ವಿಷಯಕ್ಕೆ ಹೋಗಿ

ಕೆರೆ ಒತ್ತುವರಿ ತೆರವು : ಮೂರು ತಿಂಗಳ ಗಡುವು

 ಕೆರೆ ಒತ್ತುವರಿ ತೆರವು : ಮೂರು ತಿಂಗಳ ಗಡುವು
ಪುನರ್ವಸತಿಗೆ ಲಿಂಗಪ್ಪನಪಾಳ್ಯದ ಬಳಿ ಜಾಗ ಬಿಟ್ಟು ಕೊಡುವುದಿಲ್ಲ : ಗ್ರಾಮಸ್ಥರು
                             ---------------------------------------------------------------
ಹುಳಿಯಾರು ಪಟ್ಟಣದ ಕೆರೆ ಒತ್ತುವರಿ ಜಾಗವನ್ನು ತೆರವು ಮಾಡುವ ಮೊದಲು ಇಲ್ಲಿನ ನಿವಾಸಿಗಳಿಗೆ ಬೇರೆಡೆ ಪುನರ್ವಸತಿ ಕಲ್ಪಿಸಿಕೊಡುವಂತೆ ಶಂಕರಪುರ ಬಡಾವಣೆಯ ನಿವಾಸಿಗಳು ಕೋರಿದರೆ ಯಾವುದೇ ಕಾರಣಕ್ಕೂ ಅಲ್ಲಿನ ನಿರಾಶ್ರಿತರಿಗೆ ನಮ್ಮೂರಿಗೆ ಸೇರಿದ ಗೋಮಾಳದಲ್ಲಿ ಸ್ಥಳಾವಾಕಾಶ ಕಲ್ಪಿಸಕೂಡದೆಂದು ಲಿಂಗಪ್ಪನಪಾಳ್ಯದವರು ವಾಗ್ವಾದ ನಡೆಸಿದ ಪ್ರಸಂಗ ಶಾಸಕರು ಹಾಗೂ ತಹಶೀಲ್ದಾರರ ಸಮಕ್ಷಮ ನಡೆಯಿತು.


ಇಂದು ಪಟ್ಟಣದ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಕೊಡುತ್ತಿರುವಾಗಲೇ ಶಾಸಕರಿಗೆ ಎರಡು ಕಡೆಯವರು ತಂತಮ್ಮ ಅಹವಾಲು ಸಲ್ಲಿಸಿದರು. ನಿರಾಶ್ರಿತರಿಗೆ ತಮ್ಮ ಗ್ರಾಮದ ಬಳಿಯ ಗೋಮಾಳದಲ್ಲಿ ಜಾಗ ಕೊಡುವ ಬಗ್ಗೆ ಚಿಂತನೆ ನಡೆದಿರುವುದನ್ನು ಅರಿತ ಅಲ್ಲಿನ ಗ್ರಾಮಸ್ಥರು ಗ್ರಾಮದ ಪ್ರತಿಯೊಬ್ಬರು ಇಂದು ಶಾಸಕರ ಬಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸಾರಿ ಹಾಕುವ ಮುಖಾಂತರ ಗ್ರಾಮದ ನೂರಾರು ಜನರು ಪಾಲ್ಗೊಳ್ಳುವಂತೆ ನೋಡಿಕೊಂಡರು.


ಗ್ರಾಮದ ಪರವಾಗಿ ಮಾತನಾಡಿದ ಬೀರಣ್ಣ ಹಾಗೂ ಪ್ರಭಣ್ಣ ಗ್ರಾಮದವರು ಧಾರ್ಮಿಕ ಕಾರ್ಯಗಳಿಗೆ ಮೀಸಲಿಟ್ಟ ಪ್ರದೇಶವನ್ನು ಯಾವುದೇ ಕಾರಣಕ್ಕೂ ಅನ್ಯಕಾರಣಗಳಿಗೆ ಕೊಡುವುದಕ್ಕೆ ಸಾಧ್ಯವಿಲ್ಲ.ಹುಳಿಯಾರು ಕೆರೆ ಅಂಗಳದಲ್ಲಿರುವವರು ನಿರ್ಗತಿಕರಲ್ಲ ಅಲ್ಲದೆ ಸ್ಥಳೀಯರೂ ಅಲ್ಲ, ಬೇರೆಡೆಯಿಂದ ಬಂದಂತವರಾಗಿದ್ದಾರೆ,ಅಲ್ಲಿನ ಜಮೀನುಗಳನ್ನು ಉತ್ತಮ ಬೆಲೆಗೆ ಮಾರಿಕೊಂಡು ಇಲ್ಲಿಗೆ ಬಂದು ಗುಡಿಸಲು ಹಾಕಿಕೊಂಡಿದ್ದಾರೆ. ಇಂತಹವರಿಗೆ ಯಾವುದೇ ಕಾರಣಕ್ಕೂ ನಮ್ಮೂರ ಹತ್ತಿರ ಪುನರ್ವಸತಿ ಕಲ್ಪಿಸಿಕೊಡಕೂಡದು ಎಂದು ಪಟ್ಟುಹಿಡಿದರು. ಗೋಮಾಳದ ಜಾಗ ಅನಾದಿಕಾಲದಿಂದಲೂ ಇದ್ದು ಅದನ್ನು ತಮ್ಮ ಗ್ರಾಮದವರಿಗೆ ಮೀಸಲಿರಿಸಬೇಕು ಬೇರೆ ಯಾರಿಗೂ ಕೊಡಕೂಡದು ಎಂದು ತಹಶೀಲ್ದಾರ್ ಅವರಿಗೆ ಧೃಢವಾಗಿ ತಿಳಿಸಿದರು.


ಈ ಮಾತು ಕೇಳಿದ ಕೆರೆ ಅಂಗಳದ ನಿವಾಸಿಗಳು ಏಕೆ ಆಗದು ಎಂದು ಚಕಾರವೆತ್ತಿದಾಗ ಮಾತಿನ ಚಕಮಕಿಯೇ ನಡೆಯಿತು.


ಇದೇ ಸಮಯದಲ್ಲಿ ಶಾಸಕರಿಗೆ ಮನವಿಪತ್ರ ಸಲ್ಲಿಸಿದ ಕೆರೆಬಳಿಯ ನಿವಾಸಿಗಳು ಕೋರ್ಟ್ ಆದೇಶದಂತೆ ತೆರವು ಕಾರ್ಯಾಚರಣೆ ನಡೆದರೆ ಪಟ್ಟಣಾದ 6 ನೇ ವಾರ್ಡ್ ನ ಶಂಕರಪುರಬಡಾವಣೆಯ ನೂರಕ್ಕೂ ಹೆಚ್ಚು ಕುಟುಂಬದವರು ನಿರಾಶ್ರಿತರಾಗಲಿದ್ದೇವೆ , ಇಲ್ಲಿ ಹೆಚ್ಚಾಗಿ ಕೂಲಿ ಮಾಡಿಕೊಂಡೆ ಜೀವನ ನಡೆಸುವವರಾಗಿದ್ದು, ನಮಗೆ ಯಾವುದೇ ಆದಾಯದ ಮೂಲವಿಲ್ಲ ಹಾಗೂ ಬೇರೆಡೆ ಜಾಗವೂ ಸಹ ಇಲ್ಲ. ಒಂದು ವೇಳೆ ಕೆರೆತೆರವು ನಡೆದರೆ ನಾವೆಲ್ಲಾ ಬೀದಿಗೆ ಬೀಳುತ್ತೇವೆ. ಮೊದಲು ನಮಗೆ ಬೇರೆಡೆ ಪುನರ್ವಸತಿ ಕಲ್ಪಿಸಿ ನಂತರ ತೆರವು ಕಾರ್ಯಾಚರಣೆ ನಡೆಸಿ ಎಂದು ತಮ್ಮ ಬೇಡಿಕೆಯನ್ನು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಮುಂದಿಟ್ಟರು.


ಸುಮಾರು ಗಂಟೆಗಳ ಕಾಲ ನಡೆದ ಮಾತಿನಚಕಮಕಿ ಆಲಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ , ಕೆರೆ ಒತ್ತುವರಿ ತೆರವು ಮಾಡೂವಂತೆ ಕೋರ್ಟ್ ಆದೇಶವಿದ್ದು ಅದರಂತೆ ಎಲ್ಲಡೆ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲದೆ ಹುಳಿಯಾರು ಕೆರೆ ಒತ್ತುವರಿ ತೆರವು ನಡೆದರೆ ಹೆಚ್ಚಿನ ಜನಕ್ಕೆ ತೊಂದರೆಯಾಗುತ್ತದೆ ಎಂಬುದು ತಮಗೂ ತಿಳಿದಿದೆ.ಈ ಬಗ್ಗೆ ತಹಶೀಲ್ದಾರ್ ಅವರೊಂದಿಗೆ ಮಾತನಾಡಿದ್ದು, ಇಲ್ಲಿನ ನಿವಾಸಿಗಳಿಗೆ ಬೇರೆಡೆ ಜಾಗ ಕಲ್ಪಿಸಿಕೊಟ್ಟನಂತರ ತೆರವು ಕಾರ್ಯ ನಡೆಸುವಂತೆ ಸೂಚಿಸಿದ್ದೇನೆ. ಪುನರ್ವಸತಿಗಾಗಿ ಕೆಲವು ಕಡೆ ಸ್ಥಳಪರಿಶೀಲನೆ ನಡೆಯುತ್ತಿದ್ದು ಕೇಶವಾಪುರದ ಬಳಿಯ ಜಾಗಕ್ಕೆ ವ್ಯಕ್ತಿಯೊಬ್ಬ ತಕರಾರು ಅರ್ಜಿ ಹಾಕಿ ಸ್ಟೇ ಮಾಡಿಸಿದ್ದು, ಸದ್ಯದಲ್ಲೇ ಸ್ಟೇ ತೆರವಾಗಲಿದ್ದು ಆನಂತರವಷ್ಟೆ ಕಾರ್ಯಾಚರಣೆ ಮುಂದುವರಿಯಲಿದೆ. ಇನ್ನು ಮೂರು ತಿಂಗಳು ಯಾವುದೇ ಕಾರ್ಯಾಚರಣೆ ನಡೆಸದಂತೆ ತಹಶಿಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಭರವಸೆ ನೀಡಿದರು.
ಕೆರೆ ತರವಿನಿಂದ ನಿರಾಶ್ರಿತರಾಗುವವರ ಪಟ್ಟಿ ಸಿದ್ದ ಮಾಡಿ ಅವರಲ್ಲಿ ಯಾರು ಅರ್ಹ ಎಂಬುದನ್ನು ಗುರ್ತಿಸಿ ಅಂತಹವರಿಗೆ ಮಾತ್ರ ಪುನರ್ವಸತಿ ಕಲ್ಪಿಸಿಕೊಡುವುದಾಗಿ ತಿಳಿಸಿದರಲ್ಲದೆ, ಲಿಂಗಪ್ಪನ ಪಾಳ್ಯದ ಪಕ್ಕದಲ್ಲಿನ ಗೋಮಾಳದ ಜಾಗವನ್ನು ಯಾವುದೇ ಕಾರಣಕ್ಕೂ ಪುನರ್ವಸತಿ ಕಲ್ಪಿಸಲು ಬಳಸಲಾಗುವುದಿಲ್ಲ ಅದನ್ನು ಆ ಗ್ರಾಮಕ್ಕೆ ಬೇಕಾದ ಅವಶ್ಯ ಕಟ್ಟಡಗಳ ನಿರ್ಮಾಣಕ್ಕೆ ಅಥವಾ ಅಲ್ಲಿನ ನಿರಾಶ್ರಿತರಿಗೆ ನೀಡಲು ಮಾತ್ರ ಸಾಧ್ಯವೆಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಾಮಾಕ್ಷಮ್ಮ, ಕೇವಲ ಅತಿಕ್ರಮಣದಾರರ ಪಟ್ಟಿ ಮಾಡೂವಂತೆ ಸೂಚಿಸಿದ್ದೇನೆ ಹೊರತು ತೆರವಿಗೆ ಮುಂದಾಗಿಲ್ಲ , ನೋಟಿಸ್ ಕೊಡದೆ ತೆರವು ಮಾಡಲಿಕ್ಕೆ ಸಾಧ್ಯವಿಲ್ಲ, ಕೇವಲ ಊಹಾಪೋಹದ ಮಾತುಗಳು ಇಂದಿನ ಕಾವೇರಿದ ಘಟನೆಗೆ ಕಾರಣಾವಾಗಿದೆ ಎಂದರು.



ಒಟ್ಟಾರೆ ತೆರವು ಕಾರ್ಯಾಚರಣೆ ಇನ್ನು ಮೂರು ತಿಂಗಳು ನಡೆಯುವುದಿಲ್ಲ ಎಂಬುದರಿಂದ ತೃಪ್ತರಾದ ಎರಡೂ ಕಡೆಯವರು ತೆರಳಿದ್ದರಿಂದ ವಿಕೋಪಕ್ಕೆ ತೆರಳಿದ ಘಟನೆ ಶಾಂತವಾಗಿ ಅಂತ್ಯ ಕಂಡಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.