ವಿಷಯಕ್ಕೆ ಹೋಗಿ

ಗೊಬ್ಬರಕ್ಕಾಗಿ ರೈತರ ಸರದಿ ಸಾಲು

ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಹದಮಳೆಯಾಗುತ್ತಿದ್ದು , ರೈತರು ರಸಗೊಬ್ಬರಕೊಳ್ಳಲು ಮುಗಿಬಿದ್ದಿದ್ದಾರೆ. ಯೂರಿಯಾ ಗೊಬ್ಬರಕ್ಕೆ ದಿಢೀರ್ ಬೇಡಿಕೆ ಉಂಟಾಗಿದ್ದು ಅದಕ್ಕಾಗಿ ರೈತರು ಪಟ್ಟಣದ ಗೊಬ್ಬರದ ಅಂಗಡಿಗಳಿಗೆ ಎಡತಾಕುತ್ತಿದ್ದರು.
ಹುಳಿಯಾರಿನ ಬಸ್ ನಿಲ್ದಾಣದ ಗೊಬ್ಬರದ ಅಂಗಡಿಯಲ್ಲಿ ಗೊಬ್ಬರ ಖರೀದಿ ಮಾಡಲು ರೈತರು ಸರದಿ ಸಾಲಿನಲ್ಲಿ ನಿಂತಿರುವುದು.
ಮಳೆಯಿಲ್ಲದೆ ಗೊಬ್ಬರಕ್ಕೆ ಬೇಡಿಕೆಯಿಲ್ಲದ ಹಿನ್ನಲೆಯಲ್ಲಿ ಅಂಗಡಿಯವರೂ ಸಹ ದಾಸ್ತಾನು ಮಾಡದೆ ರೈತರು ಒಮ್ಮೆಗೆ ಗೊಬ್ಬರಕ್ಕೆ ಬಂದಿದ್ದರಿಂದ ಪರಿಪಾಟಲು ಪಡುವಂತಾಯಿತು. ದಾಸ್ತಾನಿಲ್ಲವೆಂದು ಹೇಳಿದರೂ ಕೂಡ ಕೇಳದ ಜನ ಗೊಬ್ಬರದ ಅಂಗಡಿ ಮುಂದೆ ಕಾಯುತ್ತಿದ್ದ ದೃಶ್ಯಕಂಡುಬಂತು. ಮಂಗಳವಾರ ಸಂಜೆ ಲಾಯಿಯಲ್ಲಿ ಬಂದ ಗೊಬ್ಬರವನ್ನು ಗೋಡನ್ ಗೆ ದಾಸ್ತಾನು ಮಾಡಲು ಬಿಡದೆ ಸ್ಥಳದಲ್ಲೇ ಖರೀದಿ ಮಾಡಿದರು. ಬಂದಗೊಬ್ಬರಕ್ಕಿಂತ ದುಪ್ಪಟ್ಟು ಜನ ಇದುದ್ದರಿಂದ ಸರದಿ ಸಾಲಿನಲ್ಲಿ ಕಾದ ರೈತರಿಗೆ ಒಬ್ಬರಿಗೆ ಒಂದು ಚೀಲದಂತೆ ವಿತರಿಸಲಾಯಿತು. ಬುಧವಾರ ಮುಂಜಾನೆಯೇ ಆಗಮಿಸಿದ ರೈತರು ಗೊಬ್ಬರ ಬರುತ್ತಿದ್ದಂತೆ ಲಾರಿ ಬಳಿಯೇ ಕೊಂಡೈದಿದ್ದು ಒಟ್ಟಾರೆ ಗೊಬ್ಬರಕ್ಕೆ ಬಾರಿ ಬೇಡಿಕೆ ಕಂಡುಬಂದಿದೆ.

ಗೊಬ್ಬರಕ್ಕೆ ದುಪ್ಪಟ್ಟು ದರ: ಗೊಬ್ಬರಕ್ಕೆ ಬೇಡಿಕೆ ಬರುತ್ತದೆ ಎಂದು ಅರಿತಿದ್ದ ವ್ಯಾಪಾರಸ್ಥರು ರೈತರಿಂದ ಹೆಚ್ಚಿನ ದರ ಪಡೆದಿರುವುದಾಗಿ ರೈತ ಸಂಘದವರು ಆರೋಪಿಸಿದ್ದಾರೆ. ನಿಗದಿತದರ 278 ಇದ್ದು, 350 ರೂಪಾಯಿಗೆ ಮಾರಲಾಗುತಿದ್ದು , ಈ ಬಗ್ಗೆ ಕೃಷಿ ಇಲಾಖೆಯವರಿಗೆ ದೂರಿದರು ಸಹ ಪ್ರಯೋಜನವಾಗಿಲ್ಲ. ತಹಶೀಲ್ದಾರ್ ಅವರು ಕೂಡ ಹೆಚ್ಚಿನ ದರಕ್ಕೆ ಮಾರಾಟ ಮಾಡಕೂಡದೆಂದು ನಮ್ಮೆದುರುಗಿ ಹೇಳಿ ಹೋಗಿದ್ದರೂ ಕೂಡ 350 ರೂಪಾಯಿಗಿಂತ ಕಡಿಮೆ ಮಾಡಲು ನಿರಾಕರಿಸಿದ್ದು , ತಕರಾರು ತೆಗೆದವರಿಗೆ ಗೊಬ್ಬರವೇ ಕೊಡುತ್ತಿಲ್ಲವೆಂದು ಚಂದ್ರಪ್ಪ ಅರೋಪಿಸಿದ್ದಾರೆ. ಬೇಡಿಕೆ ಇದೆ ಎಂದು ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಮಾರಾಟಗಾರರನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.