ವಿಷಯಕ್ಕೆ ಹೋಗಿ

ಅನ್ನ ನೀಡುವ ನೇಗಿಲಯೋಗಿಗೆ ಅನ್ನ ದೊರೆಯದಂತ ದುಸ್ಥಿತಿ : ಗೋವಿಂದರಾಜು

        ಬಿಸಿಲು,ಮಳೆಯನ್ನದೆ ತನ್ನ ಮೈ ಬೆವರು ಬಸಿದು ಹೊಲದಲ್ಲಿ ಕೆಲಸ ಮಾಡಿ ಆಹಾರ ಧಾನ್ಯಗಳನ್ನು ಬೆಳೆದು ಇಡಿ ರಾಷ್ಟ್ರಕ್ಕೆ ಅನ್ನ ನೀಡುವ ನೇಗಿಲಯೋಗಿಗೆ ಈ ಬಾರಿ ಉತ್ತಮ ಮಳೆಯಾಗದೆ ಬರಗಾಲ ಆವರಿಸಿ ಅನ್ನಕ್ಕಾಗಿ ಪರಿತಪಿಸುವಂತ ದುಸ್ಥಿತಿಯೊದಗಿದೆ ಎಂದು ರೈತಸಂಘದ ತುಮಕೂರು ಜಿಲ್ಲಾಧ್ಯಕ್ಷ ಗೋವಿಂದರಾಜು ವಿಷಾದಿಸಿದರು..
ಹುಳಿಯಾರಿನ ಲಿಂಗಪ್ಪನಪಾಳ್ಯದಲ್ಲಿ ರೈತಸಂಘದ ಗ್ರಾಮಘಟಕದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ಗೋವಿಂದರಾಜು ಸಂಘಟನೆ ಕುರಿತು ಮಾತನಾಡಿದರು.
         ಹುಳಿಯಾರು ಹೋಬಳಿ ಲಿಂಗಪ್ಪನಪಾಳ್ಯದ ಶ್ರೀರಾಮದೇವರ ದೇವಾಲಯದ ಆವರಣದಲ್ಲಿ ಭಾನುವಾರ ಸಂಜೆ ನಡೆದ ರೈತಸಂಘ (ಪುಟ್ಟಣ್ಣಯ್ಯ ಬಣ) ಹಾಗೂ ಹಸಿರುಸೇನೆಯ ಗ್ರಾಮಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
         ರೈತರೇ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ ಇಂದು ರೈತಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಮುಂದಾಗುತ್ತಿಲ್ಲ. ಅಲ್ಲದೆ ರಾಜಕಾರಣಿಗಳು ತಮ್ಮ ಪಕ್ಷದ ಹಿತವನ್ನೇ ಮುಖ್ಯವಾಗಿಸಿ ಕೊಂಡು ಸಾಗುತ್ತಿದ್ದಾರೆ ಹೊರತು ದೇಶದ ರೈತ ಬಗ್ಗೆ ಗಮನಗೊಡುತ್ತಿಲ್ಲ ಎಂದರು. ಹುಳಿಯಾರು ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಅಂತರ್ಜಲ ಕುಸಿದು ಬೋರ್ ವೆಲ್ ಗಳು ಬತ್ತಿಹೋಗಿದ್ದು ನೀರಿಲ್ಲದೆ ಇಲ್ಲಿನ ಕೃಷಿಚಟುವಟಿಕೆಗಳು ಸ್ಥಗಿತಗೊಳ್ಳುವಂತಾಗಿವೆ. ಈ ಬಗ್ಗೆ ಸಚಿವರಿಗೆ,ಶಾಸಕರಿಗೆ ತಿಳಿದಿದ್ದರೂ ಸಹ ಇದುವರೆಗೂ ಈ ಬಗ್ಗೆ ಕ್ರಮಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.
        ರೈತರು ತಮಗೆ ದೊರೆಯಬೇಕಾದ ಸೌಲಭ್ಯಗಳನ್ನು ಸುಮ್ಮನೆ ಕುಳಿತಲ್ಲಿ ಪಡೆಯಲಾಗುವುದಿಲ್ಲ ಅದಕ್ಕೆ ರೈತರೆಲ್ಲಾ ಸೇರಿ ಹೋರಾಟ, ಪ್ರತಿಭಟನೆಯ ಹಾದಿಯಲ್ಲಿ ಸಾಗಿ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಬೇಕಿದೆ ಆ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಎಲ್ಲಾ ರೈತರು ಸಂಘಟನಾತ್ಮಕವಾಗಿ ಒಗ್ಗೂಡಬೇಕಿದೆ ಎಂದರು.
          ರಾಜ್ಯ ರೈತಸಂಘದ ಸೋಮಗುದ್ದ ರಂಗಸ್ವಾಮಿ ಮಾತನಾಡಿ , ಹುಳಿಯಾರು ಸುತ್ತಮುತ್ತ ಅನೇಕ ದೊಡ್ಡದೊಡ್ಡ ಕೆರೆಗಳಿದ್ದು ಅವೆಲ್ಲಾ ಬರಿದಾಗಿ ಭೂಮಿಯಲ್ಲ ಒಣಗಿ ಬೆಂಡಾಗಿದೆ. ಹಿಂದೆ ಕಾಲಕ್ಕೆ ತಕ್ಕಂತೆ ಮಳೆಯಾಗಿ ಕೆರೆಕಟ್ಟೆ ತುಂಬುತ್ತಿದ್ದವು ಆದರೆ ಈಗ ಪರಿಸರದಲ್ಲಿ ಸಮತೋಲನವಿಲ್ಲದೆ ಸರಿಯಗಿ ಮಳೆ ಬಾರದೆ ಬರಗಾಲ ಆವರಿಸುತ್ತಿದೆ . ಈ ಭಾಗಕ್ಕೆ ಹೇಮಾವತಿ ನೀರು ಹರಿಸುವ ಕಾರ್ಯಕ್ಕೆ ಹಸಿರು ನಿಶಾನೆಯಿದ್ದರೂ ಸಹ ಕೆಲವರು ತಮ್ಮ ಹಿತಕಾಗಿ ಹತ್ತುಹಲವು ತೊಡಕುಗಳನ್ನೊಡಿ ಈ ಭಾಗಕ್ಕೆ ನೀರು ಹರಿಸುವಲ್ಲಿ ವಿಳಂಬ ಮಾಡುತ್ತಿದ್ದಾರೆ. ಒಟ್ಟಾರೆ ರೈತರೆಲ್ಲಾ ಒಂದಾಗಿ ನಮ್ಮ ಭಾಗಕ್ಕೆ ನೀರು ತಂದೇತರುತ್ತೇವೆ ಎಂಬ ದೃಢ ಸಂಕಲ್ಪ ಮಾಡಿ ಮುನ್ನಡೆದರೆ ಯಾರಿಗೂ ಜಗ್ಗದೆ ಈ ಭಾಗಕ್ಕೆ ನೀರು ಹರಿಸಬಹುದಾಗಿದೆ ಎಂದರು.

            ರೈತಸಂಘದ ಚಿ.ನಾ.ಹಳ್ಳಿ ತಾಲ್ಲೂಕು ಅಧ್ಯಕ್ಷ ಹೊಸಹಳ್ಳಿ ಚಂದ್ರಪ್ಪ, ಕಾರ್ಯದರ್ಶಿ ವಕೀಲ ರಮೇಶ್, ಗಂಗಾಧರ್,ನಿರಂಜನಮೂರ್ತಿ,ಕಾಡೇನಹಳ್ಳಿ ಗಂಗಾಧರ್, ಲಿಂಗಪ್ಪನಪಾಳ್ಯದ ಕಾಯಿಕುಮಾರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...