ವಿಷಯಕ್ಕೆ ಹೋಗಿ

ಕೆರೆ ಒತ್ತುವರಿ ತೆರವು : ಮೂರು ತಿಂಗಳ ಗಡುವು

 ಕೆರೆ ಒತ್ತುವರಿ ತೆರವು : ಮೂರು ತಿಂಗಳ ಗಡುವು
ಪುನರ್ವಸತಿಗೆ ಲಿಂಗಪ್ಪನಪಾಳ್ಯದ ಬಳಿ ಜಾಗ ಬಿಟ್ಟು ಕೊಡುವುದಿಲ್ಲ : ಗ್ರಾಮಸ್ಥರು
                             ---------------------------------------------------------------
ಹುಳಿಯಾರು ಪಟ್ಟಣದ ಕೆರೆ ಒತ್ತುವರಿ ಜಾಗವನ್ನು ತೆರವು ಮಾಡುವ ಮೊದಲು ಇಲ್ಲಿನ ನಿವಾಸಿಗಳಿಗೆ ಬೇರೆಡೆ ಪುನರ್ವಸತಿ ಕಲ್ಪಿಸಿಕೊಡುವಂತೆ ಶಂಕರಪುರ ಬಡಾವಣೆಯ ನಿವಾಸಿಗಳು ಕೋರಿದರೆ ಯಾವುದೇ ಕಾರಣಕ್ಕೂ ಅಲ್ಲಿನ ನಿರಾಶ್ರಿತರಿಗೆ ನಮ್ಮೂರಿಗೆ ಸೇರಿದ ಗೋಮಾಳದಲ್ಲಿ ಸ್ಥಳಾವಾಕಾಶ ಕಲ್ಪಿಸಕೂಡದೆಂದು ಲಿಂಗಪ್ಪನಪಾಳ್ಯದವರು ವಾಗ್ವಾದ ನಡೆಸಿದ ಪ್ರಸಂಗ ಶಾಸಕರು ಹಾಗೂ ತಹಶೀಲ್ದಾರರ ಸಮಕ್ಷಮ ನಡೆಯಿತು.


ಇಂದು ಪಟ್ಟಣದ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಕೊಡುತ್ತಿರುವಾಗಲೇ ಶಾಸಕರಿಗೆ ಎರಡು ಕಡೆಯವರು ತಂತಮ್ಮ ಅಹವಾಲು ಸಲ್ಲಿಸಿದರು. ನಿರಾಶ್ರಿತರಿಗೆ ತಮ್ಮ ಗ್ರಾಮದ ಬಳಿಯ ಗೋಮಾಳದಲ್ಲಿ ಜಾಗ ಕೊಡುವ ಬಗ್ಗೆ ಚಿಂತನೆ ನಡೆದಿರುವುದನ್ನು ಅರಿತ ಅಲ್ಲಿನ ಗ್ರಾಮಸ್ಥರು ಗ್ರಾಮದ ಪ್ರತಿಯೊಬ್ಬರು ಇಂದು ಶಾಸಕರ ಬಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸಾರಿ ಹಾಕುವ ಮುಖಾಂತರ ಗ್ರಾಮದ ನೂರಾರು ಜನರು ಪಾಲ್ಗೊಳ್ಳುವಂತೆ ನೋಡಿಕೊಂಡರು.


ಗ್ರಾಮದ ಪರವಾಗಿ ಮಾತನಾಡಿದ ಬೀರಣ್ಣ ಹಾಗೂ ಪ್ರಭಣ್ಣ ಗ್ರಾಮದವರು ಧಾರ್ಮಿಕ ಕಾರ್ಯಗಳಿಗೆ ಮೀಸಲಿಟ್ಟ ಪ್ರದೇಶವನ್ನು ಯಾವುದೇ ಕಾರಣಕ್ಕೂ ಅನ್ಯಕಾರಣಗಳಿಗೆ ಕೊಡುವುದಕ್ಕೆ ಸಾಧ್ಯವಿಲ್ಲ.ಹುಳಿಯಾರು ಕೆರೆ ಅಂಗಳದಲ್ಲಿರುವವರು ನಿರ್ಗತಿಕರಲ್ಲ ಅಲ್ಲದೆ ಸ್ಥಳೀಯರೂ ಅಲ್ಲ, ಬೇರೆಡೆಯಿಂದ ಬಂದಂತವರಾಗಿದ್ದಾರೆ,ಅಲ್ಲಿನ ಜಮೀನುಗಳನ್ನು ಉತ್ತಮ ಬೆಲೆಗೆ ಮಾರಿಕೊಂಡು ಇಲ್ಲಿಗೆ ಬಂದು ಗುಡಿಸಲು ಹಾಕಿಕೊಂಡಿದ್ದಾರೆ. ಇಂತಹವರಿಗೆ ಯಾವುದೇ ಕಾರಣಕ್ಕೂ ನಮ್ಮೂರ ಹತ್ತಿರ ಪುನರ್ವಸತಿ ಕಲ್ಪಿಸಿಕೊಡಕೂಡದು ಎಂದು ಪಟ್ಟುಹಿಡಿದರು. ಗೋಮಾಳದ ಜಾಗ ಅನಾದಿಕಾಲದಿಂದಲೂ ಇದ್ದು ಅದನ್ನು ತಮ್ಮ ಗ್ರಾಮದವರಿಗೆ ಮೀಸಲಿರಿಸಬೇಕು ಬೇರೆ ಯಾರಿಗೂ ಕೊಡಕೂಡದು ಎಂದು ತಹಶೀಲ್ದಾರ್ ಅವರಿಗೆ ಧೃಢವಾಗಿ ತಿಳಿಸಿದರು.


ಈ ಮಾತು ಕೇಳಿದ ಕೆರೆ ಅಂಗಳದ ನಿವಾಸಿಗಳು ಏಕೆ ಆಗದು ಎಂದು ಚಕಾರವೆತ್ತಿದಾಗ ಮಾತಿನ ಚಕಮಕಿಯೇ ನಡೆಯಿತು.


ಇದೇ ಸಮಯದಲ್ಲಿ ಶಾಸಕರಿಗೆ ಮನವಿಪತ್ರ ಸಲ್ಲಿಸಿದ ಕೆರೆಬಳಿಯ ನಿವಾಸಿಗಳು ಕೋರ್ಟ್ ಆದೇಶದಂತೆ ತೆರವು ಕಾರ್ಯಾಚರಣೆ ನಡೆದರೆ ಪಟ್ಟಣಾದ 6 ನೇ ವಾರ್ಡ್ ನ ಶಂಕರಪುರಬಡಾವಣೆಯ ನೂರಕ್ಕೂ ಹೆಚ್ಚು ಕುಟುಂಬದವರು ನಿರಾಶ್ರಿತರಾಗಲಿದ್ದೇವೆ , ಇಲ್ಲಿ ಹೆಚ್ಚಾಗಿ ಕೂಲಿ ಮಾಡಿಕೊಂಡೆ ಜೀವನ ನಡೆಸುವವರಾಗಿದ್ದು, ನಮಗೆ ಯಾವುದೇ ಆದಾಯದ ಮೂಲವಿಲ್ಲ ಹಾಗೂ ಬೇರೆಡೆ ಜಾಗವೂ ಸಹ ಇಲ್ಲ. ಒಂದು ವೇಳೆ ಕೆರೆತೆರವು ನಡೆದರೆ ನಾವೆಲ್ಲಾ ಬೀದಿಗೆ ಬೀಳುತ್ತೇವೆ. ಮೊದಲು ನಮಗೆ ಬೇರೆಡೆ ಪುನರ್ವಸತಿ ಕಲ್ಪಿಸಿ ನಂತರ ತೆರವು ಕಾರ್ಯಾಚರಣೆ ನಡೆಸಿ ಎಂದು ತಮ್ಮ ಬೇಡಿಕೆಯನ್ನು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಮುಂದಿಟ್ಟರು.


ಸುಮಾರು ಗಂಟೆಗಳ ಕಾಲ ನಡೆದ ಮಾತಿನಚಕಮಕಿ ಆಲಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ , ಕೆರೆ ಒತ್ತುವರಿ ತೆರವು ಮಾಡೂವಂತೆ ಕೋರ್ಟ್ ಆದೇಶವಿದ್ದು ಅದರಂತೆ ಎಲ್ಲಡೆ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲದೆ ಹುಳಿಯಾರು ಕೆರೆ ಒತ್ತುವರಿ ತೆರವು ನಡೆದರೆ ಹೆಚ್ಚಿನ ಜನಕ್ಕೆ ತೊಂದರೆಯಾಗುತ್ತದೆ ಎಂಬುದು ತಮಗೂ ತಿಳಿದಿದೆ.ಈ ಬಗ್ಗೆ ತಹಶೀಲ್ದಾರ್ ಅವರೊಂದಿಗೆ ಮಾತನಾಡಿದ್ದು, ಇಲ್ಲಿನ ನಿವಾಸಿಗಳಿಗೆ ಬೇರೆಡೆ ಜಾಗ ಕಲ್ಪಿಸಿಕೊಟ್ಟನಂತರ ತೆರವು ಕಾರ್ಯ ನಡೆಸುವಂತೆ ಸೂಚಿಸಿದ್ದೇನೆ. ಪುನರ್ವಸತಿಗಾಗಿ ಕೆಲವು ಕಡೆ ಸ್ಥಳಪರಿಶೀಲನೆ ನಡೆಯುತ್ತಿದ್ದು ಕೇಶವಾಪುರದ ಬಳಿಯ ಜಾಗಕ್ಕೆ ವ್ಯಕ್ತಿಯೊಬ್ಬ ತಕರಾರು ಅರ್ಜಿ ಹಾಕಿ ಸ್ಟೇ ಮಾಡಿಸಿದ್ದು, ಸದ್ಯದಲ್ಲೇ ಸ್ಟೇ ತೆರವಾಗಲಿದ್ದು ಆನಂತರವಷ್ಟೆ ಕಾರ್ಯಾಚರಣೆ ಮುಂದುವರಿಯಲಿದೆ. ಇನ್ನು ಮೂರು ತಿಂಗಳು ಯಾವುದೇ ಕಾರ್ಯಾಚರಣೆ ನಡೆಸದಂತೆ ತಹಶಿಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಭರವಸೆ ನೀಡಿದರು.
ಕೆರೆ ತರವಿನಿಂದ ನಿರಾಶ್ರಿತರಾಗುವವರ ಪಟ್ಟಿ ಸಿದ್ದ ಮಾಡಿ ಅವರಲ್ಲಿ ಯಾರು ಅರ್ಹ ಎಂಬುದನ್ನು ಗುರ್ತಿಸಿ ಅಂತಹವರಿಗೆ ಮಾತ್ರ ಪುನರ್ವಸತಿ ಕಲ್ಪಿಸಿಕೊಡುವುದಾಗಿ ತಿಳಿಸಿದರಲ್ಲದೆ, ಲಿಂಗಪ್ಪನ ಪಾಳ್ಯದ ಪಕ್ಕದಲ್ಲಿನ ಗೋಮಾಳದ ಜಾಗವನ್ನು ಯಾವುದೇ ಕಾರಣಕ್ಕೂ ಪುನರ್ವಸತಿ ಕಲ್ಪಿಸಲು ಬಳಸಲಾಗುವುದಿಲ್ಲ ಅದನ್ನು ಆ ಗ್ರಾಮಕ್ಕೆ ಬೇಕಾದ ಅವಶ್ಯ ಕಟ್ಟಡಗಳ ನಿರ್ಮಾಣಕ್ಕೆ ಅಥವಾ ಅಲ್ಲಿನ ನಿರಾಶ್ರಿತರಿಗೆ ನೀಡಲು ಮಾತ್ರ ಸಾಧ್ಯವೆಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಾಮಾಕ್ಷಮ್ಮ, ಕೇವಲ ಅತಿಕ್ರಮಣದಾರರ ಪಟ್ಟಿ ಮಾಡೂವಂತೆ ಸೂಚಿಸಿದ್ದೇನೆ ಹೊರತು ತೆರವಿಗೆ ಮುಂದಾಗಿಲ್ಲ , ನೋಟಿಸ್ ಕೊಡದೆ ತೆರವು ಮಾಡಲಿಕ್ಕೆ ಸಾಧ್ಯವಿಲ್ಲ, ಕೇವಲ ಊಹಾಪೋಹದ ಮಾತುಗಳು ಇಂದಿನ ಕಾವೇರಿದ ಘಟನೆಗೆ ಕಾರಣಾವಾಗಿದೆ ಎಂದರು.



ಒಟ್ಟಾರೆ ತೆರವು ಕಾರ್ಯಾಚರಣೆ ಇನ್ನು ಮೂರು ತಿಂಗಳು ನಡೆಯುವುದಿಲ್ಲ ಎಂಬುದರಿಂದ ತೃಪ್ತರಾದ ಎರಡೂ ಕಡೆಯವರು ತೆರಳಿದ್ದರಿಂದ ವಿಕೋಪಕ್ಕೆ ತೆರಳಿದ ಘಟನೆ ಶಾಂತವಾಗಿ ಅಂತ್ಯ ಕಂಡಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...