು ಸಾಗುತ್ತಿದ್ದಾರೆ ಹೊರತು ದೇಶದ ರೈತ ಬಗ್ಗೆ ಗಮನಗೊಡುತ್ತಿಲ್ಲ ಎಂದರು. ಹುಳಿಯಾರು ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಅಂತರ್ಜಲ ಕುಸಿದು ಬೋರ್ ವೆಲ್ ಗಳು ಬತ್ತಿಹೋಗಿದ್ದು ನೀರಿಲ್ಲದೆ ಇಲ್ಲಿನ ಕೃಷಿಚಟುವಟಿಕೆಗಳು ಸ್ಥಗಿತಗೊಳ್ಳುವಂತಾಗಿವೆ. ಈ ಬಗ್ಗೆ ಸಚಿವರಿಗೆ,ಶಾಸಕರಿಗೆ ತಿಳಿದಿದ್ದರೂ ಸಹ ಇದುವರೆಗೂ ಈ ಬಗ್ಗೆ ಕ್ರಮಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.
        ರೈತರು ತಮಗೆ ದೊರೆಯಬೇಕಾದ ಸೌಲಭ್ಯಗಳನ್ನು ಸುಮ್ಮನೆ ಕುಳಿತಲ್ಲಿ ಪಡೆಯಲಾಗುವುದಿಲ್ಲ ಅದಕ್ಕೆ ರೈತರೆಲ್ಲಾ ಸೇರಿ ಹೋರಾಟ, ಪ್ರತಿಭಟನೆಯ ಹಾದಿಯಲ್ಲಿ ಸಾಗಿ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಬೇಕಿದೆ ಆ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಎಲ್ಲಾ ರೈತರು ಸಂಘಟನಾತ್ಮಕವಾಗಿ ಒಗ್ಗೂಡಬೇಕಿದೆ ಎಂದರು.
          ರಾಜ್ಯ ರೈತಸಂಘದ ಸೋಮಗುದ್ದ ರಂಗಸ್ವಾಮಿ ಮಾತನಾಡಿ , ಹುಳಿಯಾರು ಸುತ್ತಮುತ್ತ ಅನೇಕ ದೊಡ್ಡದೊಡ್ಡ ಕೆರೆಗಳಿದ್ದು ಅವೆಲ್ಲಾ ಬರಿದಾಗಿ ಭೂಮಿಯಲ್ಲ ಒಣಗಿ ಬೆಂಡಾಗಿದೆ. ಹಿಂದೆ ಕಾಲಕ್ಕೆ ತಕ್ಕಂತೆ ಮಳೆಯಾಗಿ ಕೆರೆಕಟ್ಟೆ ತುಂಬುತ್ತಿದ್ದವು ಆದರೆ ಈಗ ಪರಿಸರದಲ್ಲಿ ಸಮತೋಲನವಿಲ್ಲದೆ ಸರಿಯಗಿ ಮಳೆ ಬಾರದೆ ಬರಗಾಲ ಆವರಿಸುತ್ತಿದೆ . ಈ ಭಾಗಕ್ಕೆ ಹೇಮಾವತಿ ನೀರು ಹರಿಸುವ ಕಾರ್ಯಕ್ಕೆ ಹಸಿರು ನಿಶಾನೆಯಿದ್ದರೂ ಸಹ ಕೆಲವರು ತಮ್ಮ ಹಿತಕಾಗಿ ಹತ್ತುಹಲವು ತೊಡಕುಗಳನ್ನೊಡಿ ಈ ಭಾಗಕ್ಕೆ ನೀರು ಹರಿಸುವಲ್ಲಿ ವಿಳಂಬ ಮಾಡುತ್ತಿದ್ದಾರೆ. ಒಟ್ಟಾರೆ ರೈತರೆಲ್ಲಾ ಒಂದಾಗಿ ನಮ್ಮ ಭಾಗಕ್ಕೆ ನೀರು ತಂದೇತರುತ್ತೇವೆ ಎಂಬ ದೃಢ ಸಂಕಲ್ಪ ಮಾಡಿ ಮುನ್ನಡೆದರೆ ಯಾರಿಗೂ ಜಗ್ಗದೆ ಈ ಭಾಗಕ್ಕೆ ನೀರು ಹರಿಸಬಹುದಾಗಿದೆ ಎಂದರು.

            ರೈತಸಂಘದ ಚಿ.ನಾ.ಹಳ್ಳಿ ತಾಲ್ಲೂಕು ಅಧ್ಯಕ್ಷ ಹೊಸಹಳ್ಳಿ ಚಂದ್ರಪ್ಪ, ಕಾರ್ಯದರ್ಶಿ ವಕೀಲ ರಮೇಶ್, ಗಂಗಾಧರ್,ನಿರಂಜನಮೂರ್ತಿ,ಕಾಡೇನಹಳ್ಳಿ ಗಂಗಾಧರ್, ಲಿಂಗಪ್ಪನಪಾಳ್ಯದ ಕಾಯಿಕುಮಾರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...